ವಿಷಯಕ್ಕೆ ಹೋಗಿ

ಇಂದು ಬನದ ಹುಣ್ಣಿಮೆ.... ಇದು ಈ ವರ್ಷದ ಪೂರ್ಣಚಂದಿರನ ಮೊದಲ ದಿನ

(ಕನ್ನಡಪ್ರಭದಲ್ಲಿನ ಮಂಡಗದ್ದೆ ಪ್ರಕಾಶಬಾಬು ಅವರ ಲೇಖನ )

ಒಂದು ಸಂವತ್ಸರದಲ್ಲಿ (ವರ್ಷದಲ್ಲಿ)12 ಹುಣ್ಣಿಮೆಗಳು ಬರುತ್ತದೆ. ಒಂದೊಂದು ಹುಣ್ಣಿಮೆಗೂ ಒಂದೊಂದು ವಿಶೇಷತೆಯಿದೆ. ಅದರಲ್ಲಿ ಪುಷ್ಯ ಮಾಸದ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎನ್ನುವರು. ಸಾಮಾನ್ಯವಾಗಿ ಇದು ಆಂಗ್ಲ ವರ್ಷದ ಜನವರಿಯಲ್ಲಿ ಬರುತ್ತದೆ. ಆದ್ದರಿಂದ ವರ್ಷದ ಮೊದಲ ಹುಣ್ಣಿಮೆ ಎಂದೂ ಹೇಳಬಹುದು.
          ಅಗಸ್ತ್ಯ ಋಷಿಗಳು ಬನಶಂಕರಿ ದೇವಿಯನ್ನು ಬನಸಿರಿದೇವಿ ಎಂದು ಕರೆದಿರುವರು. ಕಾರಣ 'ಬನ' ಎಂದರೆ ಅರಣ್ಯ. 'ಸಿರಿ' ಎಂದರೆ ಸಂಪತ್ತು ಎಂದು.
      ಬನದ ಹುಣ್ಣಿಮೆಯ ನವರಾತ್ರಿಯು ಪ್ರತಿವರ್ಷ ಪುಷ್ಯ ಮಾಸದ ಶುಕ್ಲ ಪಕ್ಷದ ಅಷ್ಟಮಿ ದಿನದಿಂದ ಪ್ರಾರಂಭ ಆಗುವುದು. ಆ ದಿನದಂದು ಅಷ್ಟಭುಜಗಳಾದ ಅಷ್ಟ ಸಿದ್ಧಿಯನ್ನು ಕೊಡುವ ಸರ್ವಮಂಗಳಾ ದೇವಿಯನ್ನು ಪೂಜಿಸಬೇಕು.
       ನವಮಿ ದಿನದಂದು ಒಂಬತ್ತು ಕೋಟಿ ಸಖಿಯರಿಂದೊಡಗೂಡಿದ ನವದುರ್ಗೆ ದೇವಿಯನ್ನು ಪೂಜಿಸಬೇಕು.
      ದಶಮಿಯಂದು ದಶ ದಿಕ್ಪಾಲಕ ಕಿರೀಟಗಳಿಂದ ಪೂಜಿತಳಾದ ಪಾದಪದ್ಮಗಳುಳ್ಳ ರಾವಣನನ್ನು ವಧೆ ಮಾಡಲು ವಿಧ್ಯುಕ್ತನಾದ ಶ್ರೀರಾಮನಿಗೆ ಸಂತೋಷ ಕೊಟ್ಟ ದೇವಿಯನ್ನು ಪೂಜಿಸಬೇಕು.
             ಏಕಾದಶಿ ದಿನದಂದು ಏಕಾದಶ ರುದ್ರರಿಂದ ಪೂಜಿತಳಾದ ಪರಮೇಶ್ವರಿಯನ್ನು ಪೂಜಿಸಬೇಕು.       ದ್ವಾದಶಿಯಂದು ಆದಿತ್ಯ ಮಂಡಲ ಸ್ಥಳಾದ ಜಗನ್ಮಾತೆಯನ್ನು ಪೂಜಿಸಬೇಕು. ತ್ರಯೋದಶಿಯಂದು ಲೋಕದ ದುಃಖ ನಿವಾರಣೆ ಮಾಡುವ ಜಗದಂಬೆಯನ್ನು ಪೂಜಿಸಬೇಕು.
      ಚತುರ್ದಶಿ ದಿನದಂದು ಸಿದ್ಧಿ ಕೂಡುವ ಪ್ರಣವ ಸ್ವರೂಪಿಯನ್ನು ಪೂಜಿಸಬೇಕು ಮತ್ತು 108 ತರಕಾರಿಗಳ ಪಲ್ಯವನ್ನು ಮಾಡಿ ಶಾಕಂಬರಿಗೆ ನೈವೇದ್ಯ ಮಾಡಬೇಕು.
       ಕೊನೆಯ ದಿನವೇ ಬನದ ಹುಣ್ಣಿಮೆ ಅಂದು ಪೂರ್ಣಾನಂದ ಪ್ರದಾಯಕಳಾದ ಮತ್ತು ಪೂರ್ಣಾನಂದ ಸ್ವರೂಪಳಾದ ಬನಶಂಕರಿ ದೇವಿಯನ್ನು ಪೂಜಿಸಬೇಕು. ಅಂದು ಬನಶಂಕರಿ ದೇವಿಯ ರಥೋತ್ಸವ ನಡೆಯುವುದು.
      ಅಂದು ಬಾದಾಮಿ ಬನಶಂಕರಿ ದೇವಾಲಯ ಮತ್ತು ಕರ್ನಾಟಕದ ಎಲ್ಲಾ ಬನಶಂಕರಿ ದೇವಾಲಯಗಳಲ್ಲಿ ಜಾತಿ, ಮತ ಭೇಧವಿಲ್ಲದೆ ಎಲ್ಲಾ ಭಕ್ತರು ಸೇರಿ ಬನಶಂಕರಿ ರಥ ಎಳೆಯುವರು. ಆ ಸಮಯದಲ್ಲಿ ಭಕ್ತರು ಸೇರಿ ಬನಶಂಕರಿ ರಥ ಎಳೆಯುವರು. ನಿನಗೆ ಸರಿಸಾಟಿ ಎಂದೂ ಆಗಲಾರೆ, ನಾನು ನಿನ್ನ ಪಾದದಡಿಯಲ್ಲಿಯೇ ಇರತಕ್ಕವನು ಎಂದು ಘೋಷಣೆ ಕೂಗುತ್ತಾರೆ.


