ವಿಷಯಕ್ಕೆ ಹೋಗಿ

ಗೋವುಗಳು ಸಾಯುವ ಮುನ್ನ ಗೋಶಾಲೆ ತೆರೆಯಿರಿ

ಯಳನಾಡುವಿನ್ನಲ್ಲಿ ಗೋಶಾಲೆಗಾಗಿ ಪ್ರತಿಭಟನೆ

ಹುಳಿಯಾರು: ಗೋವುಗಳು ಸಾಯುವ ಮುನ್ನ ಗೋಶಾಲೆ ತೆರೆದು ದನಕರುಗಳ ಜೀವ ಉಳಿಸಿ ಎಂದು ರೈತಮುಖಂಡ ಮಲ್ಲಿಕಾರ್ಜುನಯ್ಯ ಒತ್ತಾಯಿಸಿದರು.
       ಹುಳಿಯಾರು ಹೋಬಳಿ ಯಳನಾಡು ಗ್ರಾಮದಲ್ಲಿ ಗೋಶಾಲೆ ತೆರೆಯುವಂತೆ ಒತ್ತಾಯಿಸಿ ಬುಧವಾರದಂದು ರೈತರು ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಹುಳಿಯಾರು ಹೋಬಳಿ ಯಳನಾಡು ಗ್ರಾಮದಲ್ಲಿ ಗೋಶಾಲೆಗಾಗಿ ಬುಧವಾರದಂದು ಗ್ರಾಮದಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
         ಈಗಾಗಲೆ ತಾಲ್ಲೂಕಿನ ಪ್ರತಿ ಹೋಬಳಿಗಳಲ್ಲಿ ಗೋಶಾಲೆಗಳನ್ನು ತೆರೆದಿದ್ದು ಉಳಿದೆಡೆ ಅವಶ್ಯಕತೆಯನುಸಾರವಾಗಿ ೨ನೇ ಹಂತದಲ್ಲಿ ತೆರೆಯಲಾಗುವುದಿದ್ದು ಅ ಸಮಯದಲ್ಲಿ ಯಳನಾಡು ಗ್ರಾಮದಲ್ಲಿ ಕೂಡ ಗೋಶಾಲೆ ತೆರೆಯುವುದಾಗಿ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು.
ಮೊದಲನೆ ಹಂತದಲ್ಲಿ ಹುಳಿಯಾರು ಹೋಬಳಿಯ ಕಾರೇಹಳ್ಳಿಯಲ್ಲಿ ಗೋಶಾಲೆ ತೆರೆದು ಸಾಕಷ್ಟು ದಿನಗಳೆ ಕಳೆದಿದ್ದರೂ ಸಹ ಇದುವರೆಗೂ ಯಳನಾಡುನಲ್ಲಿ ಗೋಶಾಲೆ ತೆರೆಯುವ ಯಾವ ಲಕ್ಷಣಗಳು ಕಾಣುತ್ತಿಲ್ಲವೆಂದು ದೂರಿದರು.
          ಬರಗಾಲದ ಹೆಸರಲ್ಲಿ ಸರಕಾರದಿಂದ ಜಿಲ್ಲೆಗೆ ಕೊಟ್ಟಿಗಟ್ಟಲೆ ಹಣ ಬರುತ್ತಿದೆ. ಆದರೆ ಹಳ್ಳಿ ಪ್ರದೇಶದಲ್ಲಿ ಜನರಿಗೆ ಕುಡಿಯಲು ನೀರಿಲ್ಲ, ದನಕರುಗಳಿಗೆ ತಿನ್ನಲು ಮೇವಿಲ್ಲದೆ ಅಲೆದಾಡುವಂತ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.
         ಚುನಾವಣೆ ಸಮಯದಲ್ಲಿ ಮತ ಕೇಳಲು ಬರುವ ಜನಪ್ರತಿನಿಧಿಗಳು ನಿಮ್ಮ ಕಷ್ಟಕ್ಕೆ ನಾವು ಬರುತ್ತೆವೆ ಎಂದು ಭರವಸೆ ನೀಡಿ ಅಽಕಾರಕ್ಕೆ ಬಂದ ನಂತರ ಜನರ ಕಷ್ಟಕ್ಕೆ ಸ್ಪಂದಿಸುವ ಮನೋಭಾವವೇ ಇಲ್ಲದಂತೆ ವರ್ತಿಸುತ್ತಾರೆಂದು ಟೀಕಿಸಿದರು.

