ವಿಷಯಕ್ಕೆ ಹೋಗಿ

ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ :ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ

ಬರ ನಿರ್ವಹಣೆ ಬಗ್ಗೆ ಕೇಂದ್ರ ಸರಕಾರದ ಸ್ಪಂದನೆಯಿಲ್ಲ
ಹುಳಿಯಾರು: ಸರ್ಕಾರ ೧೩೯ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ರೈತರ ನೆರವಿಗೆ ಸೂಕ್ತ ಯೋಜನೆಗಳನ್ನು ಜಾರಿಗೆ ತಂದಿದ್ದು ,ಇದರ ನಿರ್ವಹಣೆ ಬಗ್ಗೆ ಗಮನಹರಿಸಲು ಎಲ್ಲಾ ತಾಲ್ಲೂಕುಗಳ ಬರಪೀಡಿತ ಪ್ರದೇಶಗಳಿಗೆ ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ನಿಯೋಗ ತೆರಳಿ ರೈತರನ್ನು ಸಂಪರ್ಕಿಸಿ ನೈಜ ಮಾಹಿತಿಯನ್ನು ಸಂಗ್ರಹಿಸಿ ಎಂದು ಕೆಪಿಸಿಸಿ ತಿಳಿಸಿರುವ ಮೇರೆಗೆ ನಾವುಗಳು ಬರಪೀಡೀತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಪರಿಶೀಲಿಸುತ್ತಿರುವುದಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.

         ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಪೀಡೀತ ಪ್ರದೇಶ ಹಾಗೂ ತೆರೆದಿರುವ ಗೋಶಾಲೆಗಳನ್ನು ಭೇಟಿ ನೀಡಿ ಹುಳಿಯಾರಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿ ಗೋಷ್ಟಿಯಲ್ಲಿ ಅವರು ಮಾತನಾಡಿದರು.ಸರ್ಕಾರ ಬರ ಎದುರಿಸಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಗೋಶಾಲೆಗಳನ್ನು ತೆರೆಯುವುದರ ಮೂಲಕ ವ್ಯವಸ್ಥೆ ಕಲ್ಪಿಸಿದೆ. ಜಿಲ್ಲೆಯಲ್ಲಿ ನಡೆಸಿದ ಬರ ಅಧ್ಯಯನದ ವೇಳೆ ಕಂಡುಬಂದಿರುವ ಹಾಗೂ ರೈತರು ಹೇಳಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
          ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದ ವೇಳೆ ಸುಮಾರು ೭೨ ಸಾವಿರ ಕೋಟಿಯಷ್ಟು ರೈತರ ಸಾಲ ಮನ್ನಾ ಮಾಡಿತ್ತು.ಆದರೆ ಈಗಿನ ಕೇಂದ್ರಸರ್ಕಾರ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದಂತೆ ವರ್ತಿಸುತ್ತಿದ್ದು ನಯಾಪೈಸೆಯಷ್ಟು ನೆರವು ನೀಡುತ್ತಿಲ್ಲ.ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರೈತರ ಸಮಸ್ಯೆ ಚರ್ಚಿಸಲು ಪ್ರಧಾನಿಗಳ ಭೇಟಿಗೆ ಪತ್ರ ಬರೆದು ಅವಕಾಶ ಕೋರುತ್ತಿದ್ದರೂ ಸಹ ಇದುವರೆಗೂ ಭೇಟಿಗೆ ಸಮಯನೀಡದೆ ಕೇವಲ ಡಿಜಿಟಲ್ ಇಂಡಿಯಾ ಮಂತ್ರ ಜಪಿಸುತ್ತಾ ಉದ್ಯಮಿಗಳ ಹಿತ ಕಾಯುತ್ತಿರುವುದು ಅವರ ರೈತ ಪರ ಕಾಳಹಿ ಎಷ್ಟಿದೆ ಎಂದು ತೋರಿಸುತ್ತಿದೆ.ಪ್ರಧಾನಿ ಮೋದಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ಈ ಕೂಡಲೇ ರೈತರ ಎಲ್ಲಾ ಸಲ ಮನ್ನಾ ಮಾಡುವ ಬಗ್ಗೆ ಘೋಷಿಸಲಿ ಎಂದರು.
     ನೋಟು ರದ್ದು ಮಾಡಿದ್ದು ಸಮಸ್ಯೆಯಾಗಿದ್ದರೂ ಸಹ ಅಡ್ಡಿಯಿಲ್ಲ.ಆದರೆ ನೋಟು ಬದಲಾವಣೆ ಬಗ್ಗೆ ಮುಂಜಾಗ್ರತೆ ವಹಿಸದ ಕಾರಣ ಸಣ್ಣಪುಟ್ಟ ವ್ಯಾಪಾರಿಗಳಿಗೆ ಸೇರಿದಂತೆ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದ್ದು ಚಿಲ್ಲರೆ ಹಣಕ್ಕಾಗಿ ದಿನವಿಡಿ ಸರತಿ ಸಾಲಿನಲ್ಲಿ ಕಾಯುವಂತಾಗಿದೆ.ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸಿ ಆಕ್ರೋಷ್ ದಿನವಾಗಿ ಆಚರಿಸಿದರೆ ಬಿಜೆಪಿಯವರು ಇದನ್ನೆ ಸಂಭಮ ದಿನವೆಂದು ಆಚರಿಸಿದ್ದು ಲಜ್ಜೆಗೇಡಿತನ ಎಂದು ಟೀಕಿಸಿದರು.
          ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಮಾತನಾಡಿ ಎಲ್ಲಾ ತಾಲ್ಲೂಕಿನಲ್ಲಿ ಹದಿನೈದು ಮುಂಚೆಯೇ ಗೋಶಾಲೆ ಆರಂಭವಾದರೆ ಚಿಕ್ಕನಾಯಕನಹಳ್ಳಿ ತಾಲ್ಲೀಕಿನಲ್ಲಿ ಮಾತ್ರ ಶಾಸಕರ ಉದಾಸೀನತೆಯಿಂದ ಈಗಷ್ಟೆ ಆರಂಭವಾಗಿದ್ದು ಅಧಿಕಾರಳು ಅಂಧ ದರ್ಬಾರು ನಡೆಸುತ್ತಿದ್ದು ಸ್ಥಳಿಯರನ್ನುಗಣನೆಗೆ ತೆಗೆದುಕೊಳ್ಳದೆ ಜಿಪಂ ಸದಸ್ಯರನ್ನೂ ಸಹ ಕನಿಷ್ಟ ಉದ್ಘಾಟನೆಗೂ ಆಹ್ವಾನಿಸದೆ ಕಡೆಗಣಿಸಿದ್ದಾರೆ.ಅಧಿಕಾರಿಗಳೇ,ಬರದಲ್ಲೂ ರಾಜಕೀಯ ಮಾಡುವುದನ್ನು ಕೈ ಬಿಡಿ ಎಂದು ಛೇಡಿಸಿದರು.

          ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈನ್ಸ್ ಬಸವರಾಜು, ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ಹಂದನಕೆರೆ ಜಿಪಂ ಮಾಜಿ ಅಧ್ಯಕ್ಷ ರಘುನಾಥ್, ತಾಪಂ ಮಾಜಿ ಸದಸ್ಯ ಸ್ವಾಮಿನಾಥ್, ಕೃಷ್ಣೇಗೌಡ,ನಿರಂಜನ್, ಬಗರ್ ಹುಕುಂ ಕಮಿಟಿ ಸದಸ್ಯ ಹೊಸಳ್ಳಿ ಅಶೋಕ್, ಗ್ರಾಪಂ ಸದಸ್ಯರುಗಳಾದ ದಸೂಡಿ ಚಂದ್ರಣ್ಣ , ಎಚ್.ಆರ್.ವೆಂಕಟೇಶ್, ಹಾಗೂ ಹೊಯ್ಸಳಕಟ್ಟೆ ಗಿರೀಶ್ ,ಪ್ರದೀಪ್,ಕುಮಾರ್, ಉಮೇಶ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.