ವಿಷಯಕ್ಕೆ ಹೋಗಿ

ಬುಧವಾರದಿಂದ ಕೊಬ್ಬರಿ ಖರೀದಿ ಆರಂಭಿಸುತ್ತೇವೆ ಧರಣಿ ಕೈ ಬಿಡಿ: ಎಪಿಎಂಸಿ ಡಿಡಿ

ಬುಧವಾರದಿಂದ ಕೊಬ್ಬರಿ ಖರೀದಿ ಆರಂಭಿಸುತ್ತೇವೆ ಧರಣಿ ಕೈ ಬಿಡಿ: ಎಪಿಎಂಸಿ ಡಿಡಿ
ಫಸ್ಟ್ ರೈತರ ಕೊಬ್ಬರಿ ತೂಗಿ ಆಮೇಲೆ ಧರಣಿ ಕೈ ಬಿಡ್ತಿವಿ : ಧರಣಿ ನಿರತರು
ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಮನವೊಲಿಕೆ ಪ್ರಯತ್ನವೂ ವಿಫಲ
-------------------------------------------------
ಹುಳಿಯಾರು: ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಹುಳಿಯಾರು ಎಪಿಎಂಸಿ ಎದುರು ಕಳೆದ ೧೧ ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಹಾಗೂ ೨ ದಿನಗಳಿಂದ ಉಪವಾಸ ಕುಳಿತಿರುವ ಸ್ಥಳಕ್ಕೆ ತುಮಕೂರು ಎಪಿಎಂಸಿ ಉಪ ನಿರ್ದೆಶಕ ಡಾ.ರಾಜಣ್ಣ ಅವರು ಮಂಗಳವಾರ ಭೇಟಿ ನೀಡಿದರು.
ನ್ಯಾಫೆಡ್ ಕೇಂದ್ರ ಆರಂಭಿಸಿ ರೈತರ ಕೊಬ್ಬರಿ ಖರೀಧಿಸಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು ಸೋಮವಾರ ತಡರಾತ್ರಿ ಫ್ಯಾಕ್ಸ್ ಮೆಸೆಜ್ ಬಂದಿದೆ. ಅಲ್ಲದೆ ರಾಜ್ಯ ಸರ್ಕಾರ ಸಹ ಮಂಗಳವಾರ ರಾತ್ರಿಯೊಳಗೆ ತನ್ನ ಪಾಲಿನ ಪ್ರೋತ್ಸಾಹ ಧನ ಎಷ್ಟೆಂದು ಘೋಷಿಸಲಿದ್ದು ಅದರಂತೆ ಬುಧವಾರದಿಂದ ಖರೀಧಿ ಕೇಂದ್ರ ಆರಂಭಿಸುತ್ತೇವೆ. ಹಾಗಾಗಿ ಧರಣಿ ಕೈ ಬಿಡಿ ಎಂದು ಡಾ.ರಾಜಣ್ಣ ಮನವಿ ಮಾಡಿದರು.
ಹುಳಿಯಾರು ಎಪಿಎಂಸಿ ಎದುರು ಕೊಬ್ಬರಿಗೆ ಬೆಂಬಲ ಬೆಲೆಗಾಗಿ ಉಪವಾಸ ಕುಳಿತಿರುವ ಕೆಂಕೆರೆ ಸತೀಶ್ ಅವರ ಮನವೊಲಿಸುತ್ತಿರುವ ಉಪವಿಭಾಗಾಧಿಕಾರಿ ಪ್ರಜ್ಞಾಅಮ್ಮೆಂಬಳ್ ಹಾಗೂ ಎಪಿಎಂಸಿ ಡಿಡಿ ಡಾ.ರಾಜಣ್ಣ.
                ಕೇಂದ್ರ ಸರ್ಕಾರ ಖರೀಧಿ ಕೇಂದ್ರ ಆರಂಭಿಸಲು ನಿರ್ದೆಶನ ನೀಡಿದೆ. ಆದರೆ ಬೆಂಬಲ ಬೆಲೆ ಹಿಂದಿನಂತೆ ೬೨೪೦ ರೂ ಇದ್ದು ಒಂದು ರೂಪಾಯಿ ಸಹ ಏರಿಸಿಲ್ಲ. ಇನ್ನು ರಾಜ್ಯ ಸರ್ಕಾರ ತನ್ನ ಪಾಲಿನ ಪ್ರೋತ್ಸಾಹ ಧನ ನಿಗಧಿ ಮಾಡಿಲ್ಲ. ಕನಿಷ್ಟ ಎಂದರೂ ೨ ಸಾವಿರ ಮಾಡಿದರೂ ೮ ಸಾವಿರದ ಆಸುಪಾಸಿನಲ್ಲಿ ಬೆಲೆ ಇರುತ್ತದೆ. ಇಷ್ಟಾದರೂ ರೈತನ ಶ್ರಮಕ್ಕೆ ನ್ಯಾಯಯುತವಾದ ಬೆಲೆಯಲ್ಲ. ಹಾಗಾಗಿ ಕನಿಷ್ಟ ೧೦ ಸಾವಿರ ರೂ. ನಿಗಧಿ ಮಾಡಿ ಖರೀಧಿ ಕೇಂದ್ರ ಆರಂಭಿಸದ ವಿನಃ ಧರಣಿ ಕೈ ಬಿಡೋದಿಲ್ಲ ಎಂದು ರೈತರು ಪಟ್ಟು ಹಿಡಿದರು.
