ವಿಷಯಕ್ಕೆ ಹೋಗಿ

ನಫೆಡ್ ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ ;ಕೃಷಿ ಬೆಲೆ ಅಯೋಗದ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ್ ಕಮ್ಮರಡಿ

ಹುಳಿಯಾರು:ನಫೆಡ್ ಪ್ರಾರಂಭಿಸಲು ಉದ್ಭವವಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಖರೀದಿ ಕೇಂದ್ರದಲ್ಲಿ ಕೂಡಲೇ ಕೊಬ್ಬರಿ ಖರೀದಿಗೆ ಮುಂದಾಗುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಕನಾಟಕ ಕೃಷಿ ಬೆಲೆ ಅಯೋಗದ ಅಧ್ಯಕ್ಷ ಡಾ.ಟಿ.ಎನ್. ಪ್ರಕಾಶ್ ಕಮ್ಮರಡಿ ಪ್ರತಿಭಟನಕಾರರಿಗೆ ಭರವಸೆಯಿತ್ತರು.
ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ರಾಜ್ಯ ಕೃಷಿ ಬೆಲೆ ಅಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಭೇಟಿ ನೀಡಿ ಚರ್ಚಿಸಿದರು.
         ಕೊಬ್ಬರಿ ಬೆಂಬಲ ಬೆಲೆಗೆ ಒತ್ತಾಯಿಸಿ ರಾಜ್ಯ ರೈತಸಂಘದ ನೇತೃತ್ವವದಲ್ಲಿ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯನವರೊಂದಿಗೆ ಭೇಟಿಯಿತ್ತ ಅವರು ಧರಣಿ ನಿರತರ ಜೊತೆ ಕೊಬ್ಬರಿಯ ಸ್ಥಳಿಯ ಸಮಸ್ಯೆ ಬಗ್ಗೆ ಚರ್ಚಿಸಿದರು.
             ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಅಧಿಕ ಉತ್ಪಾದನೆಯಿಂದ ಕೊಬ್ಬರಿ,ಈರುಳ್ಳಿ,ಟೊಮೊಟೊ ಸೇರಿದಂತೆ ಕೆಲವು ಧಾನ್ಯಗಳ ಬೆಲೆಯಲ್ಲಿ ಏರಿಳಿತ ಕಂಡು ಸಹಜವಾಗಿಯೇ ಧಾರಣೆ ಕುಸಿತವಾಗುವುದರಿಂದ ರೈತರಿಗೆ ನ್ಯಾಯಯುತ ಬೆಲೆ ದೊರೆಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯದ ಹನ್ನೊಂದು ಪ್ರಮುಖ ಕೃಷಿ ಮತ್ತು ತೋಟಗಾರಿಕ ಬೆಳೆಗಳ ಉತ್ಪಾದನೆ ಹಾಗೂ ಬೆಳೆಗಳಿಗೆ ಉತ್ಪಾದನಾ ವೆಚ್ಚ ಸೇರಿಸಿ ತಗುಲಲಿರುವ ಬೆಲೆ ನಿಗದಿಮಾಡಿ ಕೇಂದ್ರಸರ್ಕಾರಕ್ಕೆ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಲಾಗಿದ್ದು ಅದರಂತೆ ತೆಂಗು ಬೆಳೆಗರರೊಂದಿಗೆ ಚರ್ಚಿಸಿ ಉತ್ಪಾದನಾ ವೆಚ್ಚ ಸೇರಿ ೧೧,೫೨೯ ರೂ ನಿಗದಪಡಿಸಲಾಗಿದ್ದು ಸರ್ಕಾರ ಈ ದರದಲ್ಲಿ ರೈತರಿಂದ ಕೊಬ್ಬರಿ ಖರೀದಿಸಲು ಮುಂದಾಗಬೇಕಿದೆ ಎಂದರು.
