ವಿಷಯಕ್ಕೆ ಹೋಗಿ

ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ:ಎಲ್ಲಾ ರೈತರಿಗೂ ನೀರಾ ಇಳಿಸಲು ಅನುಮತಿಸಿ

ಹುಳಿಯಾರು: ಕೊಬ್ಬರಿಯ ಬೆಲೆ ಹೆಚ್ಚಿಸುವಂತೆ ಒತ್ತಾಯಿಸಿ ರೈತಸಂಘದವರು ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ನಡೆಸುತ್ತಿರುವ ಧರಣಿಯನ್ನ ಬೆಂಬಲಿಸಿ ತುಮಕೂರು ಜಿಲ್ಲಾ ರೈತಸಂಘದ ಹೊಸಹಳ್ಳಿ ಚಂದ್ರಣ್ಣ ಬಣದ ರೈತರು ಸೋಮವಾರದಂದು ಪ್ರತಿಭಟನಾ ಮೆರವಣಿಗೆ ಹಾಗೂ ಕೆಲ ಕಾಲ ರಸ್ತೆತಡೆ ನಡೆಸಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯಲ್ಲಿ ತುಮಕೂರು ಜಿಲ್ಲಾ ರೈತಸಂಘದವರು ಉಪತಹಸೀಲ್ದಾರ್ ಸತ್ಯನಾರಾಯಣ್‌ ಅವರಿಗೆ ಮನವಿ ಸಲ್ಲಿಸಿದರು. 
        ಹುಳಿಯಾರಿನ ರಾಂಗೋಪಾಲ್ ಸಮೀಪದ ಸಂಘದ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಹೆಚ್.ರಸ್ತೆ, ಡಾ:ರಾಜ್‌ಕುಮಾರ್‌ರಸ್ತೆ, ಬಸ್ ನಿಲ್ದಾಣ, ಗಾಂಧಿಪೇಟೆ ಮೂಲಕ ಸಾಗಿ ರಾಷ್ಟೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲವು ಸಮಯ ರಸ್ತೆ ತಡೆ ನಡೆಸಿ ನಂತರ ಮೆರವಣಿಗೆಯು ಮಾರುಕಟ್ಟೆಯ ಆವರಣದ ಧರಣಿ ಸ್ಥಳಕ್ಕೆ ತೆರಳಿತು.
            ಈ ವೇಳೆ ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಮಾತನಾಡಿ ರೈತರು ಬೆಳೆಯುಬ ಕೊಬ್ಬರಿ ,ದ್ವಿದಳ ಧಾನ್ಯಸೇರಿದಂತೆ ಎಲ್ಲಾ ಉತ್ಪನ್ನಗಳಿಗೂ ಬೆಲೆಸಿಗದೆ ,ಬೆಲೆಗಾಗಿ ಹೋರಾಡುವ ಪರಿಸ್ಥಿರಿ ಒದಗಿರುವುದು ದುರದೃಷ್ಟ.ರೈತರು ಸಂಕಷ್ಟದಲ್ಲಿ ಸಿಲುಕಿದಾಗ ಸರಕಾರಗಳು ಎಚ್ಚೆತ್ತುಕೊಂಡು ಪರಿಹಾರ ನೀಡುವಂತಹ ಕ್ರಮಗಳನ್ನು ತ್ವರಿತಗತಿಯಲ್ಲಿ ಕಾರ್ಯಾರೂಪಕ್ಕೆ ತರುವಂತೆ ಒತ್ತಾಯಿಸಿದರು.
        ಕೊಬ್ಬರಿ ಬೆಳೆ ಬೆಳೆಯಲು  ಸಾವಿರಾರು ರೂ ತಗುಲುವುದಿದ್ದು ಕೊಬ್ಬರಿಗೆ ಕನಿಷ್ಟ ೧೭ಸಾವಿರ ಬೆಲೆ ದೊರೆಯುವಂತೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ರೈತರು ಪ್ರತಿ ಗ್ರಾಮದಲ್ಲೂ ಸಂಘಟಿತರಾದಲ್ಲಿ ಹೋರಾಟಕ್ಕೊಂದು ಹಾದಿಯಾಗುತ್ತದೆ ಎಂದರು
        ಈಗಾಗಲೆ ರಾಜ್ಯ ಸರಕಾರ ನೀರಾ ನೀತಿ ಜಾರಿಗೆ ತಂದಿರುವುದು ಶ್ಲಾಘನೀಯ. ತೆಂಗು ಬೆಳೆಯುವ ಎಲ್ಲಾ ಜಿಲ್ಲೆಗಳಲ್ಲೂ ಸಹಾ ನೀರಾ ಇಳಿಸಲು ಅವಕಾಶ ಕಲ್ಪಿಸಿ ಪ್ರತಿ ಹೋಬಳಿಗಳಲ್ಲಿ ಶುದ್ಧ ನೀರಾ ಘಟಕಗಳನ್ನ ತೆರೆದು ಪ್ರತಿ ಗ್ರಾಮಗಳಿಗೊಂದು ನೀರಾ ಡೈರಿಗಳನ್ನು ತೆರೆಯುವಂತೆ ಹಾಗೂ ನೀರಾ ಇಳಿಸುವ ಬಗ್ಗೆ ರೈತರಿಗೆ ಉಚಿತವಾಗಿ ತರಬೇತಿ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಮಾತನಾಡಿದರು

            ರೈತಸಂಘದ ಮುಖಂಡ ಮಲ್ಲಿಕಾರ್ಜುನಯ್ಯ ಮಾತನಾಡಿ ಈಗಾಗಲೆ ವಿವಿಧ ತಾಲ್ಲೂಕಿನ ಶಾಸಕರು ಮತ್ತು ಸಂಸದರು ಈ ಧರಣಿ ಸ್ಥಳಕ್ಕೆ ಆಗಮಿಸಿ ಕೊಬ್ಬರಿ ಬೆಲೆ ಹೆಚ್ಚಳಕ್ಕೆ ಪ್ರಾಧಾನ ಮಂತ್ರಿಗಳ ಬಳಿಗೆ ನಿಯೋಗ ತೆರಳೋಣವೆಂದು ಭರವಸೆ ನೀಡಿ ಕಾರ್ಯಪ್ರವೃತ್ತರಾಗಿರುವುದು ಶ್ಲಾಘನೀಯ. ಆದರೆ ಕೊಬ್ಬರಿ ಬೆಲೆ ಹೆಚ್ಚಳ ಆಗುವ ತನಕ ಈ ಧರಣಿಯನ್ನ ನಿರಂತರವಾಗಿ ಮುಂದುವರೆಯುತ್ತದೆ ಎಂದರು.
    ನಂತರ ಸ್ಥಳಕ್ಕೆ ಆಗಮಿಸಿದ ಉಪತಾಹಶೀಲ್ದಾರ್ ಸತ್ಯನಾರಾಯಣ್ ಅವರಿಗೆ ಮನವಿ ಸಲ್ಲಿಸಿದರು.

          ರೈತರಂಘದ ಲೋಕಣ್ಣ, ಮಲ್ಲಪ್ಪ, ಸತೀಶ್ ಮಾತನಾಡಿದರು.ಧರಣಿಯಲ್ಲಿಸೃಜನಾ ಮಹಿಳಾ ಘಟಕದ ಉಪಾಧ್ಯಕ್ಷೆ ಜಯಲಕ್ಷ್ಮಮ್ಮ,ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಇಂದಿರಾ ರಾಜಶೇಖರ್,ತಾಲ್ಲೂಕ್ ರೈತ ಸಂಘದ ಅಧ್ಯಕ್ಷ ಕೆ.ಈಶ್ವರಪ್ಪ.ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಕುಮಾರ್, ಪಾಳ್ಯ ಬೀರಪ್ಪ,ಉಪಾಧ್ಯಕ್ಷ ಶಂಕರಪ್ಪ,ತಾಲ್ಲೂಕ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಗೋವಿಂದಪ್ಪ ಮತ್ತಿತರರು ಸೇರಿದಂತೆ ಐವತಕ್ಕೂ ಹೆಚ್ಚು ಮಹಿಳೆಯರೂ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.