ವಿಷಯಕ್ಕೆ ಹೋಗಿ

ನೋಟು ಪಡೆಯಲು ಜನ ಹೈರಾಣು

ಹುಳಿಯಾರು: ಗ್ರಾಮೀಣ ಭಾಗದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳನ್ನು ಕೊಳ್ಳಲು ಕೂಡ ಹಣವಿಲ್ಲದೆ ಹೈರಾಣಗಿರುವ ಜನಕ್ಕೆ ಇನ್ನೆರಡು ದಿನ ಇದೇ ಪರಿಸ್ಥಿತಿ ಮುಂದುವರಿದರೆ ದೈನಂದಿನ ಬದುಕು ಸಾಗಿಸಲು ದುಸ್ಥಿತಿ ಉಂಟಾಗಲಿದೆ.

              ಭಾನುವಾರ ಪಟ್ಟಣದ ಎಸ್‌ಬಿಎಂ ,ಎಸ್ ಬಿಐ,ಡಿಸಿಸಿ ಬ್ಯಾಂಕ್, ಕೆನರಾ ಬ್ಯಾಂಕಿನ ಮುಂದೆ ನೋಟು ಬದಲಾವಣೆಗೆ ಮುಂಜಾನೆಯೇ ಜಮಾಯಿಸಿ ಹಣ ದೊರೆಯುವುದೋ ಇಲ್ಲಾ ಮತ್ತೆ ಇನ್ನೊಂದು ದಿನ ಬರುವ ಪರಿಸ್ಥಿತಿ ಎದುರಾಗುವುದೋ ಎನ್ನುವ ಆತಂಕದಲ್ಲಿದ್ದರು.ಕೆಲವು ಬ್ಯಾಂಕಿನಲ್ಲಿ ತಕರಾರಿಲ್ಲದೆ ಎರಡು ಸಾವಿರ ರೂಗಳ ಹಣ ಬದಲಾವಣೆ ಮಾಡಿಕೊಟ್ಟರೆ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ ಇಲ್ಲದ ಕಾನೂನುಗಳ ನೆಪವೊಡಿ ಮಧ್ಯಾಹ್ನವಾದರೂ ಹಣ ಕಟ್ಟಿಸಿಕೊಳ್ಳುತ್ತಿದ್ದರೆ ವಿನಃ ಬದಲಾವಣೆ ಮಾಡಿಕೊಡಲಿಲ್ಲ. ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಕಾದು ಕಾದು ಉರಿವ ಬಿಸಿಲಿನಲ್ಲಿ ನಿಂತುಕೊಳ್ಳುವ ಜನಕ್ಕೆ ಹಣಬದಲಾವಣೆ ಮಾಡಿಕೊಡದೆ ಬರಿ ಜಮಾ ಮಾಡಿಹೋಗಿ ಇನ್ನೇರಡು ದಿನ ಬಿಟ್ಟು ಬಂದು ತೆಗೆದುಕೊಳ್ಳಿ ಎಂದು ಹೇಳುತ್ತಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿತ್ತು.

          ಪಟ್ಟಣದಲ್ಲಿ  ದಿನೇದಿನೇ ಚಿಲ್ಲರೆ ಸಮಸ್ಯೆ ಬಿಗಡಾಯಿಸುತ್ತಿದ್ದು ನೋಟುಗಳಿಲ್ಲದೆ ವ್ಯವಹಾರಕ್ಕೆ ತೊಡಕಾಗಿದೆ. ಹೊಸ ಪಿಕ್ಚರ್ ಹಾಕಿದ್ದರೂ ಜನರಿಲ್ಲದೆ ಬಿಕೊ ಎನ್ನುತ್ತಿದೆ.ಈ ತಿಂಗಳು ಮದುವೆ ಮತ್ತೊಂದು ಸಮಾರಂಭ ಹಮ್ಮಿಕೊಂಡಿರುವ ಮಂದಿಗಂತೂ ಖಾತೆಯಲ್ಲಿರುವ ಹಣ ಪಡೆಯಲು ಸಾಧ್ಯವಾಗದೆ ಎಲ್ಲಡೆ ಉದರಿ ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಬ್ಯಾಂಕಿನಲ್ಲಿ ಖಾತೆಗೆ ಜಮಾ ಮಾಡುವುದು ಬಿಟ್ಟರೆ ಮತ್ತೊಂದು ಕೆಲಸವೂ ಸಾಗುತ್ತಿಲ್ಲ.ಡಿಡಿ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಡವೆ ಅಂಗಡಿಗಳು ,ಬಟ್ಟೆಅಂಗಡಿಗಳುಸುತರಾಂ ೫೦೦ ರನೋಟು ತೆಗೆದುಕೊಳ್ಳಲು ಸಿದ್ದರಿಲ್ಲದೆ ಅರ್ಧಕ್ಕೆ ಅರ್ಧ ಬಾಗಿಲು ಹಾಕಿರುವುದು ಕಂಡುಬಂದಿದೆ.


          ಬ್ಯಾಂಕ್‌ಗಳಿಂದ ನೋಟು ಬದಲಾವಣೆ ಮಾಡಿಕೊಳ್ಳಲು ಹಾಗೂ ಎಟಿಎಂಗಳಿಂದ ಹಣ ಪಡೆಯಲು ಜನರ ಪರದಾಟ ಮುಂದುವರೆದಿದೆ.ಸರತಿ ಸಾಲಿನಲ್ಲಿ ನಿಂತವರು ಹೆಚ್ಚಿನ ಮಂದಿ ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿದ್ದು ತಮ್ಮ ನಿತ್ಯದ ವ್ಯವಹಾರಕ್ಕೆ ಚಿಲ್ಲರೆ ಹಣಕ್ಕಾಗಿ ದಿನಗಟ್ಟಲೇ ಬ್ಯಾಂಕುಗಳ ಮುಂದೆ ಸರದಿಸಾಲಿನಲ್ಲಿ ನಿಂತರೂ ಚಿಲ್ಲರೇ ಸಿಗದೇ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಉದ್ದುದ್ದ ಸರತಿಯಲ್ಲಿ ನೂಕುನುಗ್ಗಲು, ಮಾತಿನ ಚಕಮಕಿ, ವಾಗ್ವಾದ ನಡೆದ ಘಟನೆಗಳು ನಡೆದವು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...