ವಿಷಯಕ್ಕೆ ಹೋಗಿ

ಕೊಬ್ಬರಿ ಹೋರಾಟದಲ್ಲಿ ಪಾಲ್ಗೊಂಡ ಕಾಯಿತಿಮ್ಮನಹಳ್ಳಿಯ ನೂರಾರು ರೈತರು

ಜಯಚಂದ್ರ ರಾಜೀನಾಮೆಗೆ ಹುಟ್ಟೂರಿನ ಜನರಿಂದಲೇ ಆಗ್ರಹ
ಹುಳಿಯಾರು: ಹುಳಿಯಾರು ಎಪಿಎಂಸಿ ಬಳಿ ರೈತ ಸಂಘದಿಂದ ಹಮ್ಮಿಕೊಂಡಿರುವ ಕೊಬ್ಬರಿ ಹೋರಾಟ ೨೦ ನೇ ದಿನಕ್ಕೆ ಕಾಲಿಟ್ಟಿದ್ದು ಸಚಿವ ಟಿ.ಬಿ.ಜಯಚಂದ್ರ ಅವರ ಹುಟ್ಟೂರಾದ ಕಾಯಿತಿಮ್ಮನಹಳ್ಳಿಯ ನೂರಾರು ರೈತರು ಬುಧವಾರ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಜಯಚಂದ್ರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು.
ಹುಳಿಯಾರು ಎಪಿಎಂಸಿ ಬಳಿ ರೈತ ಸಂಘದಿಂದ ಹಮ್ಮಿಕೊಂಡಿರುವ ಕೊಬ್ಬರಿ ಹೋರಾಟಕ್ಕೆ ಸಚಿವ ಟಿ.ಬಿ.ಜಯಚಂದ್ರ ಅವರ ಹುಟ್ಟೂರಾದ ಕಾಯಿತಿಮ್ಮನಹಳ್ಳಿಯ ನೂರಾರು ರೈತರು ಪಾಲ್ಗೊಂಡು ಪ್ರತಿಭಟನಾ ಮೆರವಣಿಗೆ ನಡೆಸಿ ಜಯಚಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು 
              ಕಾಯಿತಿಮ್ಮನಹಳ್ಳಿಯ ಸಹಕಾರ ಸಂಘದ ಅಧ್ಯಕ್ಷ ನಾಗರಾಜು ಅವರು ಮತನಾಡಿ ಜಯಚಂದ್ರ ಅವರು ಸಚಿವರಾ ದಾಗ ಇಡೀ ಊರಿಗೆ ಊರೆ ಸಂಭ್ರಮಿಸಿತ್ತು. ನಮ್ಮೂರಿನ ರೈತನ ಮಗ ಸಚಿವರಾಗುತ್ತಿದ್ದು ಕೃಷಿ ಸಮಸ್ಯೆಗೆ ಪರಿಹಾರ ಕೊಡುವ ಅತಿಯಾದ ವಿಶ್ವಾಸ ಮತ್ತು ನಂಬಿಕೆ ಇಟ್ಟುಕೊಂಡಿದ್ದೆವು. ಆದರೆ ಕೊಬ್ಬರಿ ಬೆಲೆ ಕುಸಿದಿದ್ದು ಜಯಚಂದ್ರ ಉತ್ತಮ ಬೆಲೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ರೈತರ ಕಷ್ಟಕಾರ್ಪಣ್ಯಗಳನ್ನು ಬಲ್ಲ ಜಯಚಂದ್ರ ಅವರು ಸಚಿವ ಸಂಪುಟದಲ್ಲಿದ್ದೂ ರೈತರು ಬೆಲೆಗಾಗಿ ಹೋರಾಡುತ್ತಿರುವುದು ಜಯಚಂದ್ರ ಅವರಿಗೆ ಅವಮಾನದ ಸಂಗತಿ. ಕಾವೇರಿ ಸಮಸ್ಯೆ ಬುಗಿಲೆದ್ದಾಗ ಕೇಂದ್ರ ಸರ್ಕಾರದಿಂದ ಸಮಸ್ಯೆಗೆ ಪರಿಹಾರ ಕೊಡಿಸಲಾಗದೆ ಅಂಬರೀಶ್ ರಾಜೀನಾಮೆ ಕೊಟ್ಟ ರೀತಿ ಸಿದ್ಧರಾಮಯ್ಯ ಅವರ ಮನವೊಲಿಸಿ ಕೊಬ್ಬರಿಗೆ ಬೆಲೆ ಕೊಡಿಸಲಾಗದಿದ್ದರೆ ರಾಜೀನಾಮೆ ಕೊಟ್ಟು ರೈತರೊಂದಿಗೆ ಹೋರಾಟಕ್ಕೆ ಧುಮುಕಬೇಕು ಎಂದು ಆಗ್ರಹಿಸಿದರು.
                   ಭಾರತ ಕೃಷಿ ದೇಶ ಎನ್ನುತ್ತಾರೆ, ರೈತ ದೇಶದ ಬೆನ್ನೆಲುಬು ಎನ್ನುತ್ತಾರೆ. ನಾವೂ ರೈತನ ಮಕ್ಕಳು ಎಂದು ಕಿವಿಗೆ ಹೂ ಇಡುತ್ತಾರೆ. ಆದರೆ ಎರಡೂ ಸದನಲ್ಲಿ ರೈತನ ಬಗ್ಗೆ ಹತ್ತು ನಿಮಿಷ ಚರ್ಚೆ ಮಾಡುವುದಿಲ್ಲ. ಅಧಿಕಾರಿಗಳ ಸಾವಿನ ಬಗ್ಗೆ, ದುಬಾರಿ ವಾಚಿನ ಬಗ್ಗೆ, ಅಶ್ಲೀಲ ಚಿತ್ರ ವೀಕ್ಷಣೆ ಬಗ್ಗೆ ದಿನಗಟ್ಟಲೆ ಮಾತನಾಡುತ್ತದೆ. ಇದೇ ವಿಚಾರಕ್ಕೆ ಸದನವನ್ನೇ ಬಲಿಕೊಡುತ್ತಾರೆ. ಆದರೆ ಬೀದಿಗೆ ಬಿದ್ದಿರುವ ರೈತನ ಬಗ್ಗೆ ಮಾತನಾಡುವುದಿಲ್ಲ. ರೈತನ ಬೆಳೆಗಳ ಬೆಲೆ ಕುಸಿತವಾಗಿರುವ ಬಗ್ಗೆ ಮಾತನಾಡುವುದಿಲ್ಲ. ರೈತನಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ಬಗ್ಗೆ ಮಾತನಾಡುವುದಿಲ್ಲ. ಹೋಗಲಿ ರೈತನ ಸರಣಿ ಆತ್ಮಹತ್ಯೆಗಳ ಬಗ್ಗೆಯೂ ಗಂಭೀರ ಚರ್ಚೆ ಮಾಡುವುದಿಲ್ಲ. ರಾಜಕಾರಣಿಗಳ ರೈತ ವಿರೋಧಿ ಧೋರಣೆ ಹೀಗೆಯೇ ಮುಂದುವರಿದರೆ ಎಲ್ಲಾ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸೋಲಿಸಿ ರೈತರೆ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
           ರೈತನ ಆತ್ಮಹತ್ಯೆಗಳಿಗೆ ಸರ್ಕಾರದ ಪಾಲಿಸಿಗಳು ಕಾರಣ. ಒಂದರ್ಥದಲ್ಲಿ ಸರ್ಕಾರಗಳೇ ರೈತನನ್ನು ಕೊಲ್ಲುತ್ತಿವೆ ಎಂದರೂ ತಪ್ಪಿಲ್ಲ. ರೈತನ ಬೆಳೆಗೆ ಸರಿಯಾದ ಬೆಲೆ ಸಿಗದೆ ಸಾಲ ತೀರಿಸಲಾಗದೆ ಸಾವಿಗೆ ಶರಣಾಗುತ್ತಾನೆ. ಕರ್ತವ್ಯ ನಿರತ ಯೋಧ ಗುಂಡಿಗೆ ಬಲಿಯಾದರೆ ಹುತಾತ್ಮ ಎಂದು ಕರೆಯುತ್ತಾರೆ. ದೇಶಕ್ಕೆ ಅನ್ನ ಕೊಡಲು ಸಾಲ ಮಾಡಿ ತೀರಿಸಲಾಗದೆ ಸಾಯುವ ರೈತನಿಗೆ ಆತ್ಮಹತ್ಯೆ ಎಂದು ಅವಮಾನದ ಪಟ್ಟ ಕಟ್ಟುತ್ತಾರೆ. ರೈತ ಬೆಂಬಲ ಬೆಲೆ ಕೇಳುತ್ತಿರುವುದು ಅವರ ಬೆವರಿಗೆ ಬೆಲೆ ಕೇಳುತ್ತಿದ್ದಾನೆ. ಹಾಗಾಗಿ ಕೊಬ್ಬರಿಗೆ ೧೫ ಸಾವಿರ ಬೆಲೆ ಕೊಡಬೇಕು. ಇನ್ನಾದರೂ ರಾಜಕಾರಣಿಗಳು ಬದಲಾಗಿ ರೈತನನ ಬೆವರಿಗೆ ನ್ಯಾಯಯುತ ಬೆಲೆ ಕೊಡಿ. ೧೦ ವರ್ಷ ರೈತನ ಪರ ಕಾನೂನು ರಚಿಸಿ ಮುಂದಿನ ೧೦೦ ವರ್ಷ ರೈತ ಇಡೀ ದೇಶವನ್ನು ಸಾಕುತ್ತಾನೆ ಎಂದರು.

