ವಿಷಯಕ್ಕೆ ಹೋಗಿ

೫೦೦-೧೦೦೦ ನೋಟು ರದ್ದು :ಎಲ್ಲೆಲ್ಲೂ ನೋಟಿನದ್ದೆ ಮಾತು

ಹುಳಿಯಾರು:ಪ್ರಧಾನಿ ನರೇಂದ್ರ ಮೋದಿಯವರು ಕಪ್ಪು ಹಣ ತಡೆಯಲು ಮಂಗಳವಾರ ರಾತ್ರಿ ದಿಢೀರ್ ಘೋಷಣೆ ಮಾಡಿ 500 ಮತ್ತು 1,000 ರೂ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಪಡಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಸಂಸೆ ವ್ಯಕ್ತವಾದರೂ ಸಹ ತಮ್ಮಲ್ಲಿ ಉಳಿದಿರುವ ನೋಟುಗಳ ಬದಲಾವಣೆ ಹೇಗೆ ಎಂಬ ಚಿಂತೆ ಎಲ್ಲರಲ್ಲೂ ಮನೆ ಮಾಡಿತ್ತು.
500 ಮತ್ತು 1,000 ರೂ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಪಡಿಸಿರುವಹಿನ್ನಲೆಯಲ್ಲಿ ಸರ್ಕಾರಿ ಆದೇಶದಂತೆ ಹುಳಿಯಾರಿನಲ್ಲೂ ಬ್ಯಾಂಕ್, ಎಟಿಎಂಗಳು ಬುಧವಾರದಂದು ಬಾಗಿಲು ಮುಚ್ಚಿತ್ತು.
           ಟಿವಿಗಳಲ್ಲಿ ವಿಚಾರ ಅರಿತಿದ್ದ ಜನ ಇಂದು ಮುಂಜಾನೆಯೇ ದಿನಪತ್ರಿಕೆಗಳಲ್ಲೂ ಕೊಂಡಿಟ್ಟುಕೊಳ್ಳಲೂ ದಾಂಗುಡಿಯಿಟ್ಟ ಪರಿಣಾಮ ದಿನಪತ್ರಿಕೆಗೆಳ ಸಿಗದಂತಾಗಿತ್ತು.ಅಂತೆಕಂತೆಯೆ ಮಾತಿನ ನಡುವೆಯೇ ಸಾರ್ವಜನಿಕ ಸ್ಥಳಗಳು ಸೇರಿದಂತೆ ಎಲ್ಲೆಲ್ಲೂ ಎಲ್ಲರಲ್ಲೂ ನೋಟಿನ ಮಾತೆ ಮಾರ್ಧನಿಸಿತ್ತು.
        ನಿತ್ಯ ವ್ಯವಹಾರಕ್ಕೆ ಐನೂರು ನೋಟುಗಳನ್ನು ಇಟ್ಟುಕೊಂಡಿರುವ ಸಾಮಾನ್ಯ ಜನರು ಇಂದು ಮುಂಜಾನೆಯಿಂದಲೂ ಜೇಬಲ್ಲಿ,ಕೈಯಲ್ಲಿ 500- 1000 ರು ನೋಟು ಹಿಡಿದು ಆತಂಕದಿಂದ ಓಡಾಡುತ್ತಿದ್ದ ದೃಶ್ಯ ಕಂಡುಬಂತು.ತಮ್ಮ ಬಳಿ ಸದ್ಯ ಉಳಿದಿರುವ ನೋಟನ್ನು ಹೇಗೆ ಚಲಾವಣೆ ಮಾಡುವುದು, ನೋಟನ್ನು ಎನು ಮಾಡುವುದು ಎಂದು ಪರದಾಡುತ್ತಾ , ಅಂಗಡಿಗಳಲ್ಲಿ ಸಾಮಾನು ಕೊಂಡು ಎಲ್ಲಕ್ಕೂ ಚಿಲ್ಲರೆಯಿಲ್ಲವೆಂದು ಹೇಳಿ ೫೦೦ ರೂ ನೀಡುತ್ತಾ ನಾನಾ ತಂತ್ರಗಳನ್ನು ಪ್ರಯೋಗಿಸಿ ನೋಟನ್ನು ಸಾಗಿಸಲು ಪ್ರಯತ್ನಿಸುತ್ತಿದ್ದಿದ್ದು ಸಾಮನ್ಯವಾಗಿತ್ತು..ಈ ಪ್ರಯತ್ನದಲ್ಲಿ ಕೆಲವಡೆ ಮಾತಿನ ಚಕಮುಖಿ ಕೂಡ ನಡೆಯಿತು.
