ವಿಷಯಕ್ಕೆ ಹೋಗಿ

ರೈತರ ೪೩ ನೇ ದಿನದ ಧರಣಿಗೆ ಭಾರತೀಯ ಕೃಷಿಕ ಸಮಾಜದ ಸಾಥ್

ಕೊಬ್ಬರಿಗೆ ಕನಿಷ್ಟ ೧೫ಸಾವಿರ ಬೆಲೆ ಘೋಷಿಸುವಂತೆ ಒತ್ತಾಯ

ಹುಳಿಯಾರು: ಕೊಬ್ಬರಿ ಬೆಲೆ ಹೆಚ್ಚಿಸುವಂತೆ ಒತ್ತಾಯಿಸಿ ರೈತಸಂಘದವರು ಕೃಷಿ ಉತ್ಪನ್ನಮಾರುಕಟ್ಟೆಯ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಶುಕ್ರವಾರದಂದು ೪೩ನೇ ದಿನಕ್ಕೆ ಕಾಲಿಟ್ಟಿದ್ದು ಇಂದಿನ ಧರಣಿಯನ್ನು ಬೆಂಬಲಿಸಿ ನವದೆಹಲಿಯ ಭಾರತೀಯ ಕೃಷಿಕ ಸಮಾಜದ ತುಮಕೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಯಿಸಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಹುಳಿಯಾರಿನ ರೈತರ ಧರಣಿ ಬೆಂಬಲಿಸಿ ನವದೆಹಲಿ ಭಾರತೀಯ ಕೃಷಿ ಸಮಾಜದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷೆ ಶಿವರತ್ನ ಮತ್ತು ಪದಾಧಿಕಾರಿಗಳು ಭಾಗವಹಿಸಿ ಕೃಷಿ ಉತ್ಪನ್ನಮಾರುಕಟ್ಟೆಯ ಅಧ್ಯಕ್ಷ ಬರಗೂರು ಬಸವರಾಜುಗೆ ಮನವಿ ಪತ್ರ ಸಲ್ಲಿಸಿದರು.
                  ಕೃಷಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷೆ ಶಿವರತ್ನ ಮಾತನಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಸಾಕಷ್ಟು ವರ್ಷಗಳಾದರು ಸಹಾ ರೈತರಿಗೆ ಸಿಗಬಹುದಾದ ಸೌಲಭ್ಯಗಳು ಸಿಗದೆ ಪ್ರತಿಯೊಂದಕ್ಕೂ ಸಹಾ ಪ್ರತಿಭಟನೆ ನಡೆಸಿ ಪಡೆಯುವಂತ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಟೀಕಿಸಿದರು.
       ರೈತರು ನಮ್ಮ ದೇಶದ ಬೆನ್ನೆಲುಬು ಎನ್ನುವ ಸರಕಾರಗಳು ರೈತರ ಬೆಳೆದ ಬೆಳೆಗೆ ಯೋಗ್ಯವಾದ ಬೆಲೆ ನೀಡದೆ ರೈತರ ಬೆನ್ನು ಮುರಿಯುವಂತೆ ಮಾಡುತ್ತಿವೆ ಎಂದು ಆರೋಪಿಸಿದರು.
      ಸರಕಾರಗಳ ದುರಾಡಳಿತದಿಂದ ಕಂಗೆಟ್ಟಿರುವ ರೈತರು ಕೃಷಿಯನ್ನು ತೊರೆದು ಉದ್ಯೋಗ ಅರಸಿ ನಗರಪ್ರದೇಶಗಳಿಗೆ ವಲಸೆ ಹೋಗುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಕೊಬ್ಬರಿ ಉತ್ಪಾದನ ವೆಚ್ಚವೆ ಕ್ವಿಂಟಾಲ್ ಗೆ ೧೨ ಸಾವಿರ ತಗುಲಲಿದ್ದು ಆದರೆ ಕೊಬ್ಬರಿ ಬೆಳೆದ ರೈತರ ಒಂದು ಕ್ವಿಂಟಾಲ್ ಗೆ ೬ಸಾವಿರ ರೂ ಗೆ ಖರೀದಿಮಾಡುವುದರಿಂದ ಕೊಬ್ಬರಿ ಉತ್ಪಾದನೆಗಾಗಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆಯಂತ ಕೃತ್ಯದ ಬಗ್ಗೆ ಯೋಚಿಸುವಂತಾಗಿದೆ ಎಂದರು.
       ಅಡಿಕೆ ಬೆಲೆ ಕ್ವಿಂಟಾಲ್ ಗೆ ಸುಮಾರು ೨೨ ರಿಂದ ೨೩ ಸಾವಿರ ರೂ ಬೆಲೆ ಇದೆ.ಆದರೆ ಅಡಿಕೆಯ ಉತ್ಪದನಾ ವೆಚ್ಚವೇ ೩೦ಸಾವಿರ ರೂ ದಾಟುತ್ತದೆ. ಆದುದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊಬ್ಬರಿಗೆ ಕನಿಷ್ಟ ೧೫ ಸಾವಿರ ರೂ ಹಾಗೂ ಅಡಕೆ ಬೆಳೆಗೆ ೪೦ಸಾವಿರ ರೂ ಬೆಲೆ ನಿಗದಿಮಾಡಿದರೆ ಮಾತ್ರ ರೈತರು ಉಳಿಯಲು ಸಾಧ್ಯವೆಂದರು.
        ಈಗಲಾದರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಂಡು ಕೊಬ್ಬರಿ ಮತ್ತು ಅಡಕೆಗೆ ಯೋಗ್ಯಬೆಲೆ ನೀಡದಿದ್ದರೆ ರೈತರ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಲಿದ್ದು,ಅಲ್ಲದೆ ಈ ಪ್ರತಿಭಟನೆಗೆ ನಮ್ಮ ಕೃಷಿಕ ಸಮಾಜವೂ ಕೈಜೊಡಿಸಿದ್ದು ನವದೆಹಲಿ ಸಂಘಟನೆಯ ಮಿತ್ರ ಸಂಘಗಳೊಂದಿಗೆ ಸೇರಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
      ಕೃಷಿ ಉತ್ಪನ್ನಮಾರುಕಟ್ಟೆಯ ಅಧ್ಯಕ್ಷ ಬರಗೂರು ಬಸವರಾಜುಗೆ ಮನವಿ ಪತ್ರ ಸಲ್ಲಿಸಿದರು.

