ವಿಷಯಕ್ಕೆ ಹೋಗಿ

ಉಪವಾಸನಿರತರಲ್ಲಿ ನಾಲ್ಕು ಮಂದಿ ಆಸ್ಪತ್ರೆಗೆ ದಾಖಲು

ಕೆಂಕೆರೆಸತೀಶ್ ರಿಂದ ಮುಂದುವರಿದ ಉಪವಾಸ ಸತ್ಯಾಗ್ರಹ
ಉಳಿದ ರೈತರಿಂದ ಮುಂದುವರಿದ ಧರಣಿ
---------------------------
ಹುಳಿಯಾರು: ಕೊಬ್ಬರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಹುಳಿಯಾರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಉಪವಾಸ ಸತ್ಯಾಗ್ರಹ ಹೂಡಿದ್ದ ಐವರು ರೈತರ ಪೈಕಿ ನಾಲ್ಕು ಮಂದಿ ಅಸ್ವಸ್ಥರಾಗಿದ್ದು ಧರಣಿ ಸ್ಥಳಕ್ಕೆ ಆಗಮಿಸಿದ್ದ ಉಪವಿಭಾಗಾಧಿಕಾರಿ ಪ್ರಜ್ಞಾಅಮ್ಮೆಂಬಳ್ ಹಾಗೂ ತಹಸೀಲ್ದಾರ್ ಗಂಗೇಶ್ ಅವರುಗಳ ಆರೋಗ್ಯ ತಪಾಸಣೆ ನಡೆಸಿ ಬಲವಂತವಾಗಿ ಎಳನೀರು ಕುಡಿಸಿ ಉಪವಾಸ ಕೈ ಬಿಡಿಸಿ ಚಿಕ್ಕನಾಯಕನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ.

            ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ತಾಲೂಕು ರೈತ ಸಂಘದ ಅಧ್ಯಕ್ಷ ತಿಮ್ಮನಹಳ್ಳಿ ಲೋಕೇಶ್, ಉಪಾದ್ಯಕ್ಷ ಮಲ್ಲಿಕಾರ್ಜುನಯ್ಯ, ಹಿರಿಯ ರೈತ ಮುಖಂಡ ಸೂರಗೊಂಡನಹಳ್ಳಿ ಗಂಗಜ್ಜ,ಕೆಂಕೆರೆ ಗ್ರಾಪಂ ಸದಸ್ಯರಾದ ಕಾಡಿನರಾಜ ನಾಗರಾಜು ಅವರುಗಳೇ ಉಪವಾಸ ಸತ್ಯಗ್ರಹ ಹೂಡೀದವರಾಗಿದ್ದು ಸೋಮವಾರದಿಂದ ಹನಿ ನೀರು ಸಹ ಸೇವಿಸದೆ ಉಪವಾಸ ನಿರಶನ ನಡೆಸಿದ್ದರು.