         ಬನಶಂಕರಿ ಹಲವಾರು ರೂಪಗಳಲ್ಲಿ ಅವತರಿಸಿ ನಮ್ಮ ದೇಹದ ನಾನಾ ಭಾಗಗಳನ್ನು ರಕ್ಷಿಸುವಳು ಎಂದು ನಂಬಿಕೆಯಿದೆ. ರಕ್ತದಂತಿಕೆ ದೇವಿಯು ನಮ್ಮ ಕಣ್ಣುಗಳನ್ನು ಕಾಪಾಡುವಳು, ನಂದಜೆದೇವಿಯು ಕಿವಿಗಳನ್ನು, ಪಾರ್ವತಿಯು ನಾಸಿಕವನ್ನೂ, ಮಹಾಕಾಳಿಯು ತುಟಿಗಳನ್ನೂ, ಮಹಾಲಕ್ಷ್ಮಿಯು ಮುಖವನ್ನೂ, ಮಹಾಸರಸ್ವತಿಯು ನಾಲಿಗೆಯನ್ನೂ, ಚಾಮುಂಡಿಯು ಹಲ್ಲುಗಳನ್ನೂ ಭದ್ರಕಾಳಿ ಕೈಗಳನ್ನು, ಕೌಮಾರಿದೇವಿಯು ಹೃದಯವನ್ನೂ, ವೈಷ್ಣವಿದೇವಿಯು ಉದರವನ್ನೂ ಸುಂದರಿದೇವಿಯು ತೊಡೆಗಳನ್ನು, ಶಾಂಭವಿ ಪಾದಗಳನ್ನೂ ರಕ್ಷಿಸುವಳು ಎಂಬ ನಂಬಿಕೆಯಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...