ವಿಷಯಕ್ಕೆ ಹೋಗಿ

ಹುಳಿಯಾರು: ಫಲಪ್ರದವಾಗದ ಜಿಲ್ಲಾಧಿಕಾರಿಗಳ ಭೇಟಿ

ರಾಜ್ಯ ಸರ್ಕಾರದ ಭರವಸೆ ಮೇಲೆ ನಂಬಿಕೆಯಿಲ್ಲ:ರೈತರು

ಮೊದಲು ಖರೀದಿ ಪ್ರಾರಂಭಿಸಿ:ನಂತರ ಧರಣಿ ಅಂತ್ಯಗೊಳಿಸುವೆವು
ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ರಾಜ್ಯ ರೈತಸಂಘದ ವತಿಯಿಂದ ಪಟ್ಟಣದ ಎಪಿಎಂಸಿಯಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ನಿರತರೊಂದಿಗೆ ಬುಧವಾರ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಚರ್ಚಿಸಿದರು.    
ಹುಳಿಯಾರು:ಪಟ್ಟಣದ ಎಪಿಎಂಸಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಕೊಬ್ಬರಿಚಳುವಳಿಗೆ ಬುಧವಾರ ತುಮಕೂರು ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಭೇಟಿ ನೀಡಿ ರೈತ ಮುಖಂಡರೊಂದಿಗೆ ಚರ್ಚಿಸಿದರಾದರೂ ನಫೆಡ್ ಖರೀದಿ ಬಗ್ಗೆ ಏನೊಂದು ಸ್ಪಷ್ಟವಾದ ಮಾಹಿತಿ ನೀಡದೆ ಸ್ವಯಂ ಅವರೇ ಗೊಂದಲದಲ್ಲಿ ಮುಳುಗಿದ್ದರಿಂದ,ಇಅವರ ಮಾತನ್ನು ನಂಬದ ರೈತರುಗಳು, ಜಿಲ್ಲಾಧಿಕಾರಿಗಳೇ ನಮಗೆ ಭರವಸೆಯ ಮಾತು ಬೇಕಿಲ್ಲ,ನೀವು ಖರೀದಿ ಶುರುಮಾಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಧರಣಿ ಮುಂದುವರಿಸಿದರು.
ಹುಳಿಯಾರಿನ ನಫೇಡ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ರೈತರ ನೊಂದಣಿ ಪುಸ್ತಕ ಪರಿಶೀಲಿಸಿದರು.
        ಪಟ್ಟಣದ ಎಪಿಎಂಸಿಗೆ ಎರಡು ಗಂಟೆ ಸುಮಾರಿಗೆ ಆಗಮಿಸಿದ ಜಿಲ್ಲಾಧಿಕಾರಿಗಳು ನೇರವಾಗಿ ನಫೆಡ್ ಖರೀದಿ ಕೇಂದ್ರ ಬಳಿ ತೆರಳಿದರು. ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಇದುವರೆಗೂ ಕೊಬ್ಬರಿ ಎಷ್ಟು ಕೊಳ್ಳಲಾಗಿದೆ ಎಂದು ಪ್ರಶ್ನಿಸಿದಲ್ಲದೆ ತೂಕದ ಯಂತ್ರ,ಗುಣಮಟ್ಟ ಪರೀಕ್ಷಿಸುವ ಮಾಪಕ ಮುಂತಾದವನ್ನು ಪರಿಶೀಲಿದರು.ಕೊಬ್ಬರಿ ಕೊಂಡಿಲ್ಲವೇಕೆಂದು ಪ್ರಶ್ನಿಸಿದ ಅವರು ಟೋಕನ್ ನೀಡಿರುವ 3 ಮಂದಿ ರೈತರಿಗೆ ತಾವೇ ನೇರವಾಗಿ ಮೊಬೈಲ್ ನಂಬರ್ ಗೆ ಕೆರೆ ಮಾಡಿ ಕೊಬ್ಬರಿ ತಂದಿಲ್ಲವೇಕೆಂದು ಪ್ರಶ್ನಿಸಿದ್ದಲ್ಲದೆ ಕೂಡಲೇ ಕೊಬ್ಬರಿ ತರುವಂತೆ ಹಾಗೂ ಖರೀದಿ ಕೇಂದ್ರದಲ್ಲಿ ಏನಾದರೂ ಸಮಸ್ಯೆಯಿದ್ದಲ್ಲಿ ತಿಳಿಸುವಂತೆ ಮನವಿ ಮಾಡಿದರು.
