ವಿಷಯಕ್ಕೆ ಹೋಗಿ

೫೦೦-೧೦೦೦ ನೋಟು ರದ್ದು :ಎಲ್ಲೆಲ್ಲೂ ನೋಟಿನದ್ದೆ ಮಾತು

ಹುಳಿಯಾರು:ಪ್ರಧಾನಿ ನರೇಂದ್ರ ಮೋದಿಯವರು ಕಪ್ಪು ಹಣ ತಡೆಯಲು ಮಂಗಳವಾರ ರಾತ್ರಿ ದಿಢೀರ್ ಘೋಷಣೆ ಮಾಡಿ 500 ಮತ್ತು 1,000 ರೂ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಪಡಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಸಂಸೆ ವ್ಯಕ್ತವಾದರೂ ಸಹ ತಮ್ಮಲ್ಲಿ ಉಳಿದಿರುವ ನೋಟುಗಳ ಬದಲಾವಣೆ ಹೇಗೆ ಎಂಬ ಚಿಂತೆ ಎಲ್ಲರಲ್ಲೂ ಮನೆ ಮಾಡಿತ್ತು.
500 ಮತ್ತು 1,000 ರೂ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಪಡಿಸಿರುವಹಿನ್ನಲೆಯಲ್ಲಿ ಸರ್ಕಾರಿ ಆದೇಶದಂತೆ ಹುಳಿಯಾರಿನಲ್ಲೂ ಬ್ಯಾಂಕ್, ಎಟಿಎಂಗಳು ಬುಧವಾರದಂದು ಬಾಗಿಲು ಮುಚ್ಚಿತ್ತು.
           ಟಿವಿಗಳಲ್ಲಿ ವಿಚಾರ ಅರಿತಿದ್ದ ಜನ ಇಂದು ಮುಂಜಾನೆಯೇ ದಿನಪತ್ರಿಕೆಗಳಲ್ಲೂ ಕೊಂಡಿಟ್ಟುಕೊಳ್ಳಲೂ ದಾಂಗುಡಿಯಿಟ್ಟ ಪರಿಣಾಮ ದಿನಪತ್ರಿಕೆಗೆಳ ಸಿಗದಂತಾಗಿತ್ತು.ಅಂತೆಕಂತೆಯೆ ಮಾತಿನ ನಡುವೆಯೇ ಸಾರ್ವಜನಿಕ ಸ್ಥಳಗಳು ಸೇರಿದಂತೆ ಎಲ್ಲೆಲ್ಲೂ ಎಲ್ಲರಲ್ಲೂ ನೋಟಿನ ಮಾತೆ ಮಾರ್ಧನಿಸಿತ್ತು.
        ನಿತ್ಯ ವ್ಯವಹಾರಕ್ಕೆ ಐನೂರು ನೋಟುಗಳನ್ನು ಇಟ್ಟುಕೊಂಡಿರುವ ಸಾಮಾನ್ಯ ಜನರು ಇಂದು ಮುಂಜಾನೆಯಿಂದಲೂ ಜೇಬಲ್ಲಿ,ಕೈಯಲ್ಲಿ 500- 1000 ರು ನೋಟು ಹಿಡಿದು ಆತಂಕದಿಂದ ಓಡಾಡುತ್ತಿದ್ದ ದೃಶ್ಯ ಕಂಡುಬಂತು.ತಮ್ಮ ಬಳಿ ಸದ್ಯ ಉಳಿದಿರುವ ನೋಟನ್ನು ಹೇಗೆ ಚಲಾವಣೆ ಮಾಡುವುದು, ನೋಟನ್ನು ಎನು ಮಾಡುವುದು ಎಂದು ಪರದಾಡುತ್ತಾ , ಅಂಗಡಿಗಳಲ್ಲಿ ಸಾಮಾನು ಕೊಂಡು ಎಲ್ಲಕ್ಕೂ ಚಿಲ್ಲರೆಯಿಲ್ಲವೆಂದು ಹೇಳಿ ೫೦೦ ರೂ ನೀಡುತ್ತಾ ನಾನಾ ತಂತ್ರಗಳನ್ನು ಪ್ರಯೋಗಿಸಿ ನೋಟನ್ನು ಸಾಗಿಸಲು ಪ್ರಯತ್ನಿಸುತ್ತಿದ್ದಿದ್ದು ಸಾಮನ್ಯವಾಗಿತ್ತು..ಈ ಪ್ರಯತ್ನದಲ್ಲಿ ಕೆಲವಡೆ ಮಾತಿನ ಚಕಮುಖಿ ಕೂಡ ನಡೆಯಿತು.
