ವಿಷಯಕ್ಕೆ ಹೋಗಿ

ಶಾಸಕರನ್ನು ನಾವೇ ಹುಡುಕಿಕೊಂಡು ಹೊರಡುವೆವು

ಕಾರೇಹಳ್ಳಿಯಲ್ಲಿ ಘೇರಾವ್ ಕಾರ್ಯಕ್ರಮ

ಹುಳಿಯಾರುಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿ ಚಳುವಳಿಗೆ ಶನಿವಾರದಂದು ೩೦ ದಿನ ತುಂಬಿದ್ದು ಶಾಸಕರ ನಿರ್ಲಕ್ಷ್ಯವನ್ನು ಧರಣಿನಿರತರು ಖಂಡಿಸಿದರು.
ಹುಳಿಯಾರು:ಪಟ್ಟಣದ ಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿಚಳುವಳಿಗೆ ಶನಿವಾರದಂದು ೩೦ ದಿನ ತುಂಬಿದ್ದು, ಇಷ್ಟು ದಿನವಾದರೂ ನಮ್ಮನ್ನು ಏನೆಂದು ಕೇಳದ ಶಾಸಕರನ್ನು ರೈತರುಗಳೇ ಹುಡುಕಿಕೊಂಡು ಹೊರಟಿದ್ದು ಆಗಲಾದರೂ ನಮ್ಮನ್ನು ಭೇಟಿಯಾಗಿ ನಮ್ಮ ಸಮಸ್ಯೆ ಆಲಿಸಬಹುದೆಂಬ ಕಿಂಚಿತ್ ಭರವಸೆ ನಮ್ಮಲ್ಲಿದ್ದು ಈ ನಿಟ್ಟಿನಲ್ಲಿ ಸೋಮವಾರದಂದು ಚಿಕ್ಕನಾಯಕನಹಳ್ಳಿಗೆ ರೈತರುಗಳು ತೆರಳುತ್ತಿರುವುದಾಗಿ ಹೋರಾಟದ ಸಂಚಾಲಕ ಹಾಗೂ ರಾಜ್ಯ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಬೇಸರದಿಂದ ನುಡಿದರು,
          ಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿ ಚಳುವಳಿ ಶುರುವಾದಾಗಲಿಂದಲೂ ಇದುವರೆಗೂ ನಮ್ಮ ಪ್ರತಿನಿಧಿಸುವ ಶಾಸಕರು ಬಾರದಿರುವುದು ನಾಚಿಕೇಗೇಡಿನ ವಿಚಾರ.ನಮ್ಮೊಂದಿಗೆ ಕೂತೂ ಚರ್ಚೆ ಮಾಡಿ ನಮ್ಮಗಳ ಜೊತೆಯೇ ವಿಧಾನಸೌದ ಮುಂದೆ ಧರಣಿ ಕೂತಿದ್ದರೆ ನ್ಯಾಯಯುತವಾಗಿರುತ್ತಿತ್ತು. ಇದೇ ೧೫ರಂದು ಕಾರೇಹಳ್ಳಿಯಲ್ಲಿ ಗೋಶಾಲೆಯ ಉದ್ಘಾಟನೆಗೆ ಶಾಸಕರು ಬರಲಿದ್ದು ಅಲ್ಲಿ ರೈತಸಂಘದ ಪ್ರತಿನಿಧಿಗಳು ಅವರನ್ನುಘೇರಾವ್ ಮಾಡಲಿರುವುದಾಗಿ ಎಚ್ಚರಿಕೆ ನೀಡಿದರು.
           ಇದೇ ದಾರಿಯಲ್ಲೇ ನಿತ್ಯವೂ ಸಂಚರಿಸುವ ಮಾಜಿ ಶಾಸಕರು ಕೂಡ ಇತ್ತ ಕಣ್ಣು ಹಾಯಿಸದಿರುವುದು ದುರಾದೃಷ್ಟ.ಇವರ ಸ್ವಂತ ಸ್ಥಳದಲ್ಲೆ ಬರಗಲದಿಂದ ಕಂಗಾಲಾಗಿರುವ ಹಾಗೂ ತಮ್ಮ ಬೆಳೆಗೆ ಬೆಂಬಲ ಬೆಲೆ ಕೊಡಿ ಎಂದು ಹೋರಾಡುತ್ತಿರುವ ರೈತರಿದ್ದರೂ ಸಹ ಇವರುಗಳನ್ನು ಏನೆಂದು ವಿಚಾರಿಸದ ಇವರು ಬಿಜಿಪಿ ತಂಡದೊಂದಿಗೆ ಪಕ್ಕದ ತಾಲ್ಲೂಕಿನಲ್ಲಿ ಬರವೀಕ್ಷಣೆಗೆ ತೆರಳಿದ್ದು ನ್ಯಾಯ ಸಮ್ಮತವಾ ಎಂದು ಪ್ರಶ್ನಿಸಿದರು.
           ಜನಪ್ರತಿನಿಧಿಗಳಾದ ಇವರುಗಳು ಕನಿಷ್ಟ ಸೌಜನ್ಯಕ್ಕಾದರೂ ತಿಂಗಳಿನೊಳಗೆ ಒಮ್ಮೆಯಾದರೂ ಕ್ಷಣ ಹೊತ್ತಾದರೂ ಬರಬಹುದಿತ್ತು.ಇವರುಗಳ ವರ್ತನೆ,ನಿರ್ಲಕ್ಷ್ಯ ಮನೋಭಾವವನ್ನು ರೈತಸಂಘ ಖಂಡಿಸುತ್ತಿದ್ದು ಪಕ್ಷ- ಜಾತಿ ರಾಜಕಾರಣ ಮಾಡುವ ಇವರುಗಳಿಗೆ ಬರಲಿರುವ ಚುನಾವಾಣೆ ಸಮಯದಲ್ಲಿ ರೈತರುಗಳು ತಕ್ಕಪಾಠ ಕಲಿಸಲಿದ್ದಾರೆ ಎಂದರು.
          ಈ ಸಂದರ್ಭದಲ್ಲಿ ರೈತರ ಬಗ್ಗೆ ಗಮನ ಮಾಡದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನೀತಿ ವಿರುದ್ಧ ಧಿಕ್ಕಾರ ಕೂಗಲಾಯಿತು.

         ಇಂದಿನ ಧರಣಿಯಲ್ಲಿ ಟ್ರಾಕ್ಟರ್ ಮಂಜಣ್ಣ,ಹೂವಿನ ರಘು,ಲಕ್ಷ್ಮೀಪುರದ ಶಿವಣ್ಣ,ಕೆರೆಸುರಗೊಂಡನಹಳ್ಳಿ ಗಂಗಣ್ಣ,ರಂಗಸ್ವಾಮಿ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.