ವಿಷಯಕ್ಕೆ ಹೋಗಿ

ಕೊಬ್ಬರಿ ಸಮಸ್ಯೆ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡಿಕೊಡುವೆ:ಯಡಿಯೂರಪ್ಪ

ಬೆಲೆ ಹೆಚ್ಚಳಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸುವೆ
ಹುಳಿಯಾರು:ರಾಜ್ಯದ ತೆಂಗು ಬೆಳೆಗಾರರ ಹಿತಕಾಪಾಡುವ ನಿಟ್ಟಿನಲ್ಲಿ ಜನವರಿ ೪ ರಂದು ತಾನು ದೆಹಲಿಗೆ ತೆರಳುತ್ತಿದ್ದು,ಈ ವೇಳೆ ಕೇಂದ್ರ ಕೃಷಿ ಸಚಿವರನ್ನು ಹಾಗೂ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ತೆಂಗು ಬೆಳೆಗಾರರ ಸಮಸ್ಯೆಯನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು ರೈತರ ಕೊಬ್ಬರಿಗೆ ಸದ್ಯ ನೀಡಿರುವ ಬೆಂಬಲ ಬೆಲೆಯನ್ನು ಹೆಚ್ಚಿಸುವಂತೆ ಪ್ರಧಾನ ಮಂತ್ರಿಗಳನ್ನು ಒಪ್ಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಬುಧುವಾರದಂದು ಭೇಟಿಯಿತ್ತ ಯಡಿಯೂರಪ್ಪನವರು ರೈತರೊಂದಿಗೆ ಚರ್ಚಿಸಿ ಮಾತನಾಡಿದರು.
          ಕೊಬ್ಬರಿ ಬೆಲೆ ಹೆಚ್ಚಿಸುವಂತೆ ಒತ್ತಾಯಿಸಿ ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಯು ೪೮ನೇ ದಿನವಾದ ಬುಧವಾರದಂದು ಭೇಟಿಯಿತ್ತ ಅವರು ರೈತರೊಂದಿಗೆ ಚರ್ಚಿಸಿ ಮಾತನಾಡಿದರು.
            ಸರಕಾರ ಈಗ ನೀಡುತ್ತಿರುವ ಬೆಲೆಯಿಂದ ರೈತ ಬದುಕಲು ಸಾಧ್ಯವಿಲ್ಲ.ಬರಗಾಲ ಸಮಸ್ಯೆಯಿಂದ ರೈತ ಕೃಷಿ ಬಿಟ್ಟು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.ಬರದಿಂದ ತೆಂಗಿನ ಮರ ಒಣಗಿದ್ದು ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮೇ ತಿಂಗಳಿನೊಳಗೆ ತೆಂಗು ಉಳಿಸಿಕೊಳ್ಳುವುದೇ ದುಸ್ತರವಾಗುತ್ತದೆ.ಆಗ ತೆಂಗಿನ ತೋಟ ಹಾಳಾಗಿದ್ದಕ್ಕೂ ಪರಿಹಾರ ಕೊಡಬೇಕಾಗುತ್ತದೆ.ಇದನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟು , ಬೆಲೆ ಹೆಚ್ಚಳ ಮಾಡುವ ನಿಮ್ಮ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸುವೆ ಎಂದರು.
ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರನ್ನುದ್ದೇಶಿಸಿ ಜೆ.ಸಿ.ಮಾಧುಸ್ವಾಮಿ ಮಾತನಾಡಿದರು.
          ಈಗಾಗಲೆ ದೆಹಲಿಯಲ್ಲಿ ಪ್ರಧಾನ ಮಂತ್ರಿಗಳು ಡಿಸಂಬರ್ ೩೦ ರಂದು ಕರ್ನಾಟಕ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಸಭೆ ಕರೆದಿದ್ದು ಅಲ್ಲಿ ಕೊಬ್ಬರಿ ಬೆಳೆಗಾರರ ಸಮಸ್ಯೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಆದರೆ ಸಮಸ್ಯೆ ಏನೆಂದು ಅರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮನ್ನು ಆಹ್ವಾನಿಸಿ ಚರ್ಚಿಸಿಲ್ಲ,ದೆಹಲಿಗೆ ಬನ್ನಿ ಎಂದೂ ಸಹ ಕರೆದಿಲ್ಲಾ. ಆದ್ದರಿಂದ ಕೇಂದ್ರ ಸರಕಾರ ಏನು ಮಾಡುತ್ತೆ ಮತ್ತು ರಾಜ್ಯ ಸರಕಾರ ಏನು ಮಾಡುತ್ತೆ ಎನ್ನುವದನ್ನು ತಿಳಿದುಕೊಂಡು ನಾನು ಜನವರಿ ೪ ರಂದು ಪ್ರಧಾನ ಮಂತ್ರಿಗಳನ್ನ ಭೇಟಿ ಮಾಡಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅವರ ಮನವೊಲಿಸುವುದಾಗಿ ತಿಳಿಸಿದರು.
           ಆಡಳಿತ ನಡೆಸುವ ಈ ಸರಕಾರಕ್ಕೆ ರೈತರ ಬಳಿಗೆ ತೆರಳಿ ಸಮಸ್ಯೆಗಳ ವಸ್ತು ಸ್ಥಿತಿ ಅರಿತು ರೈತರ ಕಷ್ಟಗಳನ್ನು ಪರಿಹರಿಸಲು ವ್ಯವಧಾನ ಇಲ್ಲವಾಗಿದೆ.ರೈತ ಸಂಘದಲ್ಲಿ ಕಳೆದ ಹತ್ತಾರು ವರ್ಷಗಳಿಂದ ವಡನಾಡಿರುವ ನನಗೆ ಒಬ್ಬ ರೈತನ ಮಗನಾಗಿ, ತೆಂಗು ಬೆಳೆಗಾರನಾಗಿ ರೈತರ ಕಷ್ಟ ಏನೆಂದು ನನಗೆ ಅರಿವಿದೆ ಎಂದರು.
              ನಾನು ಮುಖ್ಯಮಂತ್ರಿಯಾದ ಅವಧಿಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವ ರೀತಿ ಕರ್ತವ್ಯ ನಿರ್ವಹಿಸಿದ್ದು ನೀರಾವರಿ ಯೋಜನೆಗೆ, ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ದೆಹಲಿಯಲ್ಲಿ ಕೂತಿದ್ದು ಬೆಂಬಲ ಬೆಲೆ ಘೋಷಣೆ ಮಾಡಿಸಿಕ್ಕೊಂಡೆ ಬಂದಿದ್ದೆ.ಕೊಬ್ಬರಿ ಬೆಳೆಗಾರರ ಸಮಸ್ಯೆ ಬಗ್ಗೆ ನನಗೆ ಮನವಿ ನೀಡಿದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದೊಂದಿಗೆ ಮಾತನಾಡಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನನ್ನ ಕೈಲಾದ ಸಹಾಯ ಮಾಡಿಯೇ ತೀರುವುದಾಗಿ ತಿಳಿಸಿದರು.
            ಈ ವೇಳೆ ಕುಪ್ಪುರು ಗದ್ದಿಗೆ ಮಠದ ಡಾ:ಯತೀಶ್ವರ ಶಿವಾಚಾರ್ಯ ಸ್ವಾಮಿಜಿ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ,ಶಾಸಕ ಸುರೇಶ್ ಗೌಡ,ಮಾಜಿ ಸಂಸದ ಬಸವರಾಜ್, ಮಾಜಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಕೆ.ಎಸ್.ಕಿರಣ್ ಕುಮಾರ್,ಹುಲಿನಾಯ್ಕರ್,ಜಿಪಂ ಸದಸ್ಯ ಮಹಲಿಂಗಪ್ಪ, ಕೆಂಕೆರೆ ನವೀನ್, ರೈತಮುಖಂಡರಾದ ಕೆಂಕೆರೆ ಸತೀಶ್, ತಿಮ್ಮಹಳ್ಳಿ ಲೋಕಣ್ಣ, ಮಲ್ಲಿಕಾರ್ಜುನಯ್ಯ, ಸಜ್ಜಾದ್, ಹೂವಿನ ರಘು, ಸತೀಶ್, ಓಂಕಾರಮೂರ್ತಿ ಮತ್ತಿತರರಿದ್ದರು.
----------------
ಕೇಂದ್ರದಿಂದ ಬೆಂಬಲ ಬೆಲೆ ಕನಿಷ್ಟ ಹದಿನೈದು ಸಾವಿರ ಘೋಷಣೆಯಾಗುವವರೆಗೂ ,ತಿಂಗಳಾದರೂ ಸರಿ,ವರ್ಷವಾದರೂ ಸರಿ ಈ ಧರಣಿ ನಿಲ್ಲುವುದಿಲ್ಲ:ಕೆಂಕೆರೆ ಸತೀಶ್

----------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...