ವಿಷಯಕ್ಕೆ ಹೋಗಿ

ಲಂಚಮುಕ್ತ ಕಂದಿಕೆರೆ ಪಂಚಾಯ್ತಿ ಅಭಿಯಾನ

ಸಮಸ್ಯೆಗಳ ಸರಮಾಲೆ ಹೊದ್ದಿರುವ ಕಛೇರಿ :ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು 30ದಿನಗಳ ಗಡುವು

ಹುಳಿಯಾರು: ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರಿಂದ "ಲಂಚ ಮುಕ್ತ ಚಿಕ್ಕನಾಯಕನಹಳ್ಳಿ" ಅಭಿಯಾನದ ಮುಂದುವರೆದ ಭಾಗವಾಗಿ ಲಂಚಮುಕ್ತ ಕಂದಿಕೆರೆ ಪಂಚಾಯ್ತಿ ಅಭಿಯಾನವನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಂದೀಕೆರೆ ಹೋಬಳಿ ಗ್ರಾಮಪಂಚಾಯ್ತಿಯ ಮುಂದೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರುಗಳು.
    ಹತ್ತು ಗಂಟೆ ಸುಮಾರಿಗೆ ವೇದಿಕೆಯ ಸದಸ್ಯರುಗಳು ಹಾಗೂ ಸಾರ್ವಜನಿಕರೊಂದಿಗೆ ಅಭಿಯಾನ ಆರಂಭಿಸಿ ಕಂದಿಕೆರೆಯ ವಿವಿಧ ಸರ್ಕಾರಿ ಕಛೇರಿಗಳಿಗೆ ಭೇಟಿ ನೀಡಿ ಅಲ್ಲಿನ ನ್ಯೂನತೆಗಳನ್ನು ಪಟ್ಟಿಮಾಡಲಾಯಿತು.
      ಸಾರ್ವಜನಿಕರ ದೂರನ್ನಾಧರಿಸಿ ಮೊದಲಿಗೆ ಅಲ್ಲಿನ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಯೋಜನೆಗಳ ಅನುಷ್ಟಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಮತ್ತು ಗ್ರಾಮ ಸಭೆಗಳ ಬಗ್ಗೆ ವಿವರಣೆ ಪಡೆಯಲಾಯಿತು.ದಾಖಲೆಗಳ ಪರಿಶೀಲನೆ ಮಾಡಲಾಗಿ ನಮ್ಮ ಗ್ರಾಮ,ನಮ್ಮ ಯೋಜನೆಯ ಜಾರಿ ಮಾಡಿಲ್ಲದಿರುವುದು,ಪಂಚಾಯ್ತಿ ಸದಸ್ಯರ ಆಸ್ತಿ ವಿವರ ಲಭ್ಯವಿಲ್ಲದಿರುವುದು,ಪಂಚಾಯ್ತಿಯಲ್ಲಿ ದೊರೆಯಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಫಲಕ ಪ್ರದರ್ಶಿಸದಿರುವುದು,ದೂರುಪೆಟ್ಟಿಗೆ ಇಲ್ಲದಿರುವುದು,ಸಕಾಲ ಅನುಷ್ಟಾನ ,ಮಾಹಿತಿ ಹಕ್ಕು ಅನುಷ್ಟಾನದಲ್ಲಿ ಹಿನ್ನಡೆ ಹೀಗೆ ಅನೇಕ ಕೊರತೆಗಳನ್ನು ಪಟ್ಟಿ ಮಾಡಲಾಯಿತು.
         ನೀರಿನ ಟ್ಯಾಂಕ್ ಗಳನ್ನು ಸ್ಪಚ್ಛಗೊಳಿಸಿ ವರ್ಷಗಳೇ ಕಳೆದಿದೆ ,ಮನೆಗಳ ಗ್ರಾಂಟ್ ರೆಕಾರ್ಡ ಮಾಡಿಸಲು ಬಿಲ್ ಕಲೆಕ್ಟರ್ 2ಸಾವಿರ ಲಂಚ ಪಡೆಯುತ್ತಿದ್ದಾನೆ ಎಂದು ಸಾರ್ವಜನಿಕರು ದೂರಿದ ಮೇರೆಗೆ ವಿಚಾರಣೆ ನಡೆಸಿ,ಇಲ್ಲಿ ಕಂಡುಬಂದ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು ಪಿಡಿಓಗೆ 30ದಿನಗಳ ಗಡುವು ನೀಡಲಾಯಿತು.

         ನಂತರ ನಾಡ ಕಛೇರಿಗೆ ತೆರಳಿ ಅಲ್ಲಿನ ವ್ಯವಸ್ಥೆಯನ್ನು ಪರಿವೀಕ್ಷಣೆ ಮಾಡಲಾಯಿತು. ಕಛೇರಿಯಲ್ಲಿ ಸೇವೆಗಳ ಮಾಹಿತಿಯನ್ನು ವಿವರವಾಗಿ ಪ್ರಕಟಿಸಿರುವುದರ ಜೊತೆಗೆ ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ,ಮಾಹಿತಿ ಹಕ್ಕಿಗೆ ಚ್ಯುತಿ ಬರದಂತೆ ಪಾಲಿಸುತ್ತಿರುವುದು ಗಮನ ಸೆಳೆಯಿತು.ಇಲ್ಲಿನ ಉಪತಹಸೀಲ್ದಾರ್ ಸುಮತಿ ಅವರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದ ಸಾರ್ವಜನಿಕರು ವಿಧವಾವೇತನ ,ವೃದ್ಧಾಪ್ಯವೇತನ ಪಿಂಚಣಿಯಂತಹ ಯೋಜನೆಗಳಿಗೆ ಅರ್ಜಿ ಸಲ್ಲಿಸಿದರೆ ಖುದ್ದು ಮನೆ ಬಾಗಿಲಿಗೇ ಹೋಗಿ ಕಾನೂನಿನ ಇತಿ ಮಿತಿಯಲ್ಲಿ ತುರ್ತಾಗಿ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದು ಮದ್ಯವರ್ತಿಗಳಿಂದ ಈ ಕಛೇರಿ ಮುಕ್ತವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
         ನಂತರ ರೈತಸಂಪರ್ಕ ಕೇಂದ್ರಕ್ಕೆ ತೆರಳಿ ಪರಿಶೀಲಿಸಲಾಯಿತು. ರೈತರ ಸಂಪರ್ಕವೇ ಇಲ್ಲದೇ ರೀತಿಯಿರುವ ಈ ಇಲಾಖೆಯಲ್ಲಿ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡುಬಂದ ಹಿನ್ನಲೆಯಲ್ಲಿ ತಾಲ್ಲೂಕ್ ಅಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು.

       ಈ ಸಂದರ್ಭದಲ್ಲಿ "ಲಂಚಮುಕ್ತ ಕರ್ನಾಟಕ ನಿರ್ಮಾಣವೇದಿಕೆ"ಯ ರಾಜ್ಯಕಾರ್ಯದರ್ಶಿ ವೆಂಕಟೇಶ್ ಪ್ರಸಾದ್, ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನಯ್ಯ ಭಟ್ಟರಹಳ್ಳಿ, ತಾಲ್ಲೋಕು ಕಾರ್ಯದರ್ಶಿ ರಾಮನಹಳ್ಳಿ ಕುಮಾರಯ್ಯ,ಹುಳಿಯಾರು ಹೋಬಳಿ ಸಂಚಾಲಕ ಸಜ್ಜಾದ್ ,ಜನಸಂಗ್ರಾಮ ಪರಿಷತ್ ರಾಜ್ಯ ಉಪಾದ್ಯಕ್ಷ ಯತಿರಾಜು,ರೈತಸಂಘದ ನಾಗರಾಜು , ಸುರೇಶ್ ಸೇರಿದಂತೆ ಮೇಲನಹಳ್ಳಿ,ಕಂದಿಕೆರೆ, ರಾಮಪ್ಪನಹಟ್ಟಿ, ತಿಮ್ಮನಹಳ್ಳಿ,ರಾಮನಹಳ್ಳಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...