ವಿಷಯಕ್ಕೆ ಹೋಗಿ

ಹುಳಿಯಾರು: ಶ್ರದ್ಧಾಭಕ್ತಿಯ ಶಿವರಾತ್ರಿ

ಹುಳಿಯಾರು : ಪಟ್ಟಣ ಸೇರಿದಂತೆ ಹೋಬಳಿಯ ಹಲವೆಡೆ ಶುಕ್ರವಾರದಂದು ಮಹಾಶಿವರಾತ್ರಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

         ಪಟ್ಟಣದ ಮಲ್ಲೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ,ಗಾಂಧಿಪೇಟೆಯ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ, ವಿಪ್ರ ಸಮಾಜದ ಸೀತಾರಾಮ ಕಲ್ಯಾಣ ಮಂದಿರದಲ್ಲಿ, ತಿರುಮಲಾಪುರದ ಚಂದ್ರಮೌಳೇಶ್ವರ ದೇಗುಲದಲ್ಲಿ, ಕೆಂಕೆರೆಯ ಕಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ,ಸೂರಗೊಂಡನಹಳ್ಳಿಯ ಈಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಪರಶಿವನಿಗೆ ಮುಂಜಾನೆಯಿಂದಲೇ ವಿಶೇಷ ಪೂಜಾಕೈಂಕರ್ಯಗಳು ನಡೆಯಿತು. ಶಿವಲಿಂಗಕ್ಕೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಪಂಚಾಮೃತಾಭಿಷೇಕ, ಜಾವದ ಪೂಜೆ, ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.ಎಲ್ಲಡೆಯೂ ಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು.ಎಲ್ಲಾ ದೇವಾಲಯಗಳಲ್ಲೂ ಬೆಳಿಗ್ಗೆಯಿಂದಲೇ ಭಕ್ತರು ತೆರಳಿ ಶಿವನ ದರ್ಶನ ಪಡೆಯುತ್ತಿದಿದ್ದು ಸಾಮಾನ್ಯವಾಗಿತ್ತು.

            ಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಪ್ರಾರಂಭವಾದ ದರ್ಶನದಲ್ಲಿ ಅಲಂಕೃತ ಸ್ವಾಮಿಯನ್ನು ನೋಡಲು ಅಪಾರ ಸಂಖ್ಯೆಯ ಭಕ್ತಾಧಿಗಳು ತಂಡೋಪತಂಡವಾಗಿ ಆಗಮಿಸಿದ್ದು , ಸರದಿ ಸಾಲಿನಲ್ಲಿ ಸಾಗುವ ಮೂಲಕ ಸ್ವಾಮಿಯ ದರ್ಶನ ಪಡೆದು ಹಣ್ಣುಕಾಯಿ ಮಾಡಿಸಿದರು.ಬೆಳಗಿನಜಾವ ಅರ್ಚಕ ವೀರೇಶ್ ಪೌರೋಹಿತ್ಯದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹನ್ಯಾಸಪೂರಕ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು. ಈ ವೇಳೆ ಮಲ್ಲೇಶ್ವರಸ್ವಾಮಿ ದೇವಾಲಯ ಸಮಿತಿ ಹಾಗೂ ಟ್ರಸ್ಟ್ ನ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
         ಸಂಜೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ  ಗೀತಕ್ಕನವರು ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಮಹಾಶಿವರಾತ್ರಿಯ ಬಗ್ಗೆ ಹಾಗೂ ಆಧ್ಯಾತ್ಮಿಕ ವಿಚಾರಧಾರೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.ಅಕ್ಕಮಹಾದೇವಿ ಮಹಿಳಾ ಭಜನಾ ತಂಡದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.ಮಕ್ಕಳಿಗೆ ಆಟೋಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
          ಶಿವ ದರ್ಶನ ಪಡೆದ ಭಕ್ತರು ಪಕ್ಕದಲ್ಲಿಯ ಗಣಪತಿ ದೇವಾಲಯಕ್ಕೂ ಭೇಟಿ ನೀಡುತ್ತಿದ್ದು ಎರಡೂ ದೇವಾಲಯಗಳು ಕಿಕ್ಕಿರಿದ ಭಕ್ತರಿಂದ ತುಂಬಿತುಳುಕುತ್ತಿತ್ತು. ಗಣಪತಿಗೆ ಮಾಡಿದ್ದ ಬೆಣ್ಣೆ ಅಲಂಕಾರ ಎಲ್ಲರ ಗಮನ ಸೆಳೆಯಿತು.
         ಶಿವರಾತ್ರಿ ಪ್ರಯುಕ್ತ ಪಟ್ಟಣದ ಬನಶಂಕರಿ,ಹುಳಿಯಾರಮ್ಮ,ದುರ್ಗಾಪರಮೇಶ್ವರಿ ಅಮ್ಮನವರ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

          ಶಿವರಾತ್ರಿ ಶಿವಭಕ್ತರಿಗೆ ಅತ್ಯಂತ ಪವಿತ್ರ ದಿನವಾಗಿದ್ದು ಹೆಚ್ಚಿನ ಭಕ್ತಾಧಿಗಳು ದಿನವಿಡಿ ಉಪವಾಸ, ಜಾಗರಣೆ ಕೈಗೊಂಡು, ಶಿವನಾಮ ಭಜಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...