          ನಂತರ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಧರಣಿ ನಿರತರೊಂದಿಗೆ ಸುಮಾರು 3 ಗಂಟೆಗಳ ಕಾಲ ಚರ್ಚಿಸಿದರು. ಸರ್ಕಾರ ನಫೆಡ್ ಕೇಂದ್ರ ತೆರದಿದ್ದು ಕೊಬ್ಬರಿಯನ್ನು ಕೊಳ್ಳುವಂತೆ ಆದೇಶ ನೀಡಲಾಗಿದೆ.ಕೇಂದ್ರದ ಬೆಂಬಲ ಬೆಲೆ 6240ರೂ ಹಾಗೂ ರಾಜ್ಯ ಸರ್ಕಾರದ 1 ಸಾವಿರ ಸಹಾಯಧನ ಸೇರಿಸಿ ರೂ.7240ಕ್ಕೆ ಕೊಬ್ಬರಿ ಕೊಳ್ಳಲಾಗುವುದು.ನಾಳೆಯಿಂದಲೇ ಕೊಬ್ಬರಿ ತನ್ನಿ.ಸರ್ಕಾರದಿಂದಲೇ ಹಣ ಕೊಡಿಸುವ ಜವಬ್ದಾರಿ ನನ್ನದು ಎಂದರು.
          ತಾವುಗಳು ೧೫ ಸಾವಿರ ಬೆಲೆ ಕೇಳುತ್ತಿದ್ದು ನಾನು ಸಹ ಖುದ್ದು ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಬೆಲೆ ಹೆಚ್ಚಳಕ್ಕೆ ಶ್ರಮಿಸುವೆ.ಕೊಬ್ಬರಿ ಬೆಂಬಲ ಬೆಲೆ ಏರಿಸುವ ಅವಕಾಶ ಕೇಂದ್ರ ಸರ್ಕಾರ ಮಾತ್ರ ಇದ್ದು ತಾವು ನೀಡಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿಯೂ ಹೇಳಿದ ಅವರು ನನ್ನ ಮೇಲೆ ಭರವಸೆ ಇಟ್ಟು ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.
            ಜಿಲ್ಲಾಧಿಕಾರಿಗಳೇ ತಮ್ಮದು ಕೇವಲ ಭರವಸೆಯಾಗಿದ್ದು ನಾವೀಗಾಗಲೇ ಹಲವಾರು ಬಾರಿ ಖುದ್ದು ಮುಖ್ಯಮಂತ್ರಿಗಳೇ ನೀಡಿದ್ದ ಭರವಸೆಯೂ ಈಡೇರದೆ ಮೋಸ ಹೋಗಿದ್ದೇವೆ. ಹಾಗಾಗಿ ಯಾವುದೇ ಕಾರಣಕ್ಕೂ ಬೆಲೆ ಆಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಕೊಬ್ಬರಿಗೆ ನೀಡಿರುವ ಬೆಂಬಲ ಬೆಲೆ ರೂ.11550 ನೀಡುವವರೆಗೆ ಧರಣಿ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಖರೀದಿ ವಿಷಯದಲ್ಲಿ ಜಿಲ್ಲಾಧಿಕಾರಿಯ ಗೊಂದಲ
––––––––––––––––––––––––––––––––––
             ಈ ಮೊದಲು ಧರಣಿ ನಿರತರೊಂದಿಗೆ ಮಾತನಾಡಿ ನಾಳೆಯಿಂದಲೇ ಕೊಬ್ಬರಿ ಕೊಳ್ಳುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು ನಂತರ ನಫೆಡ್ ನ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ತಮ್ಮ ತಮ್ಮ ಹೇಳಿಕೆಯನ್ನು ಮತ್ತೆ ಬದಲಾಯಿಸಿದರು.

