ವಿಷಯಕ್ಕೆ ಹೋಗಿ

ಕೊಬ್ಬರಿ ಸಮಸ್ಯೆ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡಿಕೊಡುವೆ:ಯಡಿಯೂರಪ್ಪ

ಬೆಲೆ ಹೆಚ್ಚಳಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸುವೆ
ಹುಳಿಯಾರು:ರಾಜ್ಯದ ತೆಂಗು ಬೆಳೆಗಾರರ ಹಿತಕಾಪಾಡುವ ನಿಟ್ಟಿನಲ್ಲಿ ಜನವರಿ ೪ ರಂದು ತಾನು ದೆಹಲಿಗೆ ತೆರಳುತ್ತಿದ್ದು,ಈ ವೇಳೆ ಕೇಂದ್ರ ಕೃಷಿ ಸಚಿವರನ್ನು ಹಾಗೂ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ತೆಂಗು ಬೆಳೆಗಾರರ ಸಮಸ್ಯೆಯನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು ರೈತರ ಕೊಬ್ಬರಿಗೆ ಸದ್ಯ ನೀಡಿರುವ ಬೆಂಬಲ ಬೆಲೆಯನ್ನು ಹೆಚ್ಚಿಸುವಂತೆ ಪ್ರಧಾನ ಮಂತ್ರಿಗಳನ್ನು ಒಪ್ಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಬುಧುವಾರದಂದು ಭೇಟಿಯಿತ್ತ ಯಡಿಯೂರಪ್ಪನವರು ರೈತರೊಂದಿಗೆ ಚರ್ಚಿಸಿ ಮಾತನಾಡಿದರು.
          ಕೊಬ್ಬರಿ ಬೆಲೆ ಹೆಚ್ಚಿಸುವಂತೆ ಒತ್ತಾಯಿಸಿ ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಯು ೪೮ನೇ ದಿನವಾದ ಬುಧವಾರದಂದು ಭೇಟಿಯಿತ್ತ ಅವರು ರೈತರೊಂದಿಗೆ ಚರ್ಚಿಸಿ ಮಾತನಾಡಿದರು.
            ಸರಕಾರ ಈಗ ನೀಡುತ್ತಿರುವ ಬೆಲೆಯಿಂದ ರೈತ ಬದುಕಲು ಸಾಧ್ಯವಿಲ್ಲ.ಬರಗಾಲ ಸಮಸ್ಯೆಯಿಂದ ರೈತ ಕೃಷಿ ಬಿಟ್ಟು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.ಬರದಿಂದ ತೆಂಗಿನ ಮರ ಒಣಗಿದ್ದು ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮೇ ತಿಂಗಳಿನೊಳಗೆ ತೆಂಗು ಉಳಿಸಿಕೊಳ್ಳುವುದೇ ದುಸ್ತರವಾಗುತ್ತದೆ.ಆಗ ತೆಂಗಿನ ತೋಟ ಹಾಳಾಗಿದ್ದಕ್ಕೂ ಪರಿಹಾರ ಕೊಡಬೇಕಾಗುತ್ತದೆ.ಇದನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟು , ಬೆಲೆ ಹೆಚ್ಚಳ ಮಾಡುವ ನಿಮ್ಮ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸುವೆ ಎಂದರು.
ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ರೈತರನ್ನುದ್ದೇಶಿಸಿ ಜೆ.ಸಿ.ಮಾಧುಸ್ವಾಮಿ ಮಾತನಾಡಿದರು.
          