ವಿಷಯಕ್ಕೆ ಹೋಗಿ

ಹುಳಿಯಾರಿನ ವಿದ್ಯಾವಾರಿಧಿ ಶಾಲೆ ಮುಂದೆ ಶವದ ಗಾಡಿಯೊಂದಿಗೆ ಪ್ರತಿಭಟನೆ.

ಸೆಕ್ಯೂರಿಟಿ ಗಾರ್ಡ್ ಸಾವಿನ ಹಿನ್ನಲೆ.
ಹುಳಿಯಾರಿನ ವಿದ್ಯಾವಾರಿಧಿ ಶಾಲೆ ಮುಂದೆ ಶವದ ಗಾಡಿಯೊಂದಿಗೆ ಪ್ರತಿಭಟನೆ.

ಹುಳಿಯಾರು: ಪಟ್ಟಣದ ವಿದ್ಯಾವಾರಿಧಿ ಶಾಲೆಯ ದುರ್ಘಟನೆಯಲ್ಲಿ ಐಸಿಯುನಲ್ಲಿದ್ದ ಚಿಕಿತ್ಸೆ ಪಡೆಯುತ್ತಿದ ಶಾಲೆಯ ಕಾವಲುಗಾರ ರಮೇಶ್ ಭಾನುವಾರ ಸಾವನ್ನಪ್ಪಿದ ಹಿನ್ನಲೆಯಲ್ಲಿ ಶಾಲೆಯ ನಿರ್ಲಕ್ಷ್ಯತೆಯಿಂದ ರಮೇಶ್ ಸಾವನ್ನಪ್ಪಿದ್ದು ಶಾಲಾ ಆಡಳಿತ ಮಂಡಳಿ ಪರಿಹಾರವನ್ನು ನೀಡಬೇಕು,ಇಲ್ಲದಿದ್ದಲ್ಲಿ ಹೆಣ ಸಾಗಿಸುವುದಿಲ್ಲವೆಂದು ಪಟ್ಟು ಹಿಡಿದ ಸಂಬಂಧಿಕರು ಹಾಗೂ ಗ್ರಾಮಸ್ಥರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.

        ಬುಧವಾರ ರಾತ್ರಿ ನಡೆದ ಘಟನೆಯಲ್ಲಿ ಶಾಲೆಯ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಹೊಸಳ್ಳಿ ವಾಸಿ ರಮೇಶ್ ಸಹ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥನಾಗಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಿಗ್ಗೆ ಹತ್ತು ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾನೆ.ತುಮಕೂರಿಗೆ ತೆರಳಿ ಮೃತದೇಹವನ್ನು ತರುತ್ತಿರುವ ವೇಳೆ ಸುದ್ದಿ ತಿಳಿದ ಗ್ರಾಮಸ್ಥರು ಶಾಲೆಯ ಬಳಿ ನೂರಾರು ಸಂಖ್ಯೆಯಲ್ಲಿ ಸಂಜೆ ಆರು ಗಂಟೆಯಿಂದಲೇ ಜಮಾಯಿಸಿ ಪರಿಹಾರಕ್ಕಾಗಿ ಒತ್ತಾಯಿಸಿದರು.
       ಅಲ್ಲದೆ ರಸ್ತೆ ತಡೆ ಕೂಡ ನಡೆಸಲು ಮುಂದಾದಾಗ .ಸ್ಥಳದಲ್ಲಿದ್ದ ಪಿಎಸೈ ಪ್ರವೀಣ್ ಅದನ್ನು ತಡೆದಿದ್ದರಿಂದ ಅವರೊಂದಿಗೆ ಮಾತಿನ ಚಕಮಕಿ ನಡೆಸಿದರು.
       ನಂತರ ನೂರಾರು ಸಂಖ್ಯೆಯಲ್ಲಿದ್ದ ಪೋಲಿಸರು ರಸ್ತೆತಡೆಗಾಗಿ ಇಟ್ಟಿದ್ದ ಕಲ್ಲನ್ನು ತೆರವುಗೊಳಿಸಿ ವಾಹನ ಸಂಚರಿಸಲು ಅನುವು ಮಾಡಿಕೊಟ್ಟರು.
         ಮೃತದೇಹವನ್ನು ತರುವ ವೇಳೆಯೇ ಪರಿಹಾರ ಧನ ಕೊಡುವ ವಿಚಾರವಾಗಿ ಮಾತುಕತೆ ನಡೆದು ಶಾಲೆಯವರು ಕೊಡುವುದಾಗಿ ತಿಳಿಸಿದ ಹಣ ಏನೇನು ಸಾಲದೆಂದು ಪಟ್ಟುಹಿಡಿದ ಸಂಬಂಧಿಗಳು ಹಾಗೂ ಗ್ರಾಮಸ್ಥರು ನಿಮ್ಮ ದುಡ್ಡೆ ನಮಗೆ ಬೇಡ,ನಮ್ಮ ಹುಡುಗನ ಪ್ರಾಣ ಕಳೆದಿರುವ ಕಿರಣ್ ಕುಮಾರ್ ಸ್ಥಳಕ್ಕೆ ಬರಲಿ ಎಂದು ಪಟ್ಟು ಹಿಡಿದು ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಮೃತದೇಹವಿದ್ದ ಅಂಬ್ಯುಲೆನ್ಸ್ ಅನ್ನು ತಡೆದು ಶಾಲೆಯ ಮುಂದೆ ನಿಲ್ಲಿಸಿದ್ದಾರೆ.
         ಇದೇ ವೇಳೆ ಶಾಲಾ ಆಡಳಿತಮಂಡಲಿ ಪರವಾಗಿ ಕೆಲವರು ಮೃತನ ಸಂಬಂಧಿಗಳೊಂದಿಗೆ ಮಾತುಕಥೆ ನಡೆಸಿ ನಾಲ್ಕ ಲಕ್ಷದವರೆಗೂ ಪರಿಹಾರಹಣ ಕೊಡಿಸುವುದಾಗಿ ತಿಳಿಸಿ ಪ್ರತಿಭಟನೆ ಮಾಡುವುದು ಬೇಡವೆಂದು ಒತ್ತಾಯಿಸಿದ್ದಾರೆ.

