ವಿಷಯಕ್ಕೆ ಹೋಗಿ

ಇಂದು ಬನದ ಹುಣ್ಣಿಮೆ.... ಇದು ಈ ವರ್ಷದ ಪೂರ್ಣಚಂದಿರನ ಮೊದಲ ದಿನ

(ಕನ್ನಡಪ್ರಭದಲ್ಲಿನ ಮಂಡಗದ್ದೆ ಪ್ರಕಾಶಬಾಬು ಅವರ ಲೇಖನ )

ಒಂದು ಸಂವತ್ಸರದಲ್ಲಿ (ವರ್ಷದಲ್ಲಿ)12 ಹುಣ್ಣಿಮೆಗಳು ಬರುತ್ತದೆ. ಒಂದೊಂದು ಹುಣ್ಣಿಮೆಗೂ ಒಂದೊಂದು ವಿಶೇಷತೆಯಿದೆ. ಅದರಲ್ಲಿ ಪುಷ್ಯ ಮಾಸದ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎನ್ನುವರು. ಸಾಮಾನ್ಯವಾಗಿ ಇದು ಆಂಗ್ಲ ವರ್ಷದ ಜನವರಿಯಲ್ಲಿ ಬರುತ್ತದೆ. ಆದ್ದರಿಂದ ವರ್ಷದ ಮೊದಲ ಹುಣ್ಣಿಮೆ ಎಂದೂ ಹೇಳಬಹುದು.
          ಅಗಸ್ತ್ಯ ಋಷಿಗಳು ಬನಶಂಕರಿ ದೇವಿಯನ್ನು ಬನಸಿರಿದೇವಿ ಎಂದು ಕರೆದಿರುವರು. ಕಾರಣ 'ಬನ' ಎಂದರೆ ಅರಣ್ಯ. 'ಸಿರಿ' ಎಂದರೆ ಸಂಪತ್ತು ಎಂದು.
      ಬನದ ಹುಣ್ಣಿಮೆಯ ನವರಾತ್ರಿಯು ಪ್ರತಿವರ್ಷ ಪುಷ್ಯ ಮಾಸದ ಶುಕ್ಲ ಪಕ್ಷದ ಅಷ್ಟಮಿ ದಿನದಿಂದ ಪ್ರಾರಂಭ ಆಗುವುದು. ಆ ದಿನದಂದು ಅಷ್ಟಭುಜಗಳಾದ ಅಷ್ಟ ಸಿದ್ಧಿಯನ್ನು ಕೊಡುವ ಸರ್ವಮಂಗಳಾ ದೇವಿಯನ್ನು ಪೂಜಿಸಬೇಕು.
       ನವಮಿ ದಿನದಂದು ಒಂಬತ್ತು ಕೋಟಿ ಸಖಿಯರಿಂದೊಡಗೂಡಿದ ನವದುರ್ಗೆ ದೇವಿಯನ್ನು ಪೂಜಿಸಬೇಕು.
      ದಶಮಿಯಂದು ದಶ ದಿಕ್ಪಾಲಕ ಕಿರೀಟಗಳಿಂದ ಪೂಜಿತಳಾದ ಪಾದಪದ್ಮಗಳುಳ್ಳ ರಾವಣನನ್ನು ವಧೆ ಮಾಡಲು ವಿಧ್ಯುಕ್ತನಾದ ಶ್ರೀರಾಮನಿಗೆ ಸಂತೋಷ ಕೊಟ್ಟ ದೇವಿಯನ್ನು ಪೂಜಿಸಬೇಕು.
             ಏಕಾದಶಿ ದಿನದಂದು ಏಕಾದಶ ರುದ್ರರಿಂದ ಪೂಜಿತಳಾದ ಪರಮೇಶ್ವರಿಯನ್ನು ಪೂಜಿಸಬೇಕು.       ದ್ವಾದಶಿಯಂದು ಆದಿತ್ಯ ಮಂಡಲ ಸ್ಥಳಾದ ಜಗನ್ಮಾತೆಯನ್ನು ಪೂಜಿಸಬೇಕು. ತ್ರಯೋದಶಿಯಂದು ಲೋಕದ ದುಃಖ ನಿವಾರಣೆ ಮಾಡುವ ಜಗದಂಬೆಯನ್ನು ಪೂಜಿಸಬೇಕು.
      ಚತುರ್ದಶಿ ದಿನದಂದು ಸಿದ್ಧಿ ಕೂಡುವ ಪ್ರಣವ ಸ್ವರೂಪಿಯನ್ನು ಪೂಜಿಸಬೇಕು ಮತ್ತು 108 ತರಕಾರಿಗಳ ಪಲ್ಯವನ್ನು ಮಾಡಿ ಶಾಕಂಬರಿಗೆ ನೈವೇದ್ಯ ಮಾಡಬೇಕು.
       ಕೊನೆಯ ದಿನವೇ ಬನದ ಹುಣ್ಣಿಮೆ ಅಂದು ಪೂರ್ಣಾನಂದ ಪ್ರದಾಯಕಳಾದ ಮತ್ತು ಪೂರ್ಣಾನಂದ ಸ್ವರೂಪಳಾದ ಬನಶಂಕರಿ ದೇವಿಯನ್ನು ಪೂಜಿಸಬೇಕು. ಅಂದು ಬನಶಂಕರಿ ದೇವಿಯ ರಥೋತ್ಸವ ನಡೆಯುವುದು.
      ಅಂದು ಬಾದಾಮಿ ಬನಶಂಕರಿ ದೇವಾಲಯ ಮತ್ತು ಕರ್ನಾಟಕದ ಎಲ್ಲಾ ಬನಶಂಕರಿ ದೇವಾಲಯಗಳಲ್ಲಿ ಜಾತಿ, ಮತ ಭೇಧವಿಲ್ಲದೆ ಎಲ್ಲಾ ಭಕ್ತರು ಸೇರಿ ಬನಶಂಕರಿ ರಥ ಎಳೆಯುವರು. ಆ ಸಮಯದಲ್ಲಿ ಭಕ್ತರು ಸೇರಿ ಬನಶಂಕರಿ ರಥ ಎಳೆಯುವರು. ನಿನಗೆ ಸರಿಸಾಟಿ ಎಂದೂ ಆಗಲಾರೆ, ನಾನು ನಿನ್ನ ಪಾದದಡಿಯಲ್ಲಿಯೇ ಇರತಕ್ಕವನು ಎಂದು ಘೋಷಣೆ ಕೂಗುತ್ತಾರೆ.


