ವಿಷಯಕ್ಕೆ ಹೋಗಿ

ಹುಳಿಯಾರು ಜನತೆಗೆ ನಿರಾಸೆ ಮೂಡಿಸಿದ ಬಜೆಟ್

ಹುಳಿಯಾರು ಜನತೆಗೆ ನಿರಾಸೆ ಮೂಡಿಸಿದ ಬಜೆಟ್

49 ತಾಲ್ಲೂಕ್ ಕೇಂದ್ರದ ಪಟ್ಟಿಯಲ್ಲೂ ಹುಳಿಯಾರು ಹೆಸರಿಲ್ಲ

ಕನ್ನಡಪ್ರಭ ವಾರ್ತೆ,ಹುಳಿಯಾರು:ಈ ಬಾರಿಯ ಬಜೆಟ್ ನಲ್ಲಾದರೂ ಹುಳಿಯಾರನ್ನು ತಾಲ್ಲೂಕ್ ಕೇಂದ್ರವನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಬಹುದೆಂದು ನಿರೀಕ್ಷಿಸಿದ್ದ ಹುಳಿಯಾರು ಜನತೆಗೆ ಬಜೆಟ್ ನಿರಾಸೆ ಮೂಡಿಸಿದೆ.
             ರಾಜ್ಯದಲ್ಲಿ ಹೊಸದಾಗಿ 49 ತಾಲೂಕು ರಚನೆಗೆ ಸರ್ಕಾರ ಬದ್ಧವಾಗಿದ್ದು, ಹಣಕಾಸು ಲಭ್ಯತೆ ಆಧಾರದ ಮೇಲೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 2017-18ನೇ ಸಾಲಿನ ಬಜೆಟ್ ಭಾಷಣದ ವೇಳೆ ಘೋಷಿಸಿದ್ದಾರೆ. 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳು ರಚನೆಯಾಗಲಿದ್ದು, ತುಮಕೂರು ಜಿಲ್ಲೆಯಲ್ಲಿ ತಾಲ್ಲೂಕಾಗಿ ಘೋಷಣೆಯಾಗಬೇಕಿದ್ದ ಹುಳಿಯಾರು ಹಾಗೂ ಹುಲಿಯೂರುದುರ್ಗದ ಬಗ್ಗೆ ಪ್ರಸ್ತಾಪನೆ ಇಲ್ಲದಿರುವುದು ಬಹುಕಾಲದ ಬೇಡಿಕೆಗೆ ಕೊನೆಗೂ ಮಾನ್ಯತೆ ಇಲ್ಲದಂತಾಗಿದೆ.
           ತುಮಕೂರು ಜಿಲ್ಲೆಗೆ ಹೈಟೆಕ್ ಆಸ್ಪತ್ರೆ, ವಿವಿಧ ರೋಗಗಳ ಸಂಶೋಧನೆಗಾಗಿ ರಕ್ತ ವಿದಳನಾ ಕೇಂದ್ರ ಸ್ಥಾಪನೆ ಹೊರತು ಪಡಿಸಿದರೆ ಮತ್ಯಾವ ಪ್ರಸ್ತಾಪನೆ ಆಗಿಲ್ಲ.ವಿ.ಶ್ರೀನಿವಾಸ್ ಪ್ರಸಾದ್ ಅವರು ಕಂದಾಯ ಸಚಿವರಾಗಿದ್ದ ಕಾಲದಲ್ಲಿ ಹೊಸ ತಾಲೂಕು ರಚನೆಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದು ಆಗಿನ ಪಟ್ಟಿಯಲ್ಲಿ ಹುಳಿಯಾರು ಹಾಗೂ ಹುಲಿಯೂರುದುರ್ಗ ಸೇರ್ಪಡೆಗೊಂಡಿತ್ತು. ಸದನದಲ್ಲೂ ಇದಕ್ಕೆ ಅಂಗೀಕಾರ ಸಿಕ್ಕಿತ್ತು. ಈಗ ಬಜೆಟ್ ನಲ್ಲಿ ಮಾತ್ರ ಘೋಷಣೆಯಾಗದೆ ನಿರಾಸೆಗೆ ಕಾರಣವಾಗಿದೆ.
          ಹುಳಿಯಾರು ತಾಲ್ಲೂಕು ಕೇಂದ್ರ ಆಗಬಹುದೆಂದು ಬಹು ನಿರೀಕ್ಷೆಯಲ್ಲಿದ ಜನತೆಗೆ ಈ ಭಾರಿಯ ಬಜೆಟ್ ಬಲು ನಿರಾಸೆಮೂಡಿಸಿದೆ.ಹೋಬಳಿ ಕೇದ್ರವಾಗಿರುವ ಹುಳಿಯಾರು ಸಧ್ಯ ತಾಲ್ಲೂಕು ಕೇಂದ್ರವನ್ನು ಮೀರಿ ಬೆಳೆದಿದ್ದು ಜನಸಂಖ್ಯಾ ಆಧಾರದ ಮೇಲೆ ಎಂದೋ ತಾಲ್ಲೂಕ್ ಆಗಬೇಕಿತ್ತು.ಇದಕ್ಕಾಗಿ ಹೋರಾಟ,ಪ್ರತಿಭಟನೆ ,ಬಂದ್ ಲೆಖ್ಖ ಇಲ್ಲದಷ್ಟು ನಡೆದಿತ್ತು.ದಶಕಗಳ ಕಾಲ ಕಾನೂನು ಸಚಿವ ಜಯಚಂದ್ರ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರವನ್ನು ತಾಲ್ಲೂಕ್ ಕೇಂದ್ರ ಮಾಡಲು ಅವರು ಸೇರಿದಂತೆ ಶ್ರಮಿಸಿದವರು ಅದೆಷ್ಟು ಮಂದಿಯೋ. ಯಾರೆಲ್ಲಾ, ಎಷ್ಟೆಲ್ಲಾ ಕಸರತ್ತು ಮಾಡಿದರು ಕೂಡ ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾದ ತಾಲ್ಲೂಕ್ ಕೇದ್ರಗಳ ಪಟ್ಟಿಯಲ್ಲಿ ಹುಳಿಯಾರು ಹೆಸರಿಲ್ಲದಿರುವುದು ಈ ಭಾಗದ ಜನರ ಬೇಸರಕ್ಕೆ ಕಾರಣವಾಗಿದೆ.
------------------------------
ಅರ್ಹತೆ ಆಧಾರದ ಮೇಲೆ ತಾಲ್ಲೂಕ್ ಕೇಂದ್ರವಾಗಬೇಕಿದ್ದ ಹುಳಿಯಾರನ್ನು ಪರಿಗಣಸದಿರುವುದರ ಹಿಂದೆ ಯಾರ ಹಿತಾಸಕ್ತಿ ಅಡಿಗಿದೆಯೋ ಗೊತ್ತಿಲ್ಲ. ಸರ್ಕಾರ ಕೂಡಲೇ ಹುಳಿಯಾರನ್ನು ತಾಲ್ಲೂಕು ಕೇಂದ್ರವಾಗಿ ಪರಿವರ್ತಿಸದಿದ್ದಲ್ಲಿ ಜಿಲ್ಲಾ ರೈತಸಂಘಟನೆಯಿಂದ ಹೋರಾಟ ಮಾಡಿಯೇ ಸಿದ್ಧ:ಹೊಸಹಳ್ಳಿ ಚಂದ್ರಣ್ಣ ,ಜಿಲ್ಲಾಧ್ಯಕ್ಷರು, ಜಿಲ್ಲಾ ರೈತಸಂಘ

