ವಿಷಯಕ್ಕೆ ಹೋಗಿ

ಗ್ರಾಪಂ ಸದಸ್ಯೆ ಗಾಯತ್ರಿದೇವಿ ಆರೋಪದಲ್ಲಿ ಹುರುಳಿಲ್ಲ:ಅಧ್ಯಕ್ಷ ದೇವರಾಜು

ಸುಖಾಸುಮ್ಮನೆ ಪ್ರಚಾರದ ಹುಚ್ಚಿನಿಂದ ಆರೋಪ ಮಾಡಿರುವವರ ವಿರುದ್ಧ ಮಾನನಷ್ಟಮೊಕದ್ದಮೆ

ಹುಳಿಯಾರು:ಗ್ರಾಮನೈರ್ಮಲ್ಯ ಯೋಜನೆಯ ಕೂಲಿ ಕಾರ್ಮಿಕರ ಹಣವನ್ನು ನೇರವಾಗಿ ಅವರವರ ಹೆಸರಿಗೆ ಚೆಕ್ ಕೊಡುವ ಪರಿಪಾಠವಿದ್ದು, ಸದಸ್ಯೆ ಗಾಯತ್ರಿದೇವಿ ಕೂಲಿಹಣ ನೀಡಲು ನೀಡಿರುವ ದಾಖಲೆಗಳಲ್ಲಿನ ಪೋಟೊಗಳಲ್ಲಿರುವ ಕಾರ್ಮಿಕರೇ ಬೇರೆ ಹಾಗೂ ಹಣ ನೀಡುವಂತೆ ಕೇಳುತ್ತಿರುವ ವ್ಯಕ್ತಿಗಳೇ ಬೇರೆ .ತಮ್ಮ ಅಧಿಕಾರ ದುರುಪಯೋಗಿಸಿಕೊಂಡು ಅನ್ಯ ವ್ಯಕ್ತಿಯ ಹೆಸರಿಗೆ ಚೆಕ್ ಕೊಡಿ ಎಂದು ಹೇಳಿದರೇ ಕೊಡಲು ಹೇಗೆ ಸಾಧ್ಯ ಎಂದು ತಿರುಮಲಾಪುರ ಗ್ರಾಪಂ ಅಧ್ಯಕ್ಷ ದೇವರಾಜ್ ಪ್ರಶ್ನಿಸಿದರು.
ಗ್ರಾಮ ನೈರ್ಮಲ್ಯ ಯೋಜನೆಯ ಕುರಿತಂತೆ ತಿರುಮಲಾಪುರ ಗ್ರಾಮಪಂಚಾಯ್ತಿಯಲ್ಲಿ ಸೋಮವಾರದಂದು ಸುದ್ದಿಗೋಷ್ಟಿ ನಡೆಸಿದ ಅಧ್ಯಕ್ಷ ದೇವರಾಜು.ಗ್ರಾಪಂ ಉಪಾಧ್ಯಕ್ಷ ಮೋಹನ್ ಕುಮಾರ್,ಮಾಜಿ ಅಧ್ಯಕ್ಷ ಹೊಸಹಳ್ಳಿಪಾಳ್ಯ ಕೃಷ್ಣಮೂರ್ತಿ ಮೊದಲಾದವರಿದ್ದಾರೆ.