         ಬನಶಂಕರಿ ಹಲವಾರು ರೂಪಗಳಲ್ಲಿ ಅವತರಿಸಿ ನಮ್ಮ ದೇಹದ ನಾನಾ ಭಾಗಗಳನ್ನು ರಕ್ಷಿಸುವಳು ಎಂದು ನಂಬಿಕೆಯಿದೆ. ರಕ್ತದಂತಿಕೆ ದೇವಿಯು ನಮ್ಮ ಕಣ್ಣುಗಳನ್ನು ಕಾಪಾಡುವಳು, ನಂದಜೆದೇವಿಯು ಕಿವಿಗಳನ್ನು, ಪಾರ್ವತಿಯು ನಾಸಿಕವನ್ನೂ, ಮಹಾಕಾಳಿಯು ತುಟಿಗಳನ್ನೂ, ಮಹಾಲಕ್ಷ್ಮಿಯು ಮುಖವನ್ನೂ, ಮಹಾಸರಸ್ವತಿಯು ನಾಲಿಗೆಯನ್ನೂ, ಚಾಮುಂಡಿಯು ಹಲ್ಲುಗಳನ್ನೂ ಭದ್ರಕಾಳಿ ಕೈಗಳನ್ನು, ಕೌಮಾರಿದೇವಿಯು ಹೃದಯವನ್ನೂ, ವೈಷ್ಣವಿದೇವಿಯು ಉದರವನ್ನೂ ಸುಂದರಿದೇವಿಯು ತೊಡೆಗಳನ್ನು, ಶಾಂಭವಿ ಪಾದಗಳನ್ನೂ ರಕ್ಷಿಸುವಳು ಎಂಬ ನಂಬಿಕೆಯಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...