        ಸ್ಥಳಕ್ಕಾಗಮಿಸಿದ ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಹಾಗೂ ತಾಲ್ಲೂಕ್ ಉಪ್ಪಾರ ಸಂಘದ ಅಧ್ಯಕ್ಷರಾದ ಜಿಪಂ ಸದಸ್ಯ ಸೋಮನಹಳ್ಳಿ ಕಲ್ಲೇಶ್,ದೇವರು ಬಸವರಾಜು ಹಾಗೂ ಮಾಜಿ ತಾಪಂ ಸದಸ್ಯ ಜಯಣ್ಣ ತಾವೀಗಾಗಲೇ ಶಾಲೆಯವರೊಂದಿಗೆ ಮಾತನಾಡಿದ್ದು ಐದು ಲಕ್ಷ ಪರಿಹಾರವನ್ನು ಮೃತನ ಕುಟುಂಬದವರಿಗೆ ಕೊಡಲು ಒಪ್ಪಿಸಿದ್ದು ಗ್ರಾಮಸ್ಥರು ಪ್ರತಿಭಟನೆ ಬಿಟ್ಟು ಮುಂದಿನ ಕಾರ್ಯನೋಡುವಂತೆ ಮನವೊಲಿಸಲು ಮುಂದಾದರು.ಆದರೂ ಕೂಡ ಇದಕೊಪ್ಪದ ಗ್ರಾಮಸ್ಥರು ಇನ್ನು ಹೆಚ್ಚಿನ ಪರಿಹಾರ ಕೇಳಿದ ಹಿನ್ನಲೆಯಲ್ಲಿ ನಮ್ಮ ಮಾತಿಗೆ ಬೆಲೆ ಇಲ್ಲದ ಮೇಲೆ ನೀವೇನಾದರೂ ಮಾಡಿಕೊಳ್ಳಿ ಎಂದ ಕಲ್ಲೇಶ್ ಅಲ್ಲಿಂದ ವಾಪಸ್ಸಾದರು.
         ಮೃತನ ಪತ್ನಿ ಕೆಂಚಮ್ಮ ನಿಗೆ ಕೆಲಸ ಹಾಗೂ ಮಕ್ಕಳಾದ ಅನಿತಾ ಹಾಗೂ ಲಕ್ಕಪ್ಪ ಅವರ ವಿದ್ಯಾಭಾಸದ ಹೊಣೆ ಹೊರಬೇಕೆಂದು ಒತ್ತಾಯಿಸಿರುವ ಪ್ರತಿಭಟನಕಾರರು ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಹೆಣ ಕದಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.ಸುಮಾರು ಹೊತ್ತು ಮಾತುಕಥೆ ನಡೆದು
ಸದ್ಯ ಶಾಲೆಯ ಪರವಾಗಿ ಕೊಡುವುದಾಗಿ ಹೇಳಿದ ಪರಿಹಾರದ ಮೊತ್ತಕ್ಕೆ ಒಪ್ಪಿದ ಪ್ರತಿಭಟನಕಾರರು ಧರಣಿ ಕೈ ಬಿಟ್ಟು ಶವವನ್ನು ಊರಿಗೆ ಕೊಂಡೊಯ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...