ವಿಷಯಕ್ಕೆ ಹೋಗಿ

ಸೋಮವಾರ ನಫೇಡ್ ಪ್ರಾರಂಭವಾಗದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ

ಹುಳಿಯಾರು:ಕೊಬ್ಬರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಹುಳಿಯಾರಿನಲ್ಲಿ ನ.೧೧ರಿಂದ ತಾಲ್ಲೂಕ್ ರೈತಸಂಘದ ವತಿಯಿಂದ ಧರಣಿ ಕುಳಿತಿದ್ದು ಭಾನುವಾರಕ್ಕೆ ಇಪ್ಪತ್ತ್ನಾಲ್ಕು ದಿನಗಳಾಗಿದ್ದರೂ ಸಹ ಕೂಗಳತೆಯಲ್ಲಿರುವ ಕ್ಷೇತ್ರದ ಶಾಸಕರಾಗಲಿ ,ಜಿಲ್ಲೆಯಲ್ಲಿ ಇಂತಹದೊಂದು ಪ್ರತಿಭಟೆನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಾಗಲಿ ಇದುವರೆಗೂ ಆಗಮಿಸದಿರುವುದು ನಾಚಿಕೆಗೇಡಿನ ಪರಮಾವಧಿಯಾಗಿದ್ದು ಜಿಲ್ಲೆಯಲ್ಲಿ ಆಡಳಿತ ಇನ್ನೂ ಜೀವಂತವಾಗಿದೆಯಾ ಎಂದು ಅನುಮಾನಿಸುವಂತಾಗಿದೆ ಎಂದು ತಾಲ್ಲೂಕ್ ರೈತಸಂಘದ ಗೌರವಾಧ್ಯಕ್ಷ ಕೆ.ಪಿ.ಮಲ್ಲೇಶ್ ಆಕ್ರೋಷದ ನುಡಿಗಳಾಡಿದರು.
ಹುಳಿಯಾರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೊಬ್ಬರಿ ಬೆಂಬಲ ಬೆಲೆಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಾನುವಾರದಂದು ಪಾಲ್ಗೊಂಡಿದ್ದ ವಿವಿಧ ಗ್ರಾಮಗಳ ರೈತ ಮುಖಂಡರುಗಳು
          ನ.೨೩ರಂದೇ ಖರೀದಿ ಕೇಂದ್ರ ಪ್ರಾರಂಭಿಸಲು ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು ಇದುವರೆಗೂ ಏನಾಗಿದೆಯೆಂದು ಸಹ ಕೇಳಿಲ್ಲ.ಸ್ಥಳಕ್ಕಾಗಮಿಸಿದ್ದ ಕೃಷಿ ಬೆಲೆ ಆಯೋಗದ ಡಾ.ಪ್ರಕಾಶ್ ಕಮ್ಮರಡಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಯ ಉಪನಿರ್ದೇಶಕ ರಾಜಣ್ಣನವರು ಸೋಮವಾರದಿಂದ ನಫೆಡ್ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದು ಅದರಂತೆ ಸೋಮವಾರದಂದು ತೆರೆಯದಿದ್ದ ಪಕ್ಷದಲ್ಲಿ ಧರಣಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಇದವರೆಗೂ ರೈತರ ಕೂಗನ್ನು ಆಲಿಸದ ಶಾಸಕ ಸಿ.ಬಿ.ಸುರೇಶ್ ಬಾಬು ಮನೆ ಎದುರು ಬಾಯಿಬಡಿದುಕೊಳ್ಳುವ ಚಳುವಳಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.                 
        ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೊಬ್ಬರಿ ಬೆಂಬಲ ಬೆಲೆಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣಿಯ ೨೪ ನೇ ದಿನದ ನೇತೃತ್ವ ವಹಿಸಿ ಮಾತನಾಡಿದ ಅವರು ಇಷ್ಟು ದಿನದ ಧರಣಿಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳು ಸಮಸ್ಯೆ ಏನೆಂದು ಕೇಳಲು ಸೌಜನ್ಯವಹಿಸದಿರುವುದು ಇವರ ರೈತ ವಿರೋಧಿತನವನ್ನು ಬಿಂಬಿಸುತ್ತದೆ. 
          ಕೆಂಕೆರೆ ಮಾಜಿ ಗ್ರಾಪಂ ಸದಸ್ಯ ಬೆಂಕಿ ಬಸವರಾಜು ಮಾತನಾಡಿ ದಪ್ಪಚರ್ಮದ ಸರ್ಕಾರಕ್ಕೆ ನಮ್ಮ ಕೂಗು ಕೇಳುವುದಿಲ್ಲ.ಇನ್ನೂ ಚುನಾವಣೆ ಸಮಯದಲ್ಲಿ ನಾವು ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ಜೆಡಿಎಸ್ ಶಾಸಕರಾದ ಸುರೇಶ್ ಬಾಬು ಸ್ಥಳದಲ್ಲಿಯೇ ಇದ್ದರೂ ನಮ್ಮ ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ.ಪ್ರತಿಭಟನೆಯ ಕೂಗು ಸರ್ಕಾರಕ್ಕೆ ಕೇಳಬೇಕಂದರೆ ನಮ್ಮ ಪ್ರತಿಭಟನೆಯನ್ನು ಹುಳಿಯಾರು ಬದಲು ಜಿಲ್ಲಾಧಿಕಾರಿಗಳ ಕಛೇರಿ ಎದುರು ಸ್ಥಳಾಂತರಗೊಳ್ಳಬೇಕೆಂದರು.

        ಈ ಸಂದರ್ಭದಲ್ಲಿ ತಾಲ್ಲೂಕ್ ಅಧ್ಯಕ್ಷ ಬಂಡಿಮನೆ ಲೋಕಣ್ಣ,ಕೆಂಕೆರೆ ಸತೀಶ್, ಕೋರಗೆರೆ ಬಸವರಾಜು,ತಿಮ್ಮನಹಳ್ಳಿ ಜಯಣ್ಣ,ತೊರೆಸೂರಗೊಂಡನಹಳ್ಳಿ ಗಂಗಾಧರಯ್ಯ,ಲಕ್ಷ್ಮೀಪುರ ಶಿವಣ್ಣ,ತಮ್ಮಡಿಹಳ್ಳಿ ಓಂಕಾರ್ ಮೂರ್ತಿ,ಬಡಕೆಗುಡ್ಲು ನರಸಿಂಹಯ್ಯ,ಕೆಂಕೆರೆ ರಮೇಶ್,ಗೊಲ್ಲರಹಟ್ಟಿ ರಮೇಶಣ್ಣ,ತಾಲ್ಲೂಕ್ ಉಪಾಧ್ಯಕ್ಷ ಮಲ್ಲೀಕಣ್ಣ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...