ವಿಷಯಕ್ಕೆ ಹೋಗಿ

"ಕಾರು ಓಡಿಸಿ-ಹಣ ಗಳಿಸಿ"ಎಂಬ ಸ್ಕೀಮ್ ನ ನಯವಂಚಕ ಪೋಲಿಸರ ವಶದಲ್ಲಿ

ಹುಳಿಯಾರು ಭಾಗದಲ್ಲಿ ಕೋಟಿ ರೂ ಗೂ ಅಧಿಕ ವಂಚನೆ

ಹುಳಿಯಾರು:ಕಾರು,ಲಾರಿ ಮುಂತಾದ ವಾಹನಗಳ ಮೇಲೆ ಕಂಪನಿಗಳ ಪ್ರಚಾರದ ಸ್ಟಿಕ್ಕರ್ ಅಂಟಿಸಿದರೆ ಪ್ರತಿ ತಿಂಗಳು ಇಂತಿಷ್ಟು ಹಣ ಪಾವತಿ ಮಾಡುತ್ತೇವೆ ಹಾಗೂ ಇದಕ್ಕಾಗಿ ಜಿಪಿಎಸ್ ಅಳವಡಿಸಲು ವಾಹನ ಮಾಲಿಕರು ತಲಾ ೨೫ ಸಾವಿರ ಠೇವಣಿ ನೀಡಬೇಕು ಎಂದು ಮರುಳು ಮಾಡಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ರಾಜಸ್ಥಾನ ಮೂಲದ ವೀರೇಂದ್ರ ಶರ್ಮನನ್ನು ಹುಳಿಯಾರು ಹೋಬಳಿ ಲಕ್ಕೇನಹಳ್ಳಿ ಗ್ರಾಮಸ್ಥರು ಪೋಲಿಸರ ವಶಕ್ಕೆ ನೀಡಿದ್ದಾರೆ.
ಆರೋಪಿ ವೀರೇಂದ್ರ ಶರ್ಮ
       ವಂಚಕ ವೀರೇಂದ್ರ ಶರ್ಮ ತುಮಕೂರಿನ ಶಿರಾ ರಸ್ತೆಯಲ್ಲಿ ನನಸು ಕ್ರಿಯೇಷನ್ ಎಂಬ ಹೈಟೆಕ್ ಕಛೇರಿ ತೆರೆದು ಕಾರು ಹೊಂದಿರುವ ಗ್ರಾಹಕರಿಗೆ "ಕಾರು ಓಡಿಸಿ-ಹಣ ಗಳಿಸಿ"ಎಂಬ ಸ್ಕೀಮ್ ಆರಂಭಿಸಿದ್ದ.ಕಾರುಗಳ ಮಾಲಿಕರುಗಳಿಗೆ ತಮ್ಮ ಕಾರುಗಳ ಮೇಲೆ ವಿವಿಧ ಕಂಪನಿಗಳ ಪ್ರಚಾರದ ಸ್ಟಿಕ್ಕರ್ ಅಂಟಿಸಿಕೊಂಡರೆ ಪ್ರತಿತಿಂಗಳು ನಿಗದಿಯಾದ ಹಣ ಪಾವತಿಸುವ ಆಮೀಷ ಒಡ್ಡಿ ಇದಕ್ಕಾಗಿ ಇಂತಿಷ್ಟು ಹಣ ಮುಂಗಡವಾಗಿ ಕಾರು ಮಾಲೀಕರು ನೀಡಬೇಕೆಂದು ತಿಳಿಸಿ ಪ್ರತಿ ಹಳ್ಳಿಹಳ್ಳಿಗಳಲ್ಲೂ ವ್ಯಾಪಕ ಪ್ರಚಾರ ನಡೆಸಿದ್ದ.