                     ಕೇಂದ್ರ ಸರ್ಕಾರ ಬೆಲೆ ನಿಗಧಿಗೆ ದೇಶದ ಒಟ್ಟಾರೆ ಬೆಳೆ ಹಾಗೂ ತಜ್ಞರ ಅಭಿಪ್ರಾಯ ಸಂಗ್ರಹಿಸುವುದು ಸೇರಿದಂತೆ ಅನೇಕ ನಿಯಮಗಳಿದ್ದು ಅದ್ಯಕ್ಕೆ ಬೆಲೆ ಏರಿಸುವುದು ಕಷ್ಟ ಸಾಧ್ಯ. ಆದರೆ ರಾಜ್ಯ ಸರ್ಕಾರ ಉತ್ತಮ ಬೆಲೆ ಘೋಷಿಸುವ ವಿಶ್ವಾಸ ತಮಗಿದ್ದು ೧೦ ಸಾವಿರದ ಆಸುಪಾಸಿನಲ್ಲಿ ಬೆಲೆ ನಿಗಧಿಯಾಗುತ್ತದೆ. ಅದರಂತೆ ಖರೀಧಿ ಆರಂಭಿಸಿದರೆ ಸಹಜವಾಗಿ ಮಾರುಕಟ್ಟೆ ಬೆಲೆಯಲ್ಲೂ ಏರಿಕೆಯಾಗಲಿದೆ. ಹಾಗಾಗಿ ನಾಳೆ ರೈತರಿಂದಲೇ ಖರೀಧಿ ಕೇಂದ್ರ ಆರಂಭಿಸುವುದಿದ್ದು ಜಿಲ್ಲೆಯ ೮ ಕಡೆ ಖರೀಧಿ ಕೇಂದ್ರ ಆರಂಭವಾಗಲಿದ್ದು ಚಿ.ನಾ.ಹಳ್ಳಿ ತಾಲೂಕಿನಲ್ಲಿ ೨ ಕೇಂದ್ರ ಆರಂಭಿಸುವುದಾಗಿ ಡಿಡಿ ತಿಳಿಸಿದರು.
ಹುಳಿಯಾರು ಎಪಿಎಂಸಿ ಎದುರು ಕೊಬ್ಬರಿಗೆ ಬೆಂಬಲ ಬೆಲೆಗಾಗಿ ಉಪವಾಸ ಕುಳಿತಿರುವ ಕೆಂಕೆರೆ ಸತೀಶ್ ಅವರ ಜೊತೆ ಎಪಿಎಂಸಿ ಉಪನಿರ್ದೆಶಕ ಡಾ.ರಾಜಣ್ಣ ಅವರು ಮಾತನಾಡುತ್ತಿರುವುದು.
          ಹಾಗಾದರೆ ಇಂದೇ ಖರೀಧಿ ಕೇಂದ್ರ ಆರಂಭಿಸಿ ನಾವು ಧರಣಿ ಕೈ ಬಿಡುತ್ತೇವೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಭರವಸೆ ಕೇಳಿ ಕೇಳಿ ಸಾಕಾಗಿ ಹೋಗಿದೆ. ಅವರಿಗೆ ಮಾತಿನ ಮೇಲೆ ನಿಗ ಇರೋದಿಲ್ಲ. ೩ ತಿಂಗಳಿಂದಲೂ ನಮ್ಮ ಪ್ರತಿಭಟನೆ ಸಂದರ್ಬದಲ್ಲಿ ಹೀಗೆ ಹೇಳಿ ಹೇಳಿ ನಮ್ಮನ್ನು ಯಾಮಾರಿಸಿದ್ದಾರೆ. ಈಗಂತೂ ನಾವು ದೃಢ ನಿರ್ಧಾರಕ್ಕೆ ಬಂದಿದ್ದು ಖರೀಧಿ ಆರಂಭವಾಗದ ವಿನಃ ಧರಣಿ ಕೈ ಬಿಡೋದಿಲ್ಲ. ಅಲ್ಲದೆ ಬರಗಾರದಲ್ಲಿ ಖರೀಧಿ ವೇಳೆ ಕೊಬ್ಬರಿಗೆ ಗ್ರೇಡ್ ಗ್ರೀಡ್ ಎಂದು ತರತಮ್ಯ ಮಾಡದೆ ಕೌಟು, ಚೂರು ಬಿಟ್ಟು ಎಲ್ಲ ಕೊಬ್ಬರಿ ಖರೀಧಿಸಬೇಕು ಎಂದು ತಿಳಿಸಿ ಧರಣಿ ಮುಂದುವರಿಸಿದರು.
