ವಿಷಯಕ್ಕೆ ಹೋಗಿ

ಹುಳಿಯಾರು: ಫಲಪ್ರದವಾಗದ ಜಿಲ್ಲಾಧಿಕಾರಿಗಳ ಭೇಟಿ

ರಾಜ್ಯ ಸರ್ಕಾರದ ಭರವಸೆ ಮೇಲೆ ನಂಬಿಕೆಯಿಲ್ಲ:ರೈತರು

ಮೊದಲು ಖರೀದಿ ಪ್ರಾರಂಭಿಸಿ:ನಂತರ ಧರಣಿ ಅಂತ್ಯಗೊಳಿಸುವೆವು
ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ರಾಜ್ಯ ರೈತಸಂಘದ ವತಿಯಿಂದ ಪಟ್ಟಣದ ಎಪಿಎಂಸಿಯಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ನಿರತರೊಂದಿಗೆ ಬುಧವಾರ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಚರ್ಚಿಸಿದರು.    
ಹುಳಿಯಾರು:ಪಟ್ಟಣದ ಎಪಿಎಂಸಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಕೊಬ್ಬರಿಚಳುವಳಿಗೆ ಬುಧವಾರ ತುಮಕೂರು ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಭೇಟಿ ನೀಡಿ ರೈತ ಮುಖಂಡರೊಂದಿಗೆ ಚರ್ಚಿಸಿದರಾದರೂ ನಫೆಡ್ ಖರೀದಿ ಬಗ್ಗೆ ಏನೊಂದು ಸ್ಪಷ್ಟವಾದ ಮಾಹಿತಿ ನೀಡದೆ ಸ್ವಯಂ ಅವರೇ ಗೊಂದಲದಲ್ಲಿ ಮುಳುಗಿದ್ದರಿಂದ,ಇಅವರ ಮಾತನ್ನು ನಂಬದ ರೈತರುಗಳು, ಜಿಲ್ಲಾಧಿಕಾರಿಗಳೇ ನಮಗೆ ಭರವಸೆಯ ಮಾತು ಬೇಕಿಲ್ಲ,ನೀವು ಖರೀದಿ ಶುರುಮಾಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಧರಣಿ ಮುಂದುವರಿಸಿದರು.
ಹುಳಿಯಾರಿನ ನಫೇಡ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ರೈತರ ನೊಂದಣಿ ಪುಸ್ತಕ ಪರಿಶೀಲಿಸಿದರು.
        ಪಟ್ಟಣದ ಎಪಿಎಂಸಿಗೆ ಎರಡು ಗಂಟೆ ಸುಮಾರಿಗೆ ಆಗಮಿಸಿದ ಜಿಲ್ಲಾಧಿಕಾರಿಗಳು ನೇರವಾಗಿ ನಫೆಡ್ ಖರೀದಿ ಕೇಂದ್ರ ಬಳಿ ತೆರಳಿದರು. ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಇದುವರೆಗೂ ಕೊಬ್ಬರಿ ಎಷ್ಟು ಕೊಳ್ಳಲಾಗಿದೆ ಎಂದು ಪ್ರಶ್ನಿಸಿದಲ್ಲದೆ ತೂಕದ ಯಂತ್ರ,ಗುಣಮಟ್ಟ ಪರೀಕ್ಷಿಸುವ ಮಾಪಕ ಮುಂತಾದವನ್ನು ಪರಿಶೀಲಿದರು.ಕೊಬ್ಬರಿ ಕೊಂಡಿಲ್ಲವೇಕೆಂದು ಪ್ರಶ್ನಿಸಿದ ಅವರು ಟೋಕನ್ ನೀಡಿರುವ 3 ಮಂದಿ ರೈತರಿಗೆ ತಾವೇ ನೇರವಾಗಿ ಮೊಬೈಲ್ ನಂಬರ್ ಗೆ ಕೆರೆ ಮಾಡಿ ಕೊಬ್ಬರಿ ತಂದಿಲ್ಲವೇಕೆಂದು ಪ್ರಶ್ನಿಸಿದ್ದಲ್ಲದೆ ಕೂಡಲೇ ಕೊಬ್ಬರಿ ತರುವಂತೆ ಹಾಗೂ ಖರೀದಿ ಕೇಂದ್ರದಲ್ಲಿ ಏನಾದರೂ ಸಮಸ್ಯೆಯಿದ್ದಲ್ಲಿ ತಿಳಿಸುವಂತೆ ಮನವಿ ಮಾಡಿದರು.