--------------
ಎಲ್ಲಾ ಅರ್ಹತೆ ಇದ್ದೂ ಕೂಡ ಹುಳಿಯಾರು 
ತಾಲ್ಲೂಕ್ ಕೇಂದ್ರವಾಗದಿರಲು ಕಾರಣವಾದರೂ ಏನು.ಹತ್ತು ಹಲವಾರು ಬಾರಿ ಹುಳಿಯಾರು ತಾಲ್ಲೂಕ್ ಕೇಂದ್ರ ಮಾಡುವ ಕುರಿತು ಸರ್ಕಾರದೊಂದಿಗೆ ಪತ್ರವ್ಯವಹಾರ ನಡೆಸಲಾಗಿತ್ತು. ಈ ಹೋಬಳಿ ಕೇಂದ್ರವು ಈಗಾಗಲೆ ತಾಲ್ಲೂಕು ಮಟ್ಟಕ್ಕಿಂತ ದೊಡ್ಡದಾಗಿ ಬೆಳೆದು ನಿಂತಿದೆ. ಜಿಲ್ಲಾ ಉಸ್ತುವರಿ ಸಚಿವ ಟಿ.ಬಿ.ಜಯಚಂದ್ರರವರು ತಮ್ಮ ರಾಜಕೀಯ ಜೀವನದ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಹುಳಿಯಾರನ್ನು ತಾಲ್ಲೂಕ್ ಕೇಂದ್ರವನ್ನಾಗಿಸಲು ಸಹಕರಿಸಲಿ: ಹೆಚ್.ಎನ್.ಕುಮಾರ್,ತಾಪಂ ಸದಸ್ಯ,ಹುಳಿಯಾರು ಕ್ಷೇತ್ರ
---------------------
ಕೆಲವು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಈ ಹಿಂದೆ ತಾಲ್ಲೂಕು ಕೇಂದ್ರವಾಗಿದ್ದ ಹುಳಿಯಾರನ್ನು ಬದಲಿಸಿ ಚಿಕ್ಕನಾಯಕನಹಳ್ಳಿಯನ್ನು ತಾಲ್ಲೂಕು ಕೇಂದ್ರವಾಗಿ ಮಾರ್ಪಡಿಸಿದ್ದಾರೆ.ಹುಳಿಯಾರು ಶೈಕ್ಷಣಿಕವಾಗಿ, ಭೌಗೋಳಿಕವಾಗಿ, ತಾಲ್ಲೂಕು ಕೇಂದ್ರವಾಗುವ ಅರ್ಹತೆ ಇದ್ದರೂ ಸಹಾ ಕೆಲವರು ಉದ್ದೇಶಪೂರ್ವಕವಾಗಿಯೇ ಇದನ್ನು ತಪ್ಪಿಸುತ್ತಿದ್ದಾರೆ: ಗೌಡಿ,ಕಿರುತೆರೆ ಕಲಾವಿದ

-----------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...