ವಿಷಯಕ್ಕೆ ಹೋಗಿ

ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ:ಎಲ್ಲಾ ರೈತರಿಗೂ ನೀರಾ ಇಳಿಸಲು ಅನುಮತಿಸಿ

ಹುಳಿಯಾರು: ಕೊಬ್ಬರಿಯ ಬೆಲೆ ಹೆಚ್ಚಿಸುವಂತೆ ಒತ್ತಾಯಿಸಿ ರೈತಸಂಘದವರು ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ನಡೆಸುತ್ತಿರುವ ಧರಣಿಯನ್ನ ಬೆಂಬಲಿಸಿ ತುಮಕೂರು ಜಿಲ್ಲಾ ರೈತಸಂಘದ ಹೊಸಹಳ್ಳಿ ಚಂದ್ರಣ್ಣ ಬಣದ ರೈತರು ಸೋಮವಾರದಂದು ಪ್ರತಿಭಟನಾ ಮೆರವಣಿಗೆ ಹಾಗೂ ಕೆಲ ಕಾಲ ರಸ್ತೆತಡೆ ನಡೆಸಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯಲ್ಲಿ ತುಮಕೂರು ಜಿಲ್ಲಾ ರೈತಸಂಘದವರು ಉಪತಹಸೀಲ್ದಾರ್ ಸತ್ಯನಾರಾಯಣ್‌ ಅವರಿಗೆ ಮನವಿ ಸಲ್ಲಿಸಿದರು. 
        ಹುಳಿಯಾರಿನ ರಾಂಗೋಪಾಲ್ ಸಮೀಪದ ಸಂಘದ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಹೆಚ್.ರಸ್ತೆ, ಡಾ:ರಾಜ್‌ಕುಮಾರ್‌ರಸ್ತೆ, ಬಸ್ ನಿಲ್ದಾಣ, ಗಾಂಧಿಪೇಟೆ ಮೂಲಕ ಸಾಗಿ ರಾಷ್ಟೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲವು ಸಮಯ ರಸ್ತೆ ತಡೆ ನಡೆಸಿ ನಂತರ ಮೆರವಣಿಗೆಯು ಮಾರುಕಟ್ಟೆಯ ಆವರಣದ ಧರಣಿ ಸ್ಥಳಕ್ಕೆ ತೆರಳಿತು.
            ಈ ವೇಳೆ ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಮಾತನಾಡಿ ರೈತರು ಬೆಳೆಯುಬ ಕೊಬ್ಬರಿ ,ದ್ವಿದಳ ಧಾನ್ಯಸೇರಿದಂತೆ ಎಲ್ಲಾ ಉತ್ಪನ್ನಗಳಿಗೂ ಬೆಲೆಸಿಗದೆ ,ಬೆಲೆಗಾಗಿ ಹೋರಾಡುವ ಪರಿಸ್ಥಿರಿ ಒದಗಿರುವುದು ದುರದೃಷ್ಟ.ರೈತರು ಸಂಕಷ್ಟದಲ್ಲಿ ಸಿಲುಕಿದಾಗ ಸರಕಾರಗಳು ಎಚ್ಚೆತ್ತುಕೊಂಡು ಪರಿಹಾರ ನೀಡುವಂತಹ ಕ್ರಮಗಳನ್ನು ತ್ವರಿತಗತಿಯಲ್ಲಿ ಕಾರ್ಯಾರೂಪಕ್ಕೆ ತರುವಂತೆ ಒತ್ತಾಯಿಸಿದರು.
        ಕೊಬ್ಬರಿ ಬೆಳೆ ಬೆಳೆಯಲು  ಸಾವಿರಾರು ರೂ ತಗುಲುವುದಿದ್ದು ಕೊಬ್ಬರಿಗೆ ಕನಿಷ್ಟ ೧೭ಸಾವಿರ ಬೆಲೆ ದೊರೆಯುವಂತೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ರೈತರು ಪ್ರತಿ ಗ್ರಾಮದಲ್ಲೂ ಸಂಘಟಿತರಾದಲ್ಲಿ ಹೋರಾಟಕ್ಕೊಂದು ಹಾದಿಯಾಗುತ್ತದೆ ಎಂದರು
        ಈಗಾಗಲೆ ರಾಜ್ಯ ಸರಕಾರ ನೀರಾ ನೀತಿ ಜಾರಿಗೆ ತಂದಿರುವುದು ಶ್ಲಾಘನೀಯ. ತೆಂಗು ಬೆಳೆಯುವ ಎಲ್ಲಾ ಜಿಲ್ಲೆಗಳಲ್ಲೂ ಸಹಾ ನೀರಾ ಇಳಿಸಲು ಅವಕಾಶ ಕಲ್ಪಿಸಿ ಪ್ರತಿ ಹೋಬಳಿಗಳಲ್ಲಿ ಶುದ್ಧ ನೀರಾ ಘಟಕಗಳನ್ನ ತೆರೆದು ಪ್ರತಿ ಗ್ರಾಮಗಳಿಗೊಂದು ನೀರಾ ಡೈರಿಗಳನ್ನು ತೆರೆಯುವಂತೆ ಹಾಗೂ ನೀರಾ ಇಳಿಸುವ ಬಗ್ಗೆ ರೈತರಿಗೆ ಉಚಿತವಾಗಿ ತರಬೇತಿ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಮಾತನಾಡಿದರು

            ರೈತಸಂಘದ ಮುಖಂಡ ಮಲ್ಲಿಕಾರ್ಜುನಯ್ಯ ಮಾತನಾಡಿ ಈಗಾಗಲೆ ವಿವಿಧ ತಾಲ್ಲೂಕಿನ ಶಾಸಕರು ಮತ್ತು ಸಂಸದರು ಈ ಧರಣಿ ಸ್ಥಳಕ್ಕೆ ಆಗಮಿಸಿ ಕೊಬ್ಬರಿ ಬೆಲೆ ಹೆಚ್ಚಳಕ್ಕೆ ಪ್ರಾಧಾನ ಮಂತ್ರಿಗಳ ಬಳಿಗೆ ನಿಯೋಗ ತೆರಳೋಣವೆಂದು ಭರವಸೆ ನೀಡಿ ಕಾರ್ಯಪ್ರವೃತ್ತರಾಗಿರುವುದು ಶ್ಲಾಘನೀಯ. ಆದರೆ ಕೊಬ್ಬರಿ ಬೆಲೆ ಹೆಚ್ಚಳ ಆಗುವ ತನಕ ಈ ಧರಣಿಯನ್ನ ನಿರಂತರವಾಗಿ ಮುಂದುವರೆಯುತ್ತದೆ ಎಂದರು.
    ನಂತರ ಸ್ಥಳಕ್ಕೆ ಆಗಮಿಸಿದ ಉಪತಾಹಶೀಲ್ದಾರ್ ಸತ್ಯನಾರಾಯಣ್ ಅವರಿಗೆ ಮನವಿ ಸಲ್ಲಿಸಿದರು.

          ರೈತರಂಘದ ಲೋಕಣ್ಣ, ಮಲ್ಲಪ್ಪ, ಸತೀಶ್ ಮಾತನಾಡಿದರು.ಧರಣಿಯಲ್ಲಿಸೃಜನಾ ಮಹಿಳಾ ಘಟಕದ ಉಪಾಧ್ಯಕ್ಷೆ ಜಯಲಕ್ಷ್ಮಮ್ಮ,ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಇಂದಿರಾ ರಾಜಶೇಖರ್,ತಾಲ್ಲೂಕ್ ರೈತ ಸಂಘದ ಅಧ್ಯಕ್ಷ ಕೆ.ಈಶ್ವರಪ್ಪ.ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಕುಮಾರ್, ಪಾಳ್ಯ ಬೀರಪ್ಪ,ಉಪಾಧ್ಯಕ್ಷ ಶಂಕರಪ್ಪ,ತಾಲ್ಲೂಕ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಗೋವಿಂದಪ್ಪ ಮತ್ತಿತರರು ಸೇರಿದಂತೆ ಐವತಕ್ಕೂ ಹೆಚ್ಚು ಮಹಿಳೆಯರೂ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...