          ನಂತರ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಧರಣಿ ನಿರತರೊಂದಿಗೆ ಸುಮಾರು 3 ಗಂಟೆಗಳ ಕಾಲ ಚರ್ಚಿಸಿದರು. ಸರ್ಕಾರ ನಫೆಡ್ ಕೇಂದ್ರ ತೆರದಿದ್ದು ಕೊಬ್ಬರಿಯನ್ನು ಕೊಳ್ಳುವಂತೆ ಆದೇಶ ನೀಡಲಾಗಿದೆ.ಕೇಂದ್ರದ ಬೆಂಬಲ ಬೆಲೆ 6240ರೂ ಹಾಗೂ ರಾಜ್ಯ ಸರ್ಕಾರದ 1 ಸಾವಿರ ಸಹಾಯಧನ ಸೇರಿಸಿ ರೂ.7240ಕ್ಕೆ ಕೊಬ್ಬರಿ ಕೊಳ್ಳಲಾಗುವುದು.ನಾಳೆಯಿಂದಲೇ ಕೊಬ್ಬರಿ ತನ್ನಿ.ಸರ್ಕಾರದಿಂದಲೇ ಹಣ ಕೊಡಿಸುವ ಜವಬ್ದಾರಿ ನನ್ನದು ಎಂದರು.
          ತಾವುಗಳು ೧೫ ಸಾವಿರ ಬೆಲೆ ಕೇಳುತ್ತಿದ್ದು ನಾನು ಸಹ ಖುದ್ದು ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಬೆಲೆ ಹೆಚ್ಚಳಕ್ಕೆ ಶ್ರಮಿಸುವೆ.ಕೊಬ್ಬರಿ ಬೆಂಬಲ ಬೆಲೆ ಏರಿಸುವ ಅವಕಾಶ ಕೇಂದ್ರ ಸರ್ಕಾರ ಮಾತ್ರ ಇದ್ದು ತಾವು ನೀಡಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿಯೂ ಹೇಳಿದ ಅವರು ನನ್ನ ಮೇಲೆ ಭರವಸೆ ಇಟ್ಟು ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.
            ಜಿಲ್ಲಾಧಿಕಾರಿಗಳೇ ತಮ್ಮದು ಕೇವಲ ಭರವಸೆಯಾಗಿದ್ದು ನಾವೀಗಾಗಲೇ ಹಲವಾರು ಬಾರಿ ಖುದ್ದು ಮುಖ್ಯಮಂತ್ರಿಗಳೇ ನೀಡಿದ್ದ ಭರವಸೆಯೂ ಈಡೇರದೆ ಮೋಸ ಹೋಗಿದ್ದೇವೆ. ಹಾಗಾಗಿ ಯಾವುದೇ ಕಾರಣಕ್ಕೂ ಬೆಲೆ ಆಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಕೊಬ್ಬರಿಗೆ ನೀಡಿರುವ ಬೆಂಬಲ ಬೆಲೆ ರೂ.11550 ನೀಡುವವರೆಗೆ ಧರಣಿ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಖರೀದಿ ವಿಷಯದಲ್ಲಿ ಜಿಲ್ಲಾಧಿಕಾರಿಯ ಗೊಂದಲ
––––––––––––––––––––––––––––––––––
             ಈ ಮೊದಲು ಧರಣಿ ನಿರತರೊಂದಿಗೆ ಮಾತನಾಡಿ ನಾಳೆಯಿಂದಲೇ ಕೊಬ್ಬರಿ ಕೊಳ್ಳುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು ನಂತರ ನಫೆಡ್ ನ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ತಮ್ಮ ತಮ್ಮ ಹೇಳಿಕೆಯನ್ನು ಮತ್ತೆ ಬದಲಾಯಿಸಿದರು.

