ವಿಷಯಕ್ಕೆ ಹೋಗಿ

ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ಹೆಚ್.ಮೇಲನಹಳ್ಳಿ ಗ್ರಾಮಸ್ಥರಿಂದ ರಸ್ತೆ ತಡೆ

ಹುಳಿಯಾರು:ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ಕಳೆದ ೨೬ ದಿನಗಳಿಂದಲೂ ನಡೆಯುತ್ತಿರುವ ರೈತರ ಚಳುವಳಿ ಬಗ್ಗೆ ಸರ್ಕಾರದ ಹಾಗೂ ಶಾಸಕರ ನಿರ್ಲಕ್ಷ್ಯ ಖಂಡಿಸಿ ಹೆಚ್.ಮೇಲನಹಳ್ಳಿ ಗ್ರಾಮಸ್ಥರು ಎಪಿಎಂಸಿ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಘಟನೆ ಬುಧವಾರ ಜರುಗಿತು.

       ಹುಳಿಯಾರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಕೊಬ್ಬರಿ ಬೆಳಗಾರರ ೨೭ ನೇ ದಿನದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹೆಚ್.ಮೇಲನಹಳ್ಳಿಯ ನೂರಕ್ಕೂ ಹೆಚ್ಚು ಗ್ರಾಮಸ್ಥರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.

ನಂತರ ಮಾತನಾಡಿದ ಮೇಲನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಮ್.ಕೆ.ಪರಮೇಶ್ ಇಂದು ನಿತ್ಯ ಉಪಯೋಗಿಸುವ ಬೆಂಕಿಪಟ್ಟಣ,ಸೋಪಿಗೂ ಸ್ಥಿರವಾದ ಬೆಲೆಯಿದ್ದು ೨೦ ತಿಂಗಳುಗಳ ಕಾಲ ಕಾಪಾಡಿಕೊಂಡು ತಯರಾಗುವ ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಕನಿಷ್ಠ ಬೆಲೆಯೂ ಸಿಗುತ್ತಿಲ್ಲ.ರೈತಪರವೆಂದು ಹೇಳಿಕೊಳ್ಳುವ ಸರ್ಕಾರಗಳು ರೈತರಿಗೆ ಏನೊಂದು ಸೌಲಭ್ಯಗಳನ್ನು ಕೊಡದೆ ರೈತರ ಬೆನ್ನುಮೂಳೆ ಮುರಿದು ರೈತರನ್ನು ನಿತ್ರಾಣ ಮಾಡಿದೆ.ರೈತ ವಿರೋಧಿ ಸರ್ಕಾರದ ಧೋರಣೆ ವಿರುದ್ಧ ರೈತರುಗಳು ಸಂಘಟಿತರಾಗಿ ಬೀದಿಗಿಳಿಯೋಣ, ಭ್ರಷ್ಟ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸೋಣ ಎಂದರು.

         ತಾಲ್ಲೂಕ್ ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ಕೊಬ್ಬರಿ ಬೆಳೆಯಲು ಕನಿಷ್ಠ ೧೧೫೦೦ ರೂಗಳು ತಗುಲಲಿದೆ ಎಂದು ಸರ್ಕಾರವೇ ನೇಮಿಸಿರುವ ಕೃಷಿ ಆಯೋಗವೇ ವರದಿ ನೀಡಿದ್ದು ಅದರಂತೆ ಕೊಬ್ಬರಿಗೆ ಬೆಂಬಲ ಬೆಲೆ ಎಂದು ಕೊಡುವ ಬದಲು ಯೋಗ್ಯಬೆಲೆ ಕೊಡಲಿ ಎಂದರು.

ದೆಹಲಿ ಚಲೋ : ರಾಜ್ಯ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿ ಜನವರಿಯಲ್ಲಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಮ್ಮಲ್ಲಿ ತೆಂಗು ಬೆಳೆಯುವ ೧೩ ಜಿಲ್ಲೆಗಳಿದ್ದು ಪ್ರತಿ ಜಿಲ್ಲೆಯಿಂದಲೂ ಕನಿಷ್ಠ ನೂರು ರೈತರಂತೆ ದೆಹಲಿಗೆ ತೆರಳಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದರು.ಕೊಬ್ಬರಿಗೆ ಕನಿಷ್ಠ ೧೫ ಸಾವಿರ ಬೆಲೆ ತೀರ್ಮಾನವಾಗುವವರೆಗೂ ಚಳುವಳಿ ಮುಂದುವರಿಯಲಿರುವುದಾಗಿ ಹೇಳಿದರು.

         ಪ್ರತಿಭಟನೆಯಲ್ಲಿ ಮಾಜಿ ಗ್ರಾಪಂ ಸದಸ್ಯರುಗಳಾದ ಎಂ.ಕೆ.ಹನುಮಂತರಾಜು ಮತ್ತು ಬಸವರಾಜು,ನಿಂಗಪ್ಪ,ಷಣ್ಮುಖಸ್ವಾಮಿ, ಮಲ್ಲಿಕಾರ್ಜುನ್, ಬಸವರಾಜು,ರಾಮು ಮೊದಲಾದವರು ಪಾಲ್ಗೊಂಡಿದ್ದರು.
-----------------------------------------------------------------
ರೈತರುಗಳು ಮನೆಮಠ ಬಿಟ್ಟು ತಿಂಗಳುಗಟ್ಟಲೇ ಧರಣಿ ಕೂತರೂ ಸರ್ಕಾರಕ್ಕೆ ನಮ್ಮ ಕೂಗೂ ಕೇಳಿಲ್ಲ.ಧರಣಿ ಶಾಂತವಾಗಿ ನಡೆಯುತ್ತಿರುವುದರಿಂದ ಇವರೇನೂ ಮಾಡಿಯಾರು ಎಂಬ ಧೋರಣೆಯಿಂದ ಇತ್ತ ಗಮನಹರಿಸುತ್ತಿಲ್ಲ.ಹಾಗಾಗಿ ರೈತ ಬೀದಿಗಿಳಿದು ಅಶಾಂತಿ ಸೃಷ್ಟಿಸುವ ತನಕ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಕಾಣುವುದಿಲ್ಲ: ಕೆ.ಪಿ.ಮಲ್ಲೇಶ್ ,ತಾಲ್ಲೂಕ್ ಸಂಘದ ಗೌರವಾಧ್ಯಕ್ಷ

-------------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...