              ಪ್ರಸ್ತುತ ಕೊಬ್ಬರಿಗೆ ರಾಜ್ಯ ಸರಕಾರ ಒಂದು ಸಾವಿರ ಸಹಾಯಧನ ನೀಡುವುದಾಗಿ ಹೇಳಿದ್ದು ಕೊಬ್ಬರಿ ಕೊಳ್ಳಲು ಗಡುವು ೩೦ ದಿನ ಎಂದು ತಿಳಿಸಿದ್ದು ಇದರ ಬದಲು ೯೦ ದಿನದವರೆಗೆ ವಿಸ್ತರಿಸುವಂತೆಯೂ ತಿಳಿಸಿದರು.
                ಸಧ್ಯದ ಬೆಂಬಲಬೆಲೆ ೬೨೪೦ ಘೋಷಣೆಯಾಗಿದ್ದು ೨೦೧೬ -೧೭ನೇ ಸಾಲಿಗೆ ೧೧,೫೨೯ ರೂ ಗಳಂತೆ ದರ ನಿಗದಿಪಡಿಸಲು ಕೇಂದ್ರಸರ್ಕಾರದ ಮೇಲೆ ಒತ್ತಡ ತಂದಲ್ಲಿ ರೈತರಿಗೆ ನ್ಯಾಯಯುತ ಬೆಲೆ ದೊರಕಲು ಅನುಕೂಲವಾಗುತ್ತದೆ ಎಂದರು. ರಾಜ್ಯ ಸರಕಾರ ಸಧ್ಯ ಸಹಾಯಧನ ೧ ಸಾವಿರ ರೂ ಎಂದು ಘೋಷಿಸಿದ್ದು ಸಧ್ಯದ ಪರಿಸ್ಥಿತಿಯಲ್ಲಿ ಇದನ್ನು ಕನಿಷ್ಟ ಎರಡು ಸಾವಿರಕ್ಕೆ ಏರಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಉಪ ಸಮಿತಿ ಅಧ್ಯಕ್ಷ ಟಿ.ಬಿ.ಜಯಚಂದ್ರ ಅವರನ್ನ ಒತ್ತಾಯಿಸಲಾಗುವುದು ಎಂದರು.
             ಧರಣಿ ಕುಳಿತ ತೆಂಗು ಬೆಳೆಗರರು ಸಮಸ್ಯೆ ಆಲಿಸಿದ ಅವರು ರೈತರ ಸಂಕಷ್ಟ ಹಾಗೂ ವಾಸ್ತವತೆಯ ಅರಿವು ಅರಿತು ಶ್ರೀಘ್ರ ನಾಫೆಡ್ ಕೇಂದ್ರ ತೆರೆಯುವಂತೆ ಕೃಷಿ ಉತ್ಪನ್ನ ಮಾರಾಟ ಮಂಡಳಿ ಸಹಾಯಕ ನಿರ್ದೇಶಕರಿಗೆ ತಾಕೀತು ಮಡಿದರು.
                ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಸರ್ಕಾರ ಕೂಡಲೇ ನಫೇಡ್ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿಯೂ ಹಾಗೂ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಯಾಡಲು ಸಂಸದ ಮುದ್ಧಹನುಮೇಗೌಡರೊಂದಿಗೆ ರೈತರ ನಿಯೋಗ ಕರೆದೊಯ್ಯುವುದಾಗಿಯೂ ಭರವಸೆಯಿತ್ತರು.

        ಸಹಜ ಕೃಷಿಕ ಪ್ರೋ. ಶಿವನಂಜಪ್ಪ ಬಾಳೆಕಾಯಿ, ಕೃಷಿ ಉತ್ಪನ್ನ ಮಾರಾಟ ಮಂಡಳಿ ಸಹಾಯಕ ನಿರ್ದೇಶಕ ಎಂ.ರಾಜಣ್ಣ, ರೈತ ಸಂಘದ ಜಿಲ್ಲಾಧ್ಯಕ್ಷ ಶಂಕರಣ್ಣ,ರೈತಸಂಘದ ಕೆಂಕೆರೆ ಸತೀಶ್, ಎಪಿಎಂಸಿ ಅಧ್ಯಕ್ಷ ಬರಗೂರು ಬಸವರಾಜು, ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ, ತಿಮ್ಮಹಳ್ಳಿ ಲೋಕಣ್ಣ, ಮಲ್ಲಿಕಾರ್ಜುನಯ್ಯ,ಚಿಕ್ಕಬಿದರೆ ಶಾಂತಣ್ಣ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...