ವಿಷಯಕ್ಕೆ ಹೋಗಿ

"ಕಾರು ಓಡಿಸಿ-ಹಣ ಗಳಿಸಿ"ಎಂಬ ಸ್ಕೀಮ್ ನ ನಯವಂಚಕ ಪೋಲಿಸರ ವಶದಲ್ಲಿ

ಹುಳಿಯಾರು ಭಾಗದಲ್ಲಿ ಕೋಟಿ ರೂ ಗೂ ಅಧಿಕ ವಂಚನೆ

ಹುಳಿಯಾರು:ಕಾರು,ಲಾರಿ ಮುಂತಾದ ವಾಹನಗಳ ಮೇಲೆ ಕಂಪನಿಗಳ ಪ್ರಚಾರದ ಸ್ಟಿಕ್ಕರ್ ಅಂಟಿಸಿದರೆ ಪ್ರತಿ ತಿಂಗಳು ಇಂತಿಷ್ಟು ಹಣ ಪಾವತಿ ಮಾಡುತ್ತೇವೆ ಹಾಗೂ ಇದಕ್ಕಾಗಿ ಜಿಪಿಎಸ್ ಅಳವಡಿಸಲು ವಾಹನ ಮಾಲಿಕರು ತಲಾ ೨೫ ಸಾವಿರ ಠೇವಣಿ ನೀಡಬೇಕು ಎಂದು ಮರುಳು ಮಾಡಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ರಾಜಸ್ಥಾನ ಮೂಲದ ವೀರೇಂದ್ರ ಶರ್ಮನನ್ನು ಹುಳಿಯಾರು ಹೋಬಳಿ ಲಕ್ಕೇನಹಳ್ಳಿ ಗ್ರಾಮಸ್ಥರು ಪೋಲಿಸರ ವಶಕ್ಕೆ ನೀಡಿದ್ದಾರೆ.
ಆರೋಪಿ ವೀರೇಂದ್ರ ಶರ್ಮ
       ವಂಚಕ ವೀರೇಂದ್ರ ಶರ್ಮ ತುಮಕೂರಿನ ಶಿರಾ ರಸ್ತೆಯಲ್ಲಿ ನನಸು ಕ್ರಿಯೇಷನ್ ಎಂಬ ಹೈಟೆಕ್ ಕಛೇರಿ ತೆರೆದು ಕಾರು ಹೊಂದಿರುವ ಗ್ರಾಹಕರಿಗೆ "ಕಾರು ಓಡಿಸಿ-ಹಣ ಗಳಿಸಿ"ಎಂಬ ಸ್ಕೀಮ್ ಆರಂಭಿಸಿದ್ದ.ಕಾರುಗಳ ಮಾಲಿಕರುಗಳಿಗೆ ತಮ್ಮ ಕಾರುಗಳ ಮೇಲೆ ವಿವಿಧ ಕಂಪನಿಗಳ ಪ್ರಚಾರದ ಸ್ಟಿಕ್ಕರ್ ಅಂಟಿಸಿಕೊಂಡರೆ ಪ್ರತಿತಿಂಗಳು ನಿಗದಿಯಾದ ಹಣ ಪಾವತಿಸುವ ಆಮೀಷ ಒಡ್ಡಿ ಇದಕ್ಕಾಗಿ ಇಂತಿಷ್ಟು ಹಣ ಮುಂಗಡವಾಗಿ ಕಾರು ಮಾಲೀಕರು ನೀಡಬೇಕೆಂದು ತಿಳಿಸಿ ಪ್ರತಿ ಹಳ್ಳಿಹಳ್ಳಿಗಳಲ್ಲೂ ವ್ಯಾಪಕ ಪ್ರಚಾರ ನಡೆಸಿದ್ದ.

