ವಿಷಯಕ್ಕೆ ಹೋಗಿ

ಹುಳಿಯಾರು ತಾಲ್ಲೂಕು ಕೇಂದ್ರ ಮಾಡಲು ಒತ್ತಾಯಿಸಿ ಪ್ರತಿಭಟನೆ

ರೈತಸಂಘ ಮತ್ತು ಕನ್ನಡಪರ ಸಂಘಟನೆಗಳ ನೇತೃತ್ವ

ಹುಳಿಯಾರು: ಹೋಬಳಿ ಕೇದ್ರವಾಗಿರುವ ಹುಳಿಯಾರು ಸಧ್ಯ ತಾಲ್ಲೂಕು ಕೇಂದ್ರವನ್ನು ಮೀರಿ ಬೆಳೆದಿದ್ದು ಜನಸಂಖ್ಯಾ ಆಧಾರದ ಮೇಲೆ ಈಗಲಾದರೂ ಹುಳಿಯಾರನ್ನು ತಾಲ್ಲೂಕು ಕೇಂದ್ರವಾಗಿ ಪರಿವರ್ತಿಸುವಂತೆ ಒತ್ತಾಯಿಸಿ ಜಿಲ್ಲಾ ರೈತಸಂಘ (ಹೊಸಹಳ್ಳಿ ಚಂದ್ರಣ್ಣ ಬಣ) ಹಾಗೂ ಕರವೇ, ಜಯಕರ್ನಾಟಕ, ದಲಿತ ಸಂಘ, ಸೃಜನ ಮಹಿಳಾ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರದಂದು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

            ಇಲ್ಲಿನ ಪರಿವೀಕ್ಷಣಾಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬಿ.ಹೆಚ್.ರಸ್ತೆ, ಬಸ್ ನಿಲ್ದಾಣ ಮಾರ್ಗವಾಗಿ ಡಾ:ರಾಜ್‌ಕುಮಾರ್ ರಸ್ತೆ, ಪೊಲೀಸ್ ಠಾಣೆ ವೃತ್ತದ ಮೂಲಕ ನಾಡಕಚೇರಿ ತಲುಪಿ ಮನವಿ ಸಲ್ಲಿಸಿ ಸರ್ಕಾರವನ್ನು ಒತ್ತಾಯಿಸಿದರು.
             ವಕೀಲ ಬಿ.ಕೆ.ಸದಶಿವು ಮಾತನಾಡಿ ಕೆಲವು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಈ ಹಿಂದೆ ತಾಲ್ಲೂಕು ಕೇಂದ್ರವಾಗಿದ್ದ ಹುಳಿಯಾರನ್ನು ಬದಲಿಸಿ ಚಿಕ್ಕನಾಯಕನಹಳ್ಳಿಯನ್ನು ತಾಲ್ಲೂಕು ಕೇಂದ್ರವಾಗಿ ಮಾರ್ಪಡಿಸಿದ್ದಾರೆ. ಇದರಿಂದ ಹೋಬಳಿಯ ಗಡಿ ಪ್ರದೇಶದಲ್ಲಿ ನೆಲಸಿರುವ ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಸುಮಾರು ೫೦ಕಿಮೀ ದೂರದಲ್ಲಿನ ಚಿಕ್ಕನಾಯಕನಹಳ್ಳಿ ಕೇಂದ್ರಕ್ಕೆ ತೆರಳುವಂತಾಗಿದೆ.ಅಲ್ಲದೆ ತಾಲ್ಲೂಕು ಕೇಂದ್ರಕ್ಕೆ ತೆರಳಲು ಗಡಿಭಾಗದ ಜನರಿಗೆ ಸಮರ್ಪಕವಾದ ಸಾರಿಗೆ ವ್ಯವಸ್ಥೆಯು ಸಹಾ ಇಲ್ಲದೆ ಪರದಾಡುವಂತಾಗಿದೆ ಎಂದರು.
               ಇಲ್ಲಿನ ಜನಸಂಖ್ಯೆಯು ಸಹಾ ಸಾಕಷ್ಟು ಹೆಚ್ಚಾಗಿದೆ. ಶೈಕ್ಷಣಿಕವಾಗಿ, ಭೌಗೋಳಿಕವಾಗಿ, ಹುಳಿಯಾರು ತಾಲ್ಲೂಕು ಕೇಂದ್ರವಾಗುವ ಅರ್ಹತೆ ಇದ್ದರೂ ಸಹಾ ಕೆಲವು ರಾಜಕೀಯ ನಾಯಕರು ಇದನ್ನ ತಪ್ಪಿಸಿ ಸಿರಾ ತಾಲ್ಲೂಕಿನ ಕಳ್ಳಂಬೆಳ್ಳವನ್ನು ತಾಲ್ಲೂಕು ಕೇಂದ್ರವಾಗಿ ಮಾಡಲು ಹೊರಟಿದ್ದಾರೆಂದು ಆರೋಪಿಸಿದರು.
              ಕರವೇ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ಈ ಹೋಬಳಿ ಕೇಂದ್ರವು ಈಗಾಗಲೆ ತಾಲ್ಲೂಕು ಮಟ್ಟಕ್ಕಿಂತ ದೊಡ್ಡದಾಗಿ ಬೆಳೆದು ನಿಂತಿದೆ. ಜಿಲ್ಲಾ ಉಸ್ತುವರಿ ಸಚಿವ ಟಿ.ಬಿ.ಜಯಚಂದ್ರರವರ ರಾಜಕೀಯ ಜೀವನದ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಈ ಭಾಗದ ಜನರನ್ನು ನೆನಪಿಸಿಕೊಂಡು ಹುಳಿಯಾರನ್ನು ತಾಲ್ಲೂಕು ಕೇಂದ್ರವನ್ನಾಗಿಸಲು ಸಹಕರಿಸಲಿ ಎಂದು ಒತ್ತಾಯಿಸಿದರು.
           ರೈತಸಂಘದ ಜಿಲ್ಲಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಮಾತನಾಡಿ ಈ ಹೋಬಳಿ ಕೇಂದ್ರವನ್ನು ತಾಲ್ಲೂಕಾಗಿ ಮುಂದಿನ ಬಜೇಟ್‌ನಲ್ಲಿ ಸರಕಾರ ಘೋಷಿಸುವಂತೆ ಒತ್ತಾಯಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
             ಈ ಬಗ್ಗೆ ಉಪತಹಸೀಲ್ದಾರ್ ಸತ್ಯನಾರಾಯಣ್‌ಗೆ ಮನವಿ ಸಲ್ಲಿಸಲಾಯಿತು.

