ವಿಷಯಕ್ಕೆ ಹೋಗಿ

ಸೌಕರ್ಯ ವಂಚಿತ ಪುರದ ಮಠದ ಚನ್ನಬಸವಣ್ಣ ದೇಗುಲ

ಇಂದಿನ ಕೃತಿಕೋತ್ಸವಕ್ಕೆ ಹತ್ತುಸಾವಿರದಷ್ಟು ಜನ ಸೇರುವ ನಿರೀಕ್ಷೆ: ಕನಿಷ್ಟ ಸೌಲಭ್ಯ ಒದಗಿಸಲು ಕೂಡ ಬಾರದ ಮುಜರಾಯಿ ಇಲಾಖೆ


ಹುಳಿಯಾರು:ಈ ಭಾಗದಲ್ಲಿ ಪುರದ ಮಠ ಎಂದರೆ ತಕ್ಷಣ ಜ್ಞಾಪಕ ಬರುವುದು ಅಲ್ಲಿ ನಡೆಯುವ ಪುರಾಣಪ್ರಸಿದ್ದ ಚನ್ನಸವಣ್ಣನ ಕಡೇ ಕಾರ್ತೀಕದ ರಾಗಿ ಮುದ್ದೆ ಸಾರಿನ ಊಟ ಹಾಗೂ ಪ್ರತಿ ತಿಂಗಳು ನಡೆಯುವ ಹುಣ್ಣಿಮೆ ಪೂಜೆಯಾಗಿದ್ದು ಇದಕ್ಕಾಗಿ ಜಿಲ್ಲೆಯ ನಾನಾ ಭಾಗದಿಂದ ಭಕ್ತರು ಆಗಮಿಸುತ್ತಾರೆ.ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದರೂ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ.
           
