ವಿಷಯಕ್ಕೆ ಹೋಗಿ

ಶಕ್ತಿ ಪೀಠವಾಗಿ ಯಾತ್ರಾಸ್ಥಳವಾಗಲಿರುವ ಹುಳಿಯಾರು

ಹುಳಿಯಾರು:ಪಟ್ಟಣದ ಕೋಡಿಪಾಳ್ಯದಲ್ಲಿ ನಿರ್ಮಾಣವಾಗುತ್ತಿರುವ ಜಗನ್ಮಾತೆ ಕಂಕಾಳಿ ಹಾಗೂ ಏಳು ಶಕ್ತಿ ಪೀಠಗಳಲ್ಲಿ ಒಂದಾಗಿರುವ ತುಳುಜಾ ಭವಾನಿ ಮಾತೆಯರ ದೇವಸ್ಥಾನ ಮತ್ತು ೬೧ ಅಡಿಎತ್ತರದ ಭಾರತದಲ್ಲಿಯೇ ಪ್ರಥಮವಾದ ಅನಂತಪದ್ಮನಾಭನ ಮೂರ್ತಿಯು ಮುಕ್ತಾಯ ಹಂತದಲ್ಲಿದ್ದು ಇದರ ಲೋಕಾರ್ಪಣೆಗೆ ರಾಷ್ಟ್ರಪತಿಗಳು ಸೇರಿದಂತೆ ಪ್ರತಿಷ್ಟಿತ ಗಣ್ಯರು ಆಗಮಿಸಲಿದ್ದು ಈ ಸ್ಥಳ ಪವಿತ್ರಾ ಯಾತ್ರಾಸ್ಥಳವಾಗಿ ರೂಪುಗೊಳ್ಳಲಿದೆ ಎಂದು ದೇವಾಲಯದ ಪ್ರಧಾನ ಟ್ರಸ್ಟಿ ಗಂಗಾಧರ ಆಶಯ ವ್ಯಕ್ತಪಡಿಸಿದರು.

        ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಆಗಮಿಸಿದ ವಿವಿಧ ದೇವರುಗಳ ಬೃಹತ್ ಶಿಲಾಮೂರ್ತಿಗಳ ಜಲಾಧಿವಾಸದ ನಿಮ್ಮಿತ್ತವಾಗಿ ನಡೆದ ಕಾರ್ಯಕ್ರಮದಲ್ಲ್ಲಿ ಮಾತನಾಡಿದ ಅವರು ಮೇ ೩ರಂದು ಪ್ರತಿಷ್ಟಾಪನಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ಮನುಕುಲದ ಅಧಿದೇವತೆ ಕಂಕಾಳಿ ಹಾಗು ತುಳುಜಾ ಭವಾನಿ ಮಾತೆಯರನ್ನು ಒಂದೇ ಪೀಠದಲ್ಲಿ ಪ್ರತಿಷ್ಟಾಪಿಸಲಾಗುವುದರ ಜೊತೆಗೆ ಪಿರಮಿಡ್ ಧ್ಯಾನಮಂದಿರ, ಸೇವಾಲಾಲ್ ಸಾಂಸ್ಕೃತಿಕ ಸದನ,ಶ್ರೀ ಮಾತಾ ಯಾತ್ರಿ ನಿವಾಸ,ಬಲಮುರಿ ಗಣಪತಿ ದೇವಸ್ಥಾನ,ಮರಿಯಮ್ಮ ದೇವಿ ದೇವಸ್ಥಾನವನ್ನು ಸಹ ಅಂದು ಲೋಕಾರ್ಪಣೆ ಮಾಡಲಾಗುವುದು ಎಂದರು.
      ಮುಂದುವರಿದು ಮಾತನಾಡಿದ ಅವರು ದೇವಾಲಯಗಳ ಶಿಲಾಮೂರ್ತಿಯನ್ನು ಶಿಲ್ಪಕಲಾಕೃತಿಗಳಿಗೆ ಹೆಸರಾದ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರಪಟ್ಟಣದ ಶಿಲ್ಪಿಗಳಿಂದಲೇ ಸುಂದರವಾಗಿ ಕೆತ್ತಿಸಲಾಗಿದೆ ಎಂದರು.
      ಇದಕ್ಕೂ ಮುನ್ನ ಲಾರಿಯಲ್ಲಿ ಅಗಮಿಸಿದ ಶಿಲಾಮೂರ್ತಿಗಳನ್ನು ಕ್ರೇನ್ ಮುಖಾಂತರ ಇಳಿಸಿಕೊಳ್ಳಲಾಯಿತು.ಜಗನ್ಮಾತೆ ಕಂಕಾಳಿ ,ತುಳುಜಾ ಭವಾನಿ,ಬಲಮುರಿ ಗಣಪತಿ,ಮರಿಯಮ್ಮ ದೇವಿ,ದ್ವಾರಪಾಲಕಿಯರು,ಅನಂತಪದ್ಮನಾಭ ದೇವರುಗಳ ಮೂರ್ತಿಯನ್ನು ಭಕ್ತರ ಜಯಘೋಷದೊಂದಿಗೆ ಪೂಜೆ ಸಲ್ಲಿಸಲಾಯಿತು. ಧಾರ್ಮಿಕ ಕಾರ್ಯಗಳಲ್ಲಿ ಒಂದಾದ ೪೮ ದಿನಗಳ ಜಲಾಧಿವಾಸಕ್ಕಾಗಿ ಈ ಎಲ್ಲಾ ಮೂರ್ತಿಗಳನ್ನು ಇದಕ್ಕೆಂದೆ ನಿರ್ಮಿಸಲಾದ ತೊಟ್ಟಿಯಲ್ಲಿಟ್ಟು ಅರ್ಚಕ ವೆಂಕಟೇಶ್ ಭಾರದ್ವಾಜ್ ಪೂಜೆ ಸಲ್ಲಿಸಿದ ನಂತರ ಜಲದಲ್ಲಿ ಮುಳುಗಿಸಲಾಯಿತು.

