ವಿಷಯಕ್ಕೆ ಹೋಗಿ

ಹುಳಿಯಾರು:೨೮ ನೇ ದಿನದ ಧರಣಿಗೆ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಗ್ರಾಮಸ್ಥರ ಬೆಂಬಲ

ಲಾರಿಯಲ್ಲಿ ಊಟದ ಬುತ್ತಿ ಸಮೇತ ಹಾಜರಾದ ರೈತರು: ಸ್ವಾಮೀಜಿಗಳ ಸಾನಿಧ್ಯ

ಹುಳಿಯಾರು:ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ಕಳೆದ ೨೭ ದಿನಗಳಿಂದಲೂ ನಡೆಯುತ್ತಿರುವ ರೈತರ ಚಳುವಳಿ ಬಗ್ಗೆ ರಾಜ್ಯಸರ್ಕಾರದ ರೈತ ವಿರೋಧಿ ನಿಲುವು ಖಂಡಿಸಿ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಗ್ರಾಮಸ್ಥರು ಗುರುವಾರದಂದು ಹುಳಿಯಾರಿಗೆ ಲಾರಿಯಲ್ಲಿ ಬುತ್ತಿ ಸಮೇತ ಆಗಮಿಸಿ ರಾಂಗೋಪಾಲ್ ಮುಂಭಾಗ ರಸ್ತೆ ತಡೆ ನಡೆಸಿ ಧರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಬೆಂಬಲ ಸೂಚಿಸಿದರು.
          ಹುಳಿಯಾರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಕೊಬ್ಬರಿ ಬೆಳಗಾರರ ೨೮ ನೇ ದಿನದ ಪ್ರತಿಭಟನೆಯಲ್ಲಿ ಅರಸಿಕೆರೆ ತಾಲ್ಲೂಕಿನ ಮಾಡಾಳು ನಿರಂಜನ ಪೀಠದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಪಾಲ್ಗೊಂಡ ಹಾಲ್ಕುರಿಕೆ ಗ್ರಾಮದ ನೂರಕ್ಕೂ ಹೆಚ್ಚು ಗ್ರಾಮಸ್ಥರು ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು.
          ನಂತರ ಮಾತನಾಡಿದ ಹರಿಸಮುದ್ರದ ನಾಗರಾಜ್ ಹಿಂದೊಂದು ಕಾಲದಲ್ಲಿ ಕಲ್ಪತರು ನಾಡಿನ ಕೊಬ್ಬರಿಗೆ ಬಂಗಾರದ ಬೆಲೆಯಿತ್ತು.ಇಂದು ಬಂಗಾರ ೩೦ ಸಾವಿರಕ್ಕೇರಿದರೆ ಕೊಬ್ಬರಿ ೬ ಸಾವಿರಕ್ಕಿಳಿದಿದೆ.ತೆಂಗು ಈ ಭಾಗದ ಜೀವನಾಧಾರವಾಗಿದ್ದು ಕಳೆದ ವರ್ಷ ೧೮ ಸಾವಿರವಿದ್ದ ಕೊಬ್ಬರಿ ಬೆಲೆ ದಿನೇ ದಿನೇ ಕುಸಿತ ಕಾಣುತ್ತಾ ಇಂದು ೬ ಸಾವಿರಕ್ಕಿಳಿದು ರೈತರನ್ನು ಸಾವಿನ ದವಡೆಗೆ ದೂಕಿದೆ.ನಮ್ಮ ಕೊಬ್ಬರಿಗೆ ಬೆಂಬಲ ಬೆಲೆ ಕೊಡಿ ಎಂದು ಸರ್ಕಾರವನ್ನು ಅಂಗಲಾಚುವ ಸ್ಥಿತಿ ಬಂದಿದೆ.ರೈತಪರ ಸರ್ಕಾರವೆಂದು ಅಧಿಕಾರಕ್ಕೆ ಬರುವ ಸರ್ಕಾರಗಳು ನಂತರ ರೈತರ ಬೆನ್ನಿಗೆ ನಿಲ್ಲುತ್ತಿಲ್ಲ ಎಂದರು.
           ಯಡಿಯೂರಪ್ಪನವರು ತಿಪಟೂರಿಗೆ ತೆಂಗು ಸಂಸ್ಕರಣ ಘಟಕವನ್ನು ಮಂಜೂರು ಮಾಡಿದ್ದನ್ನು ಮುಂದಿನ ಜನಪ್ರತಿನಿಧಿಗಳು ಯೋಜನೆಯ ಬಗ್ಗೆ ಪೂರಾ ನಿರ್ಲಕ್ಷ್ಯವಹಿಸಿದ್ದರಿಂದ ತೆಂಗಿನ ಉಪಉತ್ಪನ್ನಗಳ ಘಟಕ ಹಳ್ಳಹಿಡಿಯಿತು ಎಂದರು.

