ವಿಷಯಕ್ಕೆ ಹೋಗಿ

ಕೊಬ್ಬರಿ ಹೋರಾಟದಲ್ಲಿ ಪಾಲ್ಗೊಂಡ ಕಾಯಿತಿಮ್ಮನಹಳ್ಳಿಯ ನೂರಾರು ರೈತರು

ಜಯಚಂದ್ರ ರಾಜೀನಾಮೆಗೆ ಹುಟ್ಟೂರಿನ ಜನರಿಂದಲೇ ಆಗ್ರಹ
ಹುಳಿಯಾರು: ಹುಳಿಯಾರು ಎಪಿಎಂಸಿ ಬಳಿ ರೈತ ಸಂಘದಿಂದ ಹಮ್ಮಿಕೊಂಡಿರುವ ಕೊಬ್ಬರಿ ಹೋರಾಟ ೨೦ ನೇ ದಿನಕ್ಕೆ ಕಾಲಿಟ್ಟಿದ್ದು ಸಚಿವ ಟಿ.ಬಿ.ಜಯಚಂದ್ರ ಅವರ ಹುಟ್ಟೂರಾದ ಕಾಯಿತಿಮ್ಮನಹಳ್ಳಿಯ ನೂರಾರು ರೈತರು ಬುಧವಾರ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಜಯಚಂದ್ರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು.
ಹುಳಿಯಾರು ಎಪಿಎಂಸಿ ಬಳಿ ರೈತ ಸಂಘದಿಂದ ಹಮ್ಮಿಕೊಂಡಿರುವ ಕೊಬ್ಬರಿ ಹೋರಾಟಕ್ಕೆ ಸಚಿವ ಟಿ.ಬಿ.ಜಯಚಂದ್ರ ಅವರ ಹುಟ್ಟೂರಾದ ಕಾಯಿತಿಮ್ಮನಹಳ್ಳಿಯ ನೂರಾರು ರೈತರು ಪಾಲ್ಗೊಂಡು ಪ್ರತಿಭಟನಾ ಮೆರವಣಿಗೆ ನಡೆಸಿ ಜಯಚಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು 
              ಕಾಯಿತಿಮ್ಮನಹಳ್ಳಿಯ ಸಹಕಾರ ಸಂಘದ ಅಧ್ಯಕ್ಷ ನಾಗರಾಜು ಅವರು ಮತನಾಡಿ ಜಯಚಂದ್ರ ಅವರು ಸಚಿವರಾ ದಾಗ ಇಡೀ ಊರಿಗೆ ಊರೆ ಸಂಭ್ರಮಿಸಿತ್ತು. ನಮ್ಮೂರಿನ ರೈತನ ಮಗ ಸಚಿವರಾಗುತ್ತಿದ್ದು ಕೃಷಿ ಸಮಸ್ಯೆಗೆ ಪರಿಹಾರ ಕೊಡುವ ಅತಿಯಾದ ವಿಶ್ವಾಸ ಮತ್ತು ನಂಬಿಕೆ ಇಟ್ಟುಕೊಂಡಿದ್ದೆವು. ಆದರೆ ಕೊಬ್ಬರಿ ಬೆಲೆ ಕುಸಿದಿದ್ದು ಜಯಚಂದ್ರ ಉತ್ತಮ ಬೆಲೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ರೈತರ ಕಷ್ಟಕಾರ್ಪಣ್ಯಗಳನ್ನು ಬಲ್ಲ ಜಯಚಂದ್ರ ಅವರು ಸಚಿವ ಸಂಪುಟದಲ್ಲಿದ್ದೂ ರೈತರು ಬೆಲೆಗಾಗಿ ಹೋರಾಡುತ್ತಿರುವುದು ಜಯಚಂದ್ರ ಅವರಿಗೆ ಅವಮಾನದ ಸಂಗತಿ. ಕಾವೇರಿ ಸಮಸ್ಯೆ ಬುಗಿಲೆದ್ದಾಗ ಕೇಂದ್ರ ಸರ್ಕಾರದಿಂದ ಸಮಸ್ಯೆಗೆ ಪರಿಹಾರ ಕೊಡಿಸಲಾಗದೆ ಅಂಬರೀಶ್ ರಾಜೀನಾಮೆ ಕೊಟ್ಟ ರೀತಿ ಸಿದ್ಧರಾಮಯ್ಯ ಅವರ ಮನವೊಲಿಸಿ ಕೊಬ್ಬರಿಗೆ ಬೆಲೆ ಕೊಡಿಸಲಾಗದಿದ್ದರೆ ರಾಜೀನಾಮೆ ಕೊಟ್ಟು ರೈತರೊಂದಿಗೆ ಹೋರಾಟಕ್ಕೆ ಧುಮುಕಬೇಕು ಎಂದು ಆಗ್ರಹಿಸಿದರು.
                   ಭಾರತ ಕೃಷಿ ದೇಶ ಎನ್ನುತ್ತಾರೆ, ರೈತ ದೇಶದ ಬೆನ್ನೆಲುಬು ಎನ್ನುತ್ತಾರೆ. ನಾವೂ ರೈತನ ಮಕ್ಕಳು ಎಂದು ಕಿವಿಗೆ ಹೂ ಇಡುತ್ತಾರೆ. ಆದರೆ ಎರಡೂ ಸದನಲ್ಲಿ ರೈತನ ಬಗ್ಗೆ ಹತ್ತು ನಿಮಿಷ ಚರ್ಚೆ ಮಾಡುವುದಿಲ್ಲ. ಅಧಿಕಾರಿಗಳ ಸಾವಿನ ಬಗ್ಗೆ, ದುಬಾರಿ ವಾಚಿನ ಬಗ್ಗೆ, ಅಶ್ಲೀಲ ಚಿತ್ರ ವೀಕ್ಷಣೆ ಬಗ್ಗೆ ದಿನಗಟ್ಟಲೆ ಮಾತನಾಡುತ್ತದೆ. ಇದೇ ವಿಚಾರಕ್ಕೆ ಸದನವನ್ನೇ ಬಲಿಕೊಡುತ್ತಾರೆ. ಆದರೆ ಬೀದಿಗೆ ಬಿದ್ದಿರುವ ರೈತನ ಬಗ್ಗೆ ಮಾತನಾಡುವುದಿಲ್ಲ. ರೈತನ ಬೆಳೆಗಳ ಬೆಲೆ ಕುಸಿತವಾಗಿರುವ ಬಗ್ಗೆ ಮಾತನಾಡುವುದಿಲ್ಲ. ರೈತನಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ಬಗ್ಗೆ ಮಾತನಾಡುವುದಿಲ್ಲ. ಹೋಗಲಿ ರೈತನ ಸರಣಿ ಆತ್ಮಹತ್ಯೆಗಳ ಬಗ್ಗೆಯೂ ಗಂಭೀರ ಚರ್ಚೆ ಮಾಡುವುದಿಲ್ಲ. ರಾಜಕಾರಣಿಗಳ ರೈತ ವಿರೋಧಿ ಧೋರಣೆ ಹೀಗೆಯೇ ಮುಂದುವರಿದರೆ ಎಲ್ಲಾ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸೋಲಿಸಿ ರೈತರೆ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
           ರೈತನ ಆತ್ಮಹತ್ಯೆಗಳಿಗೆ ಸರ್ಕಾರದ ಪಾಲಿಸಿಗಳು ಕಾರಣ. ಒಂದರ್ಥದಲ್ಲಿ ಸರ್ಕಾರಗಳೇ ರೈತನನ್ನು ಕೊಲ್ಲುತ್ತಿವೆ ಎಂದರೂ ತಪ್ಪಿಲ್ಲ. ರೈತನ ಬೆಳೆಗೆ ಸರಿಯಾದ ಬೆಲೆ ಸಿಗದೆ ಸಾಲ ತೀರಿಸಲಾಗದೆ ಸಾವಿಗೆ ಶರಣಾಗುತ್ತಾನೆ. ಕರ್ತವ್ಯ ನಿರತ ಯೋಧ ಗುಂಡಿಗೆ ಬಲಿಯಾದರೆ ಹುತಾತ್ಮ ಎಂದು ಕರೆಯುತ್ತಾರೆ. ದೇಶಕ್ಕೆ ಅನ್ನ ಕೊಡಲು ಸಾಲ ಮಾಡಿ ತೀರಿಸಲಾಗದೆ ಸಾಯುವ ರೈತನಿಗೆ ಆತ್ಮಹತ್ಯೆ ಎಂದು ಅವಮಾನದ ಪಟ್ಟ ಕಟ್ಟುತ್ತಾರೆ. ರೈತ ಬೆಂಬಲ ಬೆಲೆ ಕೇಳುತ್ತಿರುವುದು ಅವರ ಬೆವರಿಗೆ ಬೆಲೆ ಕೇಳುತ್ತಿದ್ದಾನೆ. ಹಾಗಾಗಿ ಕೊಬ್ಬರಿಗೆ ೧೫ ಸಾವಿರ ಬೆಲೆ ಕೊಡಬೇಕು. ಇನ್ನಾದರೂ ರಾಜಕಾರಣಿಗಳು ಬದಲಾಗಿ ರೈತನನ ಬೆವರಿಗೆ ನ್ಯಾಯಯುತ ಬೆಲೆ ಕೊಡಿ. ೧೦ ವರ್ಷ ರೈತನ ಪರ ಕಾನೂನು ರಚಿಸಿ ಮುಂದಿನ ೧೦೦ ವರ್ಷ ರೈತ ಇಡೀ ದೇಶವನ್ನು ಸಾಕುತ್ತಾನೆ ಎಂದರು.