             ರೈತ ಸಂಘದ ಕೆಂಕೆರೆ ಸತೀಶ್, ತಿಮ್ಮನಹಳ್ಳಿಲೋಕೇಶ್, ತಮ್ಮಡಿಹಳ್ಳಿ ಮಲ್ಲಿಕಾರ್ಜುನ್, ಕಾಡಿನರಾಜ ನಾಗರಾಜು, ಜಯರಾಂ, ಸೀತಾರಾಮಯ್ಯ, ಕಟ್ಟೆ ಸುಬ್ಬಣ್ಣ, ಬಂಡಿಮನೆ ಮಂಜುನಾಥ್, ನೀಲಕಂಠಪ್ಪ, ಗಂಗಾಧರ್, ರಾಮಯ್ಯ, ಡಾ.ಬಾಬು, ಗ್ರಾಪಂ ಗುರು, ಗೋಪಾಲಕೃಷ್ಣ, ಸಿದ್ದನಕಟ್ಟೆಗೋಪಾಲಯ್ಯ, ರಾಜಣ್ಣ, ರಾಮಯ್ಯ, ಚಂದ್ರಣ್ಣ, ಪುರದಯ್ಯ, ಟಿ.ಆರ್.ತನು, ಕೇಶವಣ್ಣ ಸೇರಿದಂತೆ ಕಾಯಿತಿಮ್ಮನಹಳ್ಳಿ ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.