ಹುಳಿಯಾರು: ಪಟ್ಟಣದ ಟಿ.ಆರ್.ಎಸ್.ಆರ್ ಪ್ರೌಢಶಾಲೆ , ಕನಕದಾಸ ಪ್ರೌಢಶಾಲೆ ಹಾಗೂ ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಸೇರಿದಂತೆ ಒಟ್ಟು ೩ ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು ೬೨೮ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ಬರೆದರು.ಪ್ರಾರಂಭಿಕ ಹಂತದ ಕೆಲವೊಂದು ಗೊಂದಲಗಳನ್ನು ಬಿಟ್ಟರೆ ಪರೀಕ್ಷೆ ಯಾವುದೇ ಸಮಸ್ಯೆಯಿಲ್ಲದಂತೆ ಸುಗಮವಾಗಿ ನಡೆಯಿತು. ಹುಳಿಯಾರಿನ ಟಿ.ಆರ್.ಎಸ್.ಆರ್ ಪ್ರೌಢಶಾಲೆಗೆ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಗಳು. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಪೋಷಕರುಗಳೊಂದಿಗೆ ಮುಂಚಿತವಾಗಿಯೇ ಆಗಮಿಸಿ ತಮ್ಮ ಕೊಠಡಿ ಸಂಖ್ಯೆಯನ್ನು ಗಮನ ಮಾಡುತ್ತಿದ್ದ ದೃಶ್ಯ ಎಲ್ಲಾ ಕೇಂದ್ರಗಳಲ್ಲೂ ಕಂಡುಬಂತು. ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬೆ.9.೦೦ರಿಂದ 9.30 ಸಮಯದೊಳಗೆ ಕೊಠಡಿಗೆ ಹಾಜರಾಗಬೇಕಾಗಿತ್ತು.ಆದರೆ ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇದರ ಅರಿವಿಲ್ಲದೆ ಎಂಟುಗಂಟೆಯಿಂದಲೇ ವಿದ್ಯಾರ್ಥಿಗಳಿಗೆ ಕೊಠಡಿಪ್ರವೇಶಕ್ಕೆ ಅವಕಾಶ ಮಾಡಲಾಗಿತ್ತ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070