ಮುಜರಾಯಿ ಇಲಾಖೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಪುರದ ಶ್ರೀ ಚನ್ನಬಸವಣ್ಣ ದೇವಸ್ಥಾನ
 ಪುರದ ಶ್ರೀಚನ್ನಬಸವಣ್ಣನಿಗೆ ಅದರದ್ದೇ ಆದ ಇತಿಹಾಸವಿದ್ದು ಗೋಸಲ ಚನ್ನಬಸವಣ್ಣನವರು ಇಲ್ಲಿನ ಗವಿಯಲ್ಲಿ ತಪ್ಪಸ್ಸು ಕೂತಿದ್ದ ತಪೋಕ್ಷೇತ್ರವಾಗಿ ಹೆಸರಾಗಿದೆ.ಈತನ್ನನ್ನು ನಂಬಿದರೆ ಭಕ್ತರ ಸಕಲಸಮಸ್ಯೆಗಳು ಕಷ್ಟಕಾರ್ಪಣ್ಯಗಳು ಬಗೆಹರಿಯುತ್ತದೆ ಎನ್ನುವ ಅಪಾರವಾದ ನಂಬಿಕೆಯಿದೆ.ಸುತ್ತೇಳು ಗ್ರಾಮಗಳು ಸೇರಿದಂತೆ ನಾನಾ ಕಡೆಗಳಿಂದ ಅಪಾರ ಭಕ್ತರು ಸ್ವಾಮಿಯ ದರ್ಶನಕ್ಕೆ ಇಲ್ಲಿಗೆ ಆಗಮಿಸುತ್ತಾರೆ. ಹುಳಿಯಾರಿನಿಂದ ೮ ಕಿಮೀ ದೂರದಲ್ಲಿರುವ ಪುರದಮಠಕ್ಕೆ ನಿತ್ಯ ಭಕ್ತರ ಸಂಖ್ಯೆ ಅಷ್ಟಾಗಿರದಿದ್ದರೂ ಪ್ರತಿ ಸೋಮವಾರ ನಡೆಯುವ ಕ್ವಾರಣ್ಯ ಸೇವೆಗೆ ನೂರಾರು ಭಕ್ತರು ಆಗಮಿಸುತ್ತಾರೆ.ಪೂಜೆ ಮುಗಿಯುತ್ತಿದ್ದಂತೆಯೇ ರಾಗಿಮುದ್ದೆ ಕಾಳಿನ ಊಟವನ್ನು ಪ್ರಸಾದವಾಗಿ ಕೊಡಮಾಡುವ ವಾಡಿಕೆ ಕಳೆದ ಏಳೆಂಟು ದಶಕಗಳಿಂದಲೂ ನಡೆದು ಬಂದಿದೆ.
             ಮುಖ್ಯ ರಸ್ತೆಯಿಂದ ದೇವಾಲಯಕ್ಕೆ ಯಾವುದೇ ವಾಹನ ವ್ಯವಸ್ಥೆಯಿಲ್ಲ.ಸ್ವಂತ ವಾಹನಗಳಲ್ಲಿ ಬರುವವರು ಕಿರಿದಾದ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಬರುವುದರೊಳಗೆ ಹೈರಾಣೆದ್ದು ಹೋಗುತ್ತಾರೆ.ಇಲ್ಲಿ ಉಳಿದಿಕೊಳ್ಳಲು ಸ್ವಲ್ಪ ಮಟ್ಟಿನ ವ್ಯವಸ್ಥೆ ಮಾಡಲಾಗುತ್ತದೆಯಾದರೂ ಸ್ನಾನಗೃಹ,ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಕರ್ಯವಿಲ್ಲದೆ ಭಕ್ತರು ಪರದಾಡುವ ಸ್ಥಿತಿ ಇದೆ.
           ಇಂದು ಡಿ.೧೨ರಂದು ನಡೆಯಲಿರುವ ಕಾರ್ತಿಕ ಮಹೋತ್ಸವಕ್ಕೆ ಕನಿಷ್ಟ ಎಂಟರಿಂದ ಹತ್ತು ಸಾವಿರದಷ್ಟು ಭಕ್ತರು ಸೇರುವುದಿದ್ದು ಅದರಲ್ಲೂ ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಆಗಮಿಸುವುದಿದ್ದು ಅಗತ್ಯ ಸೌಲಭ್ಯಗಳು ಇಲ್ಲಿಲ್ಲ .ಕನಿಷ್ಟ ಶೌಚಕ್ಕೂ,ಮೂತ್ರಕ್ಕೂ ಕೂಡ ವ್ಯವಸ್ಥೆಯಿಲ್ಲದೆ ವಿಸರ್ಜನೆಗೆ ಬಯಲಿಗೆ ಹೋಗುವ ಅನಿವಾರ್ಯತೆಯಿದೆ.ಯಾವುದೇ ಸೌಕರ್ಯ ಕಲ್ಪಿಸದ ಮುಜರಾಯಿ ಇಲಾಖೆಗೆ ಭಕ್ತರು ಹಿಡಿ ಶಾಪ ಹಾಕುತ್ತಾ ತೆರಳುವುದು ಮಾಮೂಲಿಯಾಗಿದೆ.
