ವಿಷಯಕ್ಕೆ ಹೋಗಿ

ಶಾಸಕರನ್ನು ನಾವೇ ಹುಡುಕಿಕೊಂಡು ಹೊರಡುವೆವು

ಕಾರೇಹಳ್ಳಿಯಲ್ಲಿ ಘೇರಾವ್ ಕಾರ್ಯಕ್ರಮ

ಹುಳಿಯಾರುಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿ ಚಳುವಳಿಗೆ ಶನಿವಾರದಂದು ೩೦ ದಿನ ತುಂಬಿದ್ದು ಶಾಸಕರ ನಿರ್ಲಕ್ಷ್ಯವನ್ನು ಧರಣಿನಿರತರು ಖಂಡಿಸಿದರು.
ಹುಳಿಯಾರು:ಪಟ್ಟಣದ ಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿಚಳುವಳಿಗೆ ಶನಿವಾರದಂದು ೩೦ ದಿನ ತುಂಬಿದ್ದು, ಇಷ್ಟು ದಿನವಾದರೂ ನಮ್ಮನ್ನು ಏನೆಂದು ಕೇಳದ ಶಾಸಕರನ್ನು ರೈತರುಗಳೇ ಹುಡುಕಿಕೊಂಡು ಹೊರಟಿದ್ದು ಆಗಲಾದರೂ ನಮ್ಮನ್ನು ಭೇಟಿಯಾಗಿ ನಮ್ಮ ಸಮಸ್ಯೆ ಆಲಿಸಬಹುದೆಂಬ ಕಿಂಚಿತ್ ಭರವಸೆ ನಮ್ಮಲ್ಲಿದ್ದು ಈ ನಿಟ್ಟಿನಲ್ಲಿ ಸೋಮವಾರದಂದು ಚಿಕ್ಕನಾಯಕನಹಳ್ಳಿಗೆ ರೈತರುಗಳು ತೆರಳುತ್ತಿರುವುದಾಗಿ ಹೋರಾಟದ ಸಂಚಾಲಕ ಹಾಗೂ ರಾಜ್ಯ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಬೇಸರದಿಂದ ನುಡಿದರು,
          ಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿ ಚಳುವಳಿ ಶುರುವಾದಾಗಲಿಂದಲೂ ಇದುವರೆಗೂ ನಮ್ಮ ಪ್ರತಿನಿಧಿಸುವ ಶಾಸಕರು ಬಾರದಿರುವುದು ನಾಚಿಕೇಗೇಡಿನ ವಿಚಾರ.ನಮ್ಮೊಂದಿಗೆ ಕೂತೂ ಚರ್ಚೆ ಮಾಡಿ ನಮ್ಮಗಳ ಜೊತೆಯೇ ವಿಧಾನಸೌದ ಮುಂದೆ ಧರಣಿ ಕೂತಿದ್ದರೆ ನ್ಯಾಯಯುತವಾಗಿರುತ್ತಿತ್ತು. ಇದೇ ೧೫ರಂದು ಕಾರೇಹಳ್ಳಿಯಲ್ಲಿ ಗೋಶಾಲೆಯ ಉದ್ಘಾಟನೆಗೆ ಶಾಸಕರು ಬರಲಿದ್ದು ಅಲ್ಲಿ ರೈತಸಂಘದ ಪ್ರತಿನಿಧಿಗಳು ಅವರನ್ನುಘೇರಾವ್ ಮಾಡಲಿರುವುದಾಗಿ ಎಚ್ಚರಿಕೆ ನೀಡಿದರು.
           ಇದೇ ದಾರಿಯಲ್ಲೇ ನಿತ್ಯವೂ ಸಂಚರಿಸುವ ಮಾಜಿ ಶಾಸಕರು ಕೂಡ ಇತ್ತ ಕಣ್ಣು ಹಾಯಿಸದಿರುವುದು ದುರಾದೃಷ್ಟ.ಇವರ ಸ್ವಂತ ಸ್ಥಳದಲ್ಲೆ ಬರಗಲದಿಂದ ಕಂಗಾಲಾಗಿರುವ ಹಾಗೂ ತಮ್ಮ ಬೆಳೆಗೆ ಬೆಂಬಲ ಬೆಲೆ ಕೊಡಿ ಎಂದು ಹೋರಾಡುತ್ತಿರುವ ರೈತರಿದ್ದರೂ ಸಹ ಇವರುಗಳನ್ನು ಏನೆಂದು ವಿಚಾರಿಸದ ಇವರು ಬಿಜಿಪಿ ತಂಡದೊಂದಿಗೆ ಪಕ್ಕದ ತಾಲ್ಲೂಕಿನಲ್ಲಿ ಬರವೀಕ್ಷಣೆಗೆ ತೆರಳಿದ್ದು ನ್ಯಾಯ ಸಮ್ಮತವಾ ಎಂದು ಪ್ರಶ್ನಿಸಿದರು.
           ಜನಪ್ರತಿನಿಧಿಗಳಾದ ಇವರುಗಳು ಕನಿಷ್ಟ ಸೌಜನ್ಯಕ್ಕಾದರೂ ತಿಂಗಳಿನೊಳಗೆ ಒಮ್ಮೆಯಾದರೂ ಕ್ಷಣ ಹೊತ್ತಾದರೂ ಬರಬಹುದಿತ್ತು.ಇವರುಗಳ ವರ್ತನೆ,ನಿರ್ಲಕ್ಷ್ಯ ಮನೋಭಾವವನ್ನು ರೈತಸಂಘ ಖಂಡಿಸುತ್ತಿದ್ದು ಪಕ್ಷ- ಜಾತಿ ರಾಜಕಾರಣ ಮಾಡುವ ಇವರುಗಳಿಗೆ ಬರಲಿರುವ ಚುನಾವಾಣೆ ಸಮಯದಲ್ಲಿ ರೈತರುಗಳು ತಕ್ಕಪಾಠ ಕಲಿಸಲಿದ್ದಾರೆ ಎಂದರು.
          ಈ ಸಂದರ್ಭದಲ್ಲಿ ರೈತರ ಬಗ್ಗೆ ಗಮನ ಮಾಡದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನೀತಿ ವಿರುದ್ಧ ಧಿಕ್ಕಾರ ಕೂಗಲಾಯಿತು.

         ಇಂದಿನ ಧರಣಿಯಲ್ಲಿ ಟ್ರಾಕ್ಟರ್ ಮಂಜಣ್ಣ,ಹೂವಿನ ರಘು,ಲಕ್ಷ್ಮೀಪುರದ ಶಿವಣ್ಣ,ಕೆರೆಸುರಗೊಂಡನಹಳ್ಳಿ ಗಂಗಣ್ಣ,ರಂಗಸ್ವಾಮಿ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...