ವಿಷಯಕ್ಕೆ ಹೋಗಿ

ಹುಳಿಯಾರು ಧರಣಿ ಸ್ಥಳಕ್ಕೆ ಸಂಸದ ಮುದ್ದಹನುಮೇಗೌಡ ಸೇರಿದಂತೆ ೬ ಶಾಸಕರುಗಳ ಭೇಟಿ

ಮಾಜಿ ಪ್ರಧಾನಿ ದೇವೆಗೌಡರು ಹಾಗೂ ಅನಂತಕುಮಾರ್ ನೇತೃತ್ವದಲ್ಲಿ ದೆಹಲಿಗೆ ನಿಯೋಗ ತೆರಳಲು ತೀರ್ಮಾನ

ಪ್ರಧಾನಿ ಭೇಟಿ ಮಾಡಿ ಬೆಲೆ ಪುನರ್ ಪರಿಶೀಲಿಸಲು ಮನವಿಗೆ ನಿರ್ಧಾರ

ಹುಳಿಯಾರು: ಕೊಬ್ಬರಿ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದಲ್ಲಿ ಪಕ್ಷಾತೀತವಾಗಿ ರಾಜ್ಯದಲ್ಲಿ ತೆಂಗುಬೆಳೆಯುವ ತಾಲ್ಲೂಕಿನ ಎಲ್ಲಾ ಶಾಸಕರು ಹಾಗೂ ರೈತಮುಖಂಡರನ್ನು ಒಳಗೊಂಡ ನಿಯೋಗವು ದೆಹಲಿಗೆ ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಭೇಟಿಯಾಗಿ ಕೊಬ್ಬರಿ ಬೆಲೆಗೆ ಹಾಲಿ ನಿಗದಿಪಡಿಸಿರುವ ಬೆಂಬಲ ಬೆಲೆಯನ್ನ ಪುರ್ನಪರಿಶೀಲಿಸುವಂತೆ ಒತ್ತಾಯಿಸಲು ಇಂದಿನ ಧರಣಿಗೆ ಆಗಮಿಸಿದ್ದ ಸಂಸದರು ೬ ತಾಲ್ಲೂಕಿನ ಶಾಸಕರು ತೀರ್ಮಾನಿಸಿದರು.