        ಈಗಾಗಲೆ ಕೃಷಿ ನಂಬಿ ಜೀವನ ಸಾಗಿಸುತ್ತಿರುವ ರೈತರ ಬದುಕು ತೀರ ಸಂಕಷ್ಟಕ್ಕೆ ಸಿಲುಕಿದೆ. ದನಕರುಗಳಿಗೆ ಮೇವಿಲ್ಲದೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಸರಕಾರಗಳು ಎಚ್ಚೆತುಕೊಂಡು ಗೋಶಾಲೆಯಗಳನ್ನ ತೆರೆದು ರೈತರ ಜಾನುವಾರುಗಳನ್ನು ಉಳಿಸುವಂತೆ ಮನವಿಮಾಡಿದರು.
          ಜಿಪಂ ಸದಸ್ಯ ವೈ.ಸಿ.ಸಿದ್ದರಾಮಯ್ಯ ಮಾತನಾಡಿ ಪ್ರತಿ ಗ್ರಾಮಪಂಚಾಯ್ತಿಗಳಲ್ಲ್ಲೂ ಸಹಾ ಗೋಶಾಲೆಯನ್ನು ತೆರೆಯುವಂತೆ ಈಗಾಗಲೆ ಜಿಲ್ಲಾಪಂಚಾಯತ್ ಸಭೆಯಲ್ಲಿ ರೈತರ ಪರವಾಗಿ ಚರ್ಚಿಸಿದ್ದು ಯಳನಾಡು ಮತ್ತು ಸೀಗೆಬಾಗಿ ಗ್ರಾಮದಲ್ಲಿ ೨ನೇ ಹಂತದಲ್ಲಿ ಗೋಶಾಲೆಯನ್ನ ತೆರೆಯುವುದಾಗಿ ಭರವಸೆ ನೀಡಿದ್ದಾರೆ. ಈಗ ಪುನ: ಈ ಎರಡು ಗ್ರಾಮದಲ್ಲಿ ಗೋಶಾಲೆ ತೆರೆಯುವಂತೆ ಒತ್ತಾಯಿಸುವುದಾಗಿ ತಿಳಿಸಿದರು.ಅಲ್ಲದೆ ಗೋಶಾಲೆಗೆ ಅಗತ್ಯವಾಗಿರುವ ನೀರಿನ ಸೌಲಭ್ಯ ಕಲ್ಪಿಸಲು ಕೂಡಲೆ ಕೊಳವೆ ಬಾವಿ ಕೊರೆಸುವುದಾಗಿ ಭರವಸೆ ನೀಡಿದರು.
ಹುಳಿಯಾರು ಹೋಬಳಿ ಯಳನಾಡು ಗ್ರಾಮದಲ್ಲಿ ಗೋಶಾಲೆಯನ್ನು ತೆರೆಯುವಂತೆ ಒತ್ತಾಯಿಸಿ ಬುಧವಾರದಂದು ರೈತರು ಉಪತಹಸೀಲ್ದಾರ್ ಸತ್ಯನಾರಾಯಣ್‌ಗೆ ಮನವಿ ಸಲ್ಲಿಸಿದರು.
            ನಂತರ ಸ್ಥಳಕ್ಕೆ ಆಗಮಿಸಿದ ಉಪತಹಸೀಲ್ದಾರ್ ಸತ್ಯನಾರಾಯಣ್‌ಗೆ ರೈತರು ಮನವಿ ಸಲ್ಲಿಸಿ ಶೀಘ್ರವಾಗಿ ಗೋಶಾಲೆ ತೆರೆಯುವಂತೆ ಆಗ್ರಹಿಸಿದರು.
           ಪ್ರತಿಭಟನೆಗೂ ಮುನ್ನ ರೈತರು ತಮ್ಮ ದನಕರುಗಳೊಂದಿಗೆ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

          ಈ ವೇಳೆ ಗ್ರಾಪಂ ಸದಸ್ಯರಾದ ಗುರುಪ್ರಸಾದ್, ಕುಮಾರಯ್ಯ, ಗಂಗಾಧರಯ್ಯ, ಕೃಷಿ ಸಹಕಾರ ಸೊಸೈಟಿಯ ಸದಸ್ಯ ಕುಮಾರ್, ರೈತಮುಖಂಡರಾದ ಲೋಕಣ್ಣ, ನಾಗರಾಜು, ಗಂಗಣ್ಣ, ರಂಗಣ್ಣ, ಗ್ರಾಮಸ್ಥರಾದ ದೇವರಾಜು, ಜಯಣ್ಣ, ಮೋಹನ್ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...