                 ಸಂಜೆಯಷ್ಟರಲ್ಲಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ್ ಅವರು ಆಗಮಿಸಿ ರೈತರ ಮನವೊಲಿಸಲು ಪ್ರಯತ್ನಿಸಿದರು. ಸರ್ಕಾರ ೧ ಸಾವಿರ ರೂ. ಪ್ರೋತ್ಸಾಹ ಧನ ನೀಡಲಿದ್ದು ನಾಳೆಯೇ ಖರೀಧಿ ಆರಂಭಿಸುವುದಾಗಿ ತಿಳಿಸಿದರು. ೧ ಸಾವಿರ ರೂ. ಪ್ರೋತ್ಸಾಹಧನ ಎಂದೊಡನೆ ಸತೀಶ್ ಕೆಂಡಮಂಡಲರಾದರು. ಉತ್ತಮ ಬೆಲೆಗಾಗಿ ೩ ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ರೈತರಿಗಾಗಿ ಹೋರಾಟಕ್ಕೆ ೧ ಲಕ್ಷ ಸಾಲ ಮಾಡಿದ್ದೇನೆ. ಹೆಂಡತಿ ಮಕ್ಕಳು ಬಿಟ್ಟು ೧೧ ದಿನಗಳಿಂದ ಧರಣಿ ಮಾಡುತ್ತಿದ್ದೇನೆ. ನಾವು ಕೇಳುತ್ತಿರುವುದು ಭಿಕ್ಷೆಯಲ್ಲ. ನಮ್ಮ ಪಾಲಿನ ಹಕ್ಕು. ಜನಾರ್ಧನರೆಡ್ಡಿ ಹತ್ತಿರ ಹೋಗಿ ನಮ್ಮ ಅಳಲನ್ನು ತೋಡಿಕೊಂಡಿದ್ದರು ಧಾರಳವಾಗಿ ಹಣ ನೀಡುತ್ತಿದ್ದ. ಆದರೆ ನಮ್ಮದೆ ದುಡ್ಡಿನಲ್ಲಿ ಸರ್ಕಾರ ನಡೆಸುತ್ತಿರುವವರು ಭಿಕ್ಷೆ ರೂಪದಲ್ಲಿ ೧ ಸಾವಿರ ರೂ. ಕೊಟ್ಟರೆ ನಾವು ಒಪ್ಪಲು ಸಾಧ್ಯವಿಲ್ಲ. ಇಲ್ಲೆ ನನ್ನ ಪ್ರಾಣ ಹೋದರೂ ಚಿಂತೆಯಿಲ್ಲ. ಕನಿಷ್ಟ ೩ ಸಾವಿರ ಬೆಂಬಲ ಬೆಲೆ ಕೊಡೋವರೆವಿಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿ ಧರಣಿ ಮುಂದುವರಿಸಿದರು.

               ತಹಸೀಲ್ದಾರ್ ಗಂಗೇಶ್, ಎಪಿಎಂಸಿ ಅಧ್ಯಕ್ಷ ಬರಗೂರು ಬಸವರಾಜು, ಕಾರ್ಯದರ್ಶಿ ಶ್ರೀನಿವಾಸ್, ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ತಾಪಂ ಸದಸ್ಯ ಏಜೆಂಟ್ ಕುಮಾರ್, ಗ್ರಾಪಂ ಉಪಾಧ್ಯಕ್ಷ ಗಣೇಶ್, ಸದಸ್ಯ ರಾಘವೇಂದ್ರ, ವರ್ತಕರ ಸಂಘದ ಅಧ್ಯಕ್ಷ ಎಂಎಸ್‌ಆರ್ ನಟರಾಜ್, ಕಿರುತೆರೆ ಕಲಾವಿದ ಗೌಡಿ, ರೈತ ಸಂಘದ ಶಂಕರಣ್ಣ, ಕೆಂಕೆರೆ ಸತೀಶ್, ಮಲ್ಲಿಕಾರ್ಜುನ್, ಕಾಡಿನರಾಜ ನಾಗರಾಜು, ಗಂಗಣ್ಣ, ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.