ವಿಷಯಕ್ಕೆ ಹೋಗಿ

ಲಂಚಮುಕ್ತ ಕಂದಿಕೆರೆ ಪಂಚಾಯ್ತಿ ಅಭಿಯಾನ

ಸಮಸ್ಯೆಗಳ ಸರಮಾಲೆ ಹೊದ್ದಿರುವ ಕಛೇರಿ :ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು 30ದಿನಗಳ ಗಡುವು

ಹುಳಿಯಾರು: ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರಿಂದ "ಲಂಚ ಮುಕ್ತ ಚಿಕ್ಕನಾಯಕನಹಳ್ಳಿ" ಅಭಿಯಾನದ ಮುಂದುವರೆದ ಭಾಗವಾಗಿ ಲಂಚಮುಕ್ತ ಕಂದಿಕೆರೆ ಪಂಚಾಯ್ತಿ ಅಭಿಯಾನವನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಂದೀಕೆರೆ ಹೋಬಳಿ ಗ್ರಾಮಪಂಚಾಯ್ತಿಯ ಮುಂದೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರುಗಳು.
    ಹತ್ತು ಗಂಟೆ ಸುಮಾರಿಗೆ ವೇದಿಕೆಯ ಸದಸ್ಯರುಗಳು ಹಾಗೂ ಸಾರ್ವಜನಿಕರೊಂದಿಗೆ ಅಭಿಯಾನ ಆರಂಭಿಸಿ ಕಂದಿಕೆರೆಯ ವಿವಿಧ ಸರ್ಕಾರಿ ಕಛೇರಿಗಳಿಗೆ ಭೇಟಿ ನೀಡಿ ಅಲ್ಲಿನ ನ್ಯೂನತೆಗಳನ್ನು ಪಟ್ಟಿಮಾಡಲಾಯಿತು.
      ಸಾರ್ವಜನಿಕರ ದೂರನ್ನಾಧರಿಸಿ ಮೊದಲಿಗೆ ಅಲ್ಲಿನ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಯೋಜನೆಗಳ ಅನುಷ್ಟಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಮತ್ತು ಗ್ರಾಮ ಸಭೆಗಳ ಬಗ್ಗೆ ವಿವರಣೆ ಪಡೆಯಲಾಯಿತು.ದಾಖಲೆಗಳ ಪರಿಶೀಲನೆ ಮಾಡಲಾಗಿ ನಮ್ಮ ಗ್ರಾಮ,ನಮ್ಮ ಯೋಜನೆಯ ಜಾರಿ ಮಾಡಿಲ್ಲದಿರುವುದು,ಪಂಚಾಯ್ತಿ ಸದಸ್ಯರ ಆಸ್ತಿ ವಿವರ ಲಭ್ಯವಿಲ್ಲದಿರುವುದು,ಪಂಚಾಯ್ತಿಯಲ್ಲಿ ದೊರೆಯಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಫಲಕ ಪ್ರದರ್ಶಿಸದಿರುವುದು,ದೂರುಪೆಟ್ಟಿಗೆ ಇಲ್ಲದಿರುವುದು,ಸಕಾಲ ಅನುಷ್ಟಾನ ,ಮಾಹಿತಿ ಹಕ್ಕು ಅನುಷ್ಟಾನದಲ್ಲಿ ಹಿನ್ನಡೆ ಹೀಗೆ ಅನೇಕ ಕೊರತೆಗಳನ್ನು ಪಟ್ಟಿ ಮಾಡಲಾಯಿತು.
         ನೀರಿನ ಟ್ಯಾಂಕ್ ಗಳನ್ನು ಸ್ಪಚ್ಛಗೊಳಿಸಿ ವರ್ಷಗಳೇ ಕಳೆದಿದೆ ,ಮನೆಗಳ ಗ್ರಾಂಟ್ ರೆಕಾರ್ಡ ಮಾಡಿಸಲು ಬಿಲ್ ಕಲೆಕ್ಟರ್ 2ಸಾವಿರ ಲಂಚ ಪಡೆಯುತ್ತಿದ್ದಾನೆ ಎಂದು ಸಾರ್ವಜನಿಕರು ದೂರಿದ ಮೇರೆಗೆ ವಿಚಾರಣೆ ನಡೆಸಿ,ಇಲ್ಲಿ ಕಂಡುಬಂದ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು ಪಿಡಿಓಗೆ 30ದಿನಗಳ ಗಡುವು ನೀಡಲಾಯಿತು.

