ವಿಷಯಕ್ಕೆ ಹೋಗಿ

ಪುರದ ಚನ್ನಬಸವಣ್ಣನ ಕಾರ್ತೀಕದಲ್ಲಿ ರಾಗಿಮುದ್ದೆ ಊಟ ವಿಶೇಷ

ಸಂಜೆಯವರೆಗೂ ನಡೆದ ಮುದ್ದೆಸಾರಿನ ಸಂತರ್ಪಣೆ

ಹುಳಿಯಾರು: ಹೋಬಳಿ ಕೆಂಕೆರೆ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ಕೃತಿಕಾ ಮಹೋತ್ಸವವು ಸ್ವಾಮಿಯ ಮೂಲಸ್ಥಾನ ಪುರದಮಠದಲ್ಲಿ ಸೋಮವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಸುಮಾರು ಹತ್ತುಸಾವಿರದಷ್ಟಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸಾರಿನ ಸವಿ ಸವಿದರು.
ಪುರದ ಮಠದಲ್ಲಿ ಮುದ್ದೆಸಾರಿನ ಸಂತರ್ಪಣೆ ಸವಿಯುತ್ತಿರುವ ಮಹಿಳೆಯರು.
         ಇಂದು ಮುಂಜಾನೆ ಕೆಂಕೆರೆ ಗ್ರಾಮದಲ್ಲಿರುವ ಸ್ವಾಮಿಗೆ ವಿಶೇಷ ಪೂಜೆ ನಡೆಸಿ,ನಂತರ ಗ್ರಾಮದೇವತೆ ಲೋಕಮಾತೆ ಕಾಳಿಕಾಂಭ ದೇವಿ ಹಾಗೂ ಸ್ವಾಮಿಯವರನ್ನು ಧ್ವಜಕುಣಿತದೊಂದಿಗೆ ಊರಿನ ಬೀದಿಯಲ್ಲಿ ಉತ್ಸವದೊಂದಿಗೆ ಸುಮಾರು ೩ ಕೀ.ಮೀ ದೂರದ ಸ್ವಾಮಿಯ ಮೂಲಸ್ಥಾನ ಪುರದಮಠಕ್ಕೆ ಕರೆದ್ಯೊಯಲಾಯಿತು.
        ನಂತರ ಮಧ್ಯಾಹ್ನ 1 ಗಂಟೆಗೆ ಪುರದಮಠದಲ್ಲಿ ಗಂಗಾಸ್ನಾನ ನಡೆಸಿ ಸ್ವಾಮಿಯ ಹಾಗೂ ಬಸವನ ಉತ್ಸವ ನಡೆಸಿ, ತಯಾರಿಸಿದ್ದ ಪ್ರಸಾದವನ್ನು ಸ್ವಾಮಿಯ ಗದ್ದಿಗೆ ಇರುವ ಪುರಾತನ ಗುಹೆಗಳಿಗೆ ತೆಗೆದುಕೊಂಡು ಹೋಗಿ ಎಡೆ ಸಲ್ಲಿಸಲಾಯಿತು. ನಂತರ ಮಹೊತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ರಾಗಿ ಮುದ್ದೆ ವಿಶೇಷ: ಪುರದಮಠದಲ್ಲಿ ನಡೆಯುವ ಪುರಾಣಪ್ರಸಿದ್ದ ಚನ್ನಸವಣ್ಣನ ಕಡೇ ಕಾರ್ತೀಕದಲ್ಲಿ ರಾಗಿ ಮುದ್ದೆ ಸಾರಿನ ಊಟ ವಿಶೇಷವಾಗಿದ್ದು ಇಲ್ಲಿಗೆ ಜಿಲ್ಲೆಯ ನಾನಾ ಭಾಗದಿಂದ ಭಕ್ತರು ಆಗಮಿಸುತ್ತಾರೆ . ಅಲ್ಲದೆ ಪುರದಮಠ ಜಿಲ್ಲೆಯ ಗಡಿಭಾಗವಾಗಿರುವುದರಿಂದ ಹೊಸದುರ್ಗ, ಹಿರಿಯೂರು ತಾಲ್ಲೂಕುಗಳ ಅಪಾರ ಸಂಖ್ಯೆಯ ಭಕ್ತರು ಸಹ ಆಗಮಿಸಿ ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸವಿಯುತ್ತಾರೆ. ಈರೀತಿ ಮುದ್ದೆ ಊಟ ತಯಾರಿಸುವುದು ಕಳೆದ ಅನೇಕ ವರ್ಷದಿಂದ ನಡೆದುಕೊಂಡು ಬಂದಿದ್ದು ಭಕ್ತರು ತಾವು ಬೆಳೆದ ದವಸ ಧಾನ್ಯ, ತರಕಾರಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಮೀಸಲಾಗಿ ಹಾಕಿರುತ್ತಾರೆ. ಅಲ್ಲದೆ ಕೆಲವರು ಅಕ್ಕಿ, ಬೇಳೆಕಾಳು ಸೇರಿದಂತೆ ಸಾರು ತಯಾರಿಸಲು ಬೇಕಾದ ವಸ್ತುಗಳನ್ನು ಕೊಡಿಸಿರುತ್ತಾರೆ. ಇದನ್ನೆಲ್ಲಾ ಉಪಯೋಗಿಸಿ ಗ್ರಾಮದ ಜನರೆಲ್ಲಾ ಸೇರಿ ರಾಗಿಮುದ್ದೆ ಹಾಗೂ ಹುಳ್ಸೊಪ್ಪು ಕಾಳಿನ ಸಾರು ತಯಾರಿಸಿರುತ್ತಾರೆ. ಇದನ್ನೇ ಸ್ವಾಮಿಗೆ ನೈವೇದ್ಯವಾಗಿಟ್ಟು ನಂತರ ಭಕ್ತರಿಗೆ ಬಡಿಸುತ್ತಾರೆ. ಅಲ್ಲದೆ ಇಲ್ಲಿ ತಯಾರಿಸುವ ಸಾಂಬಾರನ್ನು ಭಕ್ತರು ತಮ್ಮ ಮನೆಗಳಿಗೆ ಕೊಂಡೊಯ್ಯುವುದು ವಿಶೇಷ.
ಪುರದ ಮಠದಲ್ಲಿ ಮುದ್ದೆಸಾರಿನ ಸಂತರ್ಪಣೆಗಾಗಿ ಸಿದ್ಧಮಾಡಲಾಗಿರುವ ರಾಗಿ ಮುದ್ದೆ.
ಮಹೋತ್ಸವದ ನೇತೃತ್ವವನ್ನು ಗ್ರಾಮದ ಸಮಸ್ತ ಯುವಕರು ವಹಿಸಿದ್ದರು.ಸಂಜೆಯವರೆಗೂ ಸಂತರ್ಪಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...