ವಿಷಯಕ್ಕೆ ಹೋಗಿ

ಸರ್ಕಾರದಿಂದ ದೊರೆಯದ ಸ್ಪಂದನೆ :ಉಪವಾಸ ಕುಳಿತ ಐವರು ರೈತರು

ಬುಧವಾರದಂದು ಬೆಲೆ ಘೋಷಣೆಯಾಗದಿದ್ದಲ್ಲಿ ವಿಷ ಸೇವಿಸುವ ನಿರ್ಧಾರ

ಹುಳಿಯಾರು: ಕೊಬ್ಬರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಹುಳಿಯಾರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಇದುವರೆಗೂ ಶಾಂತಿಯುತವಾಗಿ ಸಾಗಿದ್ದು ಹತ್ತು ದಿನ ಕಳೆದರೂ ಸರ್ಕಾರದ ಪ್ರತಿನಿಧಿಗಳಾಗಲಿ,ಶಾಸಕರಾಗಲಿ,ಈ ಹಿಂದೆ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಯಚಂದ್ರರಾಗಲಿ ಧರಣಿನಿರತರ ಅಹವಾಲು ಕೇಳದೆ ಉದಾಸೀನ ಮಾಡುತ್ತಾ ಬಂದಿದ್ದರಿಂದ ತೀವ್ರ ಅಸಹನೆಗೊಳಗಾದ ರೈತರು ತಮ್ಮ ಪ್ರತಿಭಟನೆಯ ಹಾದಿಯನ್ನು ಬದಲಾಯಿಸಿದ್ದು ರಸ್ತೆ ತಡೆ ನಂತರ ಐವರು ರೈತರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗುವ ಮೂಲಕ ತೀವ್ರ ಸ್ವರೂಪ ಪಡೆದುಕೊಂಡಿದೆ.
             
               ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ತಾಲೂಕು ರೈತ ಸಂಘದ ಅಧ್ಯಕ್ಷ ತಿಮ್ಮನಹಳ್ಳಿ ಲೋಕೇಶ್, ಉಪಾದ್ಯಕ್ಷ ಮಲ್ಲಿಕಾರ್ಜುನಯ್ಯ, ಹಿರಿಯ ರೈತ ಮುಖಂಡ ಸೂರಗೊಂಡನಹಳ್ಳಿ ಗಂಗಜ್ಜ,ಕೆಂಕೆರೆ ಗ್ರಾಪಂ ಸದಸ್ಯರಾದ ಕಾಡಿನರಾಜ ನಾಗರಾಜು ಅಮರಣಾಂತರ ಉಪವಾಸ ಸತ್ಯಗ್ರಹ ಕೂರುವ ಮೂಲಕ ಚಳುವಳಿಯನ್ನು ಮಾಡು ಇಲ್ಲವೇ ಮಡಿ ಎನ್ನುವಂತೆ ಮಾಡಿದ್ದಾರೆ.
          ಈ ಸಂದರ್ಭದಲ್ಲಿ ಉಪವಾಸ ಕುಳಿತ ತಿಮ್ಮನಹಳ್ಳಿ ಲೋಕೇಶ್ ಅವರು ಮಾತನಾಡಿ ಗಾಂಧೀಜಿ ಮಾರ್ಗದಲ್ಲಿ ನಾವು ಶಾಂತಿಯುತ ಧರಣಿ ನಡೆಸುತ್ತಿದ್ದೇವೆ. ಆದರೂ ಸರ್ಕಾರಗಳು ನಮ್ಮ ಬೇಡಿಕೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಪಡುತ್ತಿಲ್ಲ.ಬೆಳಗಾವಿಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಬಹುದೆಂಬ ನಿರೀಕ್ಷೆಯಿದ್ದು ಘೋಷಣೆಯಾಗುವವರೆಗೂ ಉಪವಾಸ ಕೈಬಿಡುವ ಮಾತೇಯಿಲ್ಲ ಎಂದರು.
           ಕಾಡಿನರಾಜ ನಾಗರಾಜು ಮಾತನಾಡಿ ಹಗಲಿರುಳೆನ್ನದೆ ಸಾಲಸೂಲಮಾಡಿ, ನಿದ್ರಾಹಾರ ಬದಿಗಿತ್ತು ಕಷ್ಟಪಟ್ಟು ಬೆಳೆಯುವ ಬೆಳೆಗೆ ವೈಜ್ಞಾನಿಕ ಬೆಲೆ ಕೊಡಿ ಎಂದು ಭಿಕ್ಷೆ ಬೇಡುವ ಪರಿಸ್ಥಿತಿ ರೈತನಿಗೆ ಬಂದಿರುವುದು ದುಖಃಕರ ಸಂಗತಿ. ಇಷ್ಟಕ್ಕೆಲ್ಲ ನಮ್ಮನ್ನಾಳುವ ಜನಪ್ರತಿನಿಧಿಗಳೇ ನೇರ ಕಾರಣವಾಗಿದ್ದು ತಾಲೂಕಿನಲ್ಲಿ ಬರಗಾಲ ತಾಂಡವವಾಡುತ್ತಿದ್ದು ಸಾವಿರಾರು ರೈತರು ಮನೆಯಲ್ಲಿ ಉಪವಾಸ ವನವಾಸ ಪಡುತ್ತಿದ್ದಾರೆ. ಇದು ಸರ್ಕಾರಕ್ಕೆ ಅರಿವಾಗಲೆಂದು ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದಾಗಿ ತಿಳಿಸಿದರು.

          ಈ ಸಂದರ್ಭದಲ್ಲಿ ತಿಪಟೂರು ತಾಲೂಕು ರೈತ ಸಂಘದ ಅಧ್ಯಕ್ಷ ದೇವರಾಜು, ಬೆಲೆ ಕಾವಲು  ಸಮಿತಿಯ ಗಂಗಾಧರ್ ಮತ್ತು ಶ್ರೀಕಾಂತ್ ಶಿರಾ ಅಧ್ಯಕ್ಷ ಧನಂಜಯಾರಾರಾಧ್ಯ, ಹೊಸದುರ್ಗ ಅಧ್ಯಕ್ಷ ಲಿಂಗರಾಜು, ತಿಪಟೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಯೋಗಣ್ಣ,ಎಂ.ಎಸ್.ಆರ್.ನಟರಾಜು, ಎಪಿಎಂಸಿ ಅಧ್ಯಕ್ಷ ಬರಗೂರು ಬಸವರಾಜು ಮತ್ತಿತರರು ಹಾಜರಿದ್ದರು.
------------------------
ಈ ಹಿಂದೆ ಬೆಳಗಾಂ ಅಧಿವೇಶನದ ಸಮಯದಲ್ಲಿ ಒಬ್ಬ ರೈತನ ಆತ್ಮಹತ್ಯೆ ಕೋಲಾಹಲವೆಬ್ಬಿಸಿದ್ದು ಈ ಅಧಿವೇಶನದ ಸಮಯದಲ್ಲಿ ಸರ್ಕಾರದ ಸ್ಪಂದನೆ ದೊರೆಯದಿದಲ್ಲಿ ಧರಣಿ ಕೂತಿರುವ ನಾವೈದು ಜನರು ವಿಷ ಸೇವಿಸಿ ಪ್ರಾಣ ಕಳೆದುಕೊಳ್ಳುವುದು ನಿಶ್ಚಿತ.ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ : ಕೆಂಕೆರೆ ಸತೀಶ್ , ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ

----------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...