ವಿಷಯಕ್ಕೆ ಹೋಗಿ

ಕಾವ್ಯ ಅಂದರೆ ಪ್ರಾಸಬದ್ಧವಾಗಿ ನಾಲ್ಕು ಸಾಲಿನಲ್ಲಿ ಗೀಚುವ ಕವಿತೆಯಲ್ಲ ,ಇದೊಂದು ಜೀವನ ಕ್ರಮ

"ಗಾಯಗೊಂಡಿದೆ ಗರಿಕೆ ಗಾನ" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರೋ.ನಟರಾಜ್ ಬೂದಾಳ್ 
ಹುಳಿಯಾರು:ಕಾವ್ಯ ಅನ್ನುವುದು ನಿತ್ಯ ಬದುಕಿನ ಭಾಗವಾಗಿದ್ದು ಕಾವ್ಯ ಕಲೆ ಅಂತಿಮವಾಗಿ ರಸದೂಟವನ್ನು ಉಣಬಡಿಸುತ್ತದೆ.ಆರೋಗ್ಯಕ್ಕೆ ಒಳ್ಳೆಯ ಉಟ ಹೇಗೆ ಅಗತ್ಯವೋ ಉತ್ತಮ ಕಾವ್ಯ ರಚನೆಗೆ ನಮ್ಮ ಮನಸ್ಸು,ಚಿಂತನೆ ಆರೋಗ್ಯಕರವಾಗಿರಬೇಕು,ಸಾಹಿತ್ಯದ ಅನುಸಂಧಾನವಿರಬೇಕು,ಒಳ್ಳೆಯ ಅಡುಗೆ ಮಾಡುವುದು ಕೂಡ ಕಾವ್ಯವೇ ಎಂದು ಪ್ರೋ.ನಟರಾಜ್ ಬೂದಾಳ್ ತಿಳಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಬುಧವಾರದಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ರಚಿತ "ಗಾಯಗೊಂಡಿದೆ ಗರಿಕೆ ಗಾನ" ಪುಸ್ತಕ ಬಿಡುಗಡೆಗೊಳಿಸಲಾಯಿತು.
          ಹುಳಿಯಾರು-ಕೆಂಕೆರೆ ಬಿಎಂಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿಕನ್ನಡ ಸಾಹಿತ್ಯ ಪರಿಷತ್ತು ಹುಳಿಯಾರು ಘಟಕದಿಂದ ಬುಧವಾರದಂದು ಆಯೋಜಿಸಲಾಗಿದ್ದ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ರಚಿತ "ಗಾಯಗೊಂಡಿದೆ ಗರಿಕೆ ಗಾನ" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಾವ್ಯ ಪ್ರಸ್ತಾವನೆ ಮಾಡಿ ಮಾತನಾಡಿದ ಅವರು ಕಾವ್ಯ ಅಂದರೆ ಪ್ರಾಸಬದ್ಧವಾಗಿ ನಾಲ್ಕು ಸಾಲಿನಲ್ಲಿ ಗೀಚುವ ಕವಿತೆಯಲ್ಲ ,ಇದೊಂದು ಜೀವನ ಕ್ರಮವಾಗಿದೆ ಎಂದರು.
ಈ ಕ್ಷಣದಲ್ಲೂ ಕೂಡ ಕವಿ ದಾರ್ಶನಿಕರು ನಮ್ಮಿಂದ ಹೊರಗಿದ್ದಾರೆ.ಜ್ಯೋತಿಷಿಗಳ ಮಾತು ನೂರಕ್ಕೆನೂರು ಕೇಳುವ ರಾಜಕಾರಣಿಗಳು ಕವಿ,ದಾರ್ಶನಿಕರ ಮಾತು ಕೇಳದಿರುವುದು ದುರಾದೃಷ್ಟಕರ ಎಂದರು
             ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಡಾ.ಕೆ.ವೈ.ನಾರಾಯಣಸ್ವಾಮಿ ನಾವಿಂದು ಓದುತ್ತಿರುವ ಪಾಠಕ್ಕೂ ನಾವು ನಡೆಸುತ್ತಿರುವ ಜೀವನಕ್ಕೂ ನಯಾಪೈಸದ ಸಂಬಂಧವಿಲ್ಲ.ಅರಿವಿಲ್ಲದೆ ಅನ್ಯಾಯಗಳನ್ನು ನಾವೇ ಶೋಷಿಸುತ್ತಾ ಮತ್ತೊಂದೆಡೆ ಅದರ ಬಗ್ಗೆ ವಿಶ್ಲೇಷಣೆಮಾಡುತ್ತಾ ಬದುಕುತ್ತಿದ್ದೇವೆ.ಉತ್ತಮ ಸಮಾಜ ನಿರ್ಮಾಣಗೊಳ್ಳಬೇಕಾದರೆ ಪ್ರತಿಯೊಬ್ಬ ವ್ಯಕ್ತಿಯು ಸಹಾ ತನ್ನಲ್ಲಿರುವ ತಪ್ಪುಗಳನ್ನು ತಿದ್ದಿಕೊಂಡು ನಡೆದಾಗ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಇಂದು ಬಿಡುಗಡೆಗೊಂಡಿರುವ ಈ ಪುಸ್ತಕದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಜನರು ನಡೆದು ಕೊಳ್ಳುತ್ತಿರುವುದನ್ನು ಅವಲೋಕಿಸಲಾಗಿದೆ ಎಂದರು.
       ಪುಸ್ತಕ ಕುರಿತು ಮಾತನಾಡಿದ ಡಾ.ಡಾಮಾನಿಕ್ ಸಾಹಿತ್ಯ ಎನ್ನುವುದು ಕನ್ನಡದ ಪೀಳಿಗೆಗೆ,ಬದುಕಿಗೆ ಬದಲಾವಣೆ ಏನನ್ನು ಕೊಟಿಲ್ಲ. ೧೬ನೇ ಶತಮಾನದಲ್ಲಿ ಜನರಲ್ಲಿನ ಮೌಡ್ಯತೆಯನ್ನ ತೊಡೆದು ಹಾಕಲು ಅನೇಕ ಮಹನೀಯರು ಸಾಕಷ್ಟು ವಚನಗಳ,ತತ್ವಪದಗಳ ಮೂಲಕ ಜನರಲ್ಲಿ ಆತ್ಮಸ್ಥೈರ್ಯ ನೀಡುತ್ತಿದ್ದರು. ಪ್ರತಿಯೊಬ್ಬರಲ್ಲೂ ದುಡಿದು ತಿನ್ನುವ ಚಲವಿತ್ತು. ಆದರಿಂದು ಆಧುನಿಕತೆ ಯುಗದಲ್ಲೂ ಜನರಲ್ಲಿ ಆತ್ಮಸ್ಥೈರ್ಯವಿಲ್ಲವಾಗಿ ದುಡಿದು ತಿನ್ನುವವರ ಸಂಖ್ಯೆ ಕಡಿಮೆಯಾಗಿ ನಮ್ಮನ್ನ ನಾವುಗಳೇ ಕತ್ತಲೆಡೆಗೆ ದೂಡಿಕೊಳ್ಳುವಂತಾಗಿದೆ ಎಂದರು.
      ಡಾ.ಆರ್.ಶಿವಪ್ಪ ಮಾತನಾಡಿ ಲೋಕದ ಬಗ್ಗೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಪ್ರಶ್ನಿಸುವುದನ್ನು ರೂಢಿಸಿಕೊಳ್ಲಬೇಕೆಂದರು.ಇದರಿಂದ ಸಹಜ ಕುತೂಹಲ ತಣಿದು ಅರಿವು ಮೂಡಲು ಸಹಕಾರಿಯಾಗುತ್ತದೆ.ನಮ್ಮಲ್ಲಿನ ಅರಿವು,ಜ್ಞಾನವನ್ನು ಮತ್ತೊಬ್ಬರೊಂದಿಗೆ ಹಂಚಿಕೊಳ್ಳುವುದನ್ನು ಕಲಿತಲ್ಲಿ ಬದುಕು ಸುಂದರವಾಗುತ್ತದೆ ಎಂದರು.
        ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕ್ ಕ.ಸಾ.ಪ ಅಧ್ಯಕ್ಷೆ ಪ್ರೋ.ಇಂದಿರಮ್ಮ ಮಕ್ಕಳು ಮಾರುಕಟ್ಟೆಯ ಗಿರಾಕಿಗಳಾಗುತ್ತಿದ್ದು ಕಳೆದು ಹೋದ ಬಾಲ್ಯ ಮತ್ತೆಸಿಗುವುದಿಲ್ಲ ಎಂದು ಅರಿಯುತ್ತಿಲ್ಲ.ತಂತ್ರಜ್ಞಾನದ ಗುಲಾಮರಾಗಿರುವ ಯುವಶಕ್ತಿ ತಮ್ಮ ಮನಸ್ಸನ್ನು ಇತರೆಡೆಗೆ ಹೊರಳುಸುತ್ತಿಲ್ಲ ಎಂದರು. ಕವಿತೆ ಕವನಗಳನ್ನು ರಚಿಸುವುದು ಮುಖ್ಯವಲ್ಲ.ರಚಿಸಿದ ಕವಿತೆ ಕವನಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಸುವುದು ಅತಿ ಮುಖ್ಯ ಈ ನಿಟ್ಟಿನಲ್ಲಿ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ರಚಿಸಿರುವ ಪ್ರತಿಯೊಂದು ಕವನ ಸಾಹಿತ್ಯವನ್ನು ಜನರಿಗೆ ತಲುಪಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಿದ್ದಾರೆಂದು.

   ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ಸಾಹಿತ್ಯ ರಚನೆಯ ಬಗ್ಗೆ ತಿಳಿಸಿದರು.ಪ್ರೋ.ಬಿ.ಅಶೋಕ್ ಸ್ವಾಗತಿಸಿದರು.ಡಾ.ಬಾಳಪ್ಪ ಪ್ರಾಸ್ತಾವಿಕ ನುಡಿಗಳಾಡಿದರು.ಸಮಾರಂಭದಲ್ಲಿ ಪ್ರೋ.ಬಾಳೆಕಾಯಿ ಶಿವನಂಜಪ್ಪ,ಸಾಹಿತಿ ಎಂ.ವಿ.ನಾಗರಾಜ್ ರಾವ್,ಬೆಳಗುಲಿ ಶಶಿಭೂಷಣ್, ತಿಪಟೂರು ಕಸಾಪ ಮಾಜಿ ಅಧ್ಯಕ್ಷ ಉಜ್ಜಜ್ಜಿರಾಜಣ್ಣ,ಹುಳಿಯಾರು ಕಸಾಪ ಅಧ್ಯಕ್ಷ ಯಲ್ಲಪ್ಪ, ಹೆಚ್.ಕೆ.ರಾಮಯ್ಯ, ವೈದ್ಯ ಡಾ:ಸಿದ್ದರಾಮಯ್ಯ, ರೈತ ಸಂಘದ ಸತೀಶ್, ನಾಗಣ್ಣ,ರಾಜಪ್ಪ, ಸಜ್ಜಾದ್, ಹೊಸಹಳ್ಳಿ ಚಂದ್ರಣ್ಣ, ಪಂಡಿತ್ ಬಸವರಾಜು ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.