             ರೈತ ಸಂಘದ ಕೆಂಕೆರೆ ಸತೀಶ್, ತಿಮ್ಮನಹಳ್ಳಿಲೋಕೇಶ್, ತಮ್ಮಡಿಹಳ್ಳಿ ಮಲ್ಲಿಕಾರ್ಜುನ್, ಕಾಡಿನರಾಜ ನಾಗರಾಜು, ಜಯರಾಂ, ಸೀತಾರಾಮಯ್ಯ, ಕಟ್ಟೆ ಸುಬ್ಬಣ್ಣ, ಬಂಡಿಮನೆ ಮಂಜುನಾಥ್, ನೀಲಕಂಠಪ್ಪ, ಗಂಗಾಧರ್, ರಾಮಯ್ಯ, ಡಾ.ಬಾಬು, ಗ್ರಾಪಂ ಗುರು, ಗೋಪಾಲಕೃಷ್ಣ, ಸಿದ್ದನಕಟ್ಟೆಗೋಪಾಲಯ್ಯ, ರಾಜಣ್ಣ, ರಾಮಯ್ಯ, ಚಂದ್ರಣ್ಣ, ಪುರದಯ್ಯ, ಟಿ.ಆರ್.ತನು, ಕೇಶವಣ್ಣ ಸೇರಿದಂತೆ ಕಾಯಿತಿಮ್ಮನಹಳ್ಳಿ ಗ್ರಾಮದ ನೂರಾರು ರೈತರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...