       ಅಂಗಡಿ , ಹೋಟೆಲ್ ಗಳು, ಪೆಟ್ರೋಲ್ ಬಂಕ್, ತರಕಾರಿ, ಹೂವು ಮಾರಾಟಗಾರರ ನಡುವೆ ಇಂದು ೫೦೦ ನೋಟಿನದ್ದೇ ಬಿಸಿಬಿಸಿ ಚರ್ಚೆ ಸಾಗಿತ್ತು.
       ಬೇಕೋಬೇಡವೋ ನೋಟನ್ನು ಕಳುಹಿಸುವ ಪ್ರಯತ್ನವಾಗಿ ಬಟ್ಟೆ ಅಂಗಡಿ,ದಿನಸಿಅಂಗಡಿ ಕಡೆಗೆ ಕೆಲವರು ಎಲೆಕ್ಟ್ರಾನಿಕ್ ಅಂಗಡಿಗಳಲ್ಲಿ ಕೊಳ್ಳುವಿಕೆ ಮಾಡಿ ೫೦೦ -೧೦೦೦ ರೂ ಗಳನ್ನೆ ನೀಡುತ್ತಿದ್ದರು.
ತರಕಾರಿ,ಟೀಅಂಗಡಿ,ಹೂವಿನ ಅಂಗಡಿಗಳಲ್ಲಿ ಚಿಲ್ಲರೆ ಇದ್ದರೆ ಮಾತ್ರ ವ್ಯವಹಾರ ಎನ್ನುವಂತಾಗಿತ್ತು.ಕೆಲವರು ದಿನಪತ್ರಿಕೆ ತಿಂಗಳ ಬಾಕಿಗಾಗಿ ೫೦೦-೧೦೦೦ ಕೊಟ್ಟುಕಳುಹಿಸಿದ್ದ ಘಟನೆ ಕೂಡ ನಡೆಯಿತು
          ಪೆಟ್ರೋಲ್ ಬಂಕಿನಲ್ಲಿ ಹೆಚ್ಚಿನವರು ೫೦ -೧೦೦ ರೂ ಗೆ ಪೆಟ್ರೋಲ್ ಹಾಕಿಸಿ ಐನೂರು- ಸಾವಿರ ರೂಗಳ ನೋಟು ನೀಡುತಿದ್ದರಿಂದ ಚಿಲ್ಲರೆ ಕೊಡಲು ಬಂಕಿನವರು ಪರದಾಡುವಂತಾಯಿತು.ಚಿಲ್ಲರೆ ವಿಷಯಕ್ಕೆ ಜಗಳವೂ ನಡೆದು ಕಡೆಗೆ ಚಿಲ್ಲರೆ ಕೊಟ್ಟರೆ ಮಾತ್ರ ಪೆಟ್ರೋಲ್ ಹಾಕುವ ಪರಿಸ್ಥಿತಿ ಎದುರಾಯಿತು.

        ಸರ್ಕಾರಿ ಆದೇಶದಂತೆ ಬ್ಯಾಂಕ್, ಎಟಿಎಂಗಳು ಇಂದು ಬಾಗಿಲು ಮುಚ್ಚಿತ್ತಾದ್ದರೂ ಜನ ಕುತುಹಲಕ್ಕಾಗಿ ಬ್ಯಾಂಕಿನೆಡೆಗೆ ಎಡೆತಾಕುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು.ಎಲ್ಲರ ಮೊಬೈಲ್ನಲ್ಲೂ ೫೦೦ ಮತ್ತು ೧೦೦೦ ನೋಟುಗಳು ಅಣಕಕ್ಕೀಡಾಗಿದ್ದು ಸೇರಿದಂತೆ ಜನಸಾಮಾನ್ಯರಿಗೆ ಗೊಂದಲ ನಿವಾರಿಸುವ ಒಂದಷ್ಟು ಪಾಯಿಂಟ್ಸ್ ಕೂಡ ಪುರುಸೊತ್ತಿಲ್ಲದಂತೆ ಹರಿದಾಡಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...