ವಿಷಯಕ್ಕೆ ಹೋಗಿ

ಸೋಮವಾರ ನಫೇಡ್ ಪ್ರಾರಂಭವಾಗದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ

ಹುಳಿಯಾರು:ಕೊಬ್ಬರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಹುಳಿಯಾರಿನಲ್ಲಿ ನ.೧೧ರಿಂದ ತಾಲ್ಲೂಕ್ ರೈತಸಂಘದ ವತಿಯಿಂದ ಧರಣಿ ಕುಳಿತಿದ್ದು ಭಾನುವಾರಕ್ಕೆ ಇಪ್ಪತ್ತ್ನಾಲ್ಕು ದಿನಗಳಾಗಿದ್ದರೂ ಸಹ ಕೂಗಳತೆಯಲ್ಲಿರುವ ಕ್ಷೇತ್ರದ ಶಾಸಕರಾಗಲಿ ,ಜಿಲ್ಲೆಯಲ್ಲಿ ಇಂತಹದೊಂದು ಪ್ರತಿಭಟೆನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಾಗಲಿ ಇದುವರೆಗೂ ಆಗಮಿಸದಿರುವುದು ನಾಚಿಕೆಗೇಡಿನ ಪರಮಾವಧಿಯಾಗಿದ್ದು ಜಿಲ್ಲೆಯಲ್ಲಿ ಆಡಳಿತ ಇನ್ನೂ ಜೀವಂತವಾಗಿದೆಯಾ ಎಂದು ಅನುಮಾನಿಸುವಂತಾಗಿದೆ ಎಂದು ತಾಲ್ಲೂಕ್ ರೈತಸಂಘದ ಗೌರವಾಧ್ಯಕ್ಷ ಕೆ.ಪಿ.ಮಲ್ಲೇಶ್ ಆಕ್ರೋಷದ ನುಡಿಗಳಾಡಿದರು.
ಹುಳಿಯಾರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೊಬ್ಬರಿ ಬೆಂಬಲ ಬೆಲೆಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಾನುವಾರದಂದು ಪಾಲ್ಗೊಂಡಿದ್ದ ವಿವಿಧ ಗ್ರಾಮಗಳ ರೈತ ಮುಖಂಡರುಗಳು
          ನ.೨೩ರಂದೇ ಖರೀದಿ ಕೇಂದ್ರ ಪ್ರಾರಂಭಿಸಲು ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು ಇದುವರೆಗೂ ಏನಾಗಿದೆಯೆಂದು ಸಹ ಕೇಳಿಲ್ಲ.ಸ್ಥಳಕ್ಕಾಗಮಿಸಿದ್ದ ಕೃಷಿ ಬೆಲೆ ಆಯೋಗದ ಡಾ.ಪ್ರಕಾಶ್ ಕಮ್ಮರಡಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಯ ಉಪನಿರ್ದೇಶಕ ರಾಜಣ್ಣನವರು ಸೋಮವಾರದಿಂದ ನಫೆಡ್ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದು ಅದರಂತೆ ಸೋಮವಾರದಂದು ತೆರೆಯದಿದ್ದ ಪಕ್ಷದಲ್ಲಿ ಧರಣಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಇದವರೆಗೂ ರೈತರ ಕೂಗನ್ನು ಆಲಿಸದ ಶಾಸಕ ಸಿ.ಬಿ.ಸುರೇಶ್ ಬಾಬು ಮನೆ ಎದುರು ಬಾಯಿಬಡಿದುಕೊಳ್ಳುವ ಚಳುವಳಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.                 
        ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕೊಬ್ಬರಿ ಬೆಂಬಲ ಬೆಲೆಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣಿಯ ೨೪ ನೇ ದಿನದ ನೇತೃತ್ವ ವಹಿಸಿ ಮಾತನಾಡಿದ ಅವರು ಇಷ್ಟು ದಿನದ ಧರಣಿಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳು ಸಮಸ್ಯೆ ಏನೆಂದು ಕೇಳಲು ಸೌಜನ್ಯವಹಿಸದಿರುವುದು ಇವರ ರೈತ ವಿರೋಧಿತನವನ್ನು ಬಿಂಬಿಸುತ್ತದೆ. 
          ಕೆಂಕೆರೆ ಮಾಜಿ ಗ್ರಾಪಂ ಸದಸ್ಯ ಬೆಂಕಿ ಬಸವರಾಜು ಮಾತನಾಡಿ ದಪ್ಪಚರ್ಮದ ಸರ್ಕಾರಕ್ಕೆ ನಮ್ಮ ಕೂಗು ಕೇಳುವುದಿಲ್ಲ.ಇನ್ನೂ ಚುನಾವಣೆ ಸಮಯದಲ್ಲಿ ನಾವು ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ಜೆಡಿಎಸ್ ಶಾಸಕರಾದ ಸುರೇಶ್ ಬಾಬು ಸ್ಥಳದಲ್ಲಿಯೇ ಇದ್ದರೂ ನಮ್ಮ ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ.ಪ್ರತಿಭಟನೆಯ ಕೂಗು ಸರ್ಕಾರಕ್ಕೆ ಕೇಳಬೇಕಂದರೆ ನಮ್ಮ ಪ್ರತಿಭಟನೆಯನ್ನು ಹುಳಿಯಾರು ಬದಲು ಜಿಲ್ಲಾಧಿಕಾರಿಗಳ ಕಛೇರಿ ಎದುರು ಸ್ಥಳಾಂತರಗೊಳ್ಳಬೇಕೆಂದರು.

        ಈ ಸಂದರ್ಭದಲ್ಲಿ ತಾಲ್ಲೂಕ್ ಅಧ್ಯಕ್ಷ ಬಂಡಿಮನೆ ಲೋಕಣ್ಣ,ಕೆಂಕೆರೆ ಸತೀಶ್, ಕೋರಗೆರೆ ಬಸವರಾಜು,ತಿಮ್ಮನಹಳ್ಳಿ ಜಯಣ್ಣ,ತೊರೆಸೂರಗೊಂಡನಹಳ್ಳಿ ಗಂಗಾಧರಯ್ಯ,ಲಕ್ಷ್ಮೀಪುರ ಶಿವಣ್ಣ,ತಮ್ಮಡಿಹಳ್ಳಿ ಓಂಕಾರ್ ಮೂರ್ತಿ,ಬಡಕೆಗುಡ್ಲು ನರಸಿಂಹಯ್ಯ,ಕೆಂಕೆರೆ ರಮೇಶ್,ಗೊಲ್ಲರಹಟ್ಟಿ ರಮೇಶಣ್ಣ,ತಾಲ್ಲೂಕ್ ಉಪಾಧ್ಯಕ್ಷ ಮಲ್ಲೀಕಣ್ಣ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.