       ಕಾರಿನ ಬೆಲೆ ೪.೫ ಲಕ್ಷವಿದ್ದರೆ ೨೫ ಸಾವಿರ ಠೇವಣಿ ವಾಹನ ಮಾಲೀಕರು ನೀಡಿದಲ್ಲಿ ಪ್ರತಿ ತಿಂಗಳು ಆರು ಸಾವಿರ ರೂಪಾಯಿ ಹಣ ಪಾವತಿ ಮಾಡುವುದಾಗಿಯೂ ಹಾಗೂ ಅದಕ್ಕೂ ಮೇಲ್ಪಟ್ಟ ವಾಹನದವರು ಐವತ್ತುಸಾವಿರ ಠೇವಣಿ ಇಟ್ಟಲ್ಲಿ ಪ್ರತಿತಿಂಗಳು ೮.೫ ಸಾವಿರ ರೂಪಾಯಿ ನೀಡುವುದಾಗಿ ತಿಳಿಸಿದ್ದ.


        ವಂಚಕ ವೀರೆಂದ್ರ ಶರ್ಮ ಹುಳಿಯಾರು ಸಮೀಪದ ತಿಮ್ಮನಹಳ್ಳಿ ಹಾಗೂ ಲಕ್ಕೇನಹಳ್ಳಿಯಲ್ಲಿ ಎರಡು ವಿವಾಹವಾಗಿದ್ದು ತನ್ನ ಪತ್ನಿಯರ ಮೂಲಕವೂ ಈ ಭಾಗದಲ್ಲಿ ಪ್ರಚಾರ ಮಾಡಿಸಿದ್ದ.ಈತನ ಮಾತಿಗೆ ಮರುಳಾದ ವಾಹನಗಳ ಮಾಲೀಕರು ೨೫ ಹಾಗೂ ೫೦ ಸಾವಿರದಂತೆ ಈತನ ಬಳಿ ಠೇವಣಿ ಇಟ್ಟು ತಮ್ಮ ಕಾರುಗಳ ಮೇಲೆ ಸ್ಟಿಕ್ಕರ್ ಅಂಟಿಸಿಕೊಂಡಿದ್ದರು.ಶುರುವಿನಲ್ಲಿ ಎರಡುಮೂರು ತಿಂಗಳು ಆಯ್ದ ಮಾಲೀಕರಿಗೆ ಹಣ ಪಾವತಿಸಿದ ಈತ ನಂತರ ಸಬೂಬುಗಳನ್ನು ಹೇಳಿ ದಿನದೂಡಿದ.

     ಕಳೆದ ಎರಡುಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ.ಈತನ ಸುಳಿವರಿಯದೆ ಕಂಗೆಟ್ಟ ವಾಹನಗಳ ಮಾಲೀಕರು ಬೇಸತ್ತು ಸ್ಟಿಕ್ಕರ್ ಕಿತ್ತಸೆದು ಸುಮ್ಮನಾಗಿದ್ದರು.


     ಆದರೆ ಅಚಾನಕ್ಕಾಗಿ ಬುಧವಾರ ಮುಂಜಾನೆ ಹುಳಿಯಾರು ಹೋಬಳಿಯ ಲಕ್ಕೇನಹಳ್ಳಿ ಗ್ರಾಮದಲ್ಲಿದ್ದ ಪತ್ನಿಯ ಮನೆಗೆ ಆಗಮಿಸಿದ್ದ ಈತನ ಸುಳಿವರಿತ ಗ್ರಾಮಸ್ಥರು ಈತನನ್ನು ಥಳಿಸಿ ಹುಳಿಯಾರು ಪೋಲಿಸರಿಗೆ ಒಪ್ಪಿಸಿದ್ದಾರೆ.ಸುದ್ದಿ ಹಬ್ಬಿ ಮೋಸ ಹೋದ ಕಾರಿನ ಮಾಲೀಕರುಗಳು ಹುಳಿಯಾರು ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ.

       ಆದರೆ ಈತನ ಕಛೇರಿ ತುಮಕೂರಿನಲ್ಲಿರುವುದರಿಂದ ಹುಳಿಯಾರು ಪೋಲಿಸರು ಪ್ರಕರಣವನ್ನು ತುಮಕೂರಿಗೆ ವರ್ಗಾಯಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.