ವಿಷಯಕ್ಕೆ ಹೋಗಿ

ಅಂತೂ ಬಂದರೂ ಶಾಸಕರು

ಸಂಸದರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಭೇಟಿಯ ಭರವಸೆ ನೀಡಿದರು

ಹುಳಿಯಾರು: ೩೫ದಿನಗಳ ತರವಾಯ ಕೊಬ್ಬರಿ ಹೋರಾಟಗಾರರ ಕೂಗು ಆಲಿಸಿಕೊಂಡ ಶಾಸಕ ಸಿ.ಬಿ.ಸುರೇಶ್ ಬಾಬು ಕಡೆಗೂ ಧರಣಿ ಸ್ಥಳಕ್ಕಾಗಮಿಸಿ ಗಂಟೆಗಳ ಕಾಲ ಪ್ರತಿಭಟನಕಾರರ ಆಕ್ರೋಷ,ನೋವುಗಳನ್ನು ಶಾಂತಚಿತ್ತರಾಗಿ ಆಲಿಸಿ,ಜಿಲ್ಲೆಯ ಕೊಬ್ಬರಿ ಬೆಳೆಯುವ ಎಲ್ಲಾ ತಾಲ್ಲೂಕಗಳ ಶಾಸಕರೊಂದಿಗೆ ಸಂಸದರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರೈತರ ಸಮಸ್ಯೆ ಖುದ್ದಾಗಿ ಅವರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪರಿಹಾರಕ್ಕೆ ದಾರಿಮಾಡಿಕೊಡುವುದಾಗಿ ಭರವಸೆಯಿತ್ತರು.
ಹುಳಿಯಾರಿನ ಕೃಷಿ ಉತ್ಪನ್ನಮಾರುಕಟ್ಟೆಯ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಧರಣಿನಿರತರನ್ನು ಉದ್ದೇಶಿಸಿ ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿದರು.
         ಹುಳಿಯಾರು ಎಪಿಎಂಸಿ ಮುಂದೆ ನಡೆಯುತ್ತಿರುವ ಧರಣಿ ಸ್ಥಳಕ್ಕೆ ೩೫ ನೇ ದಿನವಾದ ಗುರುವಾರದಂದು ಭೇಟಿಯತ್ತ ಅವರನ್ನು ರೈತರು ಮೌನವಹಿಸುವ ಮೂಲಕ ಸ್ವಾಗತಿಸಿದರು. 
       ತಾಲ್ಲೂಕ್ ಯಜಮಾನರಾದ ತಾವೇ ಈ ರೀತಿ ವರ್ತಿಸಿದರೆ ನಮ್ಮ ಅಳಲನ್ನು ಕೇಳುವರ್ಯಾರು,ಸಂಸದರು,ಮಾಜಿ ಮುಖ್ಯಮಂತ್ರಿಗಳು,ಜಿಲ್ಲಾಧಿಕಾರಿಗಳು ಹೀಗೆ ಎಲ್ಲರು ಬಂದುಹೋದರೂ ಸಹ ಶಾಸಕರಾಗಿ ತಾವು ಇತ್ತ ಮುಖಹಾಕದಿದ್ದು ತರವಲ್ಲ ಎಂದು ತಮ್ಮ ನೋವನ್ನು ಹೊರಹಾಕಿದರು.ನಿಮ್ಮನ್ನು ಚುನಾಯಿಸಿ ಕಳುಹಿಸಿರುವ ರೈತರ ಪರವಾಗಿ ವಿಧಾನಸಭೆಯಲ್ಲಿ ಕೊಬ್ಬರಿ ಬೆಲೆ ಹೆಚ್ಚಿಸುವ ಬಗ್ಗೆ ತಾವೇಕೆ ಇದುವರೆಗೂ ಪ್ರಸ್ತಾಪಿಸಿಲ್ಲಾ. ನಮ್ಮದು ರೈತರ ಪಕ್ಷ ,ನಾವೆಲ್ಲಾ ಮಣ್ಣಿನ ಮಕ್ಕಳು ಎನ್ನುತ್ತೀರಿ. ಆದರೆ ರಾಜ್ಯದಲ್ಲಿ ರೈತರು ಬೆಳೆಯುವ ತೆಂಗು ಕೊಬ್ಬರಿ ಸಮಸ್ಯೆ ಬಗ್ಗೆ ಒಂದು ದಿನವು ಸಹಾ ಯಾರೊಬ್ಬ ಶಾಸಕರು ಸಹಾ ಧ್ವನಿಎತ್ತಿಲ್ಲವೇಕೆ ಎಂದು ಕುಟುಕಿದರು.
         ಈ ಪ್ರಯತ್ನವು ಸಹಾ ನಿಮ್ಮಕೈಯಲ್ಲಿ ಆಗದಿದ್ದರೆ ರೈತಸಂಘದ ನೇತೃತ್ವದಲ್ಲಿ ರೈತರು ನಿಮ್ಮ ಮನೆಯ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