             ಕೊಬ್ಬರಿ ಮಾರುಕಟ್ಟೆ ಧಾರಣೆ ರೂ.6240ಕ್ಕಿಂತ ಹೆಚ್ಚಾದರೂ ನಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಕೊಳ್ಳಲು ಆದೇಶ ನೀಡಲಾಗಿದೆ ಎಂದು ಗೊಂದಲದ ಹೇಳಿಕೆ ನೀಡಿದ್ದ ಅವರು ಈ ವಿಷಯಕ್ಕೆ ಸಂಬಂಧಪಟ್ಟ ಆದೇಶ ಪತ್ರ ಕೊಡುವುದಾಗಿ ತಿಳಿಸಿದ್ದರು. ನಫೆಡ್ ಖರೀದಿ ನೀತಿ ಬಗ್ಗೆ ಗೊಂದಲಕ್ಕೀಡಾದ ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ನಫೆಡ್ ಅಧಿಕಾರಿಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ರೂ. 6240ಕ್ಕಿಂತ ಕೊಬ್ಬರಿ ಬೆಲೆ ಮಾರುಕಟ್ಟೆ ಧಾರಣೆ ಹೆಚ್ಚಾದ ಸಂದರ್ಭದಲ್ಲಿ ನಫೆಡ್ ಅಧಿಕಾರಿಗಳಿಂದ ಕೊಳ್ಳಲು ಸಾಧ್ಯವಿಲ್ಲ .ಕೇಂದ್ರ ಸರ್ಕಾರ ನಿಗದಿಪಡೀಸಿದ ಬೆಲೆಯಂತೆ ನಫೆಡ್ ಅಭಿಕಾರಿಗಳ ಖರೀದಿಸಬೇಕಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಮಾತನಾಡಿದೆ.ಇನ್ನೇರಡು ಮೂರುದಿನದೊಳಗೆ ಗೊಂದಲ ಬಗೆಹರಿಯಲಿದ್ದು ಖರಿದಿ ನಡೆಯಲಿದೆ ಎಂದರು.ಒಟ್ಟಾರೆ ಜಿಲ್ಲಾಧಿಕಾರಿಗಳಿಗೂ ಸಹ ನಫೆಡ್ ಖರೀದಿ ಎಂದು ಪ್ರಾರಂಭಮಾಡುತ್ತದೆ ಎಂದು ಗೊಂದಲವಾಗಿ ಯಾವುದೇ ತೀರ್ಮಾನಕ್ಕೆ ಬಾರದೆ ಹಿಂತಿರುಗಿದರು.

            ಜಿಲ್ಲಾ ಕೃಷಿ ಮಾರುಕಟ್ಟೆ ಸಹಾಯಕ ನಿರ್ದೇಶಕ ಎಂ,ರಾಜಣ್ಣ, ಉಪವಿಭಾಗಾಧಿಕಾರಿ ಪ್ರಜ್ಞಾಅಮ್ಮೆಂಬಳ, ತಹಶೀಲ್ದಾರ್ ಆರ್.ಗಂಗೇಶ್ ಸೇರಿದಂತೆ ತಾಲ್ಲೂಕ್ ಅಧ್ಯಕ್ಷ ಲೋಕಣ್ಣ,ಉಪಾಧ್ಯಕ್ಷ ಮಲ್ಲಿಕಾರ್ಜುನಯ್ಯ,ಎಪಿಎಂಸಿ ಅಧ್ಯಕ್ಷ ಬಸವರಾಜು.ಕೆಂಕೆರೆ ಗ್ರಾಪಂ ಸದಸ್ಯ ನಾಗಣ್ಣ,ಸೃಜನ ಮಹಿಳಾ ಸಂಘದ ಜಯಮ್ಮ ,ಹೂವಿನ ರಘು,ಪಾತ್ರೆ ಸತೀಶ್,ರಂಗನಕೆರೆ ವಿರೂಪಾಕ್ಷ,ತಮ್ಮಡಿಹಳ್ಳಿ ಮಂಜಣ್ಣ,ಲಕ್ಷ್ಮೀಪುರದ ಶಿವಣ್ಣ,ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...