          ಹುಳಿಯಾರಿನ ಕೃಷಿ ಉತ್ಪನ್ನಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಯು ಭಾನುವಾರದಂದು ೩೮ನೇ ದಿನಕ್ಕೆ ಕಾಲಿಟ್ಟಿದ್ದು ಇಂದಿನ ಧರಣಿಗೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಸೇರಿದಂತೆ ಅಕ್ಕಪಕ್ಕದ ೬ ತಾಲ್ಲೂಕಿನ ಶಾಸಕರು ಆಗಮಿಸಿ ತುಮಕೂರು ಸಂಸದ ಮುದ್ಧ ಹನುಮೇಗೌಡ ಅಧ್ಯಕ್ಷತೆಯಲ್ಲಿ ಧರಣಿ ಸ್ಥಳದಲ್ಲಿ ಸಭೆ ನಡೆಸಿದರು.
ಹುಳಿಯಾರಿನಲ್ಲಿ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮಾತನಾಡಿದರು
            ಈ ಸಭೆಯಲ್ಲಿ ಮೊದಲಿಗೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮಾತನಾಡಿ ಕೊಬ್ಬರಿಗೆ ಬೆಂಬಲ ಬೆಲೆಯನ್ನು ನಿಗದಿ ಪಡಿಸುವುದು ಕೇಂದ್ರ ಸರಕಾರದ ಜವಾಬ್ದಾರಿಯಾಗಿದೆ. ಇದಕ್ಕೆ ರಾಜ್ಯಸರಕಾರ ತನ್ನ ಪಾಲಿನ ಸಹಾಯ ಧನ ಸೇರಿಸಿಕೊಡುವುದು ವಾಡಿಕೆ.ಅದರಂತೆ ಸಧ್ಯ ರಾಜ್ಯ ಸರಕಾರ ನಫೆಡ್ ತೆರೆಸಿ ಒಂದು ಸಾವಿರ ಸಹಾಯ ಧನವನ್ನು ನೀಡಿದೆ.
          ನಫೆಡ್ ನಿಯಮಾವಳಿ ಪ್ರಕಾರ ಕೊಬ್ಬರಿ ಧಾರಣೆಯು ಸದ್ಯದ ದರಕ್ಕೆ ಅರ್ಧಕ್ಕಿಂತ ಹೆಚ್ಚುಹೋಗಿ ನಂತರ ಅರ್ಧಕ್ಕಿಂತ ಕಡಿಮೆ ಬಂದಲ್ಲಿ ಬೆಂಬಲ ಬೆಲೆ ಘೋಷಿಸಿ ಖರೀದಿಸಬೇಕೆಂದು ನಿಯಮವಿದ್ದು ಕೊಬ್ಬರಿ ಧಾರಣೆ ಕಳೆದ ಸಾಲಿನಲ್ಲಿ ೧೯೫೦೦ ರೂ ತಲುಪಿಪಿ ಇದೀಗ ೬೫೦೦ರೂಗೆ ಕುಸಿದಿರುವುದರಿಂದ ನಿಯಮಾವಳಿ ಪ್ರಕಾರ ನಫೇಡ್ ಖರೀದಿ ಪ್ರಾರಂಭಿಸಬೇಕಿತ್ತು ಆದರೆ ನಫೆಡ್ ನವರು ಕಣ್ಣುಮುಚ್ಚಿಕುಳಿತಿದ್ದು ,ರೈತರಿಗೆ ಸ್ಪಂದಿಸದ ಈ ಸಂಸ್ಥೆ ಏತಕ್ಕಾಗಿ ಇದೆ ಎಂದು ಪ್ರಶ್ನಿಸುವಂತಾಗಿದೆ ಎಂದರು.
       ರೈತರಿಗೆ ನಾವೇನು ಬಜೆಟ್ ಹಣದಲ್ಲಿ ಪರಿಹಾರ ಕೊಡಿ ಎಂದು ಕೇಳುತ್ತಿಲ್ಲ. ಮಾರುಕಟ್ಟೆಯಲ್ಲಿ ಕೊಬ್ಬರಿ ಖರೀದಿಸುವಾಗ ರೈತರಿಂದ ಸಂಗ್ರಹಿಸಿರುವ ಸೆಸ್ ಹಣದಲ್ಲಿ ಸುಮಾರು ೪೦೦ ಕೋಟಿ ರೂ ಆವರ್ತನಿಧಿಯೆಂದು ತೆಗೆದಿರಿಸಿದ್ದು ಈ ಹಣದಲ್ಲಿ ರೈತರಿಗೆ ಸಹಾಯಧನ ಎಂದು ಕೊಟ್ಟಲ್ಲಿ ಸಮಸ್ಯೆ ಬಗೆಹರಿಸ ಬಹುದಿದ್ದು ಈಬಗ್ಗೆ ಸರಕಾರ ಮೀನಮೇಷ ಏಣಿಸುವುದರಲ್ಲಿ ಅರ್ಥವಿಲ್ಲ ಎಂದರು.
             ಒಟ್ಟಾರೆ ರೈತರ ಸಂಕಷ್ಟಕ್ಕೆ ರಾಜಕೀಯ ಲೇಪನವಿಲ್ಲದೆ ನಾವೆಲ್ಲ ಇಂದು ಇಲ್ಲಿ ಸೇರಿದ್ದು ಕೊಬ್ಬರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಬೆಂಬಲ ಬೆಲೆಯನ್ನು ಮರುಪರಿಶೀಲಿಸಿ ಪುರ್ನನಿಗದಿಮಾಡುವಂತೆ ಒತ್ತಾಯಿಸೋಣ. ಇದಕ್ಕಾಗಿ ಮಾಜಿ ಪ್ರಧಾನಿ ದೇವೆಗೌಡ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಯ ರೈತರನ್ನು ಕರೆದುಕೊಂಡೆ ದೆಹಲಿಗೆ ತೆರಳೋಣ ,ಸಂಬಂಧಪಟ್ಟವರನ್ನು ಭೇಟಿಮಾಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳೊಣವೆಂದರು.
ಧರಣಿ ಸ್ಥಳದಲ್ಲಿ ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿದರು
           ಸ್ಥಳಿಯ ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿ ಕೇಂದ್ರಕ್ಕೆ ತೆರಳುವ ನಿಯೋಗದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಕೇಂದ್ರದಲ್ಲಿ ಪ್ರಭಾವ ಬೀರುವ ಯಾರೆ ಆದರೂ ಸರಿ ಕರೆದುಕೊಂಡು ಹೋಗೋಣ. ಯಡಿಯೂರಪ್ಪ ಹಾಗೂ ಬಿಜೆಪಿ ಸಂಸದರು ಸಹ ನಿಯೋಗದಲ್ಲಿರಲ್ಲಿ ,ಅಡ್ಡಿಯಿಲ್ಲ ಎಂದರು
ಧರಣಿ ಸ್ಥಳದಲ್ಲಿ ಸಂಸದ ಮುದ್ದುಹನುಮೇಗೌಡ ಮಾತನಾಡಿದರು
          ಸಂಸದ ಮುದ್ದುಹನುಮೇಗೌಡ ಮಾತನಾಡಿ ರೈತರು ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಕೂರುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ದೇವೆಗೌಡರು ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮೋದಿಯವರ ಅಪ್ತವಲಯದಲ್ಲಿರುವ ಅನಂತಕುಮಾರ್ ಅವರನ್ನು ಕರೆದುಕೊಂಡು ಹೋಗೋಣ. ರಾಜ್ಯದ ಸಂಸದರ ಜೊತೆಗೆ ಪಕ್ಕದ ಕೊಬ್ಬರಿ ಬೆಳೆಯುವ ಕೇರಳ ರಾಜ್ಯದ ಸಂಸದರನ್ನು ಸಹಾ ಕರೆದುಕೊಂಡು ಹೋಗೊಣವೆಂದರು.
         ಒಟ್ಟಾರೆ ದೆಹಲಿಗೆ ನಿಯೋಗ ತೆರಳಿ ಪ್ರಧಾನಿ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಿ ಸಮಸ್ಯೆಯ ವಸ್ತುಸ್ಥಿತಿ ಬಿಂಬಿಸಿ ಇದಕ್ಕೊಂದು ಶಾಶ್ವತ ಪರಿಹರ ಕಂಡುಕೊಳ್ಳುವುದು ಒಳಿತು ಎಂದು ಅಭಿಪ್ರಾಯವನ್ನು ಎಲ್ಲರೂ ವ್ಯಕ್ತಪಡಿಸಿದರು
           ತಿಪಟೂರು ಶಾಸಕ ಷಡಾಕ್ಷರಿ, ಗುಬ್ಬಿ ಶಾಸಕ ಶ್ರೀನಿವಾಸ್, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ, ಕುಪ್ಪೂರು ಗದ್ದಿಗೆ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಸೇರಿದಂತೆ ರೈತಸಂಘದ ತುಮಕೂರು ಜಿಲ್ಲಾಧ್ಯಕ್ಷ ಶಂಕರಪ್ಪ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ, ತಿಪಟೂರು ತಾಲ್ಲೂಕು ಅಧ್ಯಕ್ಷ ದೇವರಾಜ್, ಶಿರಾ ತಾಲ್ಲೂಕ್ ಅಧ್ಯಕ್ಷ ನಿರಂಜನಾರಾಧ್ಯ, ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ಜಿಪಂ ಸದಸ್ಯ ರಾಮಚಂದ್ರಯ್ಯ, ತಾಪಂ ಸದಸ್ಯ ಕುಮಾರ್, ಪುರಸಭೆ ಅಧ್ಯಕ್ಷ ಹೆಚ್ ಬಿ ಪ್ರಕಾಶ್, ಸಿ.ಡಿ ಚಂದ್ರಶೇಖರ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.
-----------
ರಾಜ್ಯದ ೨೧ ಜಿಲ್ಲೆಯಲ್ಲಿ ಕೊಬ್ಬರಿ ಬೆಳೆಗಾರರಿದ್ದು ಕೊಬ್ಬರಿ ಬೆಳೆಯುವ ರೈತರ ಬಗ್ಗೆ ಕೇಂದ್ರದವರು ಗಮನಹರಿಸದಿರುವುದು ದುರಂತ. ಕಳೆದ ೩ ವರ್ಷಗಳ ಹಿಂದೆಯೇ ರಾಜ್ಯ ಸರಕಾರ ಕೊಬ್ಬರಿ ಬೆಲೆಗೆ ೧೦೮೨೭ರೂ ಕನಿಷ್ಟ ಬೆಲೆ ನಿಗದಿಮಾಡಿ ಎಂದು ಸುಮಾರು ೧೬ ಪುಟಗಳಷ್ಟು ವರದಿಯನ್ನು ಸಲ್ಲಿಸಿದ್ದರೂ ಸಹಾ ಕೇಂದ್ರಸರಕಾರ ಇದಕ್ಕೆ ಸ್ಪಂದಿಸದಿರುವುದು ದುರಂತ. ರೈತರಾಗಿರುವವರು ಅಥವಾ ರೈತರ ಬಗ್ಗೆ ಅರಿವು ಇರುವವರು ಕೇಂದ್ರದಲ್ಲಿ ಸಚಿವ ರಾಗದಿರುವುದೇ ಇದಕ್ಕೆ ಕಾರಣ: ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ

--------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.