ವಿಷಯಕ್ಕೆ ಹೋಗಿ

ಮೇವು ಬ್ಯಾಂಕ್ ತೆರೆಯಲು ಸರ್ಕಾರದೊಂದಿಗೆ ಚರ್ಚಿಸುವೆ:ಯಡಿಯೂರಪ್ಪ

ಕಾರೇಹಳ್ಳಿ ಗೋಶಾಲೆಗೆ ಭೇಟಿ:ರೈತರ ಸಮಸ್ಯೆಗೆ ಸ್ಪಂದಿಸುವ ಭರವಸೆ

ಹುಳಿಯಾರು:ಹೋಬಳಿಯ ಕಾರಹಳ್ಳಿಯಲ್ಲಿನ ಗೋಶಾಲೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಭಾಜಪ ರಾಜ್ಯಾಧ್ಯಕ್ಷ ಯಡಿಯೂರಪ್ಪ ಗೋಶಾಲೆಯಲ್ಲಿನ ಮೇವಿನ ಸಮಸ್ಯೆಗಳ ಬಗ್ಗೆ ನೇರವಾಗಿ ರೈತರನ್ನೆ ಪ್ರಶ್ನಿಸಿದಲ್ಲದೆ ಹಾಗೂ ನನ್ನಿಂದ ಏನಾಗಬೇಕು ಎಂದು ಕೇಳಿದರಲ್ಲದೆ ಅಲ್ಲಿನ ಸಮಸ್ಯೆಯನ್ನು ಖುದ್ದು ವೀಕ್ಷಿಸಿ ಮೇವು ಬ್ಯಾಂಕ್ ತೆರೆಯಲು ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದರು.
ಹುಳಿಯಾರು ಹೋಬಳಿಯ ಕಾರಹಳ್ಳಿಯಲ್ಲಿನ ಗೋಶಾಲೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಗೋಶಾಲೆಯ ಸಮಸ್ಯೆ ಬಗ್ಗೆ ಆಲಿಸಿದರು.ಮಾಜಿ ಸಚಿವೆ ಶೋಭಾಕರಂದ್ಲಾಜೆ,ಮಾಜಿ ಶಾಸಕರಾದ ಜೆ.ಸಿ,ಮಾಧುಸ್ವಾಮಿ ಹಾಗೂ ಕೆ.ಎಸ್.ಕಿರಣ್ ಕುಮಾರ್,ತೆಂಗುಬೆಳೆಗಾರರ ಸಂಘದ ಅಧ್ಯಕ್ಷ ಮತ್ತು ಹಿರಿಯ ವಕೀಲ ಚನ್ನಬಸಪ್ಪ ಮತ್ತಿತರರಿದ್ದರು.
               ಬರಪೀಡೀತ ಪ್ರದೇಶದ ಪ್ರವಾಸದ ಅಂಗವಾಗಿ ಹುಳಿಯಾರು ಹೋಬಳಿಯ ಕಾರೇಹಳ್ಳಿಯ ಗೋಶಾಲೆಗೆ ಭೇಟಿಯಿತ್ತ ಯಡಿಯೂರಪ್ಪನವರಿಗೆ ರೈತರು ಗೋಶಾಲೆಯ ಸಮಸ್ಯೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಗೋಶಾಲೆತೆರೆದಿರುವುದು ಈಗಾಗಲೇ ತಡವಾಗಿದೆ.ಇಲ್ಲಿ ವ್ಯವಸ್ಥೆಯಿದ್ದರೂ ಸಹ ೧೦, ೧೫ಕಿಮೀ ದೂರದಿಂದ ದನ ಕರುಗಳು ಮತ್ತು ಹಸುಗಳನ್ನು ಈ ಗೋಶಾಲೆಗೆ ಹೊಡೆದುಕೊಂಡು ಪುನ: ವಾಪಸ್ ಹಿಂದುರುಗಿ ಹೋಗಲು ತುಂಬಾ ಕಷ್ಟಕರವಾಗಿದೆ. ಅಲ್ಲದೆ ೮ ರಿಂದ ೧೦ಲೀಟರ್ ಹಾಲು ಕೊಡುವ ಹಸುಗಳು ಇಲ್ಲಿದ್ದು ಈ ಹಸುವಿನ ಹಾಲು ಕರೆದು ದೂರದ ಡೈರಿಗೆ ತೆಗೆದುಕೊಂಡು ಹೋಗಿ ಹಾಕುವುದು ಸಮಸ್ಯೆಯಾಗುತ್ತಿದೆ. ಇದರ ಬದಲು ಪ್ರತಿಹಳ್ಳಿಗಳಲ್ಲೂ ಮೇವು ಬ್ಯಾಂಕ್ ತೆರೆದು ಹಳ್ಳಿಗಳಲ್ಲಿನ ಪಶು ಆಸ್ಪತ್ರೆಯ ವೈದ್ಯರ ಬಳಿಯಿರುವ ರೈತರ ಹಸುಗಳ ಮಾಹಿತಿಪಟ್ಟಿಯಂತೆ ರೈತರುಗಳಿಗೆ ಗುರುತಿನ ಚೀಟಿ ನೀಡಿ ಆ ಪ್ರಕಾರವಾಗಿ ಈಗ ನೀಡುತ್ತಿರುವ ೫ ಕೆಜಿ ಮೇವನ್ನು ರೈತರಿಗೆ ನೀಡಿದರೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.
           ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಸಮಸ್ಯೆ,ಕಷ್ಟನಷ್ಟಗಳು ನನಗೆ ಅರ್ಥವಾಗಿದೆ. ದೂರದ ಹಳ್ಳಿಗಳಿಂದ ಕೆಲಸ ಕಾರ್ಯ ಬಿಟ್ಟು ಮುಂಜಾನೆಯೇ ಹಸು ಹೊಡೆದುಕೊಂಡು ಗೋಶಾಲೆಯಿಂದ ಮೇವು ಪಡೆದು ಹೋಗುವುದು ಕಷ್ಟವಾಗುತ್ತಿರುವುದು ಸತ್ಯ. ರೈತರು ನೀಡಿರುವ ಸಲಹೆಯಂತೆ ಪ್ರತಿ ಹಳ್ಳಿಯಲ್ಲಿಯೂ ಸಹಾ ಮೇವು ಬ್ಯಾಂಕನ್ನು ತೆರೆದು ಈಗ ನೀಡುತ್ತಿರುವ ೫ಕೆಜಿ ಮೇವಿನ ಬದಲು ೧೦ಕೆಜಿ ನೀಡುವಂತೆ ಸರಕಾರದೊಂದಿಗೆ ಚರ್ಚಿಸಿ ರೈತರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
                ಈ ರಾಜ್ಯ ಸರಕಾರದ ಮಂತ್ರಿಗಳಿಗೆ ಹಳ್ಳಿಗಳಿಗೆ ಬಂದು ರೈತರ ಸಮಸ್ಯೆಗಳನ್ನ ಕೇಳುವ ಮನಸಿಲ್ಲ. ರೈತರ ಕಷ್ಟಗಳನ್ನ ಅರಿಯಲು ಈಗಾಗಲೆ ನಮ್ಮ ಪಕ್ಷದಿಂದ ತಂಡಗಳನ್ನು ರಚಿಸಿ ಹಳ್ಳಿಗಳಿಗೆ ತೆರಳಿ ರೈತರ ಸಮಸ್ಯೆ ,ಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದರು.
             ಈ ವೇಳೆ ತೆಂಗುಬೆಳೆಗಾರರ ಸಂಘದ ಅಧ್ಯಕ್ಷ ಮತ್ತು ಹಿರಿಯ ವಕೀಲ ಚನ್ನಬಸಪ್ಪ ಮನವಿ ಸಲ್ಲಿಸಿ ಮಾತನಾಡಿ ಇಂದು ಮಳೆ ಬೆಳೆ ಇಲ್ಲದೆ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಗಾಲದ ತಾಪಕ್ಕೆ ರೈತ ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿಗಳೊಂದಿಗೆ ಚರ್ಚಿಸಿ ಕೊಬ್ಬರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡುವಂತೆ ಒತ್ತಾಯಿಸಿದರು.

         ಮಾಜಿ ಸಚಿವೆ ಶೋಭಾಕರಂದ್ಲಾಜೆ,ಶಾಸಕ ಸುರೇಶ್ ಗೌಡ,ಮಾಜಿ ಸಂಸದ ಬಸವರಾಜ್, ಮಾಜಿ ಶಾಸಕರಾದ ಜೆ.ಸಿ,ಮಾಧುಸ್ವಾಮಿ ಹಾಗೂ ಕೆ.ಎಸ್.ಕಿರಣ್ ಕುಮಾರ್,ಹುಲಿನಾಯ್ಕರ್ ಮತ್ತಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...