             ಕೊಬ್ಬರಿ ಮಾರುಕಟ್ಟೆ ಧಾರಣೆ ರೂ.6240ಕ್ಕಿಂತ ಹೆಚ್ಚಾದರೂ ನಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಕೊಳ್ಳಲು ಆದೇಶ ನೀಡಲಾಗಿದೆ ಎಂದು ಗೊಂದಲದ ಹೇಳಿಕೆ ನೀಡಿದ್ದ ಅವರು ಈ ವಿಷಯಕ್ಕೆ ಸಂಬಂಧಪಟ್ಟ ಆದೇಶ ಪತ್ರ ಕೊಡುವುದಾಗಿ ತಿಳಿಸಿದ್ದರು. ನಫೆಡ್ ಖರೀದಿ ನೀತಿ ಬಗ್ಗೆ ಗೊಂದಲಕ್ಕೀಡಾದ ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ನಫೆಡ್ ಅಧಿಕಾರಿಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ರೂ. 6240ಕ್ಕಿಂತ ಕೊಬ್ಬರಿ ಬೆಲೆ ಮಾರುಕಟ್ಟೆ ಧಾರಣೆ ಹೆಚ್ಚಾದ ಸಂದರ್ಭದಲ್ಲಿ ನಫೆಡ್ ಅಧಿಕಾರಿಗಳಿಂದ ಕೊಳ್ಳಲು ಸಾಧ್ಯವಿಲ್ಲ .ಕೇಂದ್ರ ಸರ್ಕಾರ ನಿಗದಿಪಡೀಸಿದ ಬೆಲೆಯಂತೆ ನಫೆಡ್ ಅಭಿಕಾರಿಗಳ ಖರೀದಿಸಬೇಕಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಮಾತನಾಡಿದೆ.ಇನ್ನೇರಡು ಮೂರುದಿನದೊಳಗೆ ಗೊಂದಲ ಬಗೆಹರಿಯಲಿದ್ದು ಖರಿದಿ ನಡೆಯಲಿದೆ ಎಂದರು.ಒಟ್ಟಾರೆ ಜಿಲ್ಲಾಧಿಕಾರಿಗಳಿಗೂ ಸಹ ನಫೆಡ್ ಖರೀದಿ ಎಂದು ಪ್ರಾರಂಭಮಾಡುತ್ತದೆ ಎಂದು ಗೊಂದಲವಾಗಿ ಯಾವುದೇ ತೀರ್ಮಾನಕ್ಕೆ ಬಾರದೆ ಹಿಂತಿರುಗಿದರು.

            ಜಿಲ್ಲಾ ಕೃಷಿ ಮಾರುಕಟ್ಟೆ ಸಹಾಯಕ ನಿರ್ದೇಶಕ ಎಂ,ರಾಜಣ್ಣ, ಉಪವಿಭಾಗಾಧಿಕಾರಿ ಪ್ರಜ್ಞಾಅಮ್ಮೆಂಬಳ, ತಹಶೀಲ್ದಾರ್ ಆರ್.ಗಂಗೇಶ್ ಸೇರಿದಂತೆ ತಾಲ್ಲೂಕ್ ಅಧ್ಯಕ್ಷ ಲೋಕಣ್ಣ,ಉಪಾಧ್ಯಕ್ಷ ಮಲ್ಲಿಕಾರ್ಜುನಯ್ಯ,ಎಪಿಎಂಸಿ ಅಧ್ಯಕ್ಷ ಬಸವರಾಜು.ಕೆಂಕೆರೆ ಗ್ರಾಪಂ ಸದಸ್ಯ ನಾಗಣ್ಣ,ಸೃಜನ ಮಹಿಳಾ ಸಂಘದ ಜಯಮ್ಮ ,ಹೂವಿನ ರಘು,ಪಾತ್ರೆ ಸತೀಶ್,ರಂಗನಕೆರೆ ವಿರೂಪಾಕ್ಷ,ತಮ್ಮಡಿಹಳ್ಳಿ ಮಂಜಣ್ಣ,ಲಕ್ಷ್ಮೀಪುರದ ಶಿವಣ್ಣ,ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...