ವಿಷಯಕ್ಕೆ ಹೋಗಿ

ನಫೆಡ್ ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ ;ಕೃಷಿ ಬೆಲೆ ಅಯೋಗದ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ್ ಕಮ್ಮರಡಿ

ಹುಳಿಯಾರು:ನಫೆಡ್ ಪ್ರಾರಂಭಿಸಲು ಉದ್ಭವವಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಖರೀದಿ ಕೇಂದ್ರದಲ್ಲಿ ಕೂಡಲೇ ಕೊಬ್ಬರಿ ಖರೀದಿಗೆ ಮುಂದಾಗುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಕನಾಟಕ ಕೃಷಿ ಬೆಲೆ ಅಯೋಗದ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ್ ಕಮ್ಮರಡಿ ಪ್ರತಿಭಟನಕಾರರಿಗೆ ಭರವಸೆಯಿತ್ತರು.
ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ರಾಜ್ಯ ಕೃಷಿ ಬೆಲೆ ಅಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಭೇಟಿ ನೀಡಿ ಚರ್ಚಿಸಿದರು.
         ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ರಾಜ್ಯ ರೈತಸಂಘದ ನೇತೃತ್ವವದಲ್ಲಿ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯನವರೊಂದಿಗೆ ಭೇಟಿಯಿತ್ತ ಅವರು ಧರಣಿ ನಿರತರ ಜೊತೆ ಕೊಬ್ಬರಿಯ ಸ್ಥಳಿಯ ಸಮಸ್ಯೆ ಬಗ್ಗೆ ಚರ್ಚಿಸಿದರು.
             ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಅಧಿಕ ಉತ್ಪಾದನೆಯಿಂದ ಕೊಬ್ಬರಿ,ಈರುಳ್ಳಿ,ಟೊಮೊಟೊ ಸೇರಿದಂತೆ ಕೆಲವು ಧಾನ್ಯಗಳ ಬೆಲೆಯಲ್ಲಿ ಏರಿಳಿತ ಕಂಡು ಸಹಜವಾಗಿಯೇ ಧಾರಣೆ ಕುಸಿತವಾಗುವುದರಿಂದ ರೈತರಿಗೆ ನ್ಯಾಯಯುತ ಬೆಲೆ ದೊರೆಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯದ ಹನ್ನೊಂದು ಪ್ರಮುಖ ಕೃಷಿ ಮತ್ತು ತೋಟಗಾರಿಕ ಬೆಳೆಗಳ ಉತ್ಪಾದನೆ ಹಾಗೂ ಬೆಳೆಗಳಿಗೆ ಉತ್ಪಾದನಾ ವೆಚ್ಚ ಸೇರಿಸಿ ತಗುಲಲಿರುವ ಬೆಲೆ ನಿಗದಿಮಾಡಿ ಕೇಂದ್ರಸರ್ಕಾರಕ್ಕೆ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಲಾಗಿದ್ದು ಅದರಂತೆ ತೆಂಗು ಬೆಳೆಗರರೊಂದಿಗೆ ಚರ್ಚಿಸಿ ಉತ್ಪಾದನಾ ವೆಚ್ಚ ಸೇರಿ ೧೧,೫೨೯ ರೂ ನಿಗದಪಡಿಸಲಾಗಿದ್ದು ಸರ್ಕಾರ ಈ ದರದಲ್ಲಿ ರೈತರಿಂದ ಕೊಬ್ಬರಿ ಖರೀದಿಸಲು ಮುಂದಾಗಬೇಕಿದೆ ಎಂದರು.