       ಅಂಗಡಿ , ಹೋಟೆಲ್ ಗಳು, ಪೆಟ್ರೋಲ್ ಬಂಕ್, ತರಕಾರಿ, ಹೂವು ಮಾರಾಟಗಾರರ ನಡುವೆ ಇಂದು ೫೦೦ ನೋಟಿನದ್ದೇ ಬಿಸಿಬಿಸಿ ಚರ್ಚೆ ಸಾಗಿತ್ತು.
       ಬೇಕೋಬೇಡವೋ ನೋಟನ್ನು ಕಳುಹಿಸುವ ಪ್ರಯತ್ನವಾಗಿ ಬಟ್ಟೆ ಅಂಗಡಿ,ದಿನಸಿಅಂಗಡಿ ಕಡೆಗೆ ಕೆಲವರು ಎಲೆಕ್ಟ್ರಾನಿಕ್ ಅಂಗಡಿಗಳಲ್ಲಿ ಕೊಳ್ಳುವಿಕೆ ಮಾಡಿ ೫೦೦ -೧೦೦೦ ರೂ ಗಳನ್ನೆ ನೀಡುತ್ತಿದ್ದರು.
ತರಕಾರಿ,ಟೀಅಂಗಡಿ,ಹೂವಿನ ಅಂಗಡಿಗಳಲ್ಲಿ ಚಿಲ್ಲರೆ ಇದ್ದರೆ ಮಾತ್ರ ವ್ಯವಹಾರ ಎನ್ನುವಂತಾಗಿತ್ತು.ಕೆಲವರು ದಿನಪತ್ರಿಕೆ ತಿಂಗಳ ಬಾಕಿಗಾಗಿ ೫೦೦-೧೦೦೦ ಕೊಟ್ಟುಕಳುಹಿಸಿದ್ದ ಘಟನೆ ಕೂಡ ನಡೆಯಿತು
          ಪೆಟ್ರೋಲ್ ಬಂಕಿನಲ್ಲಿ ಹೆಚ್ಚಿನವರು ೫೦ -೧೦೦ ರೂ ಗೆ ಪೆಟ್ರೋಲ್ ಹಾಕಿಸಿ ಐನೂರು- ಸಾವಿರ ರೂಗಳ ನೋಟು ನೀಡುತಿದ್ದರಿಂದ ಚಿಲ್ಲರೆ ಕೊಡಲು ಬಂಕಿನವರು ಪರದಾಡುವಂತಾಯಿತು.ಚಿಲ್ಲರೆ ವಿಷಯಕ್ಕೆ ಜಗಳವೂ ನಡೆದು ಕಡೆಗೆ ಚಿಲ್ಲರೆ ಕೊಟ್ಟರೆ ಮಾತ್ರ ಪೆಟ್ರೋಲ್ ಹಾಕುವ ಪರಿಸ್ಥಿತಿ ಎದುರಾಯಿತು.

        ಸರ್ಕಾರಿ ಆದೇಶದಂತೆ ಬ್ಯಾಂಕ್, ಎಟಿಎಂಗಳು ಇಂದು ಬಾಗಿಲು ಮುಚ್ಚಿತ್ತಾದ್ದರೂ ಜನ ಕುತುಹಲಕ್ಕಾಗಿ ಬ್ಯಾಂಕಿನೆಡೆಗೆ ಎಡೆತಾಕುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು.ಎಲ್ಲರ ಮೊಬೈಲ್ನಲ್ಲೂ ೫೦೦ ಮತ್ತು ೧೦೦೦ ನೋಟುಗಳು ಅಣಕಕ್ಕೀಡಾಗಿದ್ದು ಸೇರಿದಂತೆ ಜನಸಾಮಾನ್ಯರಿಗೆ ಗೊಂದಲ ನಿವಾರಿಸುವ ಒಂದಷ್ಟು ಪಾಯಿಂಟ್ಸ್ ಕೂಡ ಪುರುಸೊತ್ತಿಲ್ಲದಂತೆ ಹರಿದಾಡಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.