ವಿಷಯಕ್ಕೆ ಹೋಗಿ

ಹುಳಿಯಾರು ಜನತೆಗೆ ನಿರಾಸೆ ಮೂಡಿಸಿದ ಬಜೆಟ್

ಹುಳಿಯಾರು ಜನತೆಗೆ ನಿರಾಸೆ ಮೂಡಿಸಿದ ಬಜೆಟ್

49 ತಾಲ್ಲೂಕ್ ಕೇಂದ್ರದ ಪಟ್ಟಿಯಲ್ಲೂ ಹುಳಿಯಾರು ಹೆಸರಿಲ್ಲ

ಕನ್ನಡಪ್ರಭ ವಾರ್ತೆ,ಹುಳಿಯಾರು:ಈ ಬಾರಿಯ ಬಜೆಟ್ ನಲ್ಲಾದರೂ ಹುಳಿಯಾರನ್ನು ತಾಲ್ಲೂಕ್ ಕೇಂದ್ರವನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಬಹುದೆಂದು ನಿರೀಕ್ಷಿಸಿದ್ದ ಹುಳಿಯಾರು ಜನತೆಗೆ ಬಜೆಟ್ ನಿರಾಸೆ ಮೂಡಿಸಿದೆ.
             ರಾಜ್ಯದಲ್ಲಿ ಹೊಸದಾಗಿ 49 ತಾಲೂಕು ರಚನೆಗೆ ಸರ್ಕಾರ ಬದ್ಧವಾಗಿದ್ದು, ಹಣಕಾಸು ಲಭ್ಯತೆ ಆಧಾರದ ಮೇಲೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 2017-18ನೇ ಸಾಲಿನ ಬಜೆಟ್ ಭಾಷಣದ ವೇಳೆ ಘೋಷಿಸಿದ್ದಾರೆ. 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳು ರಚನೆಯಾಗಲಿದ್ದು, ತುಮಕೂರು ಜಿಲ್ಲೆಯಲ್ಲಿ ತಾಲ್ಲೂಕಾಗಿ ಘೋಷಣೆಯಾಗಬೇಕಿದ್ದ ಹುಳಿಯಾರು ಹಾಗೂ ಹುಲಿಯೂರುದುರ್ಗದ ಬಗ್ಗೆ ಪ್ರಸ್ತಾಪನೆ ಇಲ್ಲದಿರುವುದು ಬಹುಕಾಲದ ಬೇಡಿಕೆಗೆ ಕೊನೆಗೂ ಮಾನ್ಯತೆ ಇಲ್ಲದಂತಾಗಿದೆ.
           ತುಮಕೂರು ಜಿಲ್ಲೆಗೆ ಹೈಟೆಕ್ ಆಸ್ಪತ್ರೆ, ವಿವಿಧ ರೋಗಗಳ ಸಂಶೋಧನೆಗಾಗಿ ರಕ್ತ ವಿದಳನಾ ಕೇಂದ್ರ ಸ್ಥಾಪನೆ ಹೊರತು ಪಡಿಸಿದರೆ ಮತ್ಯಾವ ಪ್ರಸ್ತಾಪನೆ ಆಗಿಲ್ಲ.ವಿ.ಶ್ರೀನಿವಾಸ್ ಪ್ರಸಾದ್ ಅವರು ಕಂದಾಯ ಸಚಿವರಾಗಿದ್ದ ಕಾಲದಲ್ಲಿ ಹೊಸ ತಾಲೂಕು ರಚನೆಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದು ಆಗಿನ ಪಟ್ಟಿಯಲ್ಲಿ ಹುಳಿಯಾರು ಹಾಗೂ ಹುಲಿಯೂರುದುರ್ಗ ಸೇರ್ಪಡೆಗೊಂಡಿತ್ತು. ಸದನದಲ್ಲೂ ಇದಕ್ಕೆ ಅಂಗೀಕಾರ ಸಿಕ್ಕಿತ್ತು. ಈಗ ಬಜೆಟ್ ನಲ್ಲಿ ಮಾತ್ರ ಘೋಷಣೆಯಾಗದೆ ನಿರಾಸೆಗೆ ಕಾರಣವಾಗಿದೆ.
          ಹುಳಿಯಾರು ತಾಲ್ಲೂಕು ಕೇಂದ್ರ ಆಗಬಹುದೆಂದು ಬಹು ನಿರೀಕ್ಷೆಯಲ್ಲಿದ ಜನತೆಗೆ ಈ ಭಾರಿಯ ಬಜೆಟ್ ಬಲು ನಿರಾಸೆಮೂಡಿಸಿದೆ.ಹೋಬಳಿ ಕೇದ್ರವಾಗಿರುವ ಹುಳಿಯಾರು ಸಧ್ಯ ತಾಲ್ಲೂಕು ಕೇಂದ್ರವನ್ನು ಮೀರಿ ಬೆಳೆದಿದ್ದು ಜನಸಂಖ್ಯಾ ಆಧಾರದ ಮೇಲೆ ಎಂದೋ ತಾಲ್ಲೂಕ್ ಆಗಬೇಕಿತ್ತು.ಇದಕ್ಕಾಗಿ ಹೋರಾಟ,ಪ್ರತಿಭಟನೆ ,ಬಂದ್ ಲೆಖ್ಖ ಇಲ್ಲದಷ್ಟು ನಡೆದಿತ್ತು.ದಶಕಗಳ ಕಾಲ ಕಾನೂನು ಸಚಿವ ಜಯಚಂದ್ರ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರವನ್ನು ತಾಲ್ಲೂಕ್ ಕೇಂದ್ರ ಮಾಡಲು ಅವರು ಸೇರಿದಂತೆ ಶ್ರಮಿಸಿದವರು ಅದೆಷ್ಟು ಮಂದಿಯೋ. ಯಾರೆಲ್ಲಾ, ಎಷ್ಟೆಲ್ಲಾ ಕಸರತ್ತು ಮಾಡಿದರು ಕೂಡ ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾದ ತಾಲ್ಲೂಕ್ ಕೇದ್ರಗಳ ಪಟ್ಟಿಯಲ್ಲಿ ಹುಳಿಯಾರು ಹೆಸರಿಲ್ಲದಿರುವುದು ಈ ಭಾಗದ ಜನರ ಬೇಸರಕ್ಕೆ ಕಾರಣವಾಗಿದೆ.
------------------------------
ಅರ್ಹತೆ ಆಧಾರದ ಮೇಲೆ ತಾಲ್ಲೂಕ್ ಕೇಂದ್ರವಾಗಬೇಕಿದ್ದ ಹುಳಿಯಾರನ್ನು ಪರಿಗಣಸದಿರುವುದರ ಹಿಂದೆ ಯಾರ ಹಿತಾಸಕ್ತಿ ಅಡಿಗಿದೆಯೋ ಗೊತ್ತಿಲ್ಲ. ಸರ್ಕಾರ ಕೂಡಲೇ ಹುಳಿಯಾರನ್ನು ತಾಲ್ಲೂಕು ಕೇಂದ್ರವಾಗಿ ಪರಿವರ್ತಿಸದಿದ್ದಲ್ಲಿ ಜಿಲ್ಲಾ ರೈತಸಂಘಟನೆಯಿಂದ ಹೋರಾಟ ಮಾಡಿಯೇ ಸಿದ್ಧ:ಹೊಸಹಳ್ಳಿ ಚಂದ್ರಣ್ಣ ,ಜಿಲ್ಲಾಧ್ಯಕ್ಷರು, ಜಿಲ್ಲಾ ರೈತಸಂಘ

--------------
ಎಲ್ಲಾ ಅರ್ಹತೆ ಇದ್ದೂ ಕೂಡ ಹುಳಿಯಾರು 
ತಾಲ್ಲೂಕ್ ಕೇಂದ್ರವಾಗದಿರಲು ಕಾರಣವಾದರೂ ಏನು.ಹತ್ತು ಹಲವಾರು ಬಾರಿ ಹುಳಿಯಾರು ತಾಲ್ಲೂಕ್ ಕೇಂದ್ರ ಮಾಡುವ ಕುರಿತು ಸರ್ಕಾರದೊಂದಿಗೆ ಪತ್ರವ್ಯವಹಾರ ನಡೆಸಲಾಗಿತ್ತು. ಈ ಹೋಬಳಿ ಕೇಂದ್ರವು ಈಗಾಗಲೆ ತಾಲ್ಲೂಕು ಮಟ್ಟಕ್ಕಿಂತ ದೊಡ್ಡದಾಗಿ ಬೆಳೆದು ನಿಂತಿದೆ. ಜಿಲ್ಲಾ ಉಸ್ತುವರಿ ಸಚಿವ ಟಿ.ಬಿ.ಜಯಚಂದ್ರರವರು ತಮ್ಮ ರಾಜಕೀಯ ಜೀವನದ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಹುಳಿಯಾರನ್ನು ತಾಲ್ಲೂಕ್ ಕೇಂದ್ರವನ್ನಾಗಿಸಲು ಸಹಕರಿಸಲಿ: ಹೆಚ್.ಎನ್.ಕುಮಾರ್,ತಾಪಂ ಸದಸ್ಯ,ಹುಳಿಯಾರು ಕ್ಷೇತ್ರ
---------------------
ಕೆಲವು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಈ ಹಿಂದೆ ತಾಲ್ಲೂಕು ಕೇಂದ್ರವಾಗಿದ್ದ ಹುಳಿಯಾರನ್ನು ಬದಲಿಸಿ ಚಿಕ್ಕನಾಯಕನಹಳ್ಳಿಯನ್ನು ತಾಲ್ಲೂಕು ಕೇಂದ್ರವಾಗಿ ಮಾರ್ಪಡಿಸಿದ್ದಾರೆ.ಹುಳಿಯಾರು ಶೈಕ್ಷಣಿಕವಾಗಿ, ಭೌಗೋಳಿಕವಾಗಿ, ತಾಲ್ಲೂಕು ಕೇಂದ್ರವಾಗುವ ಅರ್ಹತೆ ಇದ್ದರೂ ಸಹಾ ಕೆಲವರು ಉದ್ದೇಶಪೂರ್ವಕವಾಗಿಯೇ ಇದನ್ನು ತಪ್ಪಿಸುತ್ತಿದ್ದಾರೆ: ಗೌಡಿ,ಕಿರುತೆರೆ ಕಲಾವಿದ

-----------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...