ಈಗಾಗಲೆ ದೆಹಲಿಯಲ್ಲಿ ಪ್ರಧಾನ ಮಂತ್ರಿಗಳು ಡಿಸಂಬರ್ ೩೦ ರಂದು ಕರ್ನಾಟಕ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಸಭೆ ಕರೆದಿದ್ದು ಅಲ್ಲಿ ಕೊಬ್ಬರಿ ಬೆಳೆಗಾರರ ಸಮಸ್ಯೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಆದರೆ ಸಮಸ್ಯೆ ಏನೆಂದು ಅರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮನ್ನು ಆಹ್ವಾನಿಸಿ ಚರ್ಚಿಸಿಲ್ಲ,ದೆಹಲಿಗೆ ಬನ್ನಿ ಎಂದೂ ಸಹ ಕರೆದಿಲ್ಲಾ. ಆದ್ದರಿಂದ ಕೇಂದ್ರ ಸರಕಾರ ಏನು ಮಾಡುತ್ತೆ ಮತ್ತು ರಾಜ್ಯ ಸರಕಾರ ಏನು ಮಾಡುತ್ತೆ ಎನ್ನುವದನ್ನು ತಿಳಿದುಕೊಂಡು ನಾನು ಜನವರಿ ೪ ರಂದು ಪ್ರಧಾನ ಮಂತ್ರಿಗಳನ್ನ ಭೇಟಿ ಮಾಡಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅವರ ಮನವೊಲಿಸುವುದಾಗಿ ತಿಳಿಸಿದರು.
           ಆಡಳಿತ ನಡೆಸುವ ಈ ಸರಕಾರಕ್ಕೆ ರೈತರ ಬಳಿಗೆ ತೆರಳಿ ಸಮಸ್ಯೆಗಳ ವಸ್ತು ಸ್ಥಿತಿ ಅರಿತು ರೈತರ ಕಷ್ಟಗಳನ್ನು ಪರಿಹರಿಸಲು ವ್ಯವಧಾನ ಇಲ್ಲವಾಗಿದೆ.ರೈತ ಸಂಘದಲ್ಲಿ ಕಳೆದ ಹತ್ತಾರು ವರ್ಷಗಳಿಂದ ವಡನಾಡಿರುವ ನನಗೆ ಒಬ್ಬ ರೈತನ ಮಗನಾಗಿ, ತೆಂಗು ಬೆಳೆಗಾರನಾಗಿ ರೈತರ ಕಷ್ಟ ಏನೆಂದು ನನಗೆ ಅರಿವಿದೆ ಎಂದರು.
              ನಾನು ಮುಖ್ಯಮಂತ್ರಿಯಾದ ಅವಧಿಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವ ರೀತಿ ಕರ್ತವ್ಯ ನಿರ್ವಹಿಸಿದ್ದು ನೀರಾವರಿ ಯೋಜನೆಗೆ, ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ದೆಹಲಿಯಲ್ಲಿ ಕೂತಿದ್ದು ಬೆಂಬಲ ಬೆಲೆ ಘೋಷಣೆ ಮಾಡಿಸಿಕ್ಕೊಂಡೆ ಬಂದಿದ್ದೆ.ಕೊಬ್ಬರಿ ಬೆಳೆಗಾರರ ಸಮಸ್ಯೆ ಬಗ್ಗೆ ನನಗೆ ಮನವಿ ನೀಡಿದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದೊಂದಿಗೆ ಮಾತನಾಡಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನನ್ನ ಕೈಲಾದ ಸಹಾಯ ಮಾಡಿಯೇ ತೀರುವುದಾಗಿ ತಿಳಿಸಿದರು.
            ಈ ವೇಳೆ ಕುಪ್ಪುರು ಗದ್ದಿಗೆ ಮಠದ ಡಾ:ಯತೀಶ್ವರ ಶಿವಾಚಾರ್ಯ ಸ್ವಾಮಿಜಿ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ,ಶಾಸಕ ಸುರೇಶ್ ಗೌಡ,ಮಾಜಿ ಸಂಸದ ಬಸವರಾಜ್, ಮಾಜಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಕೆ.ಎಸ್.ಕಿರಣ್ ಕುಮಾರ್,ಹುಲಿನಾಯ್ಕರ್,ಜಿಪಂ ಸದಸ್ಯ ಮಹಲಿಂಗಪ್ಪ, ಕೆಂಕೆರೆ ನವೀನ್, ರೈತಮುಖಂಡರಾದ ಕೆಂಕೆರೆ ಸತೀಶ್, ತಿಮ್ಮಹಳ್ಳಿ ಲೋಕಣ್ಣ, ಮಲ್ಲಿಕಾರ್ಜುನಯ್ಯ, ಸಜ್ಜಾದ್, ಹೂವಿನ ರಘು, ಸತೀಶ್, ಓಂಕಾರಮೂರ್ತಿ ಮತ್ತಿತರರಿದ್ದರು.
----------------
ಕೇಂದ್ರದಿಂದ ಬೆಂಬಲ ಬೆಲೆ ಕನಿಷ್ಟ ಹದಿನೈದು ಸಾವಿರ ಘೋಷಣೆಯಾಗುವವರೆಗೂ ,ತಿಂಗಳಾದರೂ ಸರಿ,ವರ್ಷವಾದರೂ ಸರಿ ಈ ಧರಣಿ ನಿಲ್ಲುವುದಿಲ್ಲ:ಕೆಂಕೆರೆ ಸತೀಶ್

----------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.