        ಸಾನಿಧ್ಯ ವಹಿಸಿದ್ದ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸರ್ಕಾರವೂ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.ದಿನೇದಿನೇ ಹೋರಾಟ ತೀವ್ರವಾಗುತ್ತಿದ್ದು ಮತ್ತಷ್ಟು ಪ್ರಬಲವಾಗುವುದನ್ನು ತಡೆಯಲು ರೈತರ ಬೇಡಿಕೆ ಈಡೇರಿಸಲು ಕೂಡಲೇ ಮುಂದಾಗಬೇಕು.ಅಸಂಬದ್ಧ ವಿಚಾರಗಳನ್ನು ದಿನಗಟ್ಟಲೇ ಬಿತ್ತರಮಾಡುವ ಮಾಧ್ಯಮದವರು ರೈತರ ಸಮಸ್ಯೆಗಳಿಗೆ ಕನ್ನಡಿಯಾಗಬೇಕೆಂದರು.
        ರಾಜ್ಯ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿ ಇಂದಿಗೆ ಧರಣಿ ೨೮ ದಿನವಾಗಿದ್ದು ಕೂಗಳತೆ ದೂರದಲ್ಲಿರುವ ಶಾಸಕರು ಸೇರಿದಂತೆ ನಮ್ಮ ಜಿಲ್ಲೆಯಲ್ಲಿಯೆ ಕೊಬ್ಬರಿ ಬೆಳೆಯುವ ಸ್ಥಳದ ೧೦ ಜನ ಶಾಸಕರಿದ್ದು ಸಹ ಇತ್ತ ಯಾರೊಬ್ಬರೂ ಕೊಬ್ಬರಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.ಸಂಸದ ಮುದ್ಧಹನುಮೇಗೌಡರ ನೇತೃತ್ವದಲ್ಲಿ ಜಿಲ್ಲೆಯ ರೈತರುಗಳು ಜನವರಿಯಲ್ಲಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೊಬ್ಬರಿಗೆ ಕನಿಷ್ಠ ೧೫ ಸಾವಿರ ಬೆಲೆ ತೀರ್ಮಾನವಾಗುವವರೆಗೂ ಚಳುವಳಿ ಕೈಬಿಡುವ ಮಾತೇಯಿಲ್ಲ ಎಂದರು.

      ಜಿಲ್ಲಾಧ್ಯಕ್ಷ ಶಂಕರಪ್ಪ,ತಾಲ್ಲೂಕ್ ಉಪಾಧ್ಯಕ್ಷ ಮಲ್ಲೀಕಣ್ಣ,ಹಾಲ್ಕುರಿಕೆ ನಾಗರಾಜು ಮಾತನಾಡಿದರು.


      ಪ್ರತಿಭಟನೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಕುಮಾರಸ್ವಾಮಿ,ನಂಜುಂಡಪ್ಪ,ಹುಚ್ಚೀರೆ ಗೌಡರು,ಮಾಯಗೊಂಡನಹಳ್ಳಿ ರಾಮಣ್ಣ,ಹಾಲೇನಹಳ್ಳಿ ಸುರೇಶ್,ಮಲ್ಲಿಕಣ್ಣ,ನಾಗರಾಜು,ಪಟ್ರೆಹಳ್ಳಿ ಪುಟ್ಟಣ್ಣ,ಹಂಗಾಲಿ ಕುಮಾರಣ್ಣ,ಪರಮೇಶ್,ನಾಗಭೂಷಣ,ಷಡಾಕ್ಷರಿ ಮೊದಲಾದವರು ಪಾಲ್ಗೊಂಡಿದ್ದರು.
 -----------------------------------------------------------------
ಮೊಬೈಲ್ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ ಸಚಿವರನ್ನು ಕೈ ಬಿಡಿ ಎಂದು ಅಧಿವೇಶನದಲ್ಲಿ ಎಲ್ಲಾ ಪಕ್ಷದವರು ವಾರಗಟ್ಟಲೇ ಚರ್ಚಿಸಿ ಕಲಾಪ ಹಾಳುಗೆಡವಿದರೆ ವಿನಹ ಯಾರೊಬ್ಬರು ಅನ್ನದಾತ ರೈತನ ಬಗ್ಗೆ ಪ್ರಶ್ನೆಯೇ ಎತ್ತಲಿಲ್ಲ.ಅಧಿವೇಶನದಲ್ಲಿ ರೈತರ ಸಮಸ್ಯೆ ಆಲಿಸುವ ಬದಲು ರೈತರನ್ನು ಬಂಧಿಸಿದ್ದೆ ಇವರ ಸಾಧನೆ : ಹಾಲ್ಕುರಿಕೆ ನಾಗರಾಜು ,ಗ್ರಾಪಂ ಮಾಜಿ ಅಧ್ಯಕ್ಷ
-------------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...