              ಪ್ರಸ್ತುತ ಕೊಬ್ಬರಿಗೆ ರಾಜ್ಯ ಸರಕಾರ ಒಂದು ಸಾವಿರ ಸಹಾಯಧನ ನೀಡುವುದಾಗಿ ಹೇಳಿದ್ದು ಕೊಬ್ಬರಿ ಕೊಳ್ಳಲು ಗಡುವು ೩೦ ದಿನ ಎಂದು ತಿಳಿಸಿದ್ದು ಇದರ ಬದಲು ೯೦ ದಿನದವರೆಗೆ ವಿಸ್ತರಿಸುವಂತೆಯೂ ತಿಳಿಸಿದರು.
                ಸಧ್ಯದ ಬೆಂಬಲಬೆಲೆ ೬೨೪೦ ಘೋಷಣೆಯಾಗಿದ್ದು ೨೦೧೬ -೧೭ನೇ ಸಾಲಿಗೆ ೧೧,೫೨೯ ರೂ ಗಳಂತೆ ದರ ನಿಗದಿಪಡಿಸಲು ಕೇಂದ್ರಸರ್ಕಾರದ ಮೇಲೆ ಒತ್ತಡ ತಂದಲ್ಲಿ ರೈತರಿಗೆ ನ್ಯಾಯಯುತ ಬೆಲೆ ದೊರಕಲು ಅನುಕೂಲವಾಗುತ್ತದೆ ಎಂದರು. ರಾಜ್ಯ ಸರಕಾರ ಸಧ್ಯ ಸಹಾಯಧನ ೧ ಸಾವಿರ ರೂ ಎಂದು ಘೋಷಿಸಿದ್ದು ಸಧ್ಯದ ಪರಿಸ್ಥಿತಿಯಲ್ಲಿ ಇದನ್ನು ಕನಿಷ್ಟ ಎರಡು ಸಾವಿರಕ್ಕೆ ಏರಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಉಪ ಸಮಿತಿ ಅಧ್ಯಕ್ಷ ಟಿ.ಬಿ.ಜಯಚಂದ್ರ ಅವರನ್ನ ಒತ್ತಾಯಿಸಲಾಗುವುದು ಎಂದರು.
             ಧರಣಿ ಕುಳಿತ ತೆಂಗು ಬೆಳೆಗರರು ಸಮಸ್ಯೆ ಆಲಿಸಿದ ಅವರು ರೈತರ ಸಂಕಷ್ಟ ಹಾಗೂ ವಾಸ್ತವತೆಯ ಅರಿವು ಅರಿತು ಶ್ರೀಘ್ರ ನಾಫೆಡ್ ಕೇಂದ್ರ ತೆರೆಯುವಂತೆ ಕೃಷಿ ಉತ್ಪನ್ನ ಮಾರಾಟ ಮಂಡಳಿ ಸಹಾಯಕ ನಿರ್ದೇಶಕರಿಗೆ ತಾಕೀತು ಮಡಿದರು.
                ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಸರ್ಕಾರ ಕೂಡಲೇ ನಫೇಡ್ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿಯೂ ಹಾಗೂ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಯಾಡಲು ಸಂಸದ ಮುದ್ಧಹನುಮೇಗೌಡರೊಂದಿಗೆ ರೈತರ ನಿಯೋಗ ಕರೆದೊಯ್ಯುವುದಾಗಿಯೂ ಭರವಸೆಯಿತ್ತರು.

        ಸಹಜ ಕೃಷಿಕ ಪ್ರೋ. ಶಿವನಂಜಪ್ಪ ಬಾಳೆಕಾಯಿ, ಕೃಷಿ ಉತ್ಪನ್ನ ಮಾರಾಟ ಮಂಡಳಿ ಸಹಾಯಕ ನಿರ್ದೇಶಕ ಎಂ.ರಾಜಣ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಶಂಕರಣ್ಣ,ರೈತಸಂಘದ ಕೆಂಕೆರೆ ಸತೀಶ್, ಎಪಿಎಂಸಿ ಅಧ್ಯಕ್ಷ ಬರಗೂರು ಬಸವರಾಜು, ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ, ತಿಮ್ಮಹಳ್ಳಿ ಲೋಕಣ್ಣ, ಮಲ್ಲಿಕಾರ್ಜುನಯ್ಯ,ಚಿಕ್ಕಬಿದರೆ ಶಾಂತಣ್ಣ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.