ರೈತಸಂಘ ಮತ್ತು ಕನ್ನಡಪರ ಸಂಘಟನೆಗಳ ನೇತೃತ್ವ ಹುಳಿಯಾರು: ಹೋಬಳಿ ಕೇದ್ರವಾಗಿರುವ ಹುಳಿಯಾರು ಸಧ್ಯ ತಾಲ್ಲೂಕು ಕೇಂದ್ರವನ್ನು ಮೀರಿ ಬೆಳೆದಿದ್ದು ಜನಸಂಖ್ಯಾ ಆಧಾರದ ಮೇಲೆ ಈಗಲಾದರೂ ಹುಳಿಯಾರನ್ನು ತಾಲ್ಲೂಕು ಕೇಂದ್ರವಾಗಿ ಪರಿವರ್ತಿಸುವಂತೆ ಒತ್ತಾಯಿಸಿ ಜಿಲ್ಲಾ ರೈತಸಂಘ (ಹೊಸಹಳ್ಳಿ ಚಂದ್ರಣ್ಣ ಬಣ) ಹಾಗೂ ಕರವೇ, ಜಯಕರ್ನಾಟಕ, ದಲಿತ ಸಂಘ, ಸೃಜನ ಮಹಿಳಾ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರದಂದು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಇಲ್ಲಿನ ಪರಿವೀಕ್ಷಣಾಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬಿ.ಹೆಚ್.ರಸ್ತೆ, ಬಸ್ ನಿಲ್ದಾಣ ಮಾರ್ಗವಾಗಿ ಡಾ:ರಾಜ್ಕುಮಾರ್ ರಸ್ತೆ, ಪೊಲೀಸ್ ಠಾಣೆ ವೃತ್ತದ ಮೂಲಕ ನಾಡಕಚೇರಿ ತಲುಪಿ ಮನವಿ ಸಲ್ಲಿಸಿ ಸರ್ಕಾರವನ್ನು ಒತ್ತಾಯಿಸಿದರು. ವಕೀಲ ಬಿ.ಕೆ.ಸದಶಿವು ಮಾತನಾಡಿ ಕೆಲವು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಈ ಹಿಂದೆ ತಾಲ್ಲೂಕು ಕೇಂದ್ರವಾಗಿದ್ದ ಹುಳಿಯಾರನ್ನು ಬದಲಿಸಿ ಚಿಕ್ಕನಾಯಕನಹಳ್ಳಿಯನ್ನು ತಾಲ್ಲೂಕು ಕೇಂದ್ರವಾಗಿ ಮಾರ್ಪಡಿಸಿದ್ದಾರೆ. ಇದರಿಂದ ಹೋಬಳಿಯ ಗಡಿ ಪ್ರದೇಶದಲ್ಲಿ ನೆಲಸಿರುವ ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಸುಮಾರು ೫೦ಕಿಮೀ ದೂರದಲ್ಲಿನ ಚಿಕ್ಕನಾಯಕನಹಳ್ಳಿ ಕೇಂದ್ರಕ್ಕೆ ತೆರಳುವಂತಾಗಿದೆ.ಅಲ್ಲದೆ ತಾಲ್ಲೂಕು ಕೇಂದ್ರಕ್ಕೆ ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070