      ಈ ಸಂದರ್ಭದಲ್ಲಿ ಶಿಲ್ಪಿ ನರೇಂದ್ರ ಶರ್ಮ ವಿಶ್ವಕರ್ಮ,ದೇವಾಲಯದ ಟ್ರಸ್ಟ್ ನ ಉಪಾಧ್ಯಕ್ಷ ಜಯರಾಂ ನಾಯಕ್,ಕಾರ್ಯದರ್ಶಿ ಉಮೇಶ್ ನಾಯಕ್, ಬ್ಯಾಂಕ್ ಮರುಳಪ್ಪ, ಹುಳಿಯಾರು ಗ್ರಾಪಂ ಉಪಾಧ್ಯಕ್ಷ ಗಣೇಶ್,ಆರ್ಯವೈಶ್ಯ ಮಂಡಳಿಯ ನಟರಾಜ್ ಗುಪ್ತಾ,ದುರ್ಗಾಪರಮೇಶ್ವರಿ ದೇವಾಲಯದ ಕನ್ವೀನರ್ ಹು.ಕೃ.ವಿಶ್ವನಾಥ್,ಹುಳಿಯಾರಮ್ಮ ದೇವಾಲಯದ ಕಾರ್ಯದರ್ಶಿ ದುರ್ಗಪ್ಪ,ಆಂಜನೇಯ ಸ್ವಾಮಿ ದೇವಾಲಯದ ಅಧ್ಯಕ್ಷ ಟಿ.ಎಸ್.ರಾಮನಾಥ್,ಕಾರ್ಯದರ್ಶಿ ಧನಂಜಯ ಮೂರ್ತಿ,ಹಿಂದೂಜಾಗರಣ ವೇದಿಕೆಯ ಬಡಗಿರಾಮಣ್ಣ, ರೈತಸಂಘದ ಕೆಂಕೆರೆ ಸತೀಶ್,ಕೆಂಕೆರೆ ಗ್ರಾಮಪಂಚಾಯ್ತಿ ಸದಸ್ಯ ನಾಗಣ್ಣ,ಮೀಸೆ ರಂಗಪ್ಪ,ಕೆಇಬಿ ಉಮೇಶ್ ನಾಯ್ಕ್ ಹಾಗೂ ಮೂರ್ತಿ ಮೊದಲಾದವರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.