ವಿಷಯಕ್ಕೆ ಹೋಗಿ

ಹುಳಿಯಾರು:೩೧ ದಿನ ಪೂರೈಸಿದ ಧರಣಿ

ಸರ್ಕಾರದ ನಡೆ ಧರಣಿ ನಿರತರ ತಾಳ್ಮೆ ಕೆಣಕುತ್ತಿದೆ
ಹುಳಿಯಾರುಎಪಿಎಂಸಿ ಮುಂದೆ ನಡೆಯುತ್ತಿರುವ ಕೊಬ್ಬರಿ ಚಳುವಳಿ ಭಾನುವಾರಕ್ಕೆ ೩೧ ದಿನ ತುಂಬಿದ್ದು ಸರ್ಕಾರದ ನಿರ್ಲಕ್ಷ್ಯವನ್ನು ಧರಣಿನಿರತರು ಖಂಡಿಸಿದರು.

ಹುಳಿಯಾರು:ಸರ್ಕಾರದ ನಡೆ ಹಾಗೂ ನಿರ್ಲಕ್ಷ್ಯ ಮನೋಭಾವ ಕೊಬ್ಬರಿ ಹೋರಾಟಗಾರರ ತಾಳ್ಮೆಯನ್ನು ಕೆಣಕುತ್ತಿದ್ದು ಹುಳಿಯಾರು ಎಪಿಎಂಸಿಯಲ್ಲಿನ ಒಂದು ತಿಂಗಳಿನ ಪ್ರತಿಭಟನೆಗೆ ಯಾರೊಬ್ಬರು ಕಿವಿಗೊಡದ್ದರಿಂದ ನಾಳೆಯಿಂದ ನಮ್ಮ ಹೋರಾಟದ ದಿಕ್ಕನ್ನು ಬದಲಿಸುತ್ತಿರುವುದಾಗಿ ತಿಮ್ಮನಹಳ್ಳಿ ಲೋಕಣ್ಣ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.
              ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆಯುತ್ತಿರುವ ಕೊಬ್ಬರಿ ಚಳುವಳಿಗೆ ಭಾನುವಾರದಂದು ೩೧ ದಿನ ತುಂಬಿದ್ದು, ಇಂದಿನ ಧರಣಿಯಲ್ಲಿ ಜಿಲ್ಲಾಉಸ್ತುವಾರಿ ಸಚಿವರ ತವರೂರಿನ ಜನ ಭಾಗವಹಿಸಿ ಅವರ ವಿರುದ್ಧ ಹರಿಹಾಯ್ದಿದ್ದು ವಿಶೇಷವಾಗಿತ್ತು.
                      ಸರ್ಕಾರದ ವಿರುದ್ಧ ತೀಕ್ಷವಾಗಿ ಹರಿಹಾಯ್ದ ಲೋಕಣ್ಣ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲನೇ ಬಜೆಟ್ ಸಮಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರೈತ ಮುಖಂಡರನ್ನು ಕರೆಸಿ ಕೃಷಿ ಈಗ ಲಾಭದಾಯಕವಾಗಿ ಉಳಿಸಿಲ್ಲ,ನಿಮಗಾಗಿ ವಿಶೇಷ ಯೊಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದವರು ಇದುವರೆಗೂ ಇದರ ಸೊಲ್ಲೆತ್ತಿಲ್ಲದಿರುವುದು ವಿಪರ್ಯಾಸ.ಕೊಬ್ಬರಿ ಬೆಳೆಗಾರರಿಗೆ ಸರ್ಕಾರ ಭಿಕ್ಷೆಯಂತೆ ಒಂದು ಸಾವಿರ ರೂಪಾಯಿ ಸಹಾಯಧನ ನೀಡಿದ್ದು ಬಿಟ್ಟರೆ ರೈತರಿಗೆ ಏನೇನೂ ಸವಲತ್ತು ನೀಡಿಲ್ಲ.ಮುಖ್ಯಮಂತ್ರಿಗಳೇ ,ನೀವು ನೀಡಿರುವ ಒಂದು ಸಾವಿರ ರೂಪಾಯಿ ಭಿಕ್ಷೆ ನಮಗೆ ಬೇಕಿಲ್ಲ.ಕೃಷಿ ಉತ್ಪನ್ನ ಮಾರುಕಟ್ಟೆಯ ಆವರ್ತ ನಿಧಿಯಲ್ಲಿರುವ ಹಣದಲ್ಲೆ ಕೊಬ್ಬರಿ ಕೊಂಡುಕೊಂಡರು ಸಹ ರೈತರ ಸಮಸ್ಯೆ ತೀರಲಿದ್ದು ಈ ಬಗ್ಗೆ ಈಗಲಾದರು ಗಮನ ಹರಿಸಿ ಎಂದರು.
           ಹಾಲಿ,ಮಾಜಿ ಶಾಸಕರುಗಳೇ ನಿಮಗೆ ನೈತಿಕತೆ ಏನಾದರೂ ಇದ್ದಲ್ಲಿ ಈ ಕೂಡಲೇ ನಮ್ಮ ಹೋರಾಟಕ್ಕೆ ಕೈ ಜೋಡಿಸಿರಿ.ಇಲ್ಲದಿದ್ದಲ್ಲಿ ಬರಲಿರುವ ಚುನಾವಣೆಯಲ್ಲಿ ನಿಮಗೆ ಛೀಮಾರಿ ಗ್ಯಾರಂಟಿ ಎಂದು ಗುಡುಗಿದರು.
            ಈ ಸಂದರ್ಭದಲ್ಲಿ ರೈತರ ಬಗ್ಗೆ ಗಮನ ಮಾಡದ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಯಚಂದ್ರರ ವಿರುದ್ಧ ಧಿಕ್ಕಾರ ಕೂಗಿದರು.

      ಇಂದಿನ ಧರಣಿಯಲ್ಲಿ ತಿಮ್ಮನಹಳ್ಳಿ ಗ್ರಾಮದ ಪ್ರಕಾಶ ಬಸ್ಸ್ ಮಾಲೀಕರಾದ ಜಯರಾಮಣ್ಣ, ಶೇಖರಣ್ಣ, ಟಿ.ಎಲ್.ರಂಗನಾಥ್, ಸುಧಣ್ಣ,ಮಂಜಣ್ಣ,ತಾಲ್ಲೂಕ್ ಗೌರವಾಧ್ಯಕ್ಷ ಕೆ.ಪಿ.ಮಲ್ಲೇಶ್,ತಮ್ಮಡಿಹಳ್ಳಿ ಮೂರ್ತಿ,ದಬ್ಬಗುಂಟೆ ರುದ್ರೇಶ್,ಹೂವಿನ ರಘು,ಲಕ್ಷ್ಮೀಪುರದ ಶಿವಣ್ಣ,ಕೆರೆಸೂರಗೊಂಡನಹಳ್ಳಿ ಗಂಗಣ್ಣ,ಮುನಿಯಪ್ಪ,ಎಣ್ಣೆ ರಂಗಸ್ವಾಮಿ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...