           ಶಾಸಕರಾಗಿ ಇದುವರೆಗೂ ನಮ್ಮ ಸಮಸ್ಯೆ ಆಲಿಸಿಲ್ಲವೆಂಬ ಆರೋಪವನ್ನು ಮೌನವಾಗಿಯೇ ಕುಳಿತು ಆಲಿಸಿದ ಶಾಸಕರು ನಂತರ ಪ್ರತಿಕ್ರಿಯಿಸಿ ಕೊಬ್ಬರಿಗೆ ಸಂಬಂಧಪಟ್ಟಂತೆ ಮೊನ್ನೆಯ ಬೆಳಗಾಂ ಅಧಿವೇಶನದಲ್ಲಿ ಇತರ ಕೊಬ್ಬರಿ ಬೆಳೆಯುವ ತಾಲ್ಲೂಕಿನ ಶಾಸಕರೊಂದಿಗೆ ಚರ್ಚಿಸಿದ್ದೇವೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಹಾ ಇದೇ ವಿಚಾರವಾಗಿ ಅಧಿವೇಶನದಲ್ಲಿ ಚರ್ಚಿಸಿದ್ದಾರೆ. ಆದರೆ ಸರಕಾರ ಯಾವುದಕ್ಕೂ ಸ್ಪಂದಿಸುತ್ತಿಲ್ಲಾವಾದ್ದರಿಂದ ನಮಗೇನು ಮಾಡಲಿಕ್ಕೆ ಸಾಧ್ಯವಾಗುತ್ತಿಲ್ಲ ಎಂದರು.
            ನಾನು ಎಂದಿಗೂ ಸಹಾ ರೈತರ ಪರ. ಇದರ ಬಗ್ಗೆ ಯಾರಿಗೂ ಸಂಶಯಬೇಡ. ರೈತರ ಸಂಕಷ್ಟಕ್ಕೆ ನಾನು ಸದಾಕಾಲ ಸ್ಪಂದಿಸುವುದಾಗಿ ತಿಳಿಸಿದ ಅವರು ಪಕ್ಷ ಭೇದ ಮರೆತು ರೈತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ತೆಂಗು ಬೆಳೆಯುವ ಎಲ್ಲಾ ಕ್ಷೇತ್ರದ ಶಾಸಕರನ್ನು ಈ ಧರಣಿ ಸ್ಥಳಕ್ಕೆ ಕರೆಸಿ ಕೊಬ್ಬರಿ ಬೆಲೆಯ ಬಗ್ಗೆ ಮುಂದಿನ ನಡೆಯ ಬಗ್ಗೆ ಚರ್ಚೆಸಿ ಸಂಸದ ಮುದ್ಧಹನುಮೇಗೌಡರ ನೇತೃತ್ವದಲ್ಲಿ ನಿಯೋಗ ರಚಿಸಿಕೊಂಡು ರೈತ ಮುಖಂಡರೊಂದಿಗೆ ಮುಖ್ಯಮಂತ್ರಿಗಳ ಬಳಿ ಕರೆದೊಯ್ಯುವ ಭರವಸೆ ನೀಡಿದರು.
            ಈ ಕುರಿತು ಎಲ್ಲರೆದುರೇ ಸಂಸದ ಮುದ್ಧಹನುಮೇಗೌಡರನ್ನು ಸಂಪರ್ಕಿಸಿ ತಮ್ಮ ಅಭಿಪ್ರಾಯ ತಿಳಿಸಿದರು.ಒಟ್ಟಾರೆ ಗರಂ ಆಗಿದ್ದ ರೈತರನ್ನು ತಣ್ಣಗೆ ಮಾಡುವುದರಲ್ಲಿ ಯಶಸ್ವಿಯಾದರು.
          ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀನಿವಾಸ್,ಎಪಿಎಂಸಿ ನಿರ್ದೇಶಕ ಶಾಂತಣ್ಣ,ತಾಪಂ ಸದಸ್ಯರುಗಳಾದ ಹೆಚ್.ಎನ್. ಕುಮಾರ್ ಮತ್ತು ಪ್ರಸನ್ನಕುಮಾರ್,ಮುತುವಲ್ಲಿ ಭೈಜುಸಾಬ್,ಪ್ರಸನ್ನಕುಮಾರ್,ಗ್ರಾಪಂ ಸದಸ್ಯೆ ಗೀತಾ ಬಾಬು,ವಕ್ಫ್ ಸಲಹಾ ಸಮಿತಿ ಸದಸ್ಯ ಮಹ್ಮದ್ ಸಜ್ಜಾದ್ ಸೇರಿದಂತೆ ರೈತ ಸಂಘದ ಪ್ರತಿನಿಧಿಗಳು ಹಾಜರಿದ್ದರು.
------------------------
ರೈತರಿಗೆ ನ್ಯಾಯಕೊಡಿಸಲು ನೀವು ಸಹಾ ನಮ್ಮ ಜೊತೆಯಲ್ಲಿಯೇ ಧರಣಿ ಕೂರಿ. ಇಡೀ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜನತೆಯೇ ನಿಮ್ಮೊಂದಿಗೆ ಇರುತ್ತಾರೆ. ಸರ್ಕಾರವೇ ಇಲ್ಲಿಗೆ ಬರುತ್ತದೆ.ಸರ್ಕಾರ ಆಗಲಾದರೂ ಎಚ್ಚೆತ್ತು ಕೊಬ್ಬರಿಗೆ ಕನಿಷ್ಟ ೧೦ ಸಾವಿರ ಬೆಲೆ ನೀಡಬಹುದು: ದಯಾನಂದ್,ಯಳನಾಡು ಗ್ರಾಪಂ ಸದಸ್ಯ

-----------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...