           ಇಂದಿನ ಧರಣಿಯಲ್ಲಿ ಕೃಷಿಕ ಸಮಾಜದ ತುಮಕೂರು ಘಟಕದ ಉಪಾಧ್ಯಕ್ಷ ಬಿ.ಕೆ.ರಾಜಣ್ಣ, ಪ್ರಾಧಾನ ಕಾರ್ಯದರ್ಶಿ ಸುರೇಶ್, ಸಂಘಟನಾ ಕಾರ್ಯದರ್ಶಿ ವೀರಣ್ಣ, ತಾಲ್ಲೂಕು ಅಧ್ಯಕ್ಷ ಪುಟ್ಟರಾಜು, ಶಿರಾ ತಾಲ್ಲೂಕು ಅಧ್ಯಕ್ಷ ಗೋವಿಂದಸ್ವಾಮಿ, ಮಧುಗಿರಿ ತಾಲ್ಲೂಕು ಅಧ್ಯಕ್ಷ ದೇವರಾಜು, ಜಿಲ್ಲಾ ಪದಾಧಿಕಾರಿಗಳಾದ ರಾಜಶೇಖರ್, ಕುಮಾರಸ್ವಾಮಿ, ಶಾಂತರಾಜು, ಭಾರತೀಯ ಜನ ಕಲಾ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೌಡರಂಗಪ್ಪ, ರೈತಸಂಘದ ಕೆಂಕೆರೆ ಸತೀಶ್, ಮಲ್ಲಿಕಾರ್ಜುನ್, ಲೋಕಣ್ಣ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...