         ಇಲ್ಲಿನ ಭಕ್ತರೇ ಸೇರಿಕೊಂದು ಶಾಸಕರ ,ತಾಲ್ಲೂಕ್ ಪಂಚಾಯ್ತಿ ಅನುದಾನದಿಂದ ಸಮುದಾಯ ಭವನ ನಿರ್ಮಿಸಿದ್ದಾರೆ ಗ್ರಾಮಪಂಚಾಯ್ತಿ ಅನುದಾನದಿಂದ ನೀರಿನ ವ್ಯವಸ್ಥೆ ಮಾಡಿಕೊಂಡಿದೆ.ತದನಂತರದ ದಿನದಲ್ಲಿ ಸಮುದಾಯ ಭವನಕ್ಕೆ ಲಗ್ಗತ್ತಾಗಿ ಅಡುಗೆ ಕೋಣೆ ಮಾಡಿದ್ದು ಆ ಸಮಯದಲ್ಲಿ ಎರಡು ಸ್ನಾನಗೃಹ ನಿರ್ಮಿಸಲಾಗಿದೆ.ಅದಕ್ಕೆ ಹಾಕಿದ್ದ ಬಾಗಿಲು ಒಡೆದು ಐದಾರು ವರ್ಷಗಳೆ ಕಳೆದಿದ್ದು ಯಾರೊಬ್ಬರೂ ರಿಪೇರಿಗೆ ಮುಂದಾಗಿಲ್ಲ.
ಭಕ್ತಾಧಿಗಳಿಗೆ ನಿರ್ಮಿಸಲಾಗಿರುವ ನಿರುಪಯುಕ್ತ ಸ್ನಾನಗೃಹ
           ದೇವಾಲಯ ನಿರ್ವಹಣೆಗೆ ಸ್ಥಳಿಯ ಆಡಳಿತ ಮಂಡಳಿ ಇಲ್ಲಿಲ್ಲದ ಕಾರಣ ದೇವಾಲಯ ಸೇರಿದಂತೆ ಎಲ್ಲದರ ನಿರ್ವಹಣೆ ಸಮಸ್ಯೆಯಾಗಿದೆ.ಸಮಿತಿಯಾದರೂ ಇದ್ದಿದ್ದರೆ ಅಷ್ಟೊಇಷ್ಟೊ ಕೆಲಸ ಕಾರ್ಯಗಳು ನಡೆಯಬಹುದಿದ್ದು ತಹಸೀಲ್ದಾರ್ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ಸಮಿತಿಯ ಪ್ರಸ್ತಾಪ ನೆನೆಗುದಿಗೆ ಬಿದ್ದಿದ್ದೆ.ಇದರಿಂದ ಗ್ರಾಮಸ್ಥರು ಇಲಾಖೆ ವಿರುದ್ಧ ಭಕ್ತರು ಬೇಸರಗೊಂಡಿದ್ದಾರೆ.
            ಮುಜರಾಯಿ ದೇವಸ್ಥಾನ ಎಂದು ಗ್ರಾಮಸ್ಥರು ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳದಿರುವುದರಿಂದ ಅಭಿವೃದ್ಧಿ ಕಾಣದಾಗಿದೆ.
           ಇಲ್ಲಿಗೆ ಬರುವ ಭಕ್ತರ ಅನುಕೂಲಕ್ಕಾಗಿ ಛತ್ರ,ಶೌಚಾಲಯ, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ,ರಸ್ತೆ ಇತ್ಯಾದಿ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ.
------------------------------
ಮುಜರಾಯಿಗೆ ಒಳಪಟ್ಟಿದ್ದರೂ ಇದರ ಅಭಿವೃದ್ಧಿ ಮಾತ್ರ ನಾಸ್ತಿ.ಇಲ್ಲಿಗೆ ಕನಿಷ್ಟ ಮೂಲ ಸೌಕರ್ಯವನ್ನು ಒದಗಿಸದ ಇಲಾಖೆ ಪ್ರತಿ ಆರು ತಿಂಗಳಿಗೊಮ್ಮೆ ಮಾತ್ರ ಹುಂಡಿ ಹಣ ಎಣಿಕೆ ಮಾಡಿ ಕೊಂಡೊಯ್ಯುವುದನ್ನು ಮಾತ್ರ ಮರೆಯುವುದಿಲ್ಲ.ದೇವಾಲಯದ ಅರ್ಚಕರಿಗೆ ತಸ್ತಿಕ್ ಹಣ ಮಾತ್ರ ನೀಡುವ ಇಲಾಖೆ ಅಭಿವೃದ್ಧಿ ವಿಚಾರಕ್ಕೆ ಇತ್ತ ತಿರುಗಿ ನೋಡದಂತಿರುವುದು ಮಾತ್ರ ವಿಪರ್ಯಾಸ: ಜೆಸಿಬಿ ಬಸವರಾಜು,ಬಸವನಗುಡಿ

----------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...