         ನಂತರ ನಾಡ ಕಛೇರಿಗೆ ತೆರಳಿ ಅಲ್ಲಿನ ವ್ಯವಸ್ಥೆಯನ್ನು ಪರಿವೀಕ್ಷಣೆ ಮಾಡಲಾಯಿತು. ಕಛೇರಿಯಲ್ಲಿ ಸೇವೆಗಳ ಮಾಹಿತಿಯನ್ನು ವಿವರವಾಗಿ ಪ್ರಕಟಿಸಿರುವುದರ ಜೊತೆಗೆ ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ,ಮಾಹಿತಿ ಹಕ್ಕಿಗೆ ಚ್ಯುತಿ ಬರದಂತೆ ಪಾಲಿಸುತ್ತಿರುವುದು ಗಮನ ಸೆಳೆಯಿತು.ಇಲ್ಲಿನ ಉಪತಹಸೀಲ್ದಾರ್ ಸುಮತಿ ಅವರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದ ಸಾರ್ವಜನಿಕರು ವಿಧವಾವೇತನ ,ವೃದ್ಧಾಪ್ಯವೇತನ ಪಿಂಚಣಿಯಂತಹ ಯೋಜನೆಗಳಿಗೆ ಅರ್ಜಿ ಸಲ್ಲಿಸಿದರೆ ಖುದ್ದು ಮನೆ ಬಾಗಿಲಿಗೇ ಹೋಗಿ ಕಾನೂನಿನ ಇತಿ ಮಿತಿಯಲ್ಲಿ ತುರ್ತಾಗಿ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದು ಮದ್ಯವರ್ತಿಗಳಿಂದ ಈ ಕಛೇರಿ ಮುಕ್ತವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
         ನಂತರ ರೈತಸಂಪರ್ಕ ಕೇಂದ್ರಕ್ಕೆ ತೆರಳಿ ಪರಿಶೀಲಿಸಲಾಯಿತು. ರೈತರ ಸಂಪರ್ಕವೇ ಇಲ್ಲದೇ ರೀತಿಯಿರುವ ಈ ಇಲಾಖೆಯಲ್ಲಿ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡುಬಂದ ಹಿನ್ನಲೆಯಲ್ಲಿ ತಾಲ್ಲೂಕ್ ಅಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು.

       ಈ ಸಂದರ್ಭದಲ್ಲಿ "ಲಂಚಮುಕ್ತ ಕರ್ನಾಟಕ ನಿರ್ಮಾಣವೇದಿಕೆ"ಯ ರಾಜ್ಯಕಾರ್ಯದರ್ಶಿ ವೆಂಕಟೇಶ್ ಪ್ರಸಾದ್, ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನಯ್ಯ ಭಟ್ಟರಹಳ್ಳಿ, ತಾಲ್ಲೋಕು ಕಾರ್ಯದರ್ಶಿ ರಾಮನಹಳ್ಳಿ ಕುಮಾರಯ್ಯ,ಹುಳಿಯಾರು ಹೋಬಳಿ ಸಂಚಾಲಕ ಸಜ್ಜಾದ್ ,ಜನಸಂಗ್ರಾಮ ಪರಿಷತ್ ರಾಜ್ಯ ಉಪಾದ್ಯಕ್ಷ ಯತಿರಾಜು,ರೈತಸಂಘದ ನಾಗರಾಜು , ಸುರೇಶ್ ಸೇರಿದಂತೆ ಮೇಲನಹಳ್ಳಿ,ಕಂದಿಕೆರೆ, ರಾಮಪ್ಪನಹಟ್ಟಿ, ತಿಮ್ಮನಹಳ್ಳಿ,ರಾಮನಹಳ್ಳಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...