ವಿಷಯಕ್ಕೆ ಹೋಗಿ

ಪುರದ ಚನ್ನಬಸವಣ್ಣನ ಕಾರ್ತೀಕದಲ್ಲಿ ರಾಗಿಮುದ್ದೆ ಊಟ ವಿಶೇಷ

ಸಂಜೆಯವರೆಗೂ ನಡೆದ ಮುದ್ದೆಸಾರಿನ ಸಂತರ್ಪಣೆ

ಹುಳಿಯಾರು: ಹೋಬಳಿ ಕೆಂಕೆರೆ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ಕೃತಿಕಾ ಮಹೋತ್ಸವವು ಸ್ವಾಮಿಯ ಮೂಲಸ್ಥಾನ ಪುರದಮಠದಲ್ಲಿ ಸೋಮವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಸುಮಾರು ಹತ್ತುಸಾವಿರದಷ್ಟಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸಾರಿನ ಸವಿ ಸವಿದರು.
ಪುರದ ಮಠದಲ್ಲಿ ಮುದ್ದೆಸಾರಿನ ಸಂತರ್ಪಣೆ ಸವಿಯುತ್ತಿರುವ ಮಹಿಳೆಯರು.
         ಇಂದು ಮುಂಜಾನೆ ಕೆಂಕೆರೆ ಗ್ರಾಮದಲ್ಲಿರುವ ಸ್ವಾಮಿಗೆ ವಿಶೇಷ ಪೂಜೆ ನಡೆಸಿ,ನಂತರ ಗ್ರಾಮದೇವತೆ ಲೋಕಮಾತೆ ಕಾಳಿಕಾಂಭ ದೇವಿ ಹಾಗೂ ಸ್ವಾಮಿಯವರನ್ನು ಧ್ವಜಕುಣಿತದೊಂದಿಗೆ ಊರಿನ ಬೀದಿಯಲ್ಲಿ ಉತ್ಸವದೊಂದಿಗೆ ಸುಮಾರು ೩ ಕೀ.ಮೀ ದೂರದ ಸ್ವಾಮಿಯ ಮೂಲಸ್ಥಾನ ಪುರದಮಠಕ್ಕೆ ಕರೆದ್ಯೊಯಲಾಯಿತು.
        ನಂತರ ಮಧ್ಯಾಹ್ನ 1 ಗಂಟೆಗೆ ಪುರದಮಠದಲ್ಲಿ ಗಂಗಾಸ್ನಾನ ನಡೆಸಿ ಸ್ವಾಮಿಯ ಹಾಗೂ ಬಸವನ ಉತ್ಸವ ನಡೆಸಿ, ತಯಾರಿಸಿದ್ದ ಪ್ರಸಾದವನ್ನು ಸ್ವಾಮಿಯ ಗದ್ದಿಗೆ ಇರುವ ಪುರಾತನ ಗುಹೆಗಳಿಗೆ ತೆಗೆದುಕೊಂಡು ಹೋಗಿ ಎಡೆ ಸಲ್ಲಿಸಲಾಯಿತು. ನಂತರ ಮಹೊತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ರಾಗಿ ಮುದ್ದೆ ವಿಶೇಷ: ಪುರದಮಠದಲ್ಲಿ ನಡೆಯುವ ಪುರಾಣಪ್ರಸಿದ್ದ ಚನ್ನಸವಣ್ಣನ ಕಡೇ ಕಾರ್ತೀಕದಲ್ಲಿ ರಾಗಿ ಮುದ್ದೆ ಸಾರಿನ ಊಟ ವಿಶೇಷವಾಗಿದ್ದು ಇಲ್ಲಿಗೆ ಜಿಲ್ಲೆಯ ನಾನಾ ಭಾಗದಿಂದ ಭಕ್ತರು ಆಗಮಿಸುತ್ತಾರೆ . ಅಲ್ಲದೆ ಪುರದಮಠ ಜಿಲ್ಲೆಯ ಗಡಿಭಾಗವಾಗಿರುವುದರಿಂದ ಹೊಸದುರ್ಗ, ಹಿರಿಯೂರು ತಾಲ್ಲೂಕುಗಳ ಅಪಾರ ಸಂಖ್ಯೆಯ ಭಕ್ತರು ಸಹ ಆಗಮಿಸಿ ಸ್ವಾಮಿಯ ದರ್ಶನ ಪಡೆಯುವುದರ ಜೊತೆಗೆ ರಾಗಿಮುದ್ದೆ ಸವಿಯುತ್ತಾರೆ. ಈರೀತಿ ಮುದ್ದೆ ಊಟ ತಯಾರಿಸುವುದು ಕಳೆದ ಅನೇಕ ವರ್ಷದಿಂದ ನಡೆದುಕೊಂಡು ಬಂದಿದ್ದು ಭಕ್ತರು ತಾವು ಬೆಳೆದ ದವಸ ಧಾನ್ಯ, ತರಕಾರಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಮೀಸಲಾಗಿ ಹಾಕಿರುತ್ತಾರೆ. ಅಲ್ಲದೆ ಕೆಲವರು ಅಕ್ಕಿ, ಬೇಳೆಕಾಳು ಸೇರಿದಂತೆ ಸಾರು ತಯಾರಿಸಲು ಬೇಕಾದ ವಸ್ತುಗಳನ್ನು ಕೊಡಿಸಿರುತ್ತಾರೆ. ಇದನ್ನೆಲ್ಲಾ ಉಪಯೋಗಿಸಿ ಗ್ರಾಮದ ಜನರೆಲ್ಲಾ ಸೇರಿ ರಾಗಿಮುದ್ದೆ ಹಾಗೂ ಹುಳ್ಸೊಪ್ಪು ಕಾಳಿನ ಸಾರು ತಯಾರಿಸಿರುತ್ತಾರೆ. ಇದನ್ನೇ ಸ್ವಾಮಿಗೆ ನೈವೇದ್ಯವಾಗಿಟ್ಟು ನಂತರ ಭಕ್ತರಿಗೆ ಬಡಿಸುತ್ತಾರೆ. ಅಲ್ಲದೆ ಇಲ್ಲಿ ತಯಾರಿಸುವ ಸಾಂಬಾರನ್ನು ಭಕ್ತರು ತಮ್ಮ ಮನೆಗಳಿಗೆ ಕೊಂಡೊಯ್ಯುವುದು ವಿಶೇಷ.
ಪುರದ ಮಠದಲ್ಲಿ ಮುದ್ದೆಸಾರಿನ ಸಂತರ್ಪಣೆಗಾಗಿ ಸಿದ್ಧಮಾಡಲಾಗಿರುವ ರಾಗಿ ಮುದ್ದೆ.
ಮಹೋತ್ಸವದ ನೇತೃತ್ವವನ್ನು ಗ್ರಾಮದ ಸಮಸ್ತ ಯುವಕರು ವಹಿಸಿದ್ದರು.ಸಂಜೆಯವರೆಗೂ ಸಂತರ್ಪಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...