          ಇವರಲ್ಲಿ ಗ್ರಾಪಂ ಸದಸ್ಯಕಾಡಿನರಾಜ ನಾಗರಾಜು ಹಾಗೂ ಗಂಗಣ್ಣ ಅವರುಗಳು ಮಂಗಳವಾರ ೧೧ ಗಂಟೆಯಷ್ಟರಲ್ಲಿ ಶುಗರ್ ಹಾಗೂ ಬಿಪಿ ಕಡಿಮೆಯಾಗಿ ಅಸ್ವಸ್ಥಗೊಂಡರು. ತಕ್ಷಣ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಸ್ಥಳಕ್ಕೆ ದೌಡಾಯಿಸಿ ಆರೋಗ್ಯ ತಪಾಸಣೆ ನಡೆಸಿದರು. ಆಗಲೂ ಸಹ ನ್ಯಾಫೆಡ್ ಕೇಂದ್ರ ಆರಂಭಿಸದ ವಿನಃ ಒಂದು ಹನಿ ನೀರು ಕುಡಿಯುವುದಿಲ್ಲ ಎಂದು ಪಟ್ಟು ಹಿಡಿದರು. ೩ ತಿಂಗಳಿಂದ ಹೋರಾಟ ಮಾಡುತ್ತಿದ್ದರೂ ಕಿವಿ ಕೊಡದ ಸರ್ಕಾರಕ್ಕೆ ನಮ್ಮ ಸಾವಿನಿಂದಲಾದರೂ ಬುದ್ದಿ ಬಂದು ಕೊಬ್ಬರಿಗೆ ೧೦ ಸಾವಿರ ರೂ. ಬೆಂಬಲ ಬೆಲೆ ಕೊಟ್ಟರೆ ಅದಕ್ಕಿಂತ ಪುಣ್ಯ ಮತ್ಯಾವುದಿದೆ ಎಂದು ಪಟ್ಟು ಹಿಡಿದರು.
            ಎಪಿಎಂಸಿ ಉಪ ನಿರ್ದೆಶಕ ಡಾ.ರಾಜಣ್ಣ ಸ್ಥಳಕ್ಕೆ ಆಗಮಿಸಿ ನ್ಯಾಫೆಡ್ ಆರಂಭಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದ್ದು ಬುಧವಾರದಿಂದ ಖರೀದಿ ಕೇಂದ್ರ ಆರಂಭಿಸುವುದಾಗಿ ಹೇಳಿದ್ದರಿಂದ ಪಟ್ಟುಸಡಿಲಿಸಿದ ಅವರಿಗೆ ಡಾ.ಶೋಭ ಜ್ಯೂಸ್ ಕುಡಿಸಿ ಗ್ಲೂಕೋಸ್ ಬಾಟಲ್ ಹಾಕಿದರು.
           ಸಂಜೆಯಾಗುವಷ್ಟರಲ್ಲಿ ತಿಮ್ಮನಹಳ್ಳಿ ಲೋಕೇಶ್, ತಮ್ಮಡಿಹಳ್ಳಿ ಮಲ್ಲಿಕಾರ್ಜುನ್ ಅವರ ಆರೋಗ್ಯದಲ್ಲೂ ಸಹ ಏರುಪೇರಾಯಿತು. ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ್ ಅವರು ತಕ್ಷಣ ವೈದ್ಯರನ್ನು ಕರೆಸಿ ಆರೋಗ್ಯ ತಪಾಸಣೆ ಮಾಡಿಸಿದರು. ನಾಲ್ವರೂ ಸಹ ಉಪವಾಸ ಮುಂದುವರಿಸಿದರೆ ಮತ್ತೊಷ್ಟು ಆರೋಗ ಹದಗೆಡುವ ವಿಷಯ ತಿಳಿದು ತಕ್ಷಣ ಎಳನೀರು ತರಿಸಿ ಕೆಂಕೆರೆ ಸತೀಶ್ ಅವರನ್ನು ಬಿಟ್ಟು ಉಳಿದವರ ಮನವೊಲಿಸಿ ಕುಡಿಸಿ ಉಪವಾಸ ಕೈ ಬಿಡಿಸುವಲ್ಲಿ ಯಶಸ್ವಿಯಾದರು.

             ನಂತರ ಸತೀಶ್ ಅವರಿಗೂ ಸಹ ಉಪವಾಸ ಕೈ ಬಿಟ್ಟು ಅಹೋರಾತ್ರಿ ಧರಣಿ ಮುಂದುವರೆಸಲು ಪರಿಪರಿಯಾಗಿ ಕೇಳಿಕೊಳ್ಳಲಾಯಿತು. ಮುಖಂಡರೆ ಆರೋಗ್ಯ ಹಾಳುಮಾಡಿಕೊಂಡರೆ ಹೋರಾಟ ಕಟ್ಟುವವರಾರು. ನೀವು ಆರೋಗ್ಯದಿಂದಿದ್ದರೆ ಇಂತಹ ನೂರಾರು ಹೋರಾಟ ಮಾಡಬಹುದು ಎಂದು ಅನೇಕ ಸಲಹೆ ನೀಡಿದರಾದರೂ ನ್ಯಾಯ ಸಿಗುವವರೆವಿಗೂ ಅನ್ನನೀರು ಸೇವಿಸುವುದಿಲ್ಲ ಎಂದು ಸತೀಶ್ ಪಟ್ಟು ಹಿಡಿದರು.             
ಸಧ್ಯಕ್ಕೆ ಕೆಂಕೆರೆ ಸತೀಶ್ ಮಾತ್ರ ಉಪವಾಸ ನಿರಶನವನ್ನು ಏಕಾಂಗಿಯಾಗಿ ಮಂದುವರಿಸಿದ್ದು ನೂರಾರು ರೈತರು ಅವರಿಗೆ ಸಾಥ್ ನೀಡಿದ್ದಾರೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...