       ಕಾರಿನ ಬೆಲೆ ೪.೫ ಲಕ್ಷವಿದ್ದರೆ ೨೫ ಸಾವಿರ ಠೇವಣಿ ವಾಹನ ಮಾಲೀಕರು ನೀಡಿದಲ್ಲಿ ಪ್ರತಿ ತಿಂಗಳು ಆರು ಸಾವಿರ ರೂಪಾಯಿ ಹಣ ಪಾವತಿ ಮಾಡುವುದಾಗಿಯೂ ಹಾಗೂ ಅದಕ್ಕೂ ಮೇಲ್ಪಟ್ಟ ವಾಹನದವರು ಐವತ್ತುಸಾವಿರ ಠೇವಣಿ ಇಟ್ಟಲ್ಲಿ ಪ್ರತಿತಿಂಗಳು ೮.೫ ಸಾವಿರ ರೂಪಾಯಿ ನೀಡುವುದಾಗಿ ತಿಳಿಸಿದ್ದ.


        ವಂಚಕ ವೀರೆಂದ್ರ ಶರ್ಮ ಹುಳಿಯಾರು ಸಮೀಪದ ತಿಮ್ಮನಹಳ್ಳಿ ಹಾಗೂ ಲಕ್ಕೇನಹಳ್ಳಿಯಲ್ಲಿ ಎರಡು ವಿವಾಹವಾಗಿದ್ದು ತನ್ನ ಪತ್ನಿಯರ ಮೂಲಕವೂ ಈ ಭಾಗದಲ್ಲಿ ಪ್ರಚಾರ ಮಾಡಿಸಿದ್ದ.ಈತನ ಮಾತಿಗೆ ಮರುಳಾದ ವಾಹನಗಳ ಮಾಲೀಕರು ೨೫ ಹಾಗೂ ೫೦ ಸಾವಿರದಂತೆ ಈತನ ಬಳಿ ಠೇವಣಿ ಇಟ್ಟು ತಮ್ಮ ಕಾರುಗಳ ಮೇಲೆ ಸ್ಟಿಕ್ಕರ್ ಅಂಟಿಸಿಕೊಂಡಿದ್ದರು.ಶುರುವಿನಲ್ಲಿ ಎರಡುಮೂರು ತಿಂಗಳು ಆಯ್ದ ಮಾಲೀಕರಿಗೆ ಹಣ ಪಾವತಿಸಿದ ಈತ ನಂತರ ಸಬೂಬುಗಳನ್ನು ಹೇಳಿ ದಿನದೂಡಿದ.

     ಕಳೆದ ಎರಡುಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ.ಈತನ ಸುಳಿವರಿಯದೆ ಕಂಗೆಟ್ಟ ವಾಹನಗಳ ಮಾಲೀಕರು ಬೇಸತ್ತು ಸ್ಟಿಕ್ಕರ್ ಕಿತ್ತಸೆದು ಸುಮ್ಮನಾಗಿದ್ದರು.


     ಆದರೆ ಅಚಾನಕ್ಕಾಗಿ ಬುಧವಾರ ಮುಂಜಾನೆ ಹುಳಿಯಾರು ಹೋಬಳಿಯ ಲಕ್ಕೇನಹಳ್ಳಿ ಗ್ರಾಮದಲ್ಲಿದ್ದ ಪತ್ನಿಯ ಮನೆಗೆ ಆಗಮಿಸಿದ್ದ ಈತನ ಸುಳಿವರಿತ ಗ್ರಾಮಸ್ಥರು ಈತನನ್ನು ಥಳಿಸಿ ಹುಳಿಯಾರು ಪೋಲಿಸರಿಗೆ ಒಪ್ಪಿಸಿದ್ದಾರೆ.ಸುದ್ದಿ ಹಬ್ಬಿ ಮೋಸ ಹೋದ ಕಾರಿನ ಮಾಲೀಕರುಗಳು ಹುಳಿಯಾರು ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ.

       ಆದರೆ ಈತನ ಕಛೇರಿ ತುಮಕೂರಿನಲ್ಲಿರುವುದರಿಂದ ಹುಳಿಯಾರು ಪೋಲಿಸರು ಪ್ರಕರಣವನ್ನು ತುಮಕೂರಿಗೆ ವರ್ಗಾಯಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...