            ಪ್ರತಿಭಟನೆಯಲ್ಲಿ ತಾಪಂ ಸದಸ್ಯ ಹೆಚ್.ಎನ್.ಕುಮಾರ್, ಗ್ರಾಪಂ ಸದಸ್ಯ ಸೈಯದ್ ಜಬೀಉಲ್ಲಾ, ನಿವೃತ್ತ ಶಿಕ್ಷಕ ರಾಮಯ್ಯ, ಸೋಮಜ್ಜನಪಾಳ್ಯದ ಬೀರಪ್ಪ, ಕರವೇ ಲಕ್ಮೀ ಕಾಂತ್, ಪ್ರಕಾಶ್, ಕುಮಾರ್, ಸಂತೋಷ್, ಸೃಜನವೇದಿಕೆಯ ಜಯಲಕ್ಷ್ಮಮ್ಮ, ಪಂಕಜಮ್ಮ, ಗ್ರಾಪಂ ಮಾಜಿ ಉಪಾಧ್ಯಕ್ಷೆ ವೆಂಕಟಮ್ಮ, ಜಯಕರ್ನಾಟಕ ಸಂಘದ ಮೋಹನ್‌ಕುಮಾರ್ ರೈ, ಚಂದ್ರು, ಯತೀಶ್, ಮಾಧುರಾವ್, ಟಿಪ್ಪು ಸುಲ್ತಾನ್ ಸಂಘದ ಅಪ್ಸರ್,ತಾಲ್ಲೂಕ್ ಅಲೆಮಾರಿ ಬುಡಕಟ್ಟು ಸಂಘದ ಅಧ್ಯಕ್ಷ ರಾಜಪ್ಪ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...