ವಿಷಯಕ್ಕೆ ಹೋಗಿ

ಮಾಜಿ ಶಾಸಕದ್ವಯರಲ್ಲಿ ಚಿ.ನಾ.ಹಳ್ಳಿ ಬಿಜೆಪಿ ಅಭ್ಯರ್ಥಿ ಯಾರು?

ಯಡಿಯೂರಪ್ಪ ಎದುರಿಗೆ ಬಯಲಾಯ್ತು ಬಿಜೆಪಿ ಭಿನ್ನಮತ

ವಿಶೇಷ ವರದಿ : ಹೆಚ್.ಬಿ.ಕಿರಣ್ ಕುಮಾರ್
ಹುಳಿಯಾರು: ಚಿಕ್ಕನಾಯಾಕನಹಳ್ಳಿ ತಾಲೂಕಿನಲ್ಲಿರುವ ಮಾಜಿ ಶಾಸಕರುಗಳಾದ ಕೆ.ಎಸ್.ಕಿರಣ್ ಕುಮಾರ್ ಹಾಗೂ ಜೆ.ಸಿ.ಮಾಧುಸ್ವಾಮಿ ಅವರಿಬ್ಬರಲ್ಲಿ ೨೦೧೮ ರ ವಿಧಾನಸಭಾ ಚುನಾವಣಾ ಅಭ್ಯರ್ಥಿ ಯಾರೆಂದು ಘೋಷಿಸುವಂತೆ ಬರ ವೀಕ್ಷಣೆಗಾಗಿ ಹುಳಿಯಾರು ಸಮೀಪದ ಕಂಪನಹಳ್ಳಿಗೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾರ್ಯಕರ್ತರು ಒತ್ತಾಯಿಸಿದ ಘಟನೆ ಬುಧವಾರ ಜರುಗಿತು.
ಹುಳಿಯಾರು ಸಮೀಪದ ಕಂಪನಹಳ್ಳಿ ಬಳಿ ತೆಂಗಿನ ತೋಟದ ವೀಕ್ಷಣೆಗೆ ಹೋದಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಕಾರ್ಯಕರ್ತರು ಚಿ.ನಾ.ಹಳ್ಳಿ ಬಿಜೆಪಿ ಅಭ್ಯರ್ಥಿ ಯಾರೆಂದು ಪ್ರಶ್ನಿಸುತ್ತಿರುವುದು.
        ಯಡಿಯೂರಪ್ಪನವರ ಬರ ವೀಕ್ಷಣಾ ಪ್ರವಾಸದ ಪಟ್ಟಿಯಲ್ಲಿ ಹುಳಿಯಾರು ಹೋಬಳಿಯ ಕಾರೆಹಳ್ಳಿ ಗೋಶಾಲೆ ಹಾಗೂ ಎಪಿಎಂಸಿ ಕೊಬ್ಬರಿ ಧರಣಿ ಸ್ಥಳ ಪೂರ್ವ ನಿಗದಿಯಾಗಿತ್ತು. ಆದರೆ ನೂರಾರು ಕಾರ್ಯಕರ್ತರು ಕಂಪನಹಳ್ಳಿಯ ತೋಟದ ಮನೆಯ ಹೆಂಜಾರಪ್ಪ ಅವರ ತೆಂಗಿನ ತೋಟ ಸಂಪೂರ್ಣ ಒಣಗಿದ್ದು ವೀಕ್ಷಿಸುವಂತೆ ಮಾರ್ಗ ಮದ್ಯೆ ಒತ್ತಡ ತಂದು ಅಲ್ಲಿಗೆ ಯಡಿಯೂರಪ್ಪನವರನ್ನು ಬರಮಾಡಿಕೊಂಡು ಆಗಮಿಸಿದ ಸಂದರ್ಭದಲ್ಲಿ ಯಡಿಯೂರಪ್ಪನವರೆ, ಚಿಕ್ಕನಾಯ್ಕನಹಳ್ಳಿ ವಿಧಾನ ಸಭಾ ಕ್ಷೇತ್ರದ ಮುಂದಿನ ಚುನಾವಣಾ ಅಭ್ಯರ್ಥಿ ಯಾರು ಎಂದು ತಾವು ಈಗಲೇ ಘೋಷಿಸಬಬೇಕೆಂದು ಕಾರ್ಯಕರ್ತರು ಪ್ರಶ್ನಿಸಿದ್ದು ಗೊಂದಲಕ್ಕೆ ಕಾರಣವಾಯಿತು.
           ಯಡಿಯೂರಪ್ಪನವರ ಬಳಿ ಸಮಸ್ಯೆ ಬಿಚಿಟ್ಟ ಕಾರ್ಯಕರ್ತರುಗಳು ನಾವೆಲ್ಲ ಸ್ವಂತ ಹಣದಲ್ಲಿ ಮನೆ ಮಠ ಬಿಟ್ಟು ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಕಟ್ಟಿದ್ದೇವೆ. ಹತ್ತನ್ನೆರಡು ವರ್ಷವಾಯ್ತು ಬಿಜೆಪಿಗೆ ಇಲ್ಲಿ ಅಧಿಕಾರ ಬಂದು. ಕಾರ್ಯಕರ್ತರನ್ನು ಕ್ಯಾರೆ ಎನ್ನುವವರಿಲ್ಲ. ನಿಮ್ಮಂತ ನಾಯಕರುಗಳು ಆಗಮಿಸುವ ಸಮಯದಲ್ಲಿ ಮಾತ್ರ ಬನ್ನಿ ಎಂದು ಪೋನ್ ಕರೆ ಮಾಡುತ್ತಾರೆ. ೨ ಚುನಾವಣೆಯಲ್ಲೂ ಒಂದೆ ಜಾತಿಗೆ ಸೇರಿದ ಇಬ್ಬರು ಮಾಜಿ ಶಾಸಕರು ಒಂದೊಂದು ಪಕ್ಷದಿಂದ ಅಭ್ಯರ್ಥಿಗಳಾಗಿ ಜೆಡಿಎಸ್ ಅನಾಯಾಸ ಗೆಲುವಿಗೆ ದಾರಿ ಮಾಡಿಕೊಟ್ಟಿದ್ದಾರೆ. ಈಗ ಈ ಇಬ್ಬರೂ ಮಾಜಿ ಶಾಸಕರೂ ಬಿಜೆಪಿಯಲ್ಲಿದ್ದು ಇಬ್ಬರೂ ಒಂದೊಂದು ಕಡೆ ಮುಖ ಮಾಡಿಕೊಂಡು ತಿರುಗುತ್ತಿದ್ದಾರೆ. ಒಬ್ಬರು ತಾಲೂಕು ಬಿಜೆಪಿ ಅಧ್ಯಕ್ಷರನ್ನಾಗಿ ಶಶಿಧರ್ ಅವರನ್ನು ಘೋಷಿಸಿದರೆ, ಮತ್ತೊಬ್ಬರು ಶ್ರೀನಿವಾಸಮೂರ್ತಿ ಎಂದು ಘೋಷಿಸುತ್ತಾರೆ. ಹೀಗೆ ಇವರಿಬ್ಬರೆ ಕಿತ್ತಾಡಿದರೆ ನಮ್ಮ ಗತಿ ಏನು ಸ್ವಾಮಿ ಎಂದು ಸಮಸ್ಯೆ ವಿವರಿಸಿದರು.
              ಒಬ್ಬ ರಾಜ್ಯಧ್ಯಕ್ಷ ತಾಲೂಕಿಗೆ ಬರುತ್ತಾರೆಂದರೆ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ಅಭ್ಯರ್ಥಿಗಳ ಬಗ್ಗೆ ಗೊಂದಲಕ್ಕೀಡಾಗಿ ಪಕ್ಷ ಸಂಘಟನೆಯಿಂದ ದೂರಾಗಿರುವ ಕಾರ್ಯಕರ್ತರುಗಳು ಒಂದೇ ಒಂದು ಪಕ್ಷದ ಬಾವುಟವನ್ನು ಕೂಡ ಕಟ್ಟದಂತಾಗಿದ್ದಾರೆ. ಇದು ಹೀಗೆಯೇ ಚುನಾವಣೆಯವರೆಗೂ ಮುಂದುವರಿದಲ್ಲಿ ಈ ಬಾರಿಯೂ ಬಿಜೆಪಿ ಸೋಲೋದು ಗ್ಯಾರೆಂಟಿ ಎಂದರು..
            ಇದರಿಂದ ಕುಪಿತಗೊಂಡ ಯಡಿಯೂರಪ್ಪ ಅವರು ಮುಖ ಗಂಟು ಮಾಡಿಕೊಂಡು ಕಾರ್ಯಕರ್ತರನ್ನು ಏರಿದ ಧ್ವನಿಯಲ್ಲಿ ಪ್ರಶ್ನಿಸುತ್ತಿದ್ದಂತೆ ಇವರಿಬ್ಬರ ಭಿನ್ನಮತ ಇರೋದ್ರಿಂದಾನೆ ಗೆಲ್ಲಬೇಕಾದ ೨ ಜಿಪಂ ಕ್ಷೇತ್ರ ಸೋತಿದ್ದೇವೆ. ಇವರು ಸರಿಯಾಗದೆ ಚುನಾವಣೆಗೆ ಹೋದಲ್ಲಿ ಸೋಲೋದಿಲ್ವ. ನಾವು ಯಾರ ಪರವೂ ಟಿಕೆಟ್ ಕೊಡಿ ಎಂದು ಕೇಳುತ್ತಿಲ್ಲ. ಇಬ್ಬರಲ್ಲಿ ಯಾರಿಗೆ ಟಿಕೆಟ್ ಎಂದು ಘೊಷಿಸಬೇಕು. ಇವರಿಬ್ಬರೂ ಬೇಡ ಹೊಸ ಮುಖ ನಿಲ್ಲಿಸುತ್ತೇನೆಂದರೂ ನಮ್ಮ ತಕರಾರಿಲ್ಲ. ಒಟ್ಟಾರೆ ಬೇಗ ಅಭ್ಯರ್ಥಿ ಘೋಷಿಸಿ ಎಂದು ಕಾರ್ಯಕರ್ತರುಗಳು ಪಟ್ಟು ಹಿಡಿದರು.

           ಅಂತಿಮವಾಗಿ ಯಡಿಯೂರಪ್ಪ ಅವರು ಅಭ್ಯರ್ಥಿ ಬಗ್ಗೆ ಮಾತನಾಡದೆ ಮೌನಕ್ಕೆ ಶರಣಾದರು. ಮಾಜಿ ಶಾಸಕ ಕೆ.ಎಸ್.ಕಿರಣ್‌ಕುಮಾರ್ ಮನೆಗೆ ತೆರಳಿದ ಅವರು ಪ್ರತ್ಯೇಕ ಕೋಣೆಯಲ್ಲಿ ಕೆಲ ಕಾಲ ರಹಸ್ಯ ಮಾತುಕತೆ ನಡೆಸಿದರಾದರೂ ಟಿಕೇಟ್ ಯಾರಿಗೆಂದು ಕಡೆಗೂ ಏನೊಂದು ಹೇಳದೆ ತೆರಳಿದ್ದು ಕಾರ್ಯಕರ್ತರಲ್ಲಿ ಗೊಂದಲ ಮುಂದುವರಿಯುವಂತೆ ಮಾಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.