           ಗಾಯತ್ರಿದೇವಿ ಗ್ರಾಪಂ ಸದಸ್ಯೆಯಾಗಿದ್ದು ಅಧಿಕಾರ ಚಲಾಯಿಸದೆ ತಮ್ಮ ಪತಿ ಸುರೇಶ್ ಗೆ ಅವಕಾಶ ನೀಡಿರುವುದು ಸರಿಯೇ. ಈತ ಪ್ರತಿಯೊಂದಕ್ಕೂ ಪಂಚಾಯ್ತಿಗೆ ಆಗಮಿಸಿ ಆ ಬಿಲ್ ,ಈ ಬಿಲ್ ಹಣ ಕೊಡಿ ಎಂದು ಸಿಬ್ಬಂದಿಗಳ ಮೇಲೆ ದರ್ಪ ತೋರುತ್ತಾರೆ.ಇವರ ಮೊನ್ನಿನ ದುಂಡಾವರ್ತನೆ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಈತನ ಬಾಯಿಂದ ಬರುವ ಅವ್ಯಾಚ ಪದಗಳಿಗೆ ಹೆದರಿ ಈಗಾಗಲೇ ಮೂರು ಮಂದಿ ಕಾರ್ಯದರ್ಶಿಗಳು ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದಾರೆ.ಹೀಗಾದರೆ ಗ್ರಾಮದ ಅಭಿವೃದ್ಧಿ ಕಾರ್ಯವನ್ನು ನಡೆಸುವುದು ಹೇಗೆ ಸಾಧ ಎಂದರು.
           ಕಳೆದ ಮಂಗಳವಾರವಷ್ಟೆ ಗ್ರಾಮ ನೈರ್ಮಲ್ಯ ಯೋಜನೆಯಲ್ಲಿ ಹೊಸಹಳ್ಳಿ ಗ್ರಾಮದಲ್ಲಿ ಈಗಾಗಲೇ ಮಾಡಿಮುಗಿಸಿರುವ ಕಾಮಗಾರಿಗೆ ಹಣಕೊಡಲು ಗ್ರಾಪಂ ಅಧ್ಯಕ್ಷರು ಸತಾಯಿಸುತ್ತಿದ್ದಾರೆಂದು ಆರೋಪಿಸಿ ಕೂಲಿಕಾರ್ಮಿಕರ ಹಣದ ಚೆಕ್ ಕೊಡದ ಹೊರತು ತನಕ ಈ ಗ್ರಾಪಂ ಕಚೇರಿಯಿಂದ ತೆರಳುವುದಿಲ್ಲವೆಂದು ಹೊಸಹಳ್ಳಿ ಗ್ರಾಮದ ಗ್ರಾಪಂ ಸದಸ್ಯೆ ಹೆಚ್.ಆರ್.ಗಾಯಿತ್ರಿದೇವಿ ಸುರೇಶ್ ತಿರುಮಲಾಪುರ ಗ್ರಾಪಂ ಕಚೇರಿಯಲ್ಲಿ ಪಟ್ಟು ಹಿಡಿದಿದ್ದ ಘಟನೆಗೆ ಸಂಬಂಧಿಸಿದಂತೆ ತಿರುಮಲಾಪುರ ಗ್ರಾಮಪಂಚಾಯ್ತಿಯಲ್ಲಿ ಸೋಮವಾರದಂದು ಸುದ್ದಿಗೋಷ್ಟಿ ನಡೆಸಿದ ಅಧ್ಯಕ್ಷ ದೇವರಾಜು ಮೇಲ್ಕಂಡಂತೆ ನುಡಿದರು.
          ಗಾಯತ್ರಿದೇವಿ ನೀಡಿರುವ ದಾಖಲೆಗಳಿಗೆ ಸಂಬಂಧಿಸಿದಂತೆ ಈಕೆ ಕಾಮಗಾರಿ ಮುಗಿಸಿ ಮರುದಿನವೇ ಹಣ ಪಾವತಿಸಿ ಎಂದು ಕಾರ್ಯದರ್ಶಿ ಸಮಕ್ಷಮ ದಾಖಲೆಗಳನ್ನು ಕೊಟ್ಟು ಹೋಗಿದ್ದರು.ಆ ವೇಳೆ ಅಯ್ಯಪ್ಪ ದರ್ಶನಕ್ಕೆ ಯಾತ್ರೆ ಹೊರಟ್ಟಿದ್ದರಿಂದ ಪರಿಶೀಲಿಸಿ ಸಹಿ ಹಾಕಲು ಸಾಧ್ಯವಾಗಿಲ್ಲ.ಅಲ್ಲದೆ ಇದೇ ಯೋಜನೆಯ ಮತ್ತಷ್ಟು ಕೂಲಿ ಕಾರ್ಮಿಕರ ಹಣ ಕೂಡ ಪಾವತಿಸಿಲ್ಲ.ಹಾಗಿದ್ದೂ ಕೂಡ ಈಕೆ ಮಾತ್ರ ಆರೋಪ ಮಾಡಿ ಪಂಚಾಯ್ತಿಯಲ್ಲಿ ಧರಣಿ ಕೂತು ರಂಪಾಟ ಮಾಡಿದ್ದರ ಹಿಂದೆ ದುರುದ್ದೇಶವಿದೆ ಎಂದರು.
           ಈಕೆಯ ಪತಿ ಚುನಾವಣೆಯಲ್ಲಿ ಸೋತಿದ್ದರ ಹಿನ್ನಲೆಯಲ್ಲಿ ಪಂಚಾಯ್ತಿಯಲ್ಲಿನ ದಾಖಲೆಗಳನ್ನು ಆರ್ಟಿಐ ಮೂಲಕ ಪಡೆದು ,ಎಲ್ಲರಿಗೂ ತಪ್ಪುಮಾಹಿತಿ ನೀಡುತ್ತಾ ಹಣದುರುಪಯೋಗವಾಗಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಾ ನಮ್ಮ ಗೌರವಕ್ಕೆ ಧಕ್ಕೆ ತರುತ್ತಿದ್ದು ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.

      ಸುದ್ದಿ ಗೋಷ್ಟಿಯಲ್ಲಿ ಗ್ರಾಪಂ ಉಪಾಧ್ಯಕ್ಷ ಮೋಹನ್ ಕುಮಾರ್,ಮಾಜಿ ಅಧ್ಯಕ್ಷ ಹೊಸಹಳ್ಳಿಪಾಳ್ಯ ಕೃಷ್ಣಮೂರ್ತಿ,ಸದಸ್ಯರುಗಳಾದ ಶಂಕ್ರಪ್ಪ,ಯಮುನಾ, ಪ್ರಕಾಶ್, ದಯಾನಂದ ಮೂರ್ತಿ,ಬಸವರಾಜ್, ನೀಲಾವತಿ,ಕನಕ,ರತ್ನಮ್ಮ ,ತಾಲ್ಲೂಕ್ ದಲಿತ ಸಹಾಯವಾಣಿಯ ಅಧ್ಯಕ್ಷ ಹನುಮಂತಪ್ಪ,ಸುಂದರೇಶ್, ಗ್ರಾಪಂ ಕಾರ್ಯದರ್ಶಿ ಜ್ಞಾನಮೂರ್ತಿ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...