ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಸಂಕ್ರಾಂತಿ : ವಿವಿಧೆಡೆ ನಾಗರು ಆಚರಣೆ

ಹುಳಿಯಾರು : ಪಟ್ಟಣ ಸೇರಿದಂತೆ ಅಕ್ಕಪಕ್ಕದ ಹಳ್ಳಿಗಳಲ್ಲಿ ಸುಗ್ಗಿ ಹಬ್ಬ ಸಂಕ್ರಾಂತಿಯ ಆಚರಣೆ ಗರಿಗೆದರಿದ್ದು , ಬಗೆಬಗೆಯ ಅಡುಗೆಯ ಜೊತೆಗೆ ಎಳ್ಳು-ಸಕ್ಕರೆಅಚ್ಚು, ಎಳ್ಳು-ಬೆಲ್ಲದ ಕಂಪು ಹರಡಿದ್ದು ಕಂಡುಬಂತು.
            ಹಬ್ಬದ ಅಂಗವಾಗಿ ಕೆಲವರು ಮನೆಯಲ್ಲೇ ದೇವರಿಗೆ ಪೂಜೆ ಸಲ್ಲಿಸಿ, ಎಳ್ಳುಬೆಲ್ಲವನ್ನು ನೈವೇದ್ಯ ಮಾಡಿದರೆ, ಮತ್ತೆ ಕೆಲವರು ದೇವಸ್ಥಾನಗಳಿಗೆ ತೆರಳಿ ಎಳ್ಳುಬೆಲ್ಲವನ್ನು ಹಂಚಿ ಪೂಜೆ ಸಲ್ಲಿಸಿದರು.
          ಹಬ್ಬದ ಅಂಗವಾಗಿ ಪಟ್ಟಣದ ಮಲ್ಲೇಶ್ವರ ಸ್ವಾಮಿ ದೇವಾಲಯ,ಆಂಜನೇಯಸ್ವಾಮಿ ದೇವಾಲಯ, ಗ್ರಾಮದೇವತೆ ಹುಳಿಯಾರಮ್ಮ,ದುರ್ಗಮ್ಮ ,ಕೆಂಚಮ್ಮನ ದೇವಾಲಯ ಹಾಗೂ ಬನಶಂಕರಿ ಸನ್ನಿಧಿಗೆ ಹೆಚ್ಚು ಸಂಖ್ಯೆಯಲ್ಲಿ ಜನರು ಆಗಮಿಸಿ ಪೂಜೆ ಮಾಡಿಸುತ್ತಿದ್ದು ಕಂಡುಬಂತು.ದುರ್ಗಾಪರಮೇಶ್ವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ನಡೆಯಿತು.
ಹುಳಿಯಾರಿನಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಎಳ್ಳುಬೀರಲು ರೆಡಿಯಾಗಿರುವ ಹೆಣ್ಣುಮಕ್ಕಳು.
       ಸಂಕ್ರಾಂತಿ ಹಬ್ಬದಲ್ಲಿ ಎಳ್ಳು-ಸಕ್ಕರೆಅಚ್ಚು,ಕಬ್ಬು ಹಂಚುವ ವಾಡಿಕೆಯಿದ್ದು ಹೆಣ್ಣುಮಕ್ಕಳು ಬಗೆಬಗೆಯ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಎಳ್ಳು-ಬೆಲ್ಲ, ಕಬ್ಬನ್ನು ಅಕ್ಕಪಕ್ಕದ ಮನೆಯವರಿಗೆ, ಸ್ನೇಹಿತರಿಗೆ ಹಂಚುವ ಮೂಲಕ ಹಬ್ಬದ ಶುಭಾಷಯ ತಿಳಿಸುತ್ತಿದ್ದು ಸಾಮಾನ್ಯವಾಗಿತ್ತು.
ಎಪಿಎಂಸಿಯಲ್ಲೂ ಧರಣಿಯಲ್ಲಿ ತೊಡಗಿರುವ ರೈತರು ಕೂಡ ಇಂದು ಸಂಕ್ರಾಂತಿ ಆಚರಿಸಿ ಹುರುಳಿತೊಕ್ಕು ,ಪೊಂಗಲ್ ಅಡುಗೆ ಮಾಡಿ ಸೇವಿಸಿದರು.

ಬಣವೆಗೆ ಮುಳ್ಳು: ರೈತರ ಸುಗ್ಗಿಕಾಲದ ಆಚರಣೆ ವಿಶಿಷ್ಟವಾಗಿದ್ದು ಸಂಕ್ರಾಂತಿಯ ಮರುದಿನದಿಂದ ಕಣಗೆಲಸ ಮಾಡುವುದು ಹಿಂದಿನಿಂದ ಆಚರಣೆಯಲ್ಲಿದೆ. ಹಬ್ಬದ ಮುನ್ನಾ ದಿನ ರೈತರು ಕಣದ ಬದಿಯಲ್ಲಿನ ಹುಲ್ಲಿನ ಬಣವೆಗಳಿಗೆ ಎರದೆಮುಳ್ಳುಹಾಕಿಬಂದು ಹಬ್ಬದ ದಿನ ಪೂಜೆ ಸಲ್ಲಿಸಿಸುತ್ತಾರೆ. ಸಂಕ್ರಾಂತಿಯ ನಂತರ ಸೂರ್ಯ ತನ್ನ ಚಲನೆಯ ದಿಕ್ಕನ್ನು ಬದಲಾಯಿಸುವುದರಿಂದ ಬಿಸಿಲು ಹೆಚ್ಚಾಗಲಿದ್ದು, ಹಬ್ಬದ ನಂತರ ಕಣಗೆಲಸ ಮಾಡಲು ಸೂಕ್ತ ಸಮಯ ಎಂಬುದು ಈ ಆಚರಣೆ ಹಿಂದಿನ ನಂಬಿಕೆಯಾಗಿದೆ.

ನಾಗಪ್ಪನ ಪೂಜೆ : ಗ್ರಾಮೀಣ ಭಾಗದಲ್ಲಿ ಇದೇ ದಿನ ನಾಗರು ಆಚರಿಸುವ ಸಂಪ್ರದಾಯವಿದ್ದು, ಕಿಚುಡಿ ನಾಗರು, ಚಿಗಣಿ ತಮಟದ ನಾಗರು,ಮುದ್ದೆ ನಾಗರು ಆಚರಣೆಯಲ್ಲಿದೆ. ಹೋಬಳಿಯ ಲಿಂಗಪ್ಪನಪಾಳ್ಯ,ಕೋಡಿಪಾಳ್ಯ,ಕೆಂಕೆರೆ ಸುತ್ತಮುತ್ತಲಲ್ಲಿ ಸಂಕ್ರಾತಿ ಹಬ್ಬದ ದಿನ ಕೂಳೆ ನಾಗರು ಆಚರಣೆ ನಡೆದುಕೊಂಡು ಬಂದಿದ್ದು ಮನೆಮಂದಿಯಲ್ಲಾ ಒಟ್ಟಾಗಿ ಸೇರಿ ನಾಗರಕಲ್ಲಿಗೆ ಹಾಲನ್ನೆರೆಯುವ ಮೂಲಕ ಹಬ